Homeಫ್ಯಾಕ್ಟ್‌ಚೆಕ್ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

ಕಚ್ಛ್‌ನ ಕೆಲ ರೈತರ ಜತೆ ಮಾತುಕತೆ ನಡೆಸಿ ಕೃಷಿ ಕಾನೂನಿನ ಕುರಿತಂತೆ ಅವರಿಗೆ ಮನವರಿಕೆ ಮಾಡಿ ಸಂಶಯಗಳನ್ನು ನಿವಾರಿಸಿದರು ಎಂದು ಮಾಧ್ಯಮಗಳು ವರದಿ ಮಾಡಿದ್ದವು

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿಯ ವಿವಿಧ ಗಡಿಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯ ಮಧ್ಯೆ, ಪ್ರಧಾನಿ ಮೋದಿ ಗುಜರಾತ್‌ನ ಕಚ್‌ನಲ್ಲಿನ ರೈತರ ನಿಯೋಗದೊಂದಿಗೆ ಭೇಟಿಯಾಗಿದ್ದಾರೆ ಎಂದು ಮಾಧ್ಯಮದಲ್ಲಿ ಸುದ್ದಿಯಾಗಿದ್ದ ವರದಿಯ ಸತ್ಯಾಸತ್ಯತೆ ಹೊರಬಿದ್ದಿದೆ. ವಾಸ್ತವದಲ್ಲಿ ಪ್ರಧಾನಿಯು ಬಿಜೆಪಿ ಕಾರ್ಯಕರ್ತರ ನಿಯೋಗವನ್ನು ಭೇಟಿ ಮಾಡಿದ್ದು ಅದನ್ನು ಮಾಧ್ಯಮಗಳು ರೈತರೊಂದಿಗಿನ ಭೇಟಿಯೆಂದು ಬಿಂಬಿಸಿದ್ದಾರೆ ಎನ್ನಲಾಗಿದೆ.

“ಪ್ರಧಾನಿ ನರೇಂದ್ರ ಮೋದಿ ಗುಜರಾತ್‍ನ ಕಚ್ಛ್‌ನ ಕೆಲ ರೈತರ ಜತೆ ಮಾತುಕತೆ ನಡೆಸಿ ಕೃಷಿ ಕಾನೂನಿನ ಕುರಿತಂತೆ ಅವರಿಗೆ ಮನವರಿಕೆ ಮಾಡಿ ಅವರ ಸಂಶಯಗಳನ್ನು ನಿವಾರಿಸಿದರು” ಎಂದು ಮಾಧ್ಯಮಗಲ್ಲಿ ವರದಿಯಾಗಿದ್ದವು.

ಆದರೆ ಈ ವರದಿಗಳು ಸುಳ್ಳಾಗಿದ್ದು, ಇದು ಕೇವಲ ರೈತ ಪ್ರತಿಭಟನೆಯಿಂದ ಜನರ ಗಮನ ಬೇರೆಡೆ ಸೆಳೆಯುವ ತಂತ್ರಗಾರಿಕೆಯಾಗಿತ್ತು ಹಾಗೂ ಪ್ರಧಾನಿಗೆ ರೈತರ ಪ್ರತಿಭಟನೆ ಕುರಿತು ಕಳವಳವಿದೆ ಎಂದು ತೋರಿಸುವ ಯತ್ನವಾಗಿತ್ತು ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ. ಈ ಬಗ್ಗೆ ತನಿಖಾ ಲೇಖನ ಪ್ರಕಟಸಿರುವ ಪತ್ರಿಕೆಯು ಪ್ರಧಾನಿ ಕಚ್ಛ್ ಗೆ ಭೇಟಿ ನೀಡಿದಾಗ ಅವರು ಮಾತುಕತೆ ನಡೆಸಿದ ರೈತರು ವಾಸ್ತವವಾಗಿ ರೈತರಲ್ಲ ಬದಲು ಸಿಖ್ ಸಮುದಾಯಕ್ಕೆ ಸೇರಿದ ಬಿಜೆಪಿ ಕಾರ್ಯಕರ್ತರು ಎಂದು ತಿಳಿದು ಬಂದಿದೆ ಎಂದಿದೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಆಪ್ ಮುಖಂಡರು

ರೈತರೆಂದು ಕರೆಯಲ್ಪಡುವ ನಿಯೋಗವನ್ನು ಮುನ್ನಡೆಸಿದ ವ್ಯಕ್ತಿ ರಾಜು ಭಾಯಿ ಸರ್ದಾರ್ ಕಚ್ ವಲಯದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಆಗಿದ್ದು, ಅವರು ಡಿಸೆಂಬರ್ 15 ರಂದು ಸುದ್ದಿ ಸಂಸ್ಥೆ ಎಎನ್‌ಐ ಟ್ವೀಟ್ ಮಾಡಿದ ಚಿತ್ರದಲ್ಲಿ ಪ್ರಧಾನಿ ಎದುರು ಕೇಸರಿ ರುಮಾಲು ಧರಿಸಿ ಕುಳಿತಿರುವುದನ್ನು ಕಾಣಬಹುದು.

ಗುಜರಾತ್ ಮುಖ್ಯಮಂತ್ರಿಯ ಟ್ವಿಟ್ಟರ್ ಹ್ಯಾಂಡಲ್ ಚಿತ್ರವನ್ನು ಟ್ವೀಟ್ ಮಾಡುವಾಗ, “ಕರಕುಶಲ ಚಟುವಟಿಕೆಗಳಲ್ಲಿ ತೊಡಗಿರುವ ವಿವಿಧ ಸ್ಥಳೀಯ ಕಚ್ಚಿ ಮಹಿಳೆಯರ ಗುಂಪುಗಳನ್ನು ಮತ್ತು ಕಚ್‌‌ನಲ್ಲಿ ನೆಲೆ ನಿಂತಿರುವ ’ಸಿಖ್ ರೈತ’ರನ್ನು ಭೇಟಿಯಾದರು” ಎಂದು ಹೇಳಿದೆ. ಅಲ್ಲದೆ ಸ್ವತಃ ರಾಜು ಭಾಯಿ ಕೂಡಾ ತಾನು ರೈತರ ನಿಯೋಗವನ್ನು ಮುನ್ನಡೆಸಿದೆ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ರೈತರನ್ನು ರಾಷ್ಟ್ರ ವಿರೋಧಿಗಳಂತೆ ಬಿಂಬಿಸಬೇಡಿ: ಮಾಧ್ಯಮಗಳಿಗೆ ಎಡಿಟರ್ಸ್ ಗಿಲ್ಡ್ ಸಲಹೆ

 

ಆದರೆ ಆಜ್‌ತಕ್ ಟಿವಿ ನ್ಯೂಸ್ ಚಾನೆಲ್‌ನ ವರದಿಗಾರ್ತಿ, ಸಭೆಯಲ್ಲಿ ಚರ್ಚಿಸಲಾದ ವಿಷಯದ ಬಗ್ಗೆ ವ್ಯಕ್ತಿಯೊಬ್ಬರೊಂದಿಗೆ ಪ್ರಶ್ನಿಸಿದಾಗ, ಗುರುದ್ವಾರದ ಬಗ್ಗೆ ಚರ್ಚೆಯನ್ನು ಕೇಂದ್ರೀಕರಿಸಲಾಗಿತ್ತು ಎಂದು ಹೇಳಿದ್ದಾರೆ.

ಈ ನಡುವೆ, ಪ್ರಧಾನಿ ಮೋದಿ ರೈತರು ಎಂದು ಕರೆಯಲ್ಪಡುವವರೊಂದಿಗೆ ಸಭೆ ನಡೆಸುತ್ತಿದ್ದ ಅದೇ ಸಮಯದಲ್ಲಿ, ನಿಜವಾದ ರೈತರ ಗುಂಪು ಕೃಷಿ ಕಾನೂನುಗಳ ವಿರುದ್ಧ ಕಚ್‌ನಲ್ಲಿ ಪ್ರತಿಭಟನೆ ನಡೆಸುತ್ತಿತ್ತು. ಆದರೆ ಪ್ರತಿಭಟನಾ ನಿರತ ರೈತರ ಸುದ್ದಿಯನ್ನು ಗುಜರಾತಿ ಮತ್ತು ರಾಷ್ಟ್ರೀಯ ಮಾಧ್ಯಮಗಳು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದವು ಎನ್ನಲಾಗಿದೆ.

ಇದನ್ನೂ ಓದಿ: ಭಯೋತ್ಪಾದಕರು ನಮ್ಮ ಸೈನಿಕರನ್ನು ಕೊಲ್ಲುತ್ತಿದ್ದಾರೆ, ಆದರೆ ಸರ್ಕಾರ ರೈತರನ್ನು ಭಯೋತ್ಪಾಕರಂತೆ ನೋಡುತ್ತಿದೆ: ಶಿವಸೇನೆ ಕಿಡಿ

ಕಚ್ ರಾಜಕೀಯವನ್ನು ತಿಳಿದಿರುವವರು ಹೇಳುವಂತೆ, ರಾಜು ಭಾಯ್ ಸರ್ದಾರ್ ಅವರ ನಿಜವಾದ ಹೆಸರು ಜುಗರಾಜ್ ಸಿಂಗ್. ಅವರು ನಾರಾ ಗ್ರಾಮಕ್ಕೆ ಸೇರಿದವರಾಗಿದ್ದು, ರೆಸ್ಟೋರೆಂಟ್ ನಡೆಸುತ್ತಿದ್ದಾರೆ. ಬಿಜೆಪಿಯ ವಲಯ ಕಾರ್ಯದರ್ಶಿಯಾಗುವ ಮೊದಲು ಅವರು ಬಿಜೆಪಿ ಬೆಂಬಲದೊಂದಿಗೆ ನಾರಾದ ಸರ್ಪಂಚ್ ಆಗಿ ಆಯ್ಕೆಯಾಗಿದ್ದರು.

ಸಿಖ್ ಸಮುದಾಯದ ಹೆಚ್ಚಿನ ಜನಸಂಖ್ಯೆಯಿಂದಾಗಿ ನಾರಾವನ್ನು ಕಚ್ ಪ್ರದೇಶದ ಮಿನಿ-ಪಂಜಾಬ್ ಎಂದು ಕರೆಯಲಾಗುತ್ತದೆ. ಈ ಪ್ರದೇಶದ ನಾರಾ ಮತ್ತು ಕೊಠಾರಾ ಗ್ರಾಮಗಳಲ್ಲಿ ಸಿಖ್ ಸಮುದಾಯವು ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದೆ.

ಅಲ್ಲದೆ ರಾಜು ಭಾಯ್ ”ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ 15 ಅಂಶಗಳ ಕಾರ್ಯಕ್ರಮ ಸಮಿತಿ”ಯ ಸದಸ್ಯರಾಗಿದ್ದಾರೆ ಎಂದು ಅವರ ವೆಬ್‌ಸೈಟ್ ಹೇಳಿಕೊಂಡಿದೆ. ಪ್ರಸ್ತುತ ಲಖಪತ್ ಸರೈನಲ್ಲಿ 18 ಕೊಠಡಿಗಳ ರೆಸಾರ್ಟ್ ನಿರ್ಮಾಣ ಕಾರ್ಯದಲ್ಲಿ ನಿರತರಾಗಿರುವ ರಾಜು ಭಾಯ್ ಸರ್ದಾರ್ ಲಖಪತ್ ತಾಲ್ಲೂಕು ಗುರುದ್ವಾರದ ಮುಖ್ಯಸ್ಥರಾಗಿದ್ದಾರೆ.

ಇದನ್ನೂ ಓದಿ: BJP ಮತ್ತು RSS ಸಿಖ್ ಜನಾಂಗವನ್ನು ಮುಗಿಸಲು ಪ್ರಯತ್ನಿಸುತ್ತಿದೆ: ಸಿಖ್ ಧರ್ಮಗುರುವಿನ ಆತ್ಮಹತ್ಯಾ ಟಿಪ್ಪಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...