- Advertisement -
- Advertisement -
ಕೈ ಮುಗಿದು ಬೇಡಿಕೊಳ್ಳುತ್ತೇನೆ, ಮುಸ್ಲಿಮರು ಯಾರೂ ಗೋ ಮಾಂಸ ತಿನ್ನಬೇಡಿ. ಗೋ ಹತ್ಯೆ ನಿಷೇಧಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ.
‘ರಾಜ್ಯ ಸರ್ಕಾರ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲು ಹೊರಟಿದ್ದು ಸ್ವಾಗತಾರ್ಹ. ಆದರೆ, ಬಂಜೆಯಾದ, ವಯಸ್ಸಾದ ಗೋವುಗಳನ್ನು ನೋಡಿಕೊಳ್ಳುವವರು ಯಾರು? ಎನ್ನುವುದಕ್ಕೆ ಉತ್ತರವಿಲ್ಲ. ಅದಕ್ಕಾಗಿ ಪ್ರತಿ ಪಂಚಾಯ್ತಿಯಲ್ಲಿ ಒಂದೊಂದು ಗೋಶಾಲೆಯನ್ನು ತೆರೆಯಬೇಕು. ಆ ಮೂಲಕ ಗೋಸಾಕಾಣಿಕೆಗೆ ಸರ್ಕಾರ ವ್ಯವಸ್ಥೆ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಕರ್ನಾಟಕದಿಂದ ಗೋಮಾಂಸ ಆಮದು ಮಾಡಿಕೊಳ್ಳುವುದಾಗಿ ಗೋವಾ ಸಿಎಂ ಹೇಳಿಕೆ: ಕಾಂಗ್ರೆಸ್ ಟೀಕೆ