Homeಚಳವಳಿಕೃಷಿ ಸಚಿವರು ಬೇಡ; ಮೋದಿ-ಶಾ ಬಂದು ನಮ್ಮ ಜೊತೆ ಮಾತಾಡಲಿ - ಕಿಸಾನ್ ಒಕ್ಕೂಟ

ಕೃಷಿ ಸಚಿವರು ಬೇಡ; ಮೋದಿ-ಶಾ ಬಂದು ನಮ್ಮ ಜೊತೆ ಮಾತಾಡಲಿ – ಕಿಸಾನ್ ಒಕ್ಕೂಟ

"ಸರ್ಕಾರದೊಂದಿಗಿನ ನಮ್ಮ ಮಾತುಕತೆಯಲ್ಲಿ, ನಾವು 18 ತಿದ್ದುಪಡಿಗಳನ್ನು ನೀಡಿದ್ದೇವೆ. ಸರ್ಕಾರವು ಈವರೆಗೆ ಎಂಟಕ್ಕೆ ಒಪ್ಪಿಗೆ ನೀಡಿದೆ. ಉಳಿದ 10 ತಿದ್ದುಪಡಿಗಳ ಕಥೆ ಏನು?"

- Advertisement -
- Advertisement -

‘ಕೃಷಿ ಸಚಿವ ನರೇಂದ್ರ ತೋಮರ್ ಈ ವಿವಾದಾತ್ಮಕ ಕೃಷಿ ಕಾನೂನುಗಳ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ’ ಎಂದು ಹೇಳಿದ ಪಂಜಾಬ್‌ನ ಅತಿದೊಡ್ಡ ರೈತ ಸಂಘವು, “ಪ್ರಧಾನಿ ನರೇಂದ್ರ ಮೋದಿ ಅಥವಾ ಗೃಹ ಸಚಿವ ಅಮಿತ್ ಶಾ ಅವರು ಆಂದೋಲನ ಮಾಡುತ್ತಿರುವ ರೈತರೊಂದಿಗೆ ಮಾತನಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಭಾರತೀಯ ಕಿಸಾನ್ ಒಕ್ಕೂಟದ (ಏಕ್ತಾ ಉಗ್ರಾಹನ್) ಅಧ್ಯಕ್ಷ ಜೋಗಿಂದರ್ ಸಿಂಗ್ ಉಗ್ರಾಹನ್, “ಯಾವುದೇ ಸಮಿತಿಯು ಸರ್ಕಾರದಿಂದ ಅಥವಾ ಸುಪ್ರೀಂ ಕೋರ್ಟ್‌ನ ನಿರ್ದೇಶನದ ಮೇರೆಗೆ ರಚನೆಯಾದರೆ ಅದರಲ್ಲಿ ಎಲ್ಲಾ ರೈತ ಸಂಘಗಳ ಪ್ರತಿನಿಧಿಗಳೂ ಸದಸ್ಯರಾಗಿರಬೇಕು” ಎಂದು ಹೇಳಿದರು.

ಇದನ್ನೂ ಓದಿ: ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

“ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರೊಂದಿಗೆ ಮಾತನಾಡುವುದು ಸ್ವೀಕಾರಾರ್ಹವಲ್ಲ. ಏಕೆಂದರೆ ಅವರು ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಕೃಷಿ ಕಾನೂನುಗಳ ಬಗ್ಗೆ ಯಾವುದೇ ನಿರ್ಧಾರವನ್ನು ಪ್ರಧಾನ ಮಂತ್ರಿ ಮಟ್ಟದಲ್ಲಿ ತೆಗೆದುಕೊಳ್ಳುವುದರಿಂದ ಪ್ರಧಾನಿ ಅಥವಾ ಗೃಹ ಸಚಿವರು ಮಾತನಾಡಬೇಕು” ಎಂದು ಹೇಳಿದರು.

“ಕೇಂದ್ರದ ಸಂಸ್ಥೆಗಳು ರೈತರು ಮತ್ತು ಅವರಿಗೆ ಸಹಕಾರಿಯಾಗಿರುವ ಉದ್ಯಮಿಗಳನ್ನು ಗುರಿ ಮಾಡಿಕೊಂಡು ಅವರ ಕಛೇರಿಗಳ ಮೇಲೆ ದಾಳಿ ಮಾಡುತ್ತಿದೆ. ನಾವು ಆದಾಯ ತೆರಿಗೆ ಕಛೇರಿಗಳಿಗೆ ಮುತ್ತಿಗೆ ಹಾಕುತ್ತೇವೆ” ಕ್ರಾಂತಿಕಾರಿ ಕಿಸಾನ್ ಯೂನಿಯನ್ ಅಧ್ಯಕ್ಷ ದರ್ಶನ್ ಪಾಲ್ ಹೇಳಿದರು.

ಇದನ್ನೂ ಓದಿ: ಮಾಲೆಗಾಂವ್‌‌ ಸ್ಪೋಟ: 2 ನೇ ಬಾರಿಯೂ ವಿಚಾರಣೆಗೆ ತಪ್ಪಿಸಿಕೊಂಡ ಪ್ರಜ್ಞಾ ಸಿಂಗ್ ಠಾಕೂರ್‌

ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಬೇಡಿಕೆಯನ್ನು ಪುನರುಚ್ಚರಿಸುತ್ತಾ, ಬಿಕೆಯು (ಕ್ಯಾಡಿಯನ್ ಗ್ರೂಪ್) ನ ಹರ್ಮೀತ್ ಸಿಂಗ್ ಕಡಿಯನ್, “ಸರ್ಕಾರದೊಂದಿಗಿನ ನಮ್ಮ ಮಾತುಕತೆಯಲ್ಲಿ, ನಾವು 18 ತಿದ್ದುಪಡಿಗಳನ್ನು ನೀಡಿದ್ದೇವೆ. ಸರ್ಕಾರವು ಈವರೆಗೆ ಎಂಟಕ್ಕೆ ಒಪ್ಪಿಗೆ ನೀಡಿದೆ. ಉಳಿದ 10 ತಿದ್ದುಪಡಿಗಳ ಕಥೆ ಏನು? ಕಾನೂನುಗಳನ್ನು ತಿದ್ದುಪಡಿ ಮಾಡುವ ಬದಲು ಅದನ್ನು ರದ್ದುಪಡಿಸುವುದು ಉತ್ತಮ ಪರಿಹಾರವಾಗಿದೆ” ಎಂದು ಹೇಳಿದರು.

ಡಿಸೆಂಬರ್ 25 ರಂದು ‘ದಿಲ್ಲಿ ಚಲೋ’ ಪ್ರತಿಭಟನೆಗೆ ಒಂದು ತಿಂಗಳು ಪೂರ್ಣಗೊಳ್ಳಲಿರುವುದರಿಂದ ದೆಹಲಿ ಗಡಿಯಲ್ಲಿ ನಡೆಯುವ ಹೋರಾಟಕ್ಕೆ ಹೆಚ್ಚಿನ ರೈತರು ಸೇರಲಿದ್ದಾರೆ. ಡಿಸೆಂಬರ್ 26 ರಂದು 15,000 ಪ್ರತಿಭಟನಾಕಾರರು ಖಾನೌರಿ ಗಡಿಯಿಂದ ಮೆರವಣಿಗೆ ನಡೆಸಲಿದ್ದು, ಡಿಸೆಂಬರ್ 27 ರಂದು 15,000 ಮಂದಿ ದಬ್ವಾಲಿಯಿಂದ ಮೆರವಣಿಗೆ ಆರಂಭಿಸಲಿದ್ದಾರೆ ಎಂದು ರೈತ ಸಂಘಟನೆಗಳು ತಿಳಿಸಿವೆ.


ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ: ಸಂಸದೀಯ ಸಮಿತಿಗಳಿಗೆ ರಾಜೀನಾಮೆ ನೀಡಿದ RLP ಸಂಸದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...