Homeಮುಖಪುಟಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರದ ಬಿರುಗಾಳಿ: ಬಿಜೆಪಿ ಸೇರಿದ 9 ಶಾಸಕರು!

ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರದ ಬಿರುಗಾಳಿ: ಬಿಜೆಪಿ ಸೇರಿದ 9 ಶಾಸಕರು!

ಪಶ್ಚಿಮ ಬಂಗಾಳಕ್ಕೆ ಉಳಿಗಾಲವಿಲ್ಲ. ಇಲ್ಲಿನ ಅರ್ಥ ವ್ಯವಸ್ಥೆ ಮುರಿದುಬಿದ್ದಿದೆ. ಉದ್ಯೋಗ ಇಲ್ಲ, ಎಲ್ಲೆಡೆ ಭ್ರಷ್ಟಾಚಾರ ಇದೆ. ಈ ಎಲ್ಲದರಿಂದ ಹೊರಗೆ ಬರಲು ಇರುವ ಏಕೈಕ ದಾರಿಯೆಂದರೆ ರಾಜ್ಯವನ್ನು ಮೋದಿ ಕೈಗೆ ನೀಡುವುದು- ಪಕ್ಷಾಂತರಗೊಂಡ ಸುವೇಂದು ಅಧಿಕಾರಿ

- Advertisement -
- Advertisement -

ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಪಕ್ಷಾಂತರದ ಬಿರುಗಾಳಿ ಬೀಸುತ್ತಿದ್ದು, ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಐವರು ಶಾಸಕರು ಸೇರಿದಂತೆ ಒಂಬುತ್ತು ಶಾಸಕರು ನಿನ್ನೆ ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಸೇರಿಕೊಂಡಿದ್ದಾರೆ.

ಪ್ರಭಾವಿ ಮುಖಂಡ ಮತ್ತು ಮಾಜಿ ಸಚಿವ ಸುವೇಂದು ಅಧಿಕಾರಿ ಸೇರಿದಂತೆ, 2018ರಲ್ಲಿ ಸಿಪಿಎಂ ತೊರೆದು ಟಿಎಂಸಿ ಸೇರಿದ್ದ ಶಾಸಕಿ ದೀಪಾಲಿ ಬಿಸ್ವಾಸ್ ಮತ್ತು ‌ಸಿಪಿಎಂ, ಸಿಪಿಐ ಹಾಗೂ ಕಾಂಗ್ರೆಸ್‌ನ ತಲಾ ಒಬ್ಬ ಶಾಸಕರು ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಮೇದಿನಿಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಸೇರಿದರು. ಬರ್ಧಮಾನ್‌ ಪೂರ್ವ ಕ್ಷೇತ್ರದ ಟಿಎಂಸಿ ಸಂಸದ ಸುನಿಲ್‌ ಮಂಡಲ್‌ ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಇದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅವರ ಪಕ್ಷಕ್ಕೆ ಅತ್ಯಂತ ದೊಡ್ಡ ಹಿನ್ನಡೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಮುಸ್ಲಿಮರು ಯಾರೂ ಗೋಮಾಂಸ ತಿನ್ನಬೇಡಿ: ಸಿ.ಎಂ. ಇಬ್ರಾಹಿಂ

“ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿ ಇರಬೇಕು ಎಂದು ನಾನು ಬಯಸುತ್ತೇನೆ. ಇಲ್ಲದೇ ಇದ್ದರೆ ಪಶ್ಚಿಮ ಬಂಗಾಳಕ್ಕೆ ಉಳಿಗಾಲವಿಲ್ಲ. ಇಲ್ಲಿನ ಅರ್ಥ ವ್ಯವಸ್ಥೆ ಮುರಿದುಬಿದ್ದಿದೆ. ಉದ್ಯೋಗ ಇಲ್ಲ, ಎಲ್ಲೆಡೆ ಭ್ರಷ್ಟಾಚಾರ ಇದೆ. ಈ ಎಲ್ಲದರಿಂದ ಹೊರಗೆ ಬರಲು ಇರುವ ಏಕೈಕ ದಾರಿಯೆಂದರೆ ರಾಜ್ಯವನ್ನು ಮೋದಿ ಕೈಗೆ ನೀಡುವುದು” ಎಂದು ಪಕ್ಷಾಂತರಗೊಂಡ ಸುವೇಂದು ಅಧಿಕಾರಿ ಹೇಳಿದ್ದಾರೆ.

ಮಮತಾ ಬ್ಯಾನರ್ಜಿಯವರಿಗೆ ಸವಾಲು ಹಾಕಿದ ಸುವೇಂದು ಅಧಿಕಾರಿ, ಮುಂದಿನ ವರ್ಷ ನಡೆಯಲಿರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಲ್ಲಿನ ವಿಧಾನಸಭೆಯ ಸದಸ್ಯ ಬಲ 294.


ಇದನ್ನೂ ಓದಿ: ಕೃಷಿ ಸಚಿವರು ಬೇಡ; ಮೋದಿ-ಶಾ ಬಂದು ನಮ್ಮ ಜೊತೆ ಮಾತಾಡಲಿ – ಕಿಸಾನ್ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...