Homeಕರ್ನಾಟಕತೇಜಸ್ವಿ ಸೂರ್ಯ ವಿರುದ್ಧ ಪ್ರತಾಪ್ ಸಿಂಹನಿಗೆ ದೂರಿದ ನೊಂದ ಮಹಿಳೆ?

ತೇಜಸ್ವಿ ಸೂರ್ಯ ವಿರುದ್ಧ ಪ್ರತಾಪ್ ಸಿಂಹನಿಗೆ ದೂರಿದ ನೊಂದ ಮಹಿಳೆ?

- Advertisement -
- Advertisement -

ಪಾರ್ಲಿಮೆಂಟ್ ಅಭ್ಯರ್ಥಿಯ ಅರ್ಹತೆಯ ಬಗ್ಗೆ ಗಂಭೀರ ಪ್ರಶ್ನೆಗಳು

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಅರ್ಹತೆಯ ಬಗ್ಗೆ ಬಹಳ ಗಂಭೀರ ಪ್ರಶ್ನೆಗಳು ಎದ್ದಿವೆ. ಈ ಪ್ರಶ್ನೆಗಳು ಏಳುತ್ತಿರುವುದು ಜನಸಾಮಾನ್ಯರಲ್ಲಿ ಮಾತ್ರವಲ್ಲಾ, ಬಿಜೆಪಿಯೊಳಗೇ ದಿಗಿಲು ಉಂಟಾಗಿದೆ. ಒಂದು ವೇಳೆ ಆತನಿಗೆ ಸಂಬಂಧಿಸಿದ ಎಲ್ಲಾ ಸಂಗತಿಗಳೂ ಹೊರಗೆ ಬಿದ್ದರೆ ಅದು ಪಕ್ಷಕ್ಕೆ ಬಹಳ ಕೆಟ್ಟ ಹೆಸರು ತರುತ್ತದೆ ಎಂಬುದೇ ಅವರ ಆತಂಕಕ್ಕೆ ಕಾರಣ. ಇದು ತೇಜಸ್ವಿಗೂ ಗೊತ್ತಿರುವುದರಿಂದಲೇ, ಮೊದಲ ಸುದ್ದಿ ಹೊರಗೆ ಬಂದ 2ನೇ ದಿನಕ್ಕೇ ಕೋರ್ಟಿನಿಂದ ತಡೆ ತಂದದ್ದು. ಅಷ್ಟೇ ಅಲ್ಲ, ನಾನು ಪುರಾವೆಗಳ ಸಮೇತ ಈತನ ಚಾರಿತ್ರ್ಯ ಬಿಚ್ಚಿಡುತ್ತೇನೆ ಎಂದು ಹೇಳಿದ್ದ ಮಹಿಳೆ, ನಂತರ ಆ ಟ್ವೀಟ್‍ಗಳನ್ನು ಅಳಿಸಿ ಹಾಕಿದರು.

ತರುವಾಯ, ಇದನ್ನು ಯಾರೂ ಮುಂದುವರೆಸಬೇಡಿ ಎಂದು ಮನವಿ ಮಾಡಿದರು. ಆ ನಂತರ ಟ್ವಿಟ್ಟರ್‍ನಿಂದಲೇ ಹೊರಗೆ ಹೋದರು. ಇದು ಆ ಮಹಿಳೆಯ ಮೇಲೆ ಹೆಚ್ಚಿನ ಒತ್ತಡ ಬಿದ್ದಿದೆ ಎನ್ನುವುದನ್ನಷ್ಟೇ ಅಲ್ಲದೇ, ಸ್ವತಃ ತೇಜಸ್ವಿ ಸೂರ್ಯ ಬಹಳ ಬೆದರಿರಬೇಕು ಎಂಬುದನ್ನೇ ತೋರುತ್ತದೆ. ಈ ಹಿಂದೆ ಗೌರಿ ಲಂಕೇಶರ ಹತ್ಯೆ ಆದಾಗ, ಬಿಜೆಪಿಯಲ್ಲಿ ಬಹುತೇಕರು ಖಂಡನೆ ಹೇಳಿಕೆ ನೀಡಿ ಸುಮ್ಮನಾದರು. ಆದರೆ, ಕೆಲವರಷ್ಟೇ ಅದನ್ನು ಪರೋಕ್ಷವಾಗಿ ಸಮರ್ಥಿಸುವ ಹೀನ ಮನಸ್ಸನ್ನು ತೋರ್ಪಡಿಸಿದರು. ಅಂತಹವರಲ್ಲಿ ತೇಜಸ್ವಿ ಮುಂಚೂಣಿಯಲ್ಲಿದ್ದರು. 26 ವರ್ಷ (ಆಗ) ವಯಸ್ಸಿನ ಒಬ್ಬ ವಕೀಲನಲ್ಲಿ ಇಂತಹ ದುಷ್ಟ ಮನಸ್ಸಿದೆಯಲ್ಲಾ ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದರು. ಆದರೆ, ಆತನನ್ನು ಹತ್ತಿರದಿಂದ ಬಲ್ಲವರಿಗೆ ಇದೇನೂ ವಿಶೇಷ ಎನಿಸಿರಲಿಲ್ಲ. ಇದೀಗ ತೇಜಸ್ವಿ ತನಗೆ ಕೈ ಕೊಟ್ಟಿದ್ದು ಮಾತ್ರವಲ್ಲಾ, ‘ಇದು ಮೊದಲ ಪ್ರಕರಣವೂ ಅಲ್ಲ, ಕೊನೆಯ ಪ್ರಕರಣವೂ ಅಲ್ಲ’ ಎಂದು ಆ ಮಹಿಳೆ ಹೇಳಿದ್ದರು. ನಂತರದಲ್ಲಿ ಮಹಿಳೆಯರಿಗೆ ಹಿಂಸೆ ಕೊಡುವುದು, ಬಡಿಯುವುದು, ಅಸಭ್ಯವಾಗಿ ವರ್ತಿಸುವ ವ್ಯಕ್ತಿ ಈತ ಎಂಬ ವಿಚಾರ ಹೊರಗೆ ಬಂದಿತು. ಬಿಜೆಪಿಯ ವರ್ತುಲದಲ್ಲೇ ಓಡಾಡಿದ ಇನ್ನೊಂದು ವಿಚಾರದಲ್ಲಿ ಇಂಗ್ಲಿಷ್ ಚಾನೆಲ್ಲೊಂದರ ವರದಿಗಾರ್ತಿಯು ಅನುಭವಿಸಿದ ಕಿರುಕುಳದ ವಿಚಾರವೂ ಇತ್ತು.

ಇದರ ಕುರಿತು ಆಗಲೇ ಅದನ್ನು ನಮ್ಮಲ್ಲಿ ಸುದ್ದಿ ಮಾಡಿದ್ದರೂ, ಸ್ಕ್ರೀನ್‍ಷಾಟ್‍ಗಳನ್ನು ಹಾಕಿರಲಿಲ್ಲ. ಆದರೆ, ಇದೀಗ ನಮಗೆ ಲಭ್ಯವಾದ ಹಲವಾರು ಸ್ಕ್ರೀನ್‍ಷಾಟ್‍ಗಳಲ್ಲಿ ಒಂದು ಆಶ್ಚರ್ಯವನ್ನುಂಟು ಮಾಡುತ್ತಿದೆ. ಅಮೆರಿಕದಲ್ಲಿ ನೆಲೆಸಿರುವ ಮಹಿಳೆಯೊಬ್ಬರು ತೇಜಸ್ವಿಯ ಕಿರುಕುಳವನ್ನು ತಾಳದೇ ಪ್ರತಾಪ್‍ಸಿಂಹರಲ್ಲಿ ದೂರಿದ್ದಾರೆ. ಬೆಂಗಳೂರು ಬಿಟ್ಟು ಸ್ವಲ್ಪ ಹೊರಗೆ ಬಂದುಬಿಡಬೇಕು ಎನಿಸಿದೆ ಎಂತಲೂ ಹೇಳುತ್ತಾರೆ. ನಿನ್ನ ಬಗ್ಗೆ ನನಗೆ ಕಾಳಜಿ ಇದೆ. ಆದರೆ ನಾನೇನು ಮಾಡಬೇಕೆಂದು ಗೊತ್ತಾಗುತ್ತಿಲ್ಲವೆಂದು ಹೇಳುವ ಸಿಂಹ ಕೈತೊಳೆದುಕೊಳ್ಳುವ ಪ್ರಯತ್ನ ನಡೆಸುತ್ತಾರೆ. ನಂತರ ಆತನ ಜೊತೆಗೆ ತಾನು ಮಾತಾಡಿದ್ದಾಗಿಯೂ, ತೇಜಸ್ವಿಯ ಹತ್ತಿರ ಈ ವಿಚಾರವನ್ನು ತಾನೇನೂ ಪ್ರಸ್ತಾಪಿಸಿಲ್ಲ, ಆತ ಚೆನ್ನಾಗಿದ್ದಾನೆ, ನೀನೂ ಚೆನ್ನಾಗಿದ್ದುಬಿಡು ಹೇಳುವ ಒಂದು ವಾಟ್ಸಾಪ್ ಚಾಟ್ ಸ್ಕ್ರೀನ್‍ಷಾಟ್‍ನಿಂದ ಆರಂಭವಾಗುವ ಈ ಸರಣಿಯಲ್ಲಿ ಹಲವಾರು ಅಂಶಗಳು ಒಂದೊಂದಾಗಿ ತೆರೆದುಕೊಳ್ಳುತ್ತವೆ.

ಪ್ರತಾಪ್ ಸಿಂಹನ ಬಳಿ ಅಳಲು ತೋಡಿಕೊಂಡಿರುವ ಸಂತ್ರಸ್ತೆ

ತಾವೇ ಬಹಿರಂಗಗೊಳಿಸಲಿಚ್ಛಿಸದ ನೊಂದವರ ಐಡೆಂಟಿಟಿಗಳನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಬಯಲುಗೊಳಿಸುವ ಸುದ್ದಿಗಳನ್ನು ಸುದ್ದಿಯ ‘ರೋಚಕತೆ’ಯ ಕಾರಣಕ್ಕೆ ಮಾಡುತ್ತಾ ಹೋಗದೆ, ಕೆಲವು ಪ್ರಶ್ನೆಗಳನ್ನು ಮುಂದಿಡುತ್ತಿದ್ದೇವೆ. ಕೇವಲ 28 ವರ್ಷ ವಯಸ್ಸಿನ ಈ ವ್ಯಕ್ತಿಯು ಸಂಸತ್ ಸದಸ್ಯನಾಗುವಷ್ಟು ಅರ್ಹತೆ ಪಡೆದುಕೊಂಡಿದ್ದಾನೆಂದು ರಾಷ್ಟ್ರೀಯ ಪಕ್ಷವೊಂದು ಭಾವಿಸಿರುವುದಾದರೆ, ಈ ಅವಗುಣಗಳನ್ನು, ಅನರ್ಹತೆಗಳನ್ನು ಅವರು ಗಮನಕ್ಕೆ ತೆಗೆದುಕೊಂಡಿಲ್ಲವೇ? ಬಿಜೆಪಿ ಸರ್ಕಾರವು ಮುಂದಿಟ್ಟ ಮಹಿಳಾ ಮೀಸಲಾತಿಯ ಪ್ರಸ್ತಾಪಕ್ಕೆ ಅಷ್ಟೇ ತೇಜಸ್ವಿಯ ವಿರೋಧವಿರಲಿಲ್ಲ; ಮಹಿಳೆಯರ ಬಗ್ಗೆ ಬಹಳ ಕೀಳು ಮಟ್ಟದ ಮನಸ್ಥಿತಿಯನ್ನು ಈತ ಹೊಂದಿರುವುದಕ್ಕೆ ಹಲವು ಪುರಾವೆಗಳು ಹೊರಬೀಳುತ್ತಿವೆ. ಇದು ಬಿಜೆಪಿ ಪಕ್ಷದ ನೀತಿಯಾ? ಇಂತಹ ವ್ಯಕ್ತಿಯು ದೇಶಕ್ಕೇ ಅನ್ವಯಿಸುವ ಕಾನೂನುಗಳನ್ನು ರೂಪಿಸುವ ಸಂಸತ್‍ನಲ್ಲಿ ಇರುವುದಕ್ಕೆ ಎಷ್ಟರ ಮಟ್ಟಿಗೆ ಅರ್ಹ? ಈ ಎಲ್ಲಾ ಸುದ್ದಿಗಳು ಒಂದೊಂದಾಗಿ ಹೊರಗೆ ಬರುತ್ತಿರುವುದು ಬಿಜೆಪಿಯ ವಲಯದಿಂದಲೇ ಆಗಿದೆ. ಹಾಗಿದ್ದ ಮೇಲೆ ಬಿಜೆಪಿಯ ಇತರ ‘ಸಭ್ಯರು’ ಇದನ್ನು ಬಹಿರಂಗಗೊಳಿಸದೇ ಪಕ್ಷ ನಿಷ್ಠೆಯ ಹೆಸರಿನಲ್ಲಿ, ಅಪಾಯಕಾರಿ ವ್ಯಕ್ತಿಯು ಪಕ್ಷದ ಪ್ರತಿನಿಧಿಯಾಗಿ ಆರಿಸಿ ಹೋದರೆ ಪರವಾಗಿಲ್ಲವೆಂದು ಭಾವಿಸಿದ್ದಾರೆಯೇ? ಸ್ವತಃ ತೇಜಸ್ವಿ ಸೂರ್ಯ ತನ್ನ ಆತ್ಮವಿಮರ್ಶೆಯನ್ನು, ಪಶ್ಚಾತ್ತಾಪವನ್ನು ಮುಂದಿಡಲು ಇದು ಸುಸಮಯ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...