Homeಕರ್ನಾಟಕತೇಜಸ್ವಿ ಸೂರ್ಯ ವಿರುದ್ಧ ಪ್ರತಾಪ್ ಸಿಂಹನಿಗೆ ದೂರಿದ ನೊಂದ ಮಹಿಳೆ?

ತೇಜಸ್ವಿ ಸೂರ್ಯ ವಿರುದ್ಧ ಪ್ರತಾಪ್ ಸಿಂಹನಿಗೆ ದೂರಿದ ನೊಂದ ಮಹಿಳೆ?

- Advertisement -
- Advertisement -

ಪಾರ್ಲಿಮೆಂಟ್ ಅಭ್ಯರ್ಥಿಯ ಅರ್ಹತೆಯ ಬಗ್ಗೆ ಗಂಭೀರ ಪ್ರಶ್ನೆಗಳು

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಅರ್ಹತೆಯ ಬಗ್ಗೆ ಬಹಳ ಗಂಭೀರ ಪ್ರಶ್ನೆಗಳು ಎದ್ದಿವೆ. ಈ ಪ್ರಶ್ನೆಗಳು ಏಳುತ್ತಿರುವುದು ಜನಸಾಮಾನ್ಯರಲ್ಲಿ ಮಾತ್ರವಲ್ಲಾ, ಬಿಜೆಪಿಯೊಳಗೇ ದಿಗಿಲು ಉಂಟಾಗಿದೆ. ಒಂದು ವೇಳೆ ಆತನಿಗೆ ಸಂಬಂಧಿಸಿದ ಎಲ್ಲಾ ಸಂಗತಿಗಳೂ ಹೊರಗೆ ಬಿದ್ದರೆ ಅದು ಪಕ್ಷಕ್ಕೆ ಬಹಳ ಕೆಟ್ಟ ಹೆಸರು ತರುತ್ತದೆ ಎಂಬುದೇ ಅವರ ಆತಂಕಕ್ಕೆ ಕಾರಣ. ಇದು ತೇಜಸ್ವಿಗೂ ಗೊತ್ತಿರುವುದರಿಂದಲೇ, ಮೊದಲ ಸುದ್ದಿ ಹೊರಗೆ ಬಂದ 2ನೇ ದಿನಕ್ಕೇ ಕೋರ್ಟಿನಿಂದ ತಡೆ ತಂದದ್ದು. ಅಷ್ಟೇ ಅಲ್ಲ, ನಾನು ಪುರಾವೆಗಳ ಸಮೇತ ಈತನ ಚಾರಿತ್ರ್ಯ ಬಿಚ್ಚಿಡುತ್ತೇನೆ ಎಂದು ಹೇಳಿದ್ದ ಮಹಿಳೆ, ನಂತರ ಆ ಟ್ವೀಟ್‍ಗಳನ್ನು ಅಳಿಸಿ ಹಾಕಿದರು.

ತರುವಾಯ, ಇದನ್ನು ಯಾರೂ ಮುಂದುವರೆಸಬೇಡಿ ಎಂದು ಮನವಿ ಮಾಡಿದರು. ಆ ನಂತರ ಟ್ವಿಟ್ಟರ್‍ನಿಂದಲೇ ಹೊರಗೆ ಹೋದರು. ಇದು ಆ ಮಹಿಳೆಯ ಮೇಲೆ ಹೆಚ್ಚಿನ ಒತ್ತಡ ಬಿದ್ದಿದೆ ಎನ್ನುವುದನ್ನಷ್ಟೇ ಅಲ್ಲದೇ, ಸ್ವತಃ ತೇಜಸ್ವಿ ಸೂರ್ಯ ಬಹಳ ಬೆದರಿರಬೇಕು ಎಂಬುದನ್ನೇ ತೋರುತ್ತದೆ. ಈ ಹಿಂದೆ ಗೌರಿ ಲಂಕೇಶರ ಹತ್ಯೆ ಆದಾಗ, ಬಿಜೆಪಿಯಲ್ಲಿ ಬಹುತೇಕರು ಖಂಡನೆ ಹೇಳಿಕೆ ನೀಡಿ ಸುಮ್ಮನಾದರು. ಆದರೆ, ಕೆಲವರಷ್ಟೇ ಅದನ್ನು ಪರೋಕ್ಷವಾಗಿ ಸಮರ್ಥಿಸುವ ಹೀನ ಮನಸ್ಸನ್ನು ತೋರ್ಪಡಿಸಿದರು. ಅಂತಹವರಲ್ಲಿ ತೇಜಸ್ವಿ ಮುಂಚೂಣಿಯಲ್ಲಿದ್ದರು. 26 ವರ್ಷ (ಆಗ) ವಯಸ್ಸಿನ ಒಬ್ಬ ವಕೀಲನಲ್ಲಿ ಇಂತಹ ದುಷ್ಟ ಮನಸ್ಸಿದೆಯಲ್ಲಾ ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದರು. ಆದರೆ, ಆತನನ್ನು ಹತ್ತಿರದಿಂದ ಬಲ್ಲವರಿಗೆ ಇದೇನೂ ವಿಶೇಷ ಎನಿಸಿರಲಿಲ್ಲ. ಇದೀಗ ತೇಜಸ್ವಿ ತನಗೆ ಕೈ ಕೊಟ್ಟಿದ್ದು ಮಾತ್ರವಲ್ಲಾ, ‘ಇದು ಮೊದಲ ಪ್ರಕರಣವೂ ಅಲ್ಲ, ಕೊನೆಯ ಪ್ರಕರಣವೂ ಅಲ್ಲ’ ಎಂದು ಆ ಮಹಿಳೆ ಹೇಳಿದ್ದರು. ನಂತರದಲ್ಲಿ ಮಹಿಳೆಯರಿಗೆ ಹಿಂಸೆ ಕೊಡುವುದು, ಬಡಿಯುವುದು, ಅಸಭ್ಯವಾಗಿ ವರ್ತಿಸುವ ವ್ಯಕ್ತಿ ಈತ ಎಂಬ ವಿಚಾರ ಹೊರಗೆ ಬಂದಿತು. ಬಿಜೆಪಿಯ ವರ್ತುಲದಲ್ಲೇ ಓಡಾಡಿದ ಇನ್ನೊಂದು ವಿಚಾರದಲ್ಲಿ ಇಂಗ್ಲಿಷ್ ಚಾನೆಲ್ಲೊಂದರ ವರದಿಗಾರ್ತಿಯು ಅನುಭವಿಸಿದ ಕಿರುಕುಳದ ವಿಚಾರವೂ ಇತ್ತು.

ಇದರ ಕುರಿತು ಆಗಲೇ ಅದನ್ನು ನಮ್ಮಲ್ಲಿ ಸುದ್ದಿ ಮಾಡಿದ್ದರೂ, ಸ್ಕ್ರೀನ್‍ಷಾಟ್‍ಗಳನ್ನು ಹಾಕಿರಲಿಲ್ಲ. ಆದರೆ, ಇದೀಗ ನಮಗೆ ಲಭ್ಯವಾದ ಹಲವಾರು ಸ್ಕ್ರೀನ್‍ಷಾಟ್‍ಗಳಲ್ಲಿ ಒಂದು ಆಶ್ಚರ್ಯವನ್ನುಂಟು ಮಾಡುತ್ತಿದೆ. ಅಮೆರಿಕದಲ್ಲಿ ನೆಲೆಸಿರುವ ಮಹಿಳೆಯೊಬ್ಬರು ತೇಜಸ್ವಿಯ ಕಿರುಕುಳವನ್ನು ತಾಳದೇ ಪ್ರತಾಪ್‍ಸಿಂಹರಲ್ಲಿ ದೂರಿದ್ದಾರೆ. ಬೆಂಗಳೂರು ಬಿಟ್ಟು ಸ್ವಲ್ಪ ಹೊರಗೆ ಬಂದುಬಿಡಬೇಕು ಎನಿಸಿದೆ ಎಂತಲೂ ಹೇಳುತ್ತಾರೆ. ನಿನ್ನ ಬಗ್ಗೆ ನನಗೆ ಕಾಳಜಿ ಇದೆ. ಆದರೆ ನಾನೇನು ಮಾಡಬೇಕೆಂದು ಗೊತ್ತಾಗುತ್ತಿಲ್ಲವೆಂದು ಹೇಳುವ ಸಿಂಹ ಕೈತೊಳೆದುಕೊಳ್ಳುವ ಪ್ರಯತ್ನ ನಡೆಸುತ್ತಾರೆ. ನಂತರ ಆತನ ಜೊತೆಗೆ ತಾನು ಮಾತಾಡಿದ್ದಾಗಿಯೂ, ತೇಜಸ್ವಿಯ ಹತ್ತಿರ ಈ ವಿಚಾರವನ್ನು ತಾನೇನೂ ಪ್ರಸ್ತಾಪಿಸಿಲ್ಲ, ಆತ ಚೆನ್ನಾಗಿದ್ದಾನೆ, ನೀನೂ ಚೆನ್ನಾಗಿದ್ದುಬಿಡು ಹೇಳುವ ಒಂದು ವಾಟ್ಸಾಪ್ ಚಾಟ್ ಸ್ಕ್ರೀನ್‍ಷಾಟ್‍ನಿಂದ ಆರಂಭವಾಗುವ ಈ ಸರಣಿಯಲ್ಲಿ ಹಲವಾರು ಅಂಶಗಳು ಒಂದೊಂದಾಗಿ ತೆರೆದುಕೊಳ್ಳುತ್ತವೆ.

ಪ್ರತಾಪ್ ಸಿಂಹನ ಬಳಿ ಅಳಲು ತೋಡಿಕೊಂಡಿರುವ ಸಂತ್ರಸ್ತೆ

ತಾವೇ ಬಹಿರಂಗಗೊಳಿಸಲಿಚ್ಛಿಸದ ನೊಂದವರ ಐಡೆಂಟಿಟಿಗಳನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಬಯಲುಗೊಳಿಸುವ ಸುದ್ದಿಗಳನ್ನು ಸುದ್ದಿಯ ‘ರೋಚಕತೆ’ಯ ಕಾರಣಕ್ಕೆ ಮಾಡುತ್ತಾ ಹೋಗದೆ, ಕೆಲವು ಪ್ರಶ್ನೆಗಳನ್ನು ಮುಂದಿಡುತ್ತಿದ್ದೇವೆ. ಕೇವಲ 28 ವರ್ಷ ವಯಸ್ಸಿನ ಈ ವ್ಯಕ್ತಿಯು ಸಂಸತ್ ಸದಸ್ಯನಾಗುವಷ್ಟು ಅರ್ಹತೆ ಪಡೆದುಕೊಂಡಿದ್ದಾನೆಂದು ರಾಷ್ಟ್ರೀಯ ಪಕ್ಷವೊಂದು ಭಾವಿಸಿರುವುದಾದರೆ, ಈ ಅವಗುಣಗಳನ್ನು, ಅನರ್ಹತೆಗಳನ್ನು ಅವರು ಗಮನಕ್ಕೆ ತೆಗೆದುಕೊಂಡಿಲ್ಲವೇ? ಬಿಜೆಪಿ ಸರ್ಕಾರವು ಮುಂದಿಟ್ಟ ಮಹಿಳಾ ಮೀಸಲಾತಿಯ ಪ್ರಸ್ತಾಪಕ್ಕೆ ಅಷ್ಟೇ ತೇಜಸ್ವಿಯ ವಿರೋಧವಿರಲಿಲ್ಲ; ಮಹಿಳೆಯರ ಬಗ್ಗೆ ಬಹಳ ಕೀಳು ಮಟ್ಟದ ಮನಸ್ಥಿತಿಯನ್ನು ಈತ ಹೊಂದಿರುವುದಕ್ಕೆ ಹಲವು ಪುರಾವೆಗಳು ಹೊರಬೀಳುತ್ತಿವೆ. ಇದು ಬಿಜೆಪಿ ಪಕ್ಷದ ನೀತಿಯಾ? ಇಂತಹ ವ್ಯಕ್ತಿಯು ದೇಶಕ್ಕೇ ಅನ್ವಯಿಸುವ ಕಾನೂನುಗಳನ್ನು ರೂಪಿಸುವ ಸಂಸತ್‍ನಲ್ಲಿ ಇರುವುದಕ್ಕೆ ಎಷ್ಟರ ಮಟ್ಟಿಗೆ ಅರ್ಹ? ಈ ಎಲ್ಲಾ ಸುದ್ದಿಗಳು ಒಂದೊಂದಾಗಿ ಹೊರಗೆ ಬರುತ್ತಿರುವುದು ಬಿಜೆಪಿಯ ವಲಯದಿಂದಲೇ ಆಗಿದೆ. ಹಾಗಿದ್ದ ಮೇಲೆ ಬಿಜೆಪಿಯ ಇತರ ‘ಸಭ್ಯರು’ ಇದನ್ನು ಬಹಿರಂಗಗೊಳಿಸದೇ ಪಕ್ಷ ನಿಷ್ಠೆಯ ಹೆಸರಿನಲ್ಲಿ, ಅಪಾಯಕಾರಿ ವ್ಯಕ್ತಿಯು ಪಕ್ಷದ ಪ್ರತಿನಿಧಿಯಾಗಿ ಆರಿಸಿ ಹೋದರೆ ಪರವಾಗಿಲ್ಲವೆಂದು ಭಾವಿಸಿದ್ದಾರೆಯೇ? ಸ್ವತಃ ತೇಜಸ್ವಿ ಸೂರ್ಯ ತನ್ನ ಆತ್ಮವಿಮರ್ಶೆಯನ್ನು, ಪಶ್ಚಾತ್ತಾಪವನ್ನು ಮುಂದಿಡಲು ಇದು ಸುಸಮಯ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...