Homeಕರ್ನಾಟಕತೇಜಸ್ವಿ ಸೂರ್ಯ ವಿರುದ್ಧ ಪ್ರತಾಪ್ ಸಿಂಹನಿಗೆ ದೂರಿದ ನೊಂದ ಮಹಿಳೆ?

ತೇಜಸ್ವಿ ಸೂರ್ಯ ವಿರುದ್ಧ ಪ್ರತಾಪ್ ಸಿಂಹನಿಗೆ ದೂರಿದ ನೊಂದ ಮಹಿಳೆ?

- Advertisement -
- Advertisement -

ಪಾರ್ಲಿಮೆಂಟ್ ಅಭ್ಯರ್ಥಿಯ ಅರ್ಹತೆಯ ಬಗ್ಗೆ ಗಂಭೀರ ಪ್ರಶ್ನೆಗಳು

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಅರ್ಹತೆಯ ಬಗ್ಗೆ ಬಹಳ ಗಂಭೀರ ಪ್ರಶ್ನೆಗಳು ಎದ್ದಿವೆ. ಈ ಪ್ರಶ್ನೆಗಳು ಏಳುತ್ತಿರುವುದು ಜನಸಾಮಾನ್ಯರಲ್ಲಿ ಮಾತ್ರವಲ್ಲಾ, ಬಿಜೆಪಿಯೊಳಗೇ ದಿಗಿಲು ಉಂಟಾಗಿದೆ. ಒಂದು ವೇಳೆ ಆತನಿಗೆ ಸಂಬಂಧಿಸಿದ ಎಲ್ಲಾ ಸಂಗತಿಗಳೂ ಹೊರಗೆ ಬಿದ್ದರೆ ಅದು ಪಕ್ಷಕ್ಕೆ ಬಹಳ ಕೆಟ್ಟ ಹೆಸರು ತರುತ್ತದೆ ಎಂಬುದೇ ಅವರ ಆತಂಕಕ್ಕೆ ಕಾರಣ. ಇದು ತೇಜಸ್ವಿಗೂ ಗೊತ್ತಿರುವುದರಿಂದಲೇ, ಮೊದಲ ಸುದ್ದಿ ಹೊರಗೆ ಬಂದ 2ನೇ ದಿನಕ್ಕೇ ಕೋರ್ಟಿನಿಂದ ತಡೆ ತಂದದ್ದು. ಅಷ್ಟೇ ಅಲ್ಲ, ನಾನು ಪುರಾವೆಗಳ ಸಮೇತ ಈತನ ಚಾರಿತ್ರ್ಯ ಬಿಚ್ಚಿಡುತ್ತೇನೆ ಎಂದು ಹೇಳಿದ್ದ ಮಹಿಳೆ, ನಂತರ ಆ ಟ್ವೀಟ್‍ಗಳನ್ನು ಅಳಿಸಿ ಹಾಕಿದರು.

ತರುವಾಯ, ಇದನ್ನು ಯಾರೂ ಮುಂದುವರೆಸಬೇಡಿ ಎಂದು ಮನವಿ ಮಾಡಿದರು. ಆ ನಂತರ ಟ್ವಿಟ್ಟರ್‍ನಿಂದಲೇ ಹೊರಗೆ ಹೋದರು. ಇದು ಆ ಮಹಿಳೆಯ ಮೇಲೆ ಹೆಚ್ಚಿನ ಒತ್ತಡ ಬಿದ್ದಿದೆ ಎನ್ನುವುದನ್ನಷ್ಟೇ ಅಲ್ಲದೇ, ಸ್ವತಃ ತೇಜಸ್ವಿ ಸೂರ್ಯ ಬಹಳ ಬೆದರಿರಬೇಕು ಎಂಬುದನ್ನೇ ತೋರುತ್ತದೆ. ಈ ಹಿಂದೆ ಗೌರಿ ಲಂಕೇಶರ ಹತ್ಯೆ ಆದಾಗ, ಬಿಜೆಪಿಯಲ್ಲಿ ಬಹುತೇಕರು ಖಂಡನೆ ಹೇಳಿಕೆ ನೀಡಿ ಸುಮ್ಮನಾದರು. ಆದರೆ, ಕೆಲವರಷ್ಟೇ ಅದನ್ನು ಪರೋಕ್ಷವಾಗಿ ಸಮರ್ಥಿಸುವ ಹೀನ ಮನಸ್ಸನ್ನು ತೋರ್ಪಡಿಸಿದರು. ಅಂತಹವರಲ್ಲಿ ತೇಜಸ್ವಿ ಮುಂಚೂಣಿಯಲ್ಲಿದ್ದರು. 26 ವರ್ಷ (ಆಗ) ವಯಸ್ಸಿನ ಒಬ್ಬ ವಕೀಲನಲ್ಲಿ ಇಂತಹ ದುಷ್ಟ ಮನಸ್ಸಿದೆಯಲ್ಲಾ ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದರು. ಆದರೆ, ಆತನನ್ನು ಹತ್ತಿರದಿಂದ ಬಲ್ಲವರಿಗೆ ಇದೇನೂ ವಿಶೇಷ ಎನಿಸಿರಲಿಲ್ಲ. ಇದೀಗ ತೇಜಸ್ವಿ ತನಗೆ ಕೈ ಕೊಟ್ಟಿದ್ದು ಮಾತ್ರವಲ್ಲಾ, ‘ಇದು ಮೊದಲ ಪ್ರಕರಣವೂ ಅಲ್ಲ, ಕೊನೆಯ ಪ್ರಕರಣವೂ ಅಲ್ಲ’ ಎಂದು ಆ ಮಹಿಳೆ ಹೇಳಿದ್ದರು. ನಂತರದಲ್ಲಿ ಮಹಿಳೆಯರಿಗೆ ಹಿಂಸೆ ಕೊಡುವುದು, ಬಡಿಯುವುದು, ಅಸಭ್ಯವಾಗಿ ವರ್ತಿಸುವ ವ್ಯಕ್ತಿ ಈತ ಎಂಬ ವಿಚಾರ ಹೊರಗೆ ಬಂದಿತು. ಬಿಜೆಪಿಯ ವರ್ತುಲದಲ್ಲೇ ಓಡಾಡಿದ ಇನ್ನೊಂದು ವಿಚಾರದಲ್ಲಿ ಇಂಗ್ಲಿಷ್ ಚಾನೆಲ್ಲೊಂದರ ವರದಿಗಾರ್ತಿಯು ಅನುಭವಿಸಿದ ಕಿರುಕುಳದ ವಿಚಾರವೂ ಇತ್ತು.

ಇದರ ಕುರಿತು ಆಗಲೇ ಅದನ್ನು ನಮ್ಮಲ್ಲಿ ಸುದ್ದಿ ಮಾಡಿದ್ದರೂ, ಸ್ಕ್ರೀನ್‍ಷಾಟ್‍ಗಳನ್ನು ಹಾಕಿರಲಿಲ್ಲ. ಆದರೆ, ಇದೀಗ ನಮಗೆ ಲಭ್ಯವಾದ ಹಲವಾರು ಸ್ಕ್ರೀನ್‍ಷಾಟ್‍ಗಳಲ್ಲಿ ಒಂದು ಆಶ್ಚರ್ಯವನ್ನುಂಟು ಮಾಡುತ್ತಿದೆ. ಅಮೆರಿಕದಲ್ಲಿ ನೆಲೆಸಿರುವ ಮಹಿಳೆಯೊಬ್ಬರು ತೇಜಸ್ವಿಯ ಕಿರುಕುಳವನ್ನು ತಾಳದೇ ಪ್ರತಾಪ್‍ಸಿಂಹರಲ್ಲಿ ದೂರಿದ್ದಾರೆ. ಬೆಂಗಳೂರು ಬಿಟ್ಟು ಸ್ವಲ್ಪ ಹೊರಗೆ ಬಂದುಬಿಡಬೇಕು ಎನಿಸಿದೆ ಎಂತಲೂ ಹೇಳುತ್ತಾರೆ. ನಿನ್ನ ಬಗ್ಗೆ ನನಗೆ ಕಾಳಜಿ ಇದೆ. ಆದರೆ ನಾನೇನು ಮಾಡಬೇಕೆಂದು ಗೊತ್ತಾಗುತ್ತಿಲ್ಲವೆಂದು ಹೇಳುವ ಸಿಂಹ ಕೈತೊಳೆದುಕೊಳ್ಳುವ ಪ್ರಯತ್ನ ನಡೆಸುತ್ತಾರೆ. ನಂತರ ಆತನ ಜೊತೆಗೆ ತಾನು ಮಾತಾಡಿದ್ದಾಗಿಯೂ, ತೇಜಸ್ವಿಯ ಹತ್ತಿರ ಈ ವಿಚಾರವನ್ನು ತಾನೇನೂ ಪ್ರಸ್ತಾಪಿಸಿಲ್ಲ, ಆತ ಚೆನ್ನಾಗಿದ್ದಾನೆ, ನೀನೂ ಚೆನ್ನಾಗಿದ್ದುಬಿಡು ಹೇಳುವ ಒಂದು ವಾಟ್ಸಾಪ್ ಚಾಟ್ ಸ್ಕ್ರೀನ್‍ಷಾಟ್‍ನಿಂದ ಆರಂಭವಾಗುವ ಈ ಸರಣಿಯಲ್ಲಿ ಹಲವಾರು ಅಂಶಗಳು ಒಂದೊಂದಾಗಿ ತೆರೆದುಕೊಳ್ಳುತ್ತವೆ.

ಪ್ರತಾಪ್ ಸಿಂಹನ ಬಳಿ ಅಳಲು ತೋಡಿಕೊಂಡಿರುವ ಸಂತ್ರಸ್ತೆ

ತಾವೇ ಬಹಿರಂಗಗೊಳಿಸಲಿಚ್ಛಿಸದ ನೊಂದವರ ಐಡೆಂಟಿಟಿಗಳನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಬಯಲುಗೊಳಿಸುವ ಸುದ್ದಿಗಳನ್ನು ಸುದ್ದಿಯ ‘ರೋಚಕತೆ’ಯ ಕಾರಣಕ್ಕೆ ಮಾಡುತ್ತಾ ಹೋಗದೆ, ಕೆಲವು ಪ್ರಶ್ನೆಗಳನ್ನು ಮುಂದಿಡುತ್ತಿದ್ದೇವೆ. ಕೇವಲ 28 ವರ್ಷ ವಯಸ್ಸಿನ ಈ ವ್ಯಕ್ತಿಯು ಸಂಸತ್ ಸದಸ್ಯನಾಗುವಷ್ಟು ಅರ್ಹತೆ ಪಡೆದುಕೊಂಡಿದ್ದಾನೆಂದು ರಾಷ್ಟ್ರೀಯ ಪಕ್ಷವೊಂದು ಭಾವಿಸಿರುವುದಾದರೆ, ಈ ಅವಗುಣಗಳನ್ನು, ಅನರ್ಹತೆಗಳನ್ನು ಅವರು ಗಮನಕ್ಕೆ ತೆಗೆದುಕೊಂಡಿಲ್ಲವೇ? ಬಿಜೆಪಿ ಸರ್ಕಾರವು ಮುಂದಿಟ್ಟ ಮಹಿಳಾ ಮೀಸಲಾತಿಯ ಪ್ರಸ್ತಾಪಕ್ಕೆ ಅಷ್ಟೇ ತೇಜಸ್ವಿಯ ವಿರೋಧವಿರಲಿಲ್ಲ; ಮಹಿಳೆಯರ ಬಗ್ಗೆ ಬಹಳ ಕೀಳು ಮಟ್ಟದ ಮನಸ್ಥಿತಿಯನ್ನು ಈತ ಹೊಂದಿರುವುದಕ್ಕೆ ಹಲವು ಪುರಾವೆಗಳು ಹೊರಬೀಳುತ್ತಿವೆ. ಇದು ಬಿಜೆಪಿ ಪಕ್ಷದ ನೀತಿಯಾ? ಇಂತಹ ವ್ಯಕ್ತಿಯು ದೇಶಕ್ಕೇ ಅನ್ವಯಿಸುವ ಕಾನೂನುಗಳನ್ನು ರೂಪಿಸುವ ಸಂಸತ್‍ನಲ್ಲಿ ಇರುವುದಕ್ಕೆ ಎಷ್ಟರ ಮಟ್ಟಿಗೆ ಅರ್ಹ? ಈ ಎಲ್ಲಾ ಸುದ್ದಿಗಳು ಒಂದೊಂದಾಗಿ ಹೊರಗೆ ಬರುತ್ತಿರುವುದು ಬಿಜೆಪಿಯ ವಲಯದಿಂದಲೇ ಆಗಿದೆ. ಹಾಗಿದ್ದ ಮೇಲೆ ಬಿಜೆಪಿಯ ಇತರ ‘ಸಭ್ಯರು’ ಇದನ್ನು ಬಹಿರಂಗಗೊಳಿಸದೇ ಪಕ್ಷ ನಿಷ್ಠೆಯ ಹೆಸರಿನಲ್ಲಿ, ಅಪಾಯಕಾರಿ ವ್ಯಕ್ತಿಯು ಪಕ್ಷದ ಪ್ರತಿನಿಧಿಯಾಗಿ ಆರಿಸಿ ಹೋದರೆ ಪರವಾಗಿಲ್ಲವೆಂದು ಭಾವಿಸಿದ್ದಾರೆಯೇ? ಸ್ವತಃ ತೇಜಸ್ವಿ ಸೂರ್ಯ ತನ್ನ ಆತ್ಮವಿಮರ್ಶೆಯನ್ನು, ಪಶ್ಚಾತ್ತಾಪವನ್ನು ಮುಂದಿಡಲು ಇದು ಸುಸಮಯ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...