Homeಕರ್ನಾಟಕರಾಜ್ಯ ಬಿಜೆಪಿ ಸರ್ಕಾರ ಖಾಸಗಿ ಶಾಲೆಗಳ ಜೊತೆ ‍‍ಷಾಮೀಲಾಗಿದೆ: ಸಿದ್ದರಾಮಯ್ಯ ಸರಣಿ ಟ್ವೀಟ್

ರಾಜ್ಯ ಬಿಜೆಪಿ ಸರ್ಕಾರ ಖಾಸಗಿ ಶಾಲೆಗಳ ಜೊತೆ ‍‍ಷಾಮೀಲಾಗಿದೆ: ಸಿದ್ದರಾಮಯ್ಯ ಸರಣಿ ಟ್ವೀಟ್

"ಖಾಸಗಿ ಶಾಲೆಗಳ ಮೇಲೆ ಸರ್ಕಾರಕ್ಕೆ ನಿಯಂತ್ರಣ ಇಲ್ಲ. ತರಗತಿಗಳಿಲ್ಲದೆ ಇದ್ದರೂ ಪೋಷಕರಿಂದ ಪೂರ್ಣಶುಲ್ಕ ವಸೂಲಿ‌ ಮಾಡಲಾಗುತ್ತಿದೆ. ಇದಕ್ಕಾಗಿ ಆನ್‌ಲೈನ್ ತರಗತಿಗಳನ್ನು ಸ್ಥಗಿತಗೊಳಿಸಿ ಪೋಷಕರನ್ನು ಬ್ಲಾಕ್ ಮೇಲ್ ಮಾಡಲಾಗುತ್ತಿದೆ"

- Advertisement -
- Advertisement -

ರಾಜ್ಯ ಸರ್ಕಾರ ಖಾಸಗಿ ಶಾಲೆಗಳೊಂದಿಗೆ ಷಾಮೀಲಾಗಿದೆ ಎಂದು ಆರೋಪಿಸಿರುವ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡುವ ಮೂಲಕ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “ರಾಜ್ಯ ಸರ್ಕಾರದ ಎಡಬಿಡಂಗಿ ನಿಲುವುಗಳಿಂದಾಗಿ ವಿದ್ಯಾರ್ಥಿಗಳು, ಪೋಷಕರು ಮತ್ತು ಖಾಸಗಿ ಶಾಲೆಗಳ ಮಾಲೀಕರು ಎಲ್ಲರೂ ಬೀದಿಗಿಳಿದಿದ್ದಾರೆ. ಮುಖ್ಯಮಂತ್ರಿಗಳು
ಮತ್ತು ಶಿಕ್ಷಣ ಸಚಿವರು ಈ ಕುರಿತು ತಕ್ಷಣ ಸ್ಪಷ್ಟ ನಿರ್ಧಾರ ಕೈಗೊಂಡು ಈ ಬಿಕ್ಕಟ್ಟನ್ನು ಬಗೆಹರಿಸಿ ವಿದ್ಯಾರ್ಥಿಗಳನ್ನು ರಕ್ಷಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಶಾಲೆಯ ಶಿಕ್ಷಕರು ನಮ್ಮ ವಿದ್ಯಾರ್ಥಿಗಳನ್ನು ಸೆಳೆಯುತ್ತಿದ್ದಾರೆ ಎಂದು ದೂರಿದ ಖಾಸಗಿ ಶಾಲೆಗಳು!

ಇದನ್ನೂ ಓದಿ: ಶುಲ್ಕ ಪಾವತಿಸದಿದ್ದರೆ ದಾಖಲಾತಿ ರದ್ದು ಬೆದರಿಕೆ: ಸರ್ಕಾರದ ಆದೇಶಕ್ಕೆ ಕ್ಯಾರೇ ಎನ್ನದ ಖಾಸಗಿ ಶಾಲೆಗಳು

“ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿನ ಈಗಿನ ಬಿಕ್ಕಟ್ಟಿಗೆ ಮುಖ್ಯಮಂತ್ರಿಗಳು ಮತ್ತು ಶಿಕ್ಷಣ ಸಚಿವ ಸುರೇಶ್‌ ಕುಮಾರ್ ಅವರೇ ನೇರ ಹೊಣೆಗಾರರು. ಖಾಸಗಿ ಶಾಲೆಗಳ ಆಡಳಿತ ಮಂಡಳಿ ಮತ್ತು ಪೋಷಕರ ನಡುವೆ ಜಗಳ ತಂದು ಹಾಕಿ ಇವರು ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಕಾಲದಲ್ಲೂ ನಿಲ್ಲದ ಸುಲಿಗೆ; ಖಾಸಗಿ ಶಾಲೆಗಳಲ್ಲಿ ‘ಕೋವಿಡ್ ಫೀಸ್’ ವಸೂಲಿ ಆರಂಭ

“ಖಾಸಗಿ ಶಾಲೆಗಳ ಮೇಲೆ ಸರ್ಕಾರಕ್ಕೆ ನಿಯಂತ್ರಣ ಇಲ್ಲ. ತರಗತಿಗಳಿಲ್ಲದೆ ಇದ್ದರೂ ಪೋಷಕರಿಂದ ಪೂರ್ಣಶುಲ್ಕ ವಸೂಲಿ‌ ಮಾಡಲಾಗುತ್ತಿದೆ. ಇದಕ್ಕಾಗಿ ಆನ್‌ಲೈನ್ ತರಗತಿಗಳನ್ನು ಸ್ಥಗಿತಗೊಳಿಸಿ ಪೋಷಕರನ್ನು ಬ್ಲಾಕ್ ಮೇಲ್ ಮಾಡಲಾಗುತ್ತಿದೆ. ಸರ್ಕಾರ ಕಣ್ಣುಮುಚ್ಚಿಕೊಂಡು ಕೂತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹೀಗೆ ಮಾಡಿದರೆ ಸರ್ಕಾರಿ ಶಾಲೆಗಳು ಉತ್ತಮವಾಗಬಹುದಲ್ಲವೇ? 

“ತರಗತಿಗಳು ನಡೆಯದೆ ಇದ್ದರೂ ಬೋದನಾ ಶುಲ್ಕದ ಜೊತೆಯಲ್ಲಿ ಪ್ರಯೋಗಶಾಲೆ, ಲೈಬ್ರೆರಿ ಮತ್ತಿತರ ಪಠ್ಯೇತರ ಶುಲ್ಕ ವಸೂಲಿಗೆ ಹೊರಟಿರುವ ಖಾಸಗಿ ಶಾಲೆಗಳು ಸರ್ಕಾರದ ಪೊಳ್ಳುಬೆದರಿಕೆಗೆ ಜಗ್ಗುತ್ತಿಲ್ಲ. ರಾಜ್ಯ ಬಿಜೆಪಿ ಸರ್ಕಾರ ಖಾಸಗಿ ಶಾಲೆಗಳ ಜೊತೆ ಷಾಮೀಲಾಗಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಜನವರಿ 1 ರಿಂದ ವಿದ್ಯಾಗಮ ಪುನರಾರಂಭ- ಸಚಿವ ಸುರೇಶ್ ಕುಮಾರ್‌

“ಶಾಲೆ ಪುನರಾರಂಭದ ಬಗ್ಗೆ ಸರಣಿ ಸಭೆಗಳು, ಶಿಕ್ಷಣ ಸಚಿವರು ಮತ್ತು ಅಧಿಕಾರಿಗಳ ತರಹೇವಾರಿ ಹೇಳಿಕೆಗಳು ಪೋಷಕರನ್ನು ಗೊಂದಲಕ್ಕೆ ನೂಕಿವೆ. ತಕ್ಷಣ ಸಚಿವ ಸುರೇಶ್‌ ಕುಮಾರ್ ಅವರು ಖಾಸಗಿ ಶಾಲೆಗಳು ಮತ್ತು ಪೋಷಕರ ಸಭೆ ಕರೆದು ಪಾರದರ್ಶಕವಾಗಿ ಸಮಸ್ಯೆ ಬಗೆಹರಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಗ್ರಾಮೀಣ ಮೀಸಲಾತಿಯ ಮೋಸಗಳು!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...