Homeಚಳವಳಿರೈತ ಹೋರಾಟ: ರೈತರಿಗೆ ಇ-ಶೌಚಾಲಯ, ಗೀಸರ್ ದಾನ‌ ನೀಡಿದ ಎನ್‌ಜಿಒಗಳು

ರೈತ ಹೋರಾಟ: ರೈತರಿಗೆ ಇ-ಶೌಚಾಲಯ, ಗೀಸರ್ ದಾನ‌ ನೀಡಿದ ಎನ್‌ಜಿಒಗಳು

ದೆಹಲಿಯ ಟಿಕ್ರಿ ಗಡಿಯಲ್ಲಿ ಈಗ ಸಾವಿರಾರು ಸಂಖ್ಯೆಯಲ್ಲಿ ನೆರೆದಿರುವ ರೈತರಿಗೆ ಅಮೆರಿಕಾ ಮೂಲದ 2 ಸಿಖ್ ಎನ್‌ಜಿಒಗಳು 200 ಶೌಚಾಲಯಗಳು, ಗೀಸರ್‌ ಮತ್ತು ಮಲಗಲು ಡೇರೆಗಳನ್ನು ದಾನ ಮಾಡಿದ್ದಾರೆ.

- Advertisement -
- Advertisement -

ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಕಳೆದ 25 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಅನ್ನದಾತರಿಗೆ ಹಲವು ಸಂಘ ಸಂಸ್ಥೆಗಳು, ಎನ್‌ಜಿಒಗಳು ನೆರವಿಗೆ ಧಾವಿಸಿವೆ. ಕೊರೆಯುವ ಚಳಿಯಲ್ಲಿ ನಡುಗುತ್ತಾ, ಮೂಲಸೌಕರ್ಯಗಳಿಲ್ಲದ ಪರಿಸ್ಥಿತಿಯಲ್ಲೂ ರೈತರ ಹೋರಾಟ ಆತ್ಮಸ್ಥೈರ್ಯ ಕಳೆದುಕೊಂಡಿಲ್ಲ.

ಸರ್ಕಾರ ತನ್ನ ವಿವಾದಿತ ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವಂತೆ ಮಾಡೇ ಮಾಡುತ್ತೆವೆ ಎಂಬ ದೃಢ ಸಂಕಲ್ಪ ತೊಟ್ಟಿರುವ ರೈತರ ನೆರವಿಗೆ ಹಲವು ಸಂಘ ಸಂಸ್ಥೆಗಳು, ವಿದ್ಯಾರ್ಥಿ ಸಂಘಗಳು, ದೇಶಿಯ, ವಿದೇಶಿ ಸಂಘಗಳು ನಿಂತಿವೆ.

ದೆಹಲಿಯ ಟಿಕ್ರಿ ಗಡಿಯಲ್ಲಿ ಈಗ ಸಾವಿರಾರು ಸಂಖ್ಯೆಯಲ್ಲಿ ನೆರೆದಿರುವ ರೈತರಿಗೆ ಅಮೆರಿಕಾ ಮೂಲದ 2 ಸಿಖ್ ಎನ್‌ಜಿಒಗಳು ಶೌಚಾಲಯಗಳು, ಗೀಸರ್‌ ಮತ್ತು ಮಲಗಲು ಡೇರೆಗಳನ್ನು ದಾನ  ಮಾಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ಅನ್ನದಾತರಿಗೆ ಆಹಾರ ವಿತರಿಸಿದ ಬಾಕ್ಸರ್‌ ವಿಜೇಂದರ್ ಸಿಂಗ್

 

“ಪ್ರತಿಭಟನಾ ಸ್ಥಳಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಇರುವುದರಿಂದಾಗಿ, ನಾವು 200 ಪೋರ್ಟಬಲ್ ಶೌಚಾಲಯ ಮತ್ತು ಗೀಸರ್‌ಗಳನ್ನು ದಾನ ಮಾಡಲು ನಿರ್ಧರಿಸಿದ್ದೇವು” ಎಂದು ಸಿಖ್ ಪಂಚಾಯತ್ ಫ್ರೀಮಾಂಟ್ ಕ್ಯಾಲಿಫೋರ್ನಿಯಾದ ಹೋಶಿಯಾರ್‌ಪುರದ ಸಂಯೋಜಕ ಎಸ್.ಪಿ.ಸಿಂಗ್ ಖಲ್ಸಾ ಮಾಹಿತಿ ನೀಡಿದ್ದಾರೆ.

ತೀವ್ರ ಚಳಿ ಇರುವ ದೆಹಲಿಯಲ್ಲಿ ರೈತರಿಗೆ ಉಳಿದುಕೊಳ್ಳಲು ಡೇರೆಗಳನ್ನು ನೀಡಲಾಗಿದೆ. ಪ್ರತಿಭಟನಾ ನಿರತ 20ಕ್ಕೂ ಹೆಚ್ಚು ರೈತರು ಚಳಿ ಸೇರಿದಂತೆ ಅನೇಕ ಅನಾರೋಗ್ಯ ಕಾರಣದಿಂದ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ರೈತ ಹೋರಾಟವನ್ನು ಬೆಂಬಲಿಸಿ ಆತ್ಮಹತ್ಯೆ ಮಾಡಿಕೊಂಡ ಸಿಖ್ ಧರ್ಮಗುರು!

ಪ್ರತಿಭಟನಾ ನಿರತ ರೈತರಿಗೆ ದೆಹಲಿ-ಹರಿಯಾಣದ ಸಿಂಘ ಗಡಿಯಲ್ಲಿ ಸ್ವಯಂ ಸೇವಕರು ಚಹಾ ಮತ್ತು ಉಪಹಾರವನ್ನು ನೀಡಿದ್ದಾರೆ.

ದೆಹಲಿಯ ಟಿಕ್ರಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಅನ್ನದಾತರಿಗೆ ಜಮೀನ್ದಾರ ವಿದ್ಯಾರ್ಥಿ ಸಂಸ್ಥೆ (ಜೆಎಸ್‌ಒ) ಆಯೋಜಿಸಿದ್ದ ವತಿಯಿಂದ ಕಾಂಗ್ರೆಸ್ ಮುಖಂಡ ಮತ್ತು ಖೇಲ್ ರತ್ನ ಪ್ರಶಸ್ತಿ ಪುರಸ್ಕೃತ ಬಾಕ್ಸರ್ ವಿಜೇಂದರ್ ಸಿಂಗ್ ರೈತರಿಗೆ ಆಹಾರ ವಿತರಿಸಿದ್ದರು.

ಈ ಹಿಂದೆ ರೈತರಿಗೆ ಪಿಜ್ಜಾ ವಿತರಿಸಿದ್ದ ನಾಲ್ವರು ಸ್ನೇಹಿತರ ತಂಡದ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ರೈತರು ಪಿಜ್ಜಾ ತಿಂದಿದ್ದನ್ನು ಅನೇಕ ಜನ ವ್ಯಂಗ್ಯದ ಧಾಟಿಯಲ್ಲಿ ಟೀಕಿಸಿದ್ದರು ಇದಕ್ಕೆ ಅನೇಕರು ನಮಗಾಗಿ ಅನ್ನ ಬೆಳೆಯುವವರಿಗೆ ಪಿಜ್ಜಾ ತಿನ್ನುವ ಹಕ್ಕಿಲ್ಲವೇ ಎಂದು ಪೋಸ್ಟ್‌ಗಳನ್ನು ಹಾಕುವ ಮೂಲಕ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದರು.


ಇದನ್ನು ಓದಿ: ರೈತ ಹೋರಾಟಕ್ಕೆ ಬೆಂಬಲ ನೀಡಿದ ಚಿಪ್ಕೋ ಚಳುವಳಿಯ ನೇತಾರ ಸುಂದರ್‌ಲಾಲ್ ಬಹುಗುಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...