Homeಮುಖಪುಟಗುರುದ್ವಾರಕ್ಕೆ ಭೇಟಿ ನೀಡಿದ ಮೋದಿ : ’ಈ ನಾಟಕವೆಲ್ಲ ಬೇಡ’ ಎಂದ ನೆಟ್ಟಿಗರು!

ಗುರುದ್ವಾರಕ್ಕೆ ಭೇಟಿ ನೀಡಿದ ಮೋದಿ : ’ಈ ನಾಟಕವೆಲ್ಲ ಬೇಡ’ ಎಂದ ನೆಟ್ಟಿಗರು!

"ಗುರುವಿನ ಅನುಯಾಯಿಗಳು ಕೊರೆಯುವ ಚಳಿಯಲ್ಲಿ ರಸ್ತೆಯಲ್ಲಿದ್ದರೆ ನೀವು ಗುರುದ್ವಾರಕ್ಕೆ ಭೇಟಿ ನೀಡಿದ್ದನ್ನು, ಸ್ವತಃ ಗುರು ಕೂಡಾ ಕ್ಷಮಿಸಲಾರರು" ಎಂದು ಹಲವಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯಿದೆಗಳ ವಿರುದ್ದ ಕಳೆದ 25 ದಿನಗಳಿಂದ ರೈತರು ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದರೆ, ಪ್ರಧಾನಿ ಮೋದಿ ಸಿಖ್‌ ಸಮುದಾಯವನ್ನು ಮನವೊಲಿಸುವುದಕ್ಕಾಗಿ ನವ ದೆಹಲಿಯಲ್ಲಿರುವ ರಕಬ್‌ ಗಂಜ್‌ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಸಿಖ್ ಗುರು ತೇಗ್‌ ಬಹದ್ದೂರ್‌ ಅವರ ಬಲಿದಾದನ ದಿನವಾದ ಇಂದು ಪ್ರಧಾನಿ ಮೋದಿ ಗುರುದ್ವಾರಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದ್ದು, ಅದರ ಹಲವಾರು ಚಿತ್ರಗಳನ್ನು ತಮ್ಮ ಟ್ವಿಟ್ಟರ್‌‌ನಲ್ಲಿ ಹಾಕಿಕೊಂಡಿದ್ದಾರೆ. “ಗುರುದ್ವಾರ ರಕಬ್ ಗಂಜ್ ಸಾಹಿಬ್‌‌ನಲ್ಲಿರುವ ಶ್ರೀ ಗುರು ತೇಗ್ ಬಹದ್ದೂರ್‌‌ರಿಗೆ ಇಂದು ನಾನು ಗೌರವ ನಮನ ಸಲ್ಲಿಸಿದೆ. ಅವರು ಹಿಂದೂ ಧರ್ಮವನ್ನು ಉಳಿಸುವ ಸಲುವಾಗಿ ಹಲವಾರು ಕಾರ್ಯಗಳನ್ನು ಮಾಡಿದ್ದು, ಸಾಮರಸ್ಯದ ಸಂದೇಶ ನೀಡಿದ್ದಾರೆ. ಅವರ ಜೀವನದಲ್ಲಿ ಧೈರ್ಯ ಮತ್ತು ಸಹಾನುಭೂತಿ ಗುಣಗಳು ತುಂಬಿತ್ತು. ಅವರ ಹುತಾತ್ಮ ದಿನದಂದು ನಾನು ಅವರಿಗೆ ತಲೆಬಾಗುತ್ತೇನೆ” ಎಂದು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಗೋದಿ ಮೀಡಿಯಾಗಳಿಗೆ ಸೆಡ್ಡು: ಸ್ವಂತ ಚಾನೆಲ್ ಆರಂಭಿಸಿದ ದೆಹಲಿಯ ಹೋರಾಟನಿರತ ರೈತರು!

ಡಿಸೆಂಬರ್‌ 15 ರಂದು ಕೂಡಾ ಗುಜರಾತ್‌ನ ಕಚ್‌‌ನಲ್ಲಿ ಸಿಖ್‌ ಸಮುದಾಯದ ರೈತರ ನಿಯೋಗವನ್ನು ಮೋದಿ ಭೇಟಿಯಾಗಿದ್ದಾಗಿ ಮಾಧ್ಯಮಗಳು ವರದಿ ಮಾಡಿತ್ತು. ಆದರೆ ಅದು ರೈತರ ನಿಯೋಗವಾಗಿರದೆ ಬಿಜೆಪಿ ಕಾರ್ಯಕರ್ತರ ನಿಯೋಗ ಎಂದು ನ್ಯಾಷನಲ್ ಹೆರಾಲ್ಡ್‌ ತನಿಖಾ ವರದಿ ಮಾಡಿದೆ. ದೆಹಲಿಯ ಗಡಿಯ ಸುತ್ತಲೂ ಪ್ರತಿಭಟನೆ ನಡೆಸುತ್ತಿರುವ ರೈತರಲ್ಲಿ ಸಿಖ್ ಸಮುದಾಯದವರೇ ಹೆಚ್ಚಾಗಿ ಕಾಣುತ್ತಿರುವುದರಿಂದ ಪ್ರಧಾನಿ ಸಿಖ್ಖರನ್ನು ಮನವೊಲಿಸಲು ಪ್ರಯತ್ನಿಸುತ್ತದ್ದಾರೆ ಎಂದು ಹಲವಾರು ಜನರು ಆರೋಪಿಸಿದ್ದಾರೆ.

ರೈತರ ಹೋರಾಟ ದಿನೇ ದಿನೇ ತೀವ್ರಗೊಳ್ಳುತ್ತಿದ್ದು ಪ್ರಧಾನಿ ಮೋದಿ ಇದುವರೆಗೂ ತಮ್ಮ ನೂತನ ಕಾಯ್ದೆಯನ್ನು ಸಮರ್ಥಿಸಿಕೊಳ್ಳುತ್ತಲೇ ಇದ್ದಾರೆ. ಆದರೆ ಪ್ರತಿಭಟನಾ ನಿರತ ರೈತರು ಕೃಷಿ ವಿರೋಧಿ ಕಾಯ್ದೆಯನ್ನು ರದ್ದು ಪಡಿಸಲೇಬೇಕು ಎಂದು ಪಟ್ಟುಹಿಡಿದಿದ್ದಾರೆ. ಪ್ರಧಾನಿ ಮೋದಿ ಗುರುದ್ವಾರಕ್ಕೆ ಭೇಟಿ ನೀಡಿರುವ ಸಂದರ್ಭದಲ್ಲಿ “ಗುರುವಿನ ಅನುಯಾಯಿಗಳು ಕೊರೆಯುವ ಚಳಿಯಲ್ಲಿ ರಸ್ತೆಯಲ್ಲಿದ್ದರೆ ನೀವು ಗುರುದ್ವಾರಕ್ಕೆ ಭೇಟಿ ನೀಡಿದ್ದನ್ನು, ಸ್ವತಃ ಗುರು ಕೂಡಾ ಕ್ಷಮಿಸಲಾರರು” ಎಂದು ಹಲವಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿ ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ‘ದೇಶಪ್ರೇಮಿ ಯುವಾಂದೋಲನ’

“ಸರ್, ದೇವರ ಸಂಬಂಧಿಗಳು ಕೊರೆಯುವ ಚಳಿಗಾಲದಲ್ಲಿ ಕುಳಿತಿದ್ದಾರೆ. ತಮ್ಮ ಅನುಯಾಯಿಗಳು ಮತ್ತು ಜನರು ಸಂತೋಷವಾಗಿರದೆ ಯಾವುದೇ ಗುರು ಕೂಡಾ ಸಂತೋಷವಾಗಿ ಇರುವುದಿಲ್ಲ. ಪ್ರತಿಭಟನಾ ನಿರತ ರೈತರನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಪರಿಹರಿಸಿ” ಎಂದು ಚಮನ್ ವರ್ಸ್‌ನೆ ಹೇಳಿದ್ದಾರೆ.

“ಎಲ್ಲಾ ಸಿಖ್ಖರು ನಿಮ್ಮೊಂದಿಗಿದ್ದಾರೆ ಎಂದು ಹೇಳಲು ಮತ್ತು ತೋರಿಸಲು ನೀವು ಪ್ರಯತ್ನಿಸುತ್ತಿದ್ದೀರಿ. ಆದರೆ ಸಿಖ್ ರೈತರು ರಸ್ತೆಯಲ್ಲಿ ನಿಂತು ಕಾಯ್ದೆಯನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ. ದಯವಿಟ್ಟು ಕಾಯ್ದೆಯನ್ನು ಅಮಾನತುಗೊಳಿಸಿ ಹಾಗೂ ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ಅನೇಕ ರಾಜ್ಯಗಳ ರೈತರು ತಮ್ಮ ಮನಗೆ ಹೋಗಲು ಅನುಕೂಲ ಮಾಡಿ” ಎಂದು ಒಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟದ ಹುತಾತ್ಮರಿಗೆ ಇಂದು ಶ್ರದ್ಧಾಂಜಲಿ: ಇಲ್ಲಿವೆ ಪ್ರಮುಖ ಅಂಶಗಳು

ಅನಿಲ್ ಕಪೂರ್ ಎಂಬುವವರು‌, “ಮೋದಿಯವರೆ, ಟೈಮ್ ನಿಯತಕಾಲಿಕವು ನಿಮ್ಮನ್ನು ’ಡಿವೈಡ್ ಇನ್ ಚೀಫ್’ ಎಂದು ಕರೆದಿ‌ದ್ದು ಸರಿಯಾಗಿದೆ. ನೀವು ಸಿಖ್ ಸಮುದಾಯವನ್ನು ಎರಡು ಭಾಗಗಳಾಗಿ ವಿಂಗಡಿಸಲು ಪ್ರಯತ್ನಿಸುತ್ತಿದ್ದೀರಿ. ಪ್ರತಿಭಟಿಸುತ್ತಿರುವ ರೈತರನ್ನು ಪ್ರತ್ಯೇಕಿಸಲು ನೀವು ಬಯಸುತ್ತೀರಿ” ಎಂದು ಕಿಡಿಕಾರಿದ್ದಾರೆ.

“ಈ ನಾಟಕವೆಲ್ಲ ಬೇಡ. ರಕ್ತ, ಬೆವರು ಚೆಲ್ಲುವ ಮೂಲಕ ಉತ್ಪತ್ತಿಯಾಗುವ ಬೆಳೆಗೆ ಕನಿಷ್ಠ ಬೆಲೆ ಖಾತರಿಯ ಕಾನೂನು ಅಗತ್ಯವಿದೆ. ಗುರುವಿನ ಮಕ್ಕಳು ಕೊರೆಯುವ ಚಳಿಯಲ್ಲಿ ಸಾಯುತ್ತಿದ್ದಾರೆ ಮತ್ತು ನೀವು ಗುರುದ್ವಾರದಲ್ಲಿ ಚಿತ್ರೀಕರಣ ಮಾಡುತ್ತಿದ್ದೀರಿ. ದಿಕ್ಕಾರವಿದೆ. ರೈತರು ತಮ್ಮ ಬೆಳೆಗೆ ಕನಿಷ್ಠ ಬೆಲೆಯನ್ನಷ್ಟೇ ಕೇಳಿದ್ದಾರೆ, ವಜ್ರವನ್ನಲ್ಲ” ಎಂದು ಝಾಲಿಮ್ ಜಾಟ್ ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

ಹೊಸ ದೆಹಲಿಯಿಂದ ಟಿ‌ಕ್ರೀ ಮತ್ತು ಸಿಂಘೂ ಗಡಿಗೆ ತೆರಳುವ ಗೂಗಲ್ ಮ್ಯಾಪ್‌‌ನ ಚಿತ್ರವನ್ನು ಹಾಕಿರುವ ಟ್ರಾಕ್ಟರ್‌ ಟು ಟ್ವಿಟ್ಟರ್‌ ಹ್ಯಾಂಡಲ್, “ನರೇಂದ್ರ ಮೋದಿ ನಿಮ್ಮಲ್ಲಿ ವಿನಮ್ರ ವಿನಂತಿ, ನಿಜವಾದ ರೈತರು ಗುಜರಾತ್‌ನಲ್ಲಿ ಅಥವಾ ಗುರುದ್ವಾರ ಸಾಹಿಬ್‌ನಲ್ಲಿಲ್ಲ. ದಯವಿಟ್ಟು ಈ ನಕ್ಷೆಯನ್ನು ಅನುಸರಿಸಿ ಬನ್ನಿ, ಅದು ನಿಮ್ಮ ಸಮಯವನ್ನು ಉಳಿಸುವುದಲ್ಲದೆ, ಪ್ರತಿಭಟಿಸುತ್ತಿರುವ ಅರ್ಧ ಮಿಲಿಯನ್ ರೈತರ ಬಳಿಗೆ ಕರೆದೊಯ್ಯುತ್ತದೆ” ಎಂದಿದ್ದಾರೆ.

“ಗುರು ಸಾಹಿಬ್ ಅನುಯಾಯಿಗಳನ್ನು ರಸ್ತೆಯಲ್ಲಿ ಬಿಟ್ಟು ನಿಮ್ಮ ಪ್ರದರ್ಶನ ಏನು? ಸಿಖ್ಖರ ವಿರುದ್ಧ ನಿಮ್ಮ ಪಿತೂರಿ ಸ್ಪಷ್ಟವಾಗಿದೆ” ಎಂದು ಆಯುಷ್ ಹೇಳಿದ್ದಾರೆ.

ಇದನ್ನೂ ಓದಿ: ‘ಈಗ ನಾನು ರೈತರೊಂದಿಗೆ ನಿಲ್ಲಲೇಬೇಕು’ – ಬಿಜೆಪಿ ಮುಖಂಡ ಚೌಧರಿ ಬಿರೇಂದರ್ ಸಿಂಗ್

“ಶ್ರೀ ಗುರು ತೇಜ್ ಬಹದ್ದೂರ್ ಸಾಹಿಬ್ ಜಿ ಅವರಿಂದ ನೀವು ಕಲಿತದ್ದನ್ನು ಅನುಸರಿಸಲು ಬಯಸಿದರೆ, ಅವರು ಕಾಶ್ಮೀರಿ ಪಂಡಿತರ ಉಳಿವಿಗಾಗಿ ದೆಹಲಿಗೆ ಬಂದಂತೆಯೇ, ದೆಹಲಿಯ ಬಾಗಿಲನ್ನು ಬಡಿದುಕೊಳ್ಳುತ್ತಿರುವ ರೈತರ ಬಳಿ ಹೋಗಿ. ಈ ಮೂಲಕ ಅವರಿಂದ ಏನಾದರೂ ಕಲಿಯಿರಿ. ಕೇವಲ ಚಿತ್ರಗಳನ್ನು ಪೋಸ್ಟ್ ಮಾಡುವುದರಿಂದ ಏನೂ ಆಗುವುದಿಲ್ಲ” ಎಂದು ಮನ್‌‌ಜೀತ್‌ ಸಿಂಗ್‌‌ ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ತೀವ್ರ: 1 ಲಕ್ಷಕ್ಕೂ ಹೆಚ್ಚು ಗ್ರಾಮಗಳಲ್ಲಿ ‘ಶ್ರದ್ಧಾಂಜಲಿ ದಿವಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...