Homeಕರ್ನಾಟಕಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯರನ್ನು ಸೋಲಿಸಲು JDS-BJP ನಡುವೆ ಒಳಒಪ್ಪಂದ ಆಗಿತ್ತು- ಜೆಡಿಎಸ್ ಶಾಸಕ

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯರನ್ನು ಸೋಲಿಸಲು JDS-BJP ನಡುವೆ ಒಳಒಪ್ಪಂದ ಆಗಿತ್ತು- ಜೆಡಿಎಸ್ ಶಾಸಕ

ನಾನು ನೇರವಾಗಿ ಮಾತನಾಡುವ ಮನುಷ್ಯ. ಸಿದ್ದರಾಮಣ್ಣ ಅವರನ್ನು ಸೋಲಿಸಲು ಒಳ ಒಪ್ಪಂದ ಅಗಿದ್ದು ಸತ್ಯ. ಒಳಗೊಂದು ಹೊರಗೊಂದು ಮಾತನಾಡುವುದು ಬಿಟ್ಟು ನೇರವಾಗಿ ಹೇಳಬೇಕು. - ಎಸ್.ಆರ್.ಶ್ರೀನಿವಾಸ್

- Advertisement -
- Advertisement -

2018ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಜೆಡಿಎಸ್ ಮತ್ತು ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದ್ದವು ಎಂದು ಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಪುನರುಚ್ಚರಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಕೆ.ಎನ್. ರಾಜಣ್ಣ ಅವರ ತುಮಕೂರಿನ ಕ್ಯಾತ್ಸಂದ್ರ ನಿವಾಸದಲ್ಲಿ ಕಾಣಿಸಿಕೊಂಡ ಶ್ರೀನಿವಾಸ್, ಗುಬ್ಬಿಯಲ್ಲಿ ಡಿಸೆಂಬರ್ 19ರಂದು ಪತ್ರಿಕಾಗೋಷ್ಠಿಯಲ್ಲಿ ನೀಡಿದ್ದ ಹೇಳಿಕೆಗಳನ್ನು ಇಂದು ಪುನರುಚ್ಚರಿಸಿದರು. “ನನ್ನ ವೈಯಕ್ತಿಕ ಅಭಿಪ್ರಾಯಗಳನ್ನು ಹೇಳುತ್ತಿದ್ದೇನೆ. ಚಾಮುಂಡೇಶ್ವರಿ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ನಡುವೆ ಒಳ ಒಪ್ಪಂದ ಆಗಿತ್ತು” ಎಂದಿದ್ದಾರೆ.

ನಾನು ನೇರವಾಗಿ ಮಾತನಾಡುವ ಮನುಷ್ಯ. ಸಿದ್ದರಾಮಣ್ಣ ಅವರನ್ನು ಸೋಲಿಸಲು ಒಳ ಒಪ್ಪಂದ ಅಗಿದ್ದು ಸತ್ಯ. ಒಳಗೊಂದು ಹೊರಗೊಂದು ಮಾತನಾಡುವುದು ಬಿಟ್ಟು ನೇರವಾಗಿ ಹೇಳಬೇಕು. ಅದು ಆಗುತ್ತಿಲ್ಲ. ಪಕ್ಷದಲ್ಲಿ ಆಗುವುದೇ ಒಂದು, ಹೊರಗೆ ಹೇಳುವುದೇ ಒಂದು. ಇಂತಹ ದ್ವಂದ್ವವನ್ನು ಬಿಟ್ಟು ನೇರಾನೇರ ಹೇಳಿದರೆ ಒಳ್ಳೆಯದು. ಜೆಡಿಎಸ್ ಪಕ್ಷದಲ್ಲಿ ಗೋಪಾಲಯ್ಯ, ನಾನು ಮತ್ತು ರಾಜಣ್ಣ ಅವರನ್ನು ಬಿಟ್ಟರೆ ಬೇರೆ ಯಾರೂ ಕೂಡ ನೇರವಾಗಿ ಮಾತನಾಡುತ್ತಿರಲಿಲ್ಲ ಎಂಬುದನ್ನು ಸ್ಮರಿಸಿದರು.

ಕೃಷಿ ಸಂಬಂಧಿ ನೂತನ ಮೂರು ಕಾಯ್ದೆಗಳ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಸಂದರ್ಭ ದಲ್ಲಿ ಮತ್ತು ರಾಜ್ಯ ಸರ್ಕಾರ ಜಾರಿಗೊಳಿಸಲು ಹೊರಟಿರುವ ಕಾಯ್ದೆಗಳಿಗೆ ವಿರೋಧ ವ್ಯಕ್ತವಾಗುತ್ತಿರುವ ಹೊತ್ತಿನಲ್ಲಿ ಕೃಷಿ ಮಸೂದೆಯ ಪರವಾಗಿ ಜೆಡಿಎಸ್ ಮತ ಚಲಾಯಿಸಿದ್ದಕ್ಕೆ ಶಾಸಕ ಎಸ್.ಆರ್. ಶ್ರೀನಿವಾಸ್ ಬೇಸರಗೊಂಡಿದ್ದಾರೆ. ಅದೇ ಕಾರಣಕ್ಕೆ ಜೆಡಿಎಸ್ ತೆಗೆದುಕೊಳ್ಳುವ ತೀರ್ಮಾನಗಳಿಂದ ದೂರ ಉಳಿದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಶ್ರೀನಿವಾಸ್ ಹೇಳಿದಂತೆ “ನಾನು ಮಾನಸಿಕವಾಗಿ ರಾಜಕೀಯ ಮಾಡುತ್ತಿಲ್ಲ. ದೈಹಿಕವಾಗಿ ಮಾತ್ರ ರಾಜಕಾರಣದಲ್ಲಿದ್ದೇನೆ” ಎಂದು ಹೇಳಿರುವುದು ಮೇಲಿನ ಮಾತುಗಳಿಗೆ ಪುಷ್ಠಿ ನೀಡುತ್ತಿದೆ.

ಸಿದ್ದರಾಮಯ್ಯ ಸೋಲಿನ ಒಳ ಒಪ್ಪಂದದ ಬಗ್ಗೆ ಮಾತ್ರ ಮಾತನಾಡುತ್ತಿದ್ದೀರಾ, ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ಸೋಲಿನ ಒಳ ಒಪ್ಪಂದದ ಕುರಿತು ಹೇಳಿ ಎಂಬ ಪ್ರಶ್ನೆಗೆ ಉತ್ತರಿಸಿದ ಶಾಸಕ ಶ್ರೀನಿವಾಸ್, “ಎಚ್.ಡಿ.ದೇವೇಗೌಡರು ಯಾರೋ ಒಬ್ಬ ಮುಖಂಡರನ್ನು ನಂಬಿಕೊಂಡಿದ್ದರು. ಅತಿಯಾದ ನಂಬಿಕೆ ಮತ್ತು ಭರವಸೆ ಅವರ ಸೋಲಿಗೆ ಕಾರಣ. ನಮ್ಮ ಮಾತನ್ನು ಕೇಳಿದ್ದರೆ ದೇವೇಗೌಡರು ಗೆಲ್ಲುತ್ತಿದ್ದರು. ಆ ಮುಖಂಡರು ದೇವೇಗೌಡರು ಸೋಲಲು ಕಾರಣ. ಒಳಗೊಂದು, ಹೊರಗೊಂದು ಮಾತನಾಡುವುದು ಸರಿಯಲ್ಲ. ಕುಮಾರಸ್ವಾಮಿ ಏಕೆ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ನಮ್ಮ ಪಕ್ಷದ ಮುಖಂಡರು ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಹಾಗಾಗಿ ಎರಡೂವರೆ ವರ್ಷ ಸರ್ಕಾರ ಬೀಳುವುದಿಲ್ಲ. ನಾನು ಬಿಜೆಪಿಗೆ ಬೆಂಬಲ ನೀಡುತ್ತಿಲ್ಲ. ನನಗೆ ಬಿಜೆಪಿ ಮೇಲೆ ಪ್ರೀತಿಯೂ ಇಲ್ಲ, ಒಲವೂ ಇಲ್ಲ. ವಾಮ ಮಾರ್ಗದಲ್ಲಿ ಅಧಿಕಾರ ಹಿಡಿಯಬೇಕೆಂಬ ಇಚ್ಚೆ ನನಗೆ ಇಲ್ಲ ಎಂದು ಹೇಳುವ ಮೂಲಕ ಜೆಡಿಎಸ್ ವರಿಷ್ಟರು ತೆಗೆದುಕೊಳ್ಳುತ್ತಿರುವ ತೀರ್ಮಾನಗಳಿಗೆ ತೀವ್ರ ಅಸಮಾಧಾನ ಹೊರಹಾಕಿದರು.

ಮುಂದಿನ ತೀರ್ಮಾನದ ಕುರಿತು ಈಗಲೇ ಏನೂ ಹೇಳಲಾಗುವುದಿಲ್ಲ. ಕಾರ್ಯಕರ್ತರನ್ನು ಕರೆದು ಚರ್ಚೆ ನಡೆಸಬೇಕು. ಪ್ರತಿಯೊಂದು ಪಕ್ಷದಲ್ಲೂ ಬೇರೆ ಪಕ್ಷಗಳ ಅಭ್ಯರ್ಥಿಗಳಿಗೆ ಬೆಂಬಲ ನೀಡುವ ಪದ್ದತಿ ಇದೆ. ಅದನ್ನು ನಿವಾರಣೆ ಮಾಡಲು ಸಾಧ್ಯವಿಲ್ಲ ಎಂದರು.

ಕೆ.ಎನ್. ರಾಜಣ್ಣ ಮತ್ತು ನಾನು ಬೇರೆ ಬೇರೆ ಪಕ್ಷದಲ್ಲಿದ್ದೇವೆ. ಆದರೂ ನಾವು ಸ್ನೇಹಿತರು. ನನ್ನ ಗೆಲುವಿನಲ್ಲಿ ರಾಜಣ್ಣ ಪ್ರಮುಖ ಪಾತ್ರ ವಹಿಸಿದ್ದಾರೆ. ರಾಜಣ್ಣ ನನಗೆ ಗಾಡ್ ಫಾದರ್. ಮನೆಗೆ ಬರುವಂತೆ ಕರೆ ಮಾಡಿದರು. ಅವರ ಮಾತಿಗೆ ಬೆಲೆ ಕೊಟ್ಟು ಬಂದಿದ್ದೇನೆ. ಮುಂದಿನ ಹೆಜ್ಞೆಗಳ ಕುರಿತು ಯಾವುದೇ ತೀರ್ಮಾನ ತೆಗೆದು ಕೊಂಡಿಲ್ಲ.  ಗುಬ್ಬಿಯ ಕೆಲ ಜೆಡಿಎಸ್ ಮುಖಂಡರು ಪಕ್ಷದಲ್ಲಿದ್ದುಕೊಂಡೇ ನನ್ನ ವಿರುದ್ದವಾಗಿ ಕೆಲಸ ಮಾಡಿದರು. ನನ್ನನ್ನೂ ಸೋಲಿಸುವ ಯತ್ನ ನಡೆಯಿತು. ಆದರೂ ಮತದಾರರು ಗೆಲ್ಲಿಸಿದರು ಎಂದು ಹೇಳಿದರು.

ಮಾಜಿ ಶಾಸಕರ ಮನೆಯಲ್ಲಿ ಶ್ರೀನಿವಾಸ್ ಕಾಣಿಸಿಕೊಂಡಿರುವುದು ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ಜೆಡಿಎಸ್ ನಾಯಕರ ನಡವಳಿಗಳ ಬಗ್ಗೆ ಶ್ರೀನಿವಾಸ್ ಅಸಮಾಧಾನ ಹೊರ ಹಾಕಿದ್ದು, ಅವರು ಕಾಂಗ್ರೆಸ್ ನತ್ತ ಮುಖ ಮಾಡಿರುವುದು ಸ್ಪಷ್ಟವಾಗಿದೆ. ಜೆಡಿಎಸ್ ತೀರ್ಮಾನಗಳಿಂದ ದೂರ ಉಳಿದಿದ್ದೇನೆ ಎಂದು ಹೇಳುವ ಮೂಲಕ ಪಕ್ಷದಿಂದ ಹೆಜ್ಜೆಯನ್ನು ಹೊರಗೆ ಇಟ್ಟಿರುವ ಸ್ಪಷ್ಟ ಸೂಚನೆಯನ್ನು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: ರಾಜ್ಯ ಬಿಜೆಪಿ ಸರ್ಕಾರ ಖಾಸಗಿ ಶಾಲೆಗಳ ಜೊತೆ ‍‍ಷಾಮೀಲಾಗಿದೆ: ಸಿದ್ದರಾಮಯ್ಯ ಸರಣಿ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...