Homeಮುಖಪುಟದೆಹಲಿ V/s ಉತ್ತರ ಪ್ರದೇಶ: ಸರ್ಕಾರಿ ಶಾಲೆಗಳ ವಾಸ್ತವತೆ ಬಿಚ್ಚಿಡಲು ಆಪ್ ಅಭಿಯಾನ

ದೆಹಲಿ V/s ಉತ್ತರ ಪ್ರದೇಶ: ಸರ್ಕಾರಿ ಶಾಲೆಗಳ ವಾಸ್ತವತೆ ಬಿಚ್ಚಿಡಲು ಆಪ್ ಅಭಿಯಾನ

ಉತ್ತರ ಪ್ರದೇಶದ ಪಾಳುಬಿದ್ದ ಶಾಲೆಗಳು, ದನದ ಕೊಟ್ಟಿಗೆಗಳಾಗಿರುವ ಶಾಲೆಗಳು, ಸ್ವಚ್ಛತೆ ಮಾಯವಾಗಿರುವ, ಸುಣ್ಣ-ಬಣ್ಣ ಕಾಣದೇ ಅದೇಷ್ಟೋ ವರ್ಷಗಳಾಗಿರುವ ಶಾಲೆಗಳ ಚಿತ್ರಗಳನ್ನು ಈ ಅಭಿಯಾನದಲ್ಲಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿರುವ ಆಮ್ ಆದ್ಮಿ ಪಕ್ಷ ಈಗಿನಿಂದಲೇ ಹೊಸ ಹೊಸ ಪ್ರಯೋಗಗಳ ಮೂಲಕ ಉತ್ತರ ಪ್ರದೇಶದಲ್ಲಿ ನೆಲೆಗೊಳ್ಳಲು ಪ್ರಯತ್ನಿಸುತ್ತಿದೆ. ಆಪ್ ನಾಯಕ ಅರವಿಂದ್ ಕೇಜ್ರೀವಾಲ್ ಇಂತಹದೊಂದು ಘೋಷಣೆ ಹೊರಡಿಸುತ್ತಿದ್ದಂತೆ ಉಭಯ ನಾಯಕರ ನಡುವೆ ವಾಕ್ಸಮರ ಆರಂಭವಾಗಿದೆ. ಇದು ಈಗ ಶಾಲೆಗಳ ಅಭಿವೃದ್ಧಿಗೆ ಬಂದು ನಿಂತಿದ್ದು, ಆಪ್ ಸರ್ಕಾರಿ ಶಾಲೆಗಳ ಬಗ್ಗೆ ಅಭಿಯಾನವನ್ನೇ ಆರಂಭಿಸಿದೆ.

ಚುನಾವಣೆಯಲ್ಲಿ ಸ್ಫರ್ಧಿಸುವುದಾಗಿ ಘೋಷಿಸಿದ್ದ ಅರವಿಂದ್ ಕೇಜ್ರೀವಾಲ್, ಜೊತೆಗೆ ದೆಹಲಿ ಮತ್ತು ಉತ್ತರ ಪ್ರದೇಶದ ಶಾಲೆಗಳನ್ನು ಹೋಲಿಸಿ ಮಾತನಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಉತ್ತರ ಪ್ರದೇಶದ ಪ್ರಾಥಮಿಕ ಶಿಕ್ಷಣ ಸಚಿವ ಸತೀಶ್ ಚಂದ್ರ ದ್ವಿವೇದಿ, ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ಉತ್ತರ ಪ್ರದೇಶದ ಶಾಲೆಗಳಿಗೆ ಭೇಟಿ ನೀಡುವಂತೆ ಆಹ್ವಾನಿಸಿದ್ದರು.

ಸತೀಶ್ ದ್ವಿವೇದಿ ಸೇರಿದಂತೆ ಉತ್ತರ ಪ್ರದೇಶದ ಹಲವಾರು ಮಂತ್ರಿಗಳು ಎಸೆದ ಸವಾಲನ್ನು ತಾವು ಒಪ್ಪಿಕೊಂಡಿದ್ದೇವೆ ಎಂದು ಸಿಸೋಡಿಯಾ ಹೇಳಿದ್ದಾರೆ. ಅಲ್ಲದೆ ದೆಹಲಿ ಸಚಿವರಿಗೆ ಉತ್ತರ ಪ್ರದೇಶಕ್ಕೆ ಭೇಟಿ ನೀಡಲು ಮತ್ತು ಎರಡು ರಾಜ್ಯಗಳಲ್ಲಿನ ಶಿಕ್ಷಣ ಮತ್ತು ಶಾಲಾ ಸೌಲಭ್ಯಗಳ ಬಗ್ಗೆ ಚರ್ಚಿಸಲು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲೂ AAP ಸ್ಪರ್ಧೆ: ಕೇಜ್ರಿವಾಲ್ ಘೋಷಣೆ

Image
PC:Twitter@AamAadmiParty (ಉತ್ತರ ಪ್ರದೇಶದ ಸರ್ಕಾರಿ ಶಾಲೆಯೊಂದರ ಚಿತ್ರ)

ಈಗ #SelfieWithSarkaariSchool ಅಭಿಯಾನ ಆರಂಭಿಸಿರುವ ಆಪ್, ಉತ್ತರ ಪ್ರದೇಶದ ಶಾಲೆಗಳ ಚಿತ್ರಣವನ್ನು ಬಯಲಿಗೆಳೆಯುತ್ತಿದೆ. ಉತ್ತರ ಪ್ರದೇಶದ ಪಾಳುಬಿದ್ದ ಶಾಲೆಗಳು, ದನದ ಕೊಟ್ಟಿಗೆಗಳಾಗಿ ಬದಲಾಗಿರುವ ಶಾಲೆಗಳು, ಸ್ವಚ್ಛತೆ ಮಾಯವಾಗಿರುವ, ಸುಣ್ಣ-ಬಣ್ಣ ಕಾಣದೇ ಅದೇಷ್ಟೋ ವರ್ಷಗಳಾಗಿರುವ ಶಾಲೆಗಳ ಚಿತ್ರಗಳನ್ನು ಈ ಅಭಿಯಾನದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ’ಮೋದಿಯವರಂತೆ ಆಗಬೇಡಿ, ಮಾಸ್ಕ್ ಧರಿಸಿ’: ಮೋದಿ ವಿಡಿಯೋ ಟ್ರೋಲ್ ಮಾಡಿದ ಆಪ್

ಜನಸಂಖ್ಯೆ ಆಧಾರದಲ್ಲಿ ಮಕ್ಕಳ ಶಿಕ್ಷಣವನ್ನು ಹೊಲಿಕೆ ಮಾಡಿದ್ದ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾತಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಇಬ್ಬರೂ ತಿರುಗೇಟು ನೀಡಿದ್ದಾರೆ.

ಹೆಚ್ಚಿನ ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶದ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಲು ಸಾಧ್ಯವಾಗದಿದ್ದರೆ ಅವರು ಅಧಿಕಾರ ಬಿಟ್ಟುಬಿಡಬೇಕು ಎಂದು ಮನೀಶ್ ಸಿಸೋಡಿಯಾ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ’ಈ ಹೋರಾಟ ಕೇವಲ ರೈತರದ್ದಲ್ಲ, ಎಲ್ಲಾ ದೇಶವಾಸಿಗಳದ್ದು’: ಭಾರತ್ ಬಂದ್ ಬೆಂಬಲಿಸಿದ ಆಪ್

ಸಿಸೋಡಿಯಾ ಮಾತಿಗೆ ಬೆಂಬಲ ನೀಡಿರುವ ಅರವಿಂದ್ ಕೇಜ್ರೀವಾಲ್ ಕೂಡ “ಜನಸಂಖ್ಯೆ 5 ಲಕ್ಷ ಅಥವಾ 5 ಕೋಟಿ ಆಗಿರಲಿ, ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಉಜ್ವಲ ಭವಿಷ್ಯವನ್ನು ನೀಡುವುದು ನಮ್ಮ ಸರ್ಕಾರಗಳ ಜವಾಬ್ದಾರಿಯಾಗಿದೆ” ಎಂದು ಹೇಳಿದ್ದಾರೆ.

ಆಪ್ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಆಪ್ ಮುಖಂಡರಷ್ಟೇ ಅಲ್ಲದೇ ಸಾರ್ವಜನಿಕರು ತಮ್ಮ ಊರುಗಳಲ್ಲಿನ ಸರ್ಕಾರಿ ಶಾಲಾ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.

ಯೋಗಿ ಆದಿತ್ಯನಾಥ್ ಅವರ ಆಡಳಿತದಲ್ಲಿ ಸರ್ಕಾರಿ ಶಾಲೆಗಳ ದುಸ್ಥಿತಿ ಹೀಗಿದೆ ಎಂದು ಹಲವು ನೆಟ್ಟಿಗರು ಪೋಟೋ ಶೇರ್‌ ಮಾಡಿದ್ದಾರೆ.

ಸದ್ಯ ಉತ್ತರ ಪ್ರದೇಶ ಚುನಾವಣೆ ಮೇಲೆ ಕಣ್ಣಿಟ್ಟಿರುವ ಆಪ್ ಸರ್ಕಾರ ದೆಹಲಿ ಶಾಲೆಗಳ ಜೊತೆಗೆ ಉತ್ತರ ಪ್ರದೇಶದ ಸರ್ಕಾರಿ ಶಾಲೆಗಳನ್ನು ಹೋಲಿಕೆ ಮಾಡುತ್ತಿದೆ. ಈ ಮೂಲಕ ಅಭಿವೃದ್ಧಿಗಾಗಿ ಆಮ್ ಆದ್ಮಿ ಪಕ್ಷವನ್ನು ಆಯ್ಕೆ ಮಾಡಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತಿದೆ.


ಇದನ್ನೂ ಓದಿ: ಗೋವಾ ಜಿಲ್ಲಾ ಪಂಚಾಯಿತಿಯಲ್ಲಿ ಖಾತೆ ತೆರೆದ ಆಪ್: ಇದು ಕೇವಲ ಆರಂಭವಷ್ಟೇ ಎಂದ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...