Homeಚಳವಳಿರೈತ ಹೋರಾಟ ಬೆಂಬಲಿಸಿ ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ 'ದೇಶಪ್ರೇಮಿ ಯುವಾಂದೋಲನ'

ರೈತ ಹೋರಾಟ ಬೆಂಬಲಿಸಿ ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ‘ದೇಶಪ್ರೇಮಿ ಯುವಾಂದೋಲನ’

ಮೌರ್ಯ ಸರ್ಕಲ್ ಬಳಿಯ ಗಾಂಧಿ ಪ್ರತಿಮೆ ಬಳಿ ಒಟ್ಟುಗೂಡಿದ ನೂರಾರು ವಿದ್ಯಾರ್ಥಿ ಯುವಜನರು ಮತ್ತು ನೂರಾರು ಸಿಖ್ ಧರ್ಮೀಯರು ದೆಹಲಿಯಲ್ಲಿ ಹೋರಾಟದಲ್ಲಿ ಮೃತಪಟ್ಟ ರೈತರಿಗೆ ಶ್ರದ್ದಾಂಜಲಿ ಸಲ್ಲಿಸಿದರು.

- Advertisement -
- Advertisement -

ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಇಂದು ಬೆಂಗಳೂರಿನಲ್ಲಿ ವಿದ್ಯಾರ್ಥಿ ಯುವಜನರು ‘ದೇಶಪ್ರೇಮಿ ಯುವಾಂದೋಲನ’ ಹೆಸರಿನಲ್ಲಿ ಪ್ರತಿಭಟನಾ ಧರಣಿ ನಡೆಸಿದರು.

ನಗರದ ಮೌರ್ಯ ಸರ್ಕಲ್ ಬಳಿಯ ಗಾಂಧಿ ಪ್ರತಿಮೆ ಬಳಿ ಒಟ್ಟುಗೂಡಿದ ನೂರಾರು ವಿದ್ಯಾರ್ಥಿ ಯುವಜನರು ಮತ್ತು ನೂರಾರು ಸಿಖ್ ಧರ್ಮೀಯರು ದೆಹಲಿಯಲ್ಲಿ ಹೋರಾಟದಲ್ಲಿ ಮೃತಪಟ್ಟ ರೈತರಿಗೆ ಶ್ರದ್ದಾಂಜಲಿ ಸಲ್ಲಿಸಿದರು.

ಎಸ್‌ಎಫ್‌ಐ ರಾಜ್ಯಕಾರ್ಯದರ್ಶಿ ವಾಸುದೇವರೆಡ್ಡಿ ಮಾತನಾಡಿ “ಇಂದು ಆರ್ಥಿಕ ಕುಸಿತದಿಂದಾಗಿ ಉತ್ಪಾದನಾ ಚಟುವಟಿಕೆಗಳು ಕುಸಿತಗೊಂಡಿರುವ ಸಂದರ್ಭದಲ್ಲಿ ರೈತರಿಗೆ ವಿರುದ್ಧವಾದ ಮತ್ತು ಬಂಡವಾಳಶಾಹಿಗಳ ಪರವಾದ ಕೃಷಿ ಕಾಯ್ದೆಗಳನ್ನು ನರೇಂದ್ರ ಮೋದಿ ತಂದಿದ್ದಾರೆ. ಹಾಗಾಗಿ ರೈತರ ಪರವಾಗಿ ಮತ್ತು ದೇಶದ ಆಹಾರ ಸಾರ್ವಭೌಮತೆ ಉಳಿಸಿಕೊಳ್ಳಲು ನಾವು ಹೋರಾಡಲೇಬೇಕು” ಎಂದರು.

ದೆಹಲಿಯಲ್ಲಿ ಕೊರೆವ ಚಳಿಯಲ್ಲಿ ಕಳೆದ 24 ದಿನಗಳಿಂದ ರೈತರು ಹೋರಾಡುತ್ತಿದ್ದಾರೆ. ಆದರೆ ನರೇಂದ್ರ ಮೋದಿ ಅವರತ್ತ ತಿರುಗಿ ನೋಡಿಲ್ಲ. ಇದುವರೆಗೂ 33 ಜನ ಹೋರಾಟನಿರತ ರೈತರು ಸಾವನಪ್ಪಿದ್ದಾರೆ. ಆದರೂ ರೈತರು ತಮ್ಮ ಹೋರಾಟವನ್ನು ಬಿಟ್ಟುಕೊಟ್ಟಿಲ್ಲ. ಇಂತಹ ಸಂದರ್ಭದಲ್ಲಿ ಮೋದಿ ಮತ್ತು ಅಮಿತ್‌ ಶಾ ಚುನಾವಣೆ ಗೆಲ್ಲಲು ಯೋಚಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ರಾಜ್ಯ ಸಮಿತಿ ಸದಸ್ಯರಾದ ಪುಷ್ಪಲತ ಮಾತನಾಡಿ “ನಮ್ಮ ದೇಶದಲ್ಲಿ ಈವರೆಗೆ ಜೈಜವಾನ್ ಜೈ ಕಿಸಾನ್ ಎಂದು ಘೋಷಣೆ ಕೂಗುತ್ತಿದ್ದೆವು. ಆದರೆ ಈಗ ಡೈ ಜವಾನ್ ಡೈ ಕಿಸಾನ್ ಎನ್ನುವ ರೀತಿ ಕೇಂದ್ರ ರೈತರ ಮೇಲೆ ದಾಳಿ ಮಾಡುತ್ತಿದೆ” ಎಂದರು.

ದೇಶದ ಬೆನ್ನುಲುಬಾದ ರೈತರು ದೇಶದ ಜನತೆಗೆ ಆಹಾರ ಒದಗಿಸುತ್ತಿದ್ದಾರೆ. ಆದರೆ ಆ ರೈತರ ವಿರುದ್ಧದ ಕೃಷಿ ಕಾಯ್ದೆಗಳನ್ನು ತರಲಾಗಿದೆ. ಪ್ರತಿಯೊಂದು ರಾಜಕೀಯ ಪಕ್ಷಗಳು ಸ್ವಾಮಿನಾಥನ್ ವರದಿ ತರುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಬರೆಯುತ್ತಾರೆ. ಆದರೆ ಅಧಿಕಾರಕ್ಕೆ ಬಂದಾಗ ಅದನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆಯ ಲೈವ್ ನೋಡಿ

ಎಐಎಸ್‌ಎಫ್‌ ರಾಜ್ಯಾಧ್ಯಕ್ಷೆ ಕೆ ಜ್ಯೋತಿ ಮಾತನಾಡಿ,  “ಕೇಂದ್ರ ಸರ್ಕಾರ ಕೃಷಿಕರು ಕೃಷಿಯಿಂದ ವಿಮುಖರಾಗಿ ಆ ಜಾಗದಲ್ಲಿ ಕಾರ್ಪೊರೇಟ್‌ಗಳು ಬಂದು ಕುಳಿತುಕೊಳ್ಳುವಂತೆ ಮಾಡಲು ಮುಂದಾಗಿದೆ. ಹಾಗಾಗಿ
ಇವತ್ತು ಅನ್ನ ನೀಡುವ ಕೈಗಳು ದಿಕ್ಕಾರ ಕೂಗುತ್ತಿದ್ದಾರೆ. ಅವರೊಡನೆ ನಿಲ್ಲಬೇಕಾದುದು ವಿದ್ಯಾರ್ಥಿ ಯುವಜನರ ಕರ್ತವ್ಯ ಎಂದರು.

ಇದೇ ರೀತಿ ದೇಶದಲ್ಲಿ ಜನ ವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಾ ಹೋದರೆ ಹಿಟ್ಲರ್‌ನನ್ನು ಜರ್ಮನಿಯಲ್ಲಿ ಯಾವ ರೀತಿ ಮಾಡಿದರೋ ಆ ರೀತಿ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿಯವರನ್ನು ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

AIDSO ರಾಜ್ಯ ಕಾರ್ಯದರ್ಶಿಗಳಾದ ಅಜಯ್ ಕಾಮತ್, AISA ಮುಖಂಡರಾದ ವಿಶಾಲ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ಪ್ರತಿಭಟನೆಯಲ್ಲಿ AIDSO, AISA, AISF, SFI, KVS, AIDYO, AIYF ಸಂಘಟನೆಯ ಕಾರ್ಯಕರ್ತರು ಭಾಗವಹಿಸಿದ್ದರು. ನೂರಾರು ಸಿಖ್ ಧರ್ಮೀಯರು ಸಹ ಪ್ರತಿಭಟನೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


ಇದನ್ನೂ ಓದಿ: ರೈತ ಹೋರಾಟದ ಹುತಾತ್ಮರಿಗೆ ಇಂದು ಶ್ರದ್ಧಾಂಜಲಿ: ಇಲ್ಲಿವೆ ಪ್ರಮುಖ ಅಂಶಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...