Homeಮುಖಪುಟಅಮಿತ್ ಶಾ ಭಾಷಣದ ಸುಳ್ಳು ಕಂಡುಹಿಡಿದು ತಿರುಗೇಟು ನೀಡಿದ ಡೆರೆಕ್ ಒಬ್ರಿಯೆನ್

ಅಮಿತ್ ಶಾ ಭಾಷಣದ ಸುಳ್ಳು ಕಂಡುಹಿಡಿದು ತಿರುಗೇಟು ನೀಡಿದ ಡೆರೆಕ್ ಒಬ್ರಿಯೆನ್

ಮಮತಾ ಬ್ಯಾನರ್ಜಿ ಬೇರೆ ಪಕ್ಷ ಸೇರಲು ಕಾಂಗ್ರೆಸ್ ಅನ್ನು ತೊರೆಯಲಿಲ್ಲ, 1998 ರಲ್ಲಿ ಅವರೇ ಹೊಸ ಪಕ್ಷವನ್ನು ಸ್ಥಾಪಿಸಿದರು ಎಂದು ಡೆರೆಕ್ ಒಬ್ರಿಯೆನ್ ತಿರುಗೇಟು ನೀಡಿದ್ದಾರೆ.

- Advertisement -
- Advertisement -

ಪ್ರಸ್ತುತ ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಮೇಲೆ ನಡೆಸಿರುವ ವಾಗ್ದಾಳಿಗೆ, ಟಿಎಂಸಿ ಸಂಸದ ಡೆರೆಕ್ ಒಬ್ರಿಯೆನ್ ತಿರುಗೇಟು ನೀಡಿದ್ದಾರೆ. ಅಮಿತ್‌ ಶಾ ಏಳು ಸುಳ್ಳುಗಳ ತುಣುಕುಗಳನ್ನು ಒಟ್ಟುಗೂಡಿಸಿ ಭಾಷಣ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

ಆಡಳಿತಾರೂಢ ತೃಣಮೂಲದ ಮೇಲೆ ಆಗಾಗ್ಗೆ ಸುಳ್ಳು ದಾಳಿ ನಡೆಸುತ್ತಿರುವ ಬಿಜೆಪಿ ನಾಯಕರ ಮಾತುಗಳನ್ನು ಫ್ಯಾಕ್ಟ್ ಚೆಕ್ ಮಾಡಿ ದಾಳಿ ನಡೆಸುತ್ತಿರುವ ಡೆರೆಕ್ ಒಬ್ರಿಯೆನ್, ಅಮಿತ್ ಶಾ ಭಾಷಣದಲ್ಲಿನ 7 ಸುಳ್ಳುಗಳನ್ನು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ, ಬಿಜೆಪಿ ನಾಯಕರನ್ನು ಪ್ರವಾಸಿ ಗುಂಪು ಎಂದು ವ್ಯಂಗ್ಯವಾಡಿದ್ದಾರೆ. ಕಳೆದ ಬಾರಿಯ ಬಂಗಾಳ ಪ್ರವಾಸದಲ್ಲಿಯೂ ಮಮತಾ ಬ್ಯಾನರ್ಜಿ, ಅಮಿತ್ ಶಾ ಅವರನ್ನು ಹೊರಗಿನವರು ಎಂದು ಬಣ್ಣಿಸಿದ್ದರು. ಇದನ್ನು ಒಬ್ರಿಯೆನ್ ಕೂಡಾ ಮುಂದುವರೆಸಿದ್ದಾರೆ. 

ಇದನ್ನೂ ಓದಿ: ಯುಪಿ ಪೊಲೀಸರ ಅಟ್ಟಹಾಸ: ಮಹಿಳಾ ಸಂಸದೆಯನ್ನು ದೂಡಿ, ಡೆರೆಕ್ ಒಬ್ರಿಯೆನ್‌ರನ್ನು ನೆಲಕ್ಕೆ ಬೀಳಿಸಿದ ಪುರುಷ ಪೊಲೀಸರು

7 ಸುಳ್ಳುಗಳಿಗೆ ಉತ್ತರ ನೀಡಿರುವ ಡೆರೆಕ್ ಒಬ್ರಿಯೆನ್,  “ಪ್ರವಾಸಿ ಗ್ಯಾಂಗ್” ನ ಸಹಾಯಕರೊಬ್ಬರು ಬಂಗಾಳದಲ್ಲಿ ಮಾಡಿದ ಭಾಷಣದ ಫ್ಯಾಕ್ಟ್‌ಚೆಕ್ ಎಂದು ಹೇಳಿದ್ದಾರೆ. ಜೊತೆಗೆ ಒಂದು ಭಾಷಣದಲ್ಲಿ 7 ಸುಳ್ಳುಗಳ ತುಣುಕುಗಳನ್ನು ಕೂಡಿಸಿದ್ದಾರೆ ಎಂದು ಹೇಳಿದ್ದಾರೆ.

ಮುಂದುವರೆದು, ಅಮಿತ್ ಶಾ ಅವರ ಮಾನದಂಡಗಳಿಗೆ ಈ ಸುಳ್ಳುಗಳು ಕಡಿಮೆಯಾಗಿವೆ ಎಂದು ವ್ಯಂಗ್ಯವಾಡಿದ್ದಾರೆ. ಏಳು ಸುಳ್ಳುಗಳ ತುಣುಕನ್ನು ಒಂದುಗೂಡಿಸಿ ಭಾಷಣ ಮಾಡಿದ್ದಾರೆ ಎಂದು ಆಧಾರ ಸಮೇತ ಟೀಕಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

ಮಮತಾ ಬ್ಯಾನರ್ಜಿ, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದನ್ನು ಟೀಕಿಸಿದ್ದ ಅಮಿತ್ ಶಾ, ಮತ್ತೊಂದು ಪಕ್ಷಕ್ಕಾಗಿ ಕಾಂಗ್ರೆಸ್ ಅನ್ನು ತೊರೆದಿದ್ದಾರೆ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಡೆರೆಕ್ ಒಬ್ರಿಯೆನ್, ಮಮತಾ ಬ್ಯಾನರ್ಜಿ ಬೇರೆ ಪಕ್ಷ ಸೇರಲು ಕಾಂಗ್ರೆಸ್ ಅನ್ನು ತೊರೆಯಲಿಲ್ಲ. ಆಕೆಯೇ ಹೊಸ ಪಕ್ಷವನ್ನು 1998 ರಲ್ಲಿ ಸ್ಥಾಪಿಸಿದರು ಎಂದು ತಿರುಗೇಟು ನೀಡಿದ್ದಾರೆ.

Image

ರ್‍ಯಾಲಿಯಲ್ಲಿ ಅಮಿತ್ ಶಾ ಮಾಡಿದ ಎಲ್ಲಾ ಆರೋಪಗಳನ್ನು ಸುಳ್ಳು ಎಂದಿರುವ ಸಂಸದ ಡೆರೆಕ್ ಒಬ್ರಿಯೆನ್, ಪ್ರತಿಯೊಂದಕ್ಕೂ ಉತ್ತರ ನೀಡಿದ್ದಾರೆ.

ಅಮಿತ್ ಶಾ, ಸಿಎಂ ಮಮತಾ ಬ್ಯಾನರ್ಜಿ ಮೇಲೆ  ಅಧಿಕಾರ ದುರುಪಯೋಗ, ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದಂತಹ ಆರೋಪಗಳನ್ನು ಮಾಡಿದ್ದಾರೆ. ಈ ಕಾರಣದಿಂದ ಅನೇಕ ಟಿಎಂಸಿ ನಾಯಕರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಮಿತ್ ಶಾ ನೇತೃತ್ವದಲ್ಲಿ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಐವರು ಶಾಸಕರು ಸೇರಿದಂತೆ ಒಂಬತ್ತು ಶಾಸಕರು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಟಿಎಂಸಿ ಪ್ರಭಾವಿ ಮುಖಂಡ ಮತ್ತು ಮಾಜಿ ಸಚಿವ ಸುವೇಂದು ಅಧಿಕಾರಿ ಸೇರಿದಂತೆ, 2018 ರಲ್ಲಿ ಸಿಪಿಎಂ ತೊರೆದು ಟಿಎಂಸಿ ಸೇರಿದ್ದ ಶಾಸಕಿ ದೀಪಾಲಿ ಬಿಸ್ವಾಸ್ ಮತ್ತು ‌ಸಿಪಿಎಂ, ಸಿಪಿಐ ಹಾಗೂ ಕಾಂಗ್ರೆಸ್‌ನ ತಲಾ ಒಬ್ಬ ಶಾಸಕರು ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಮೇದಿನಿಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಸೇರಿದರು. ಬರ್ಧಮಾನ್‌ ಪೂರ್ವ ಕ್ಷೇತ್ರದ ಟಿಎಂಸಿ ಸಂಸದ ಸುನಿಲ್‌ ಮಂಡಲ್‌ ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.


ಇದನ್ನೂ ಓದಿ: ಬಂಗಾಳವನ್ನು’ಗಲಭೆ ಪೀಡಿತ ಗುಜರಾತ್’ ಮಾಡಲು ಎಂದಿಗೂ ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...