Homeಚಳವಳಿರೈತ ಹೋರಾಟಗಾರರು ಪ್ರಾರಂಭಿಸಿದ್ದ ಫೇಸ್‌‌ಬುಕ್‌, ಇನ್ಸ್ಟಾಗ್ರಾಮ್ ಖಾತೆಗಳ ಮೇಲಿನ ನಿಷೇಧ ವಾಪಾಸ್!

ರೈತ ಹೋರಾಟಗಾರರು ಪ್ರಾರಂಭಿಸಿದ್ದ ಫೇಸ್‌‌ಬುಕ್‌, ಇನ್ಸ್ಟಾಗ್ರಾಮ್ ಖಾತೆಗಳ ಮೇಲಿನ ನಿಷೇಧ ವಾಪಾಸ್!

ವಿಶ್ವದಾದ್ಯಂತ ಭಾರಿ ಜನಬೆಂಬಲ ಗಳಿಸಿದ್ದ ಹೋರಾಟವನ್ನು ಕೆಲ ಮಾಧ್ಯಮಗಳು ತೋರಿಸುತ್ತಿಲ್ಲ ಎಂದು ಅವನ್ನು ಗೋದಿ ಮೀಡಿಯಾ ಆರೋಪಿಸಿರುವ ರೈತರು ಅವುಗಳಿಗೆ ಸೆಡ್ಡು ಹೊಡೆದು ಸ್ವಂತ ಚಾನೆಲ್ ಆರಂಭಿಸಿದ್ದರು.

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ಕಳೆದ 25 ದಿನದಿಂದ ಕೇಂದ್ರದ ನೂತನ ಕೃಷಿ ಕಾನೂನನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಪ್ರಾರಂಭಿಸಿದ್ದ ’ಕಿಸಾನ್ ಏಕತಾ ಮೋರ್ಚಾ’ ಫೇಸ್‌ಬುಕ್ ಮತ್ತು ನ್ಸ್ಟಾಗ್ರಾಮ್ ಖಾತೆಗಳನ್ನು ಬ್ಲಾಕ್ ಮಾಡಲಾಗಿದೆ ಎಂದು ವರದಿಯಾಗಿದೆ. ಆದರೆ ಫೇಸ್‌‌ಬುಕ್‌ನ ಈ ಕೃತ್ಯಕ್ಕೆ ದೇಶದಾದ್ಯಂತ ಆಕ್ರೋಶವೆದ್ದಿದ್ದು, ಸ್ವಲ್ಪ ಸಮಯದ ನಂತರ ಖಾತೆಗಳ ಮೇಲಿನ ನಿಷೇಧ ವಾಪಾಸ್ ಪಡೆದುಕೊಂಡಿದೆ.

ಹಿಂದಿನಿಂದಲೂ ಈ ಆರೋಪಗಳನ್ನು ಪ್ರತಿಭಟನಾಕಾರರು ಮಾಡುತ್ತಿದ್ದು, ಭಾನುವಾರ ತಮ್ಮ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಖಾತೆಗಳ ಮೂಲಕ ಲೈವ್ ನೀಡಿದ ನಂತರ ನಿರ್ಬಂಧಿಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದರು.

ಇದನ್ನೂ ಓದಿ: ಮೋದಿ ಮನ್ ಕಿ ಬಾತ್ ಸಮಯದಲ್ಲಿ ತಟ್ಟೆ ಬಾರಿಸಿ: ಹೋರಾಟನಿರತ ರೈತರ ಕರೆ

ಚಳವಳಿಗೆ ಬಳಸಲಾಗುತ್ತಿರುವ 7 ಲಕ್ಷಕ್ಕೂ ಹೆಚ್ಚು ಫಾಲೋವರ್‌‌ಗಳಿರುವ ಅತಿದೊಡ್ಡ ಪೇಜ್‌ಗಳಲ್ಲಿ ಒಂದಾದ “ಕಿಸಾನ್ ಏಕ್ತಾ ಮೋರ್ಚಾ”ದ ವ್ಯವಸ್ಥಾಪಕರು, ”ಸಮುದಾಯದ ಮಾನದಂಡಗಳಿಗೆ ವಿರುದ್ದವಾಗಿದೆ”(against its community standards on spam) ಎಂದು ಫೇಸ್‌ಬುಕ್‌ನಿಂದ ತಮ್ಮ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಫೇಸ್‌ಬುಕ್‌ನ ಒಡೆತನದಲ್ಲಿರುವ ಇನ್‌ಸ್ಟಾಗ್ರಾಮ್‌ನಲ್ಲಿ ಕೂಡಾ ತಮ್ಮ ಪೇಜ್‌ನಲ್ಲಿ ಇದೇ ರೀತಿಯಾಗಿ ನಿರ್ಬಧಿಸಲಾಗಿದೆ ಮತ್ತು ಹೊಸ ಪೋಸ್ಟ್‌ಗಳನ್ನು ಹಂಚಿಕೊಳ್ಳಲು ಅವಕಾಶ ನೀಡುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ವಿಶ್ವದಾದ್ಯಂತ ಭಾರಿ ಜನಬೆಂಬಲ ಗಳಿಸಿದ್ದ ಹೋರಾಟವನ್ನು ಕೆಲ ಮಾಧ್ಯಮಗಳು ತೋರಿಸುತ್ತಿಲ್ಲ ಎಂದು ಅವನ್ನು ಗೋದಿ ಮೀಡಿಯಾ ಆರೋಪಿಸಿರುವ ರೈತರು ಅವುಗಳಿಗೆ ಸೆಡ್ಡು ಹೊಡೆದು ಸ್ವಂತ ಚಾನೆಲ್ ಆರಂಭಿಸಿದ್ದಾರೆ.  ಫೇಸ್‌ಬುಕ್ಟ್ವಿಟ್ಟರ್ ಅಕೌಂಟ್‌ಗಳನ್ನು ಸಹ ತೆರೆಯಲಾಗಿದ್ದು ತಲಾ 70 ಸಾವಿರ ಫಾಲೋವರ್ಸ್ ಪಡೆದಿವೆ. ಹೋರಾಟದ ಎಲ್ಲಾ ವಿವರಗಳನ್ನು ಈ ಚಾನೆಲ್‌ಗಳ ಮೂಲಕ ನೀಡಲಾಗುತ್ತಿದೆ.

ಇದನ್ನೂ ಓದಿ: ಇಂದು ನೀವು ಮಿಸ್ ಮಾಡಿರುವ ’ನಾನುಗೌರಿ.ಕಾಮ್‌’ನ ಟಾಪ್ 5 ಸುದ್ದಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...