Homeಕರ್ನಾಟಕ’ಮುಸ್ಲಿಮರು ಗೋಮಾಂಸ ತಿನ್ನಬೇಡಿ’ ಹೇಳಿಕೆಗೆ ಮಲಯಾಳಂನಲ್ಲಿ ಸ್ಪಷ್ಟನೆ ನೀಡಿದ ಸಿ.ಎಂ. ಇಬ್ರಾಹಿಂ!

’ಮುಸ್ಲಿಮರು ಗೋಮಾಂಸ ತಿನ್ನಬೇಡಿ’ ಹೇಳಿಕೆಗೆ ಮಲಯಾಳಂನಲ್ಲಿ ಸ್ಪಷ್ಟನೆ ನೀಡಿದ ಸಿ.ಎಂ. ಇಬ್ರಾಹಿಂ!

’ಬಿಜೆಪಿಗೆ ಸಂವಿಧಾನಾತ್ಮಕವಾಗಿ ಈ ಮಸೂದೆಯನ್ನು ತರಲು ಸಾಧ್ಯವಿಲ್ಲ. ಸುಗ್ರೀವಾಜ್ಞೆ ತಂದರೆ ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ ಎಂದಿದ್ದಾರೆ.

- Advertisement -
- Advertisement -

’ಮುಸ್ಲಿಮರು ಯಾರೂ ಗೋಮಾಂಸ ತಿನ್ನಬೇಡಿ’ ಎಂದುಬ ಹೇಳಿ ಇತ್ತಿಚೆಗಷ್ಟೇ ವಿವಾದಕ್ಕೀಡಾಗಿದ್ದ ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ತನ್ನ ಹೇಳಿಕೆಗೆ ಮಲಯಾಳಂ ಭಾಷೆಯಲ್ಲಿ ಸ್ಪಷ್ಟೀಕರಣ ನೀಡಿದ್ದಾರೆ. ಕಳೆದ ಶನಿವಾರ ಹುಬ್ಬಳ್ಳಿಯಲ್ಲಿ ಮಾತನಾಡಿದ್ದ ಅವರು, “ಕೈ ಮುಗಿದು ಬೇಡಿಕೊಳ್ಳುತ್ತೇನೆ, ಮುಸ್ಲಿಮರು ಯಾರೂ ಗೋಮಾಂಸ ತಿನ್ನಬೇಡಿ. ಗೋಹತ್ಯೆ ನಿಷೇಧಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ರಾಜ್ಯ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲು ಹೊರಟಿರುವುದು ಸ್ವಾಗತಾರ್ಹ” ಎಂದು ಹೇಳಿದ್ದರು.

ಅವರ ಹೇಳಿಕೆಗೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿತ್ತು. ತನ್ನ ಹೇಳಿಕೆಯ ಬಗ್ಗೆ ಸ್ವತಃ ತಾವೇ ವಿಡಿಯೋ ಮಾಡಿ ಮಲಯಾಳಂನಲ್ಲಿ ಸ್ಪಷ್ಟನೆ ನೀಡಿರುವ ಅವರು, “ಮಾಧ್ಯಮಗಳು ತನ್ನ ಹೇಳಿಕೆಯನ್ನು ತಿರುಚಿವೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಮುಸ್ಲಿಮರು ಯಾರೂ ಗೋಮಾಂಸ ತಿನ್ನಬೇಡಿ: ಸಿ.ಎಂ. ಇಬ್ರಾಹಿಂ

ವಿಡಿಯೋದಲ್ಲಿ, “ತಾನು ಪ್ರಸ್ತುತ ಕರ್ನಾಕಟದಾದ್ಯಂತ ಪ್ರವಾಸದಲ್ಲಿದ್ದು, ಕೆಲ ಸ್ನೇಹಿತರು ’ನಾನು ಮುಸ್ಲಿಮರೊಂದಿಗೆ ಗೋಮಾಂಸ ತಿನ್ನಬೇಡಿ’ ಎಂದು ಬೇಡಿಕೊಂಡಿದ್ದಾಗಿ ಮಾಧ್ಯಮಗಳಲ್ಲಿ ಬರುತ್ತಿರುದನ್ನು ಕರೆ ಮಾಡಿ ತಿಳಿಸಿದ್ದಾರೆ. ಇದನ್ನು ಕೇಳಿ ನನಗೆ ತುಂಬಾ ಆಶ್ಚರ್ಯವಾಗಿದೆ. ಬಿಜೆಪಿ ಜಾರಿಗೆ ತರಬೇಕೆಂದು ಉದ್ದೇಶಿಸಿದ್ದ ಮಸೂದೆಯನ್ನು ಪರಿಷತ್‌ನಲ್ಲಿ ವಿರೋಧಿಸಲು ಕಾಂಗ್ರೆಸ್‌ನೊಂದಿಗೆ ಸಂಖ್ಯಾಬಲ ಇರಲಿಲ್ಲವಾದ್ದರಿಂದ ದೇವೇಗೌಡರೊಂದಿಗೆ ಚರ್ಚಿಸಿ ಜನತಾದಳದೊಂದಿಗೆ ಸೇರಿ ವಿರೋಧಿಸಿದ್ದರಿಂದ ಪರಿಷತ್‌ನಲ್ಲಿ ಬಿಜೆಪಿ ಅದನ್ನು ತಂದಿಲ್ಲ” ಎಂದು ಹೇಳಿದ್ದಾರೆ.

ಇದೀಗ ಸುಗ್ರಿವಾಜ್ಞೆ ತರುತ್ತೇವೆಂದು ಬಿಜೆಪಿ ಹೊರಟಿದೆ. ಅದರ ವಿರುದ್ದ ನಾವು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ಗೋಹತ್ಯೆ ಮಾಡಬೇಡಿ ಎಂದು ಹೇಳುತ್ತಿರುವ ಸರ್ಕಾರದೊಂದಿಗೆ ಹಿಂದಿನಿಂದಲೂ ನನ್ನ ಪ್ರಶ್ನೆ ಏನೆಂದರೆ, ’50 ಸಾವಿರ ನೀಡಿ ನಾನೊಂದು ದನವನ್ನು ಖರೀದಿಸಿ, ಅದರ ಹಾಲಿನಿಂದ ಜೀವಿಸುತ್ತಾ ಇರುತ್ತೇನೆ. ಐದಾರು ವರ್ಷಗಳ ನಂತರ ಅದು ಹಾಲು ನೀಡುವುದನ್ನು ನಿಲ್ಲಿಸಿದರೆ ಅದನ್ನು ಮಾರಾಟ ಮಾಡಬೇಕಾಗುತ್ತದೆ. ಈ ಸಮಯದಲ್ಲಿ ನಾನು ಯಾರಿಗೆ ನೀಡಲಿ ಅದನ್ನು? ಖರೀದಿಸುವವನು ಅದನ್ನು ಸಾಕಲು ಬೇಕಾಗಿ ಖರೀದಿಸುವುದಿಲ್ಲ, ಮಾಂಸಕ್ಕಾಗಿ ಖರೀದಿತ್ತಾನೆ. ಈ ಬಗ್ಗೆ ಸರ್ಕಾರ ಏನು ಹೇಳುತ್ತದೆ?’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ’ಗೋಹತ್ಯೆ ನಿಷೇದ ಮಸೂದೆ-2020’ ರ ವಿರೋಧಿ ಜನಾಂದೋಲನದ ಪೂರ್ವಭಾವಿ ಸಭೆ ನಾಳೆ

ಅಂಕಿ ಅಂಶದಂತೆ ರಾಜ್ಯದಲ್ಲಿ ಒಂದು ವರ್ಷಕ್ಕೆ 20 ಲಕ್ಷ ಜಾನುವಾರು ಹೆಚ್ಚಾಗುತ್ತವೆ. ಇದರಲ್ಲಿ ಹೋರಿ ಕರುಗಳು ಇದ್ದರೆ ಏನು ಮಾಡಬೇಕು? ಅವುಗಳನ್ನು ಯಾರು ಸಾಕುತ್ತಾರೆ? ಜೆರ್ಸಿ ತಳಿಯನ್ನು ಕೃಷಿಗೆ ಉಪಯೋಗಿಸುವುದಿಲ್ಲ. ಎಮ್ಮೆ, ಆಡನ್ನು ಮಾಂಸಕ್ಕೆ ಬಳಸಬಹುದು ಆದರೆ ಹಾಲು ನೀಡದ ಹಸುವನ್ನು ಮಾಂಸಕ್ಕೆ ಬಳಸಬಾರದು ಎಂದರೆ ಕೃಷಿಕನಾದ ನನ್ನ ಹಸುವನ್ನು ನೀವು ಖರೀದಿಸಿ, ಆ ದುಡ್ಡಿನಿಂದ ನಾನು ಬೇರೆ ಹಸು ಖರೀದಿಸಿ ಹಾಲು ಮಾರಿ ಜೀವಿಸುತ್ತೇನೆ ಎಂದು ವಿಡಿಯೋದಲ್ಲಿ ಹೇಳಿರುವ ಸಿ.ಎಂ. ಇಬ್ರಾಹಿಂ, “ಇದನ್ನೇ ನಾನು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದು, ಆದರೆ ಮಾಧ್ಯಮಗಳು ಇದನ್ನು ತಿರುಚಿವೆ” ಎಂದು ಸ್ಪಷ್ಟನೆ ನೀಡಿದ್ದಾರೆ.

“ನಾನು ಏನೆಂದು ಕರ್ನಾಟಕದ ಜನತೆಗೆ ಗೊತ್ತಿದೆ. ಮಸೂದೆಯನ್ನು ವಿರೋಧಿಸಿದ ಎಲ್ಲರಿಗೂ ನಾನು ಕೃತಜ್ಞತೆ ಸಲ್ಲಿಸಿದ್ದೇನೆ. ಬಿಜೆಪಿಗೆ ಸಂವಿಧಾನಾತ್ಮಕವಾಗಿ ಈ ಮಸೂದೆಯನ್ನು ತರಲು ಸಾಧ್ಯವಿಲ್ಲ. ಸುಗ್ರೀವಾಜ್ಞೆ ತಂದರೆ ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ಅದಾಗ್ಯೂ ಈ ನಿಯಮ ಬಂದರೆ ಅದನ್ನು ವಿರೋಧಿಸಿ ಕೋಟ್ಯಾಂತರ ರೈತರು ಬೀದಿಗಿಳಿಯಲಿದ್ದಾರೆ” ಎಂದು ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ: ವಯಸ್ಸಾದ ದನಗಳನ್ನು ಸರ್ಕಾರವೇ ಖರೀದಿಸಲಿ – ಸಿದ್ದರಾಮಯ್ಯ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...