Homeಮುಖಪುಟಕೊರೊನಾ ಸಂಕಷ್ಟದ ಆಪತ್ಬಾಂಧವ ನಟ ಸೋನು ಸೂದ್‌ಗಾಗಿ ದೇವಾಲಯ ಕಟ್ಟಿದ ಜನ!

ಕೊರೊನಾ ಸಂಕಷ್ಟದ ಆಪತ್ಬಾಂಧವ ನಟ ಸೋನು ಸೂದ್‌ಗಾಗಿ ದೇವಾಲಯ ಕಟ್ಟಿದ ಜನ!

“ಅವರು ತಮ್ಮ ಒಳ್ಳೆಯ ಕೆಲಸಗಳಿಂದ ದೇವರ ಸ್ಥಾನವನ್ನು ಪಡೆದುಕೊಂಡಿದ್ದರಿಂದ, ನಾವು ಸೋನು ಸೂದ್‌ಗಾಗಿ ದೇವಾಲಯವನ್ನು ನಿರ್ಮಿಸಿದ್ದೇವೆ. ಅವರು ನಮಗೆ ದೇವರು” ಎಂದು ಸ್ಥಳೀಯರು ಹೇಳಿದ್ದಾರೆ..

- Advertisement -
- Advertisement -

ಕೊರೊನಾ ಸಾಂಕ್ರಾಮಿಕದಲ್ಲಿ ಕೇಂದ್ರ ಸರ್ಕಾರ ಏಕಾಏಕಿ ಹೇರಿದ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದ ಜನರ ನೆರವಿಗೆ ಧಾವಿಸಿದ ನಟ ಸೋನು ಸೂದ್ ಕಾರ್ಯಗಳಿಗೆ ಮೆಚ್ಚಿ ತೆಲಂಗಾಣದಲ್ಲಿ ದೇವಾಲಯ ನಿರ್ಮಿಸಲಾಗಿದೆ.

ಬಾಲಿವುಡ್ ನಟ ಸೋನು ಸೂದ್ ಅವರ ಮಾನವೀಯ ಕಾರ್ಯವನ್ನು ಗುರುತಿಸಿದ ತೆಲಂಗಾಣದ ಸಿದ್ದಿಪೇಟ್​​ನಲ್ಲಿರುವ ದುಬ್ಬಾ ತಾಂಡಾದ ಜನರು ತೆಲಂಗಾಣದ ಸಿದ್ದಿಪೇಟೆ ಜಿಲ್ಲಾ ಅಧಿಕಾರಿಗಳ ಸಹಾಯದಿಂದ ನಟನಿಗೆ ಗೌರವಾರ್ಥವಾಗಿ ದೇವಾಲಯ ಕಟ್ಟಿದ್ದಾರೆ.

ದೇವಾಲಯದಲ್ಲಿ ಸೋನು ಸೂದ್ ವಿಗ್ರಹ ಮಾಡಿದ ಶಿಲ್ಪಿ ಮತ್ತು ಸ್ಥಳೀಯ ಜನರು, ವಿಗ್ರಹಕ್ಕೆ ಆರತಿ ಮಾಡಿ ಉದ್ಘಾಟಿಸಿದ್ದಾರೆ. ತಾಂಡಾದ ಮಹಿಳೆಯರು ತಮ್ಮ ಸಾಂಪ್ರದಾಯಿಕ ಉಡುಪನ್ನು ಧರಿಸಿ ಜಾನಪದ ಗೀತೆಗಳನ್ನು ಹಾಡಿದ್ದಾರೆ.

ಇದನ್ನು ಓದಿ: ರೈತರು ನಡುಕ ಹುಟ್ಟಿಸುವ ಚಳಿಯಲ್ಲಿ ಕುಳಿತಿದ್ದಾರೆ; ಇನ್ನೆಷ್ಟು ದಿನ ಇದನ್ನು ನೋಡುತ್ತಿರಬೇಕು: ಸೋನು ಸೂದ್

ಕೊರೊನಾ ಸಾಂಕ್ರಾಮಿಕದ ಮಧ್ಯೆ ಸೂನು ಸೂದ್ ಸಾರ್ವಜನಿಕರಿಗಾಗಿ ಸಾಕಷ್ಟು ಉತ್ತಮ ಕೆಲಸಗಳನ್ನು ಮಾಡಿದ್ದಾರೆ ಎಂದು ಜಿಲ್ಲಾ ಪರಿಷತ್ ಸದಸ್ಯ ಗಿರಿ ಕೊಂಡಾಲ್ ರೆಡ್ಡಿ ಹೇಳಿದ್ದಾರೆ.

“ಅವರು ತಮ್ಮ ಒಳ್ಳೆಯ ಕೆಲಸಗಳಿಂದ ದೇವರ ಸ್ಥಾನವನ್ನು ಪಡೆದುಕೊಂಡಿದ್ದರಿಂದ, ನಾವು ಸೋನು ಸೂದ್‌ಗಾಗಿ ದೇವಾಲಯ ನಿರ್ಮಿಸಿದ್ದೇವೆ. ಅವರು ನಮಗೆ ದೇವರು” ಎಂದು ಸ್ಥಳೀಯರು ಹೇಳುತ್ತಾರೆ.

ಇದನ್ನೂ ಓದಿ: ನಿರುದ್ಯೋಗಿಗಳ ಬೆನ್ನಿಗೆ ನಿಂತ ನಟ ಸೋನು ಸೂದ್: ಇ-ಆಟೋ ಹಂಚಲು ನಿರ್ಧಾರ

ದೇವಾಲಯ ಕಟ್ಟಲು ಯೋಜನೆ ರೂಪಿಸಿದ್ದ ಗುಂಪಿನ ಭಾಗವಾಗಿದ್ದ ರಮೇಶ್ ಕುಮಾರ್ ಮಾತನಾಡಿ, ಸೋನು ಸೂದ್ ದೇಶದ 28 ರಾಜ್ಯಗಳ ಜನರಿಗೆ ಸಹಾಯ ಮಾಡಿದ್ದಾರೆ ಮತ್ತು ಅವರ ಮಾನವೀಯ ಕಾರ್ಯಗಳಿಗಾಗಿ ಪ್ರಶಸ್ತಿಯನ್ನು ಸಹ ಪಡೆದಿದ್ದಾರೆ. ಆದ್ದರಿಂದ, ನಮ್ಮ ಹಳ್ಳಿಯ ಪರವಾಗಿ, ನಾವು ಅವರಿಗೆ ದೇವಾಲಯವನ್ನು ನಿರ್ಮಿಸಲು ನಿರ್ಧರಿಸಿದ್ದೆವು. ದೇವರಂತೆ, ಸೋನು ಸೂದ್ ಅವರಿಗೂ ಪ್ರತಿನಿತ್ಯ ಪ್ರಾರ್ಥನೆ ಸಲ್ಲಿಸಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಟ ಸೋನು ಸೂದ್ ಮಾನವೀಯ ಕಾರ್ಯಕ್ಕೆ ವಿಶ್ವಸಂಸ್ಥೆಯ ಗೌರವ

ಲಾಕ್‌ಡೌನ್ ಸಂಕಷ್ಟದಲ್ಲಿ ತೊಂದರೆಗೊಳಗಾಗಿದ್ದ ವಲಸೆ ಕಾರ್ಮಿಕರಿಗೆ ನಟ ಸೋನುಸೂದ್ ಆಹಾರ ವಿತರಿಸಿದ್ದರು. ಬಸ್‌ಗಳು, ರೈಲುಗಳು ಮತ್ತು ಚಾರ್ಟರ್ಡ್ ವಿಮಾನಗಳ ಮೂಲಕ ಕಾರ್ಮಿಕರನ್ನು ತಮ್ಮ ತಮ್ಮ ಗ್ರಾಮಗಳಿಗೆ ತಲುಪಿಸಿದ್ದರು. ಮತ್ತೆ ನಿರುದ್ಯೋಗಿಗಳಿಗೆ ಇ-ಆಟೋಗಳನ್ನು ಉಡುಗೊರೆಯಾಗಿ ನೀಡುವುದಾಗಿ ಇತ್ತಿಚೆಗಷ್ಟೆ ಘೋಷಿಸಿದ್ದಾರೆ.

ಇಷ್ಟೇ ಅಲ್ಲದೆ, ಉತ್ತಮ ಜೀವನೋಪಾಯಕ್ಕಾಗಿ ಉದ್ಯೋಗಾವಕಾಶಗಳನ್ನು ಒದಗಿಸುವ ಮೂಲಕ ನಿಸ್ವಾರ್ಥವಾಗಿ ಸಹಾಯ ಮಾಡಿದ್ದಕ್ಕಾಗಿ ನಟ ಸೋನು ಸೂದ್ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (ಯುಎನ್​ಡಿಪಿ) ದಿಂದ ಎಸ್‌ಡಿಜಿ ವಿಶೇಷ ಮಾನವೀಯ ಕ್ರಿಯಾ ಪ್ರಶಸ್ತಿಯನ್ನು ಪಡೆದಿದ್ದಾರೆ.


ಇದನ್ನೂ ಓದಿ: ಜನರಿಗಾಗಿ ತಮ್ಮ ಆಸ್ತಿಯನ್ನು 10 ಕೋಟಿಗೆ ಅಡವಿಟ್ಟ ನಟ ಸೋನು ಸೂದ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...