HomeUncategorizedಕೋಲ್ಕತ್ತಾ ಕಮಲಕ್ಕೆ ಮುಖಭಂಗ; ಟಿಎಂಸಿ ಸೇರಿದ ಬಿಜೆಪಿ ಸಂಸದನ ಪತ್ನಿ!

ಕೋಲ್ಕತ್ತಾ ಕಮಲಕ್ಕೆ ಮುಖಭಂಗ; ಟಿಎಂಸಿ ಸೇರಿದ ಬಿಜೆಪಿ ಸಂಸದನ ಪತ್ನಿ!

ಈ ಭಾರಿ ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಎರಡಂಕಿ ಸ್ಥಾನವನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಪ್ರಖ್ಯಾತ ರಾಜಕೀಯ ನಿಪುಣ ಪ್ರಶಾಂತ್​ ಕಿಶೋರ್​ ಸವಾಲು ಹಾಕಿದ್ದಾರೆ.

- Advertisement -
- Advertisement -

ಬಿಹಾರದ ಬೆನ್ನಿಗೆ ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಲೇ ಇದೆ. ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಬಂಗಾಳದ ಪ್ರವಾಸ ಕೈಗೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್​ ಶಾ ಟಿಎಂಸಿ ಪಕ್ಷದ ಪ್ರಬಲ ನಾಯಕ ಸುವೆಂಧು ಅಧಿಕಾರಿ ಸೇರಿದಂತೆ 9 ಜನ ಶಾಸಕರನ್ನು ಬಿಜೆಪಿಗೆ ಬರಮಾಡಿಕೊಳ್ಳುವ ಮೂಲಕ ಬಂಗಾಳದ ಮಣ್ಣಲ್ಲಿ ಪಕ್ಷಾಂತರ ಪರ್ವಕ್ಕೆ ಚಾಲನೆ ನೀಡಿ ಟಿಎಂಸಿಗೆ ಶಾಕ್​ ನೀಡುವ ಕೆಲಸ ಮಾಡಿದ್ದರು. ಆದರೆ, ಇದೀಗ ಬಿಜೆಪಿಗೆ ಆಘಾತ ನೀಡಿರುವ ಬಿಜೆಪಿ ಸಂಸದ ಸೌಮಿತ್ರಾ ಖಾನ್ ಅವರ ಪತ್ನಿ ಸುಜಾತಾ ಮೊಂಡಾಲ್ ಖಾನ್ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಕಮಲ ಪಾಳಯಕ್ಕೆ ತೀವ್ರ ಮುಖಭಂಗಕ್ಕೆ ಈಡುಮಾಡಿದ್ದಾರೆ.

ಭಾನುವಾರ ಬಿಜೆಪಿಗೆ ಪಕ್ಷಾಂತರ ಮಾಡಿದ್ದ 9 ಜನ ಶಾಸಕರ ಪೈಕಿ ಐವರು ಟಿಎಂಸಿ ಪಕ್ಷದವರು. ಇನ್ನೂ ಟಿಎಂಸಿ ಪಕ್ಷದ ಪ್ರಬಲ ನಾಯಕ ಮಾಜಿ ಸಚಿವ ಸುವೆಂಧು ಅಧಿಕಾರಿ ಸಹ ಈ ಪಕ್ಷಾಂತರಿಗಳ ಪಟ್ಟಿಗಳಲ್ಲಿ ಸೇರ್ಪಡೆಯಾಗಿದ್ದು, ಟಿಎಂಸಿ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿತ್ತು. ಆದರೆ, ಈ ಬೆಳವಣಿಗೆಯ ಬೆನ್ನಿಗೆ ಬಂಗಾಳದ ಬಿಜೆಪಿ ನಾಯಕ ಸಂಸದ ಸೌಮಿತ್ರಾ ಖಾನ್ ಪತ್ನಿ ಟಿಎಂಸಿಗೆ ಸೇರ್ಪಡೆಯಾಗಿರುವುದು ಬಂಗಾಳದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಾಗಿರುವ ಬಿಜೆಪಿ ಪಾಳಯಕ್ಕೆ ತೀವ್ರ ಮುಖಬಂಗ ಎಂದು ಬಣ್ಣಿಸಲಾಗುತ್ತಿದೆ.

ತೃಣಮೂಲ ಸಂಸದ ಸೌಗತಾ ರಾಯ್ ಮತ್ತು ವಕ್ತಾರ ಕುನಾಲ್ ಘೋಷ್ ಅವರ ಸಮ್ಮುಖದಲ್ಲಿ ಸುಜಾತಾ ಮಂಡಲ್ ಖಾನ್ ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಟಿಎಂಸಿಗೆ ಸೇರಿದ ನಂತರ ಮಾಧ್ಯಮಗಳ ಎದುರು ಮಾತನಾಡಿರುವ ಸುಜಾತಾ ಮೊಂಡಾಲ್, “ನಾನು ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಬೆಳೆಸಲು ಸಾಕಷ್ಟು ಶ್ರಮವಹಿಸಿ ಕೆಲಸ ಮಾಡಿದ್ದೇನೆ. ಆದರೆ, ಸದ್ಯಕ್ಕೆ ಮೂಲ ಬಿಜೆಪಿಗರಿಗೇ ಪಕ್ಷದಲ್ಲಿ ಬೆಲೆ ಗೌರವ ಇಲ್ಲದಂತಾಗಿದೆ. ಇದೇ ಕಾರಣಕ್ಕಾಗಿ ನಾನು ಪಕ್ಷವನ್ನು ತ್ಯಜಿಸುತ್ತಿದ್ದೇನೆ. ಅಲ್ಲದೆ, ಓರ್ವ ಮಹಿಳೆಯಾಗಿ ನನಗೆ ಆ ಪಕ್ಷದಲ್ಲಿರುವುದು ಕಷ್ಟವಾಗುತ್ತಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪ.ಬಂಗಾಳದಲ್ಲಿ BJP ಎರಡಂಕಿ ದಾಟುವುದಿಲ್ಲ: ಒಂದು ವೇಳೆ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ- ಪ್ರಶಾಂತ್ ಕಿಶೋರ್

ಅಲ್ಲದೆ, “ಬಿಜೆಪಿ ಪಕ್ಷ ತೃಣಮೂಲ ಕಾಂಗ್ರೆಸ್​ನಲ್ಲಿರುವ ಎಲ್ಲಾ ರಾಜಕಾರಣಿಗಳನ್ನು ಪಕ್ಷಾಂತರದ ಹೆಸರಿನಲ್ಲಿ ಭ್ರಷ್ಟಗೊಳಿಸುತ್ತಿದೆ. ದೇಶದಲ್ಲಿ ಬಿಜೆಪಿಗೆ 6 ಮುಖ್ಯಮಂತ್ರಿ ಮತ್ತು 13 ಉಪ ಮುಖ್ಯಮಂತ್ರಿ ಮುಖಗಳಿಗೆ. ಆದರೆ, ಬಂಗಾಳದಲ್ಲಿ ಬಿಜೆಪಿ ಪಕ್ಷಕ್ಕೆ ಮುಖ್ಯಮಂತ್ರಿ ಮುಖ ಇಲ್ಲ. ಇಲ್ಲಿ ಮಮತಾ ಬ್ಯಾನರ್ಜಿ ಅವರ ವರ್ಚಸ್ಸನ್ನು ಬಿಜೆಪಿ ಏನೇ ಮಾಡಿದರು ಕುಗ್ಗಿಸಲು ಸಾಧ್ಯವಿಲ್ಲ. ಹೀಗಾಗಿ ಓರ್ವ ಮಹಿಳೆಯಾಗಿ ಮಮತಾ ಬ್ಯಾನರ್ಜಿ ಜೊತೆಗೆ ಕೆಲಸ ಮಾಡುವುದು ನನಗೆ ಗೌರವಾನ್ವಿತವಾದ ವಿಚಾರ ಎಂದು ನಾನು ಭಾವಿಸುತ್ತೇನೆ” ಎಂದು ಸುಜಾತಾ ಮಂಡಲ್ ಖಾನ್ ತಿಳಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ 42 ಸ್ಥಾನಗಳ ಪೈಕಿ ಬಿಜೆಪಿ 18 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಹೀಗಾಗಿ ವಿಧಾನಸಭಾ ಚುನಾವಣೆಯಲ್ಲೂ ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿದೆ. ಆದರೆ, ಈ ಭಾರಿ ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಎರಡಂಕಿ ಸ್ಥಾನವನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಪ್ರಖ್ಯಾತ ರಾಜಕೀಯ ನಿಪುಣ ಪ್ರಶಾಂತ್​ ಕಿಶೋರ್​ ಸವಾಲು ಹಾಕಿರುವುದು ಸಹ ಬಂಗಾಳ ಚುನಾವಣೆ ಮೇಲೆ ಪ್ರಭಾವ ಬೀರಲಿದೆ ಎಂದು ಹೇಳಲಾಗುತ್ತಿದೆ. ಪ್ರಶಾಂತ್​ ಕಿಶೋರ್​ ಈ ಭಾರಿ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪರ ಕೆಲಸ ಮಾಡುತ್ತಿದ್ದಾರೆ.


ಇದನ್ನೂ ಓದಿ:’ಮುಸ್ಲಿಮರು ಗೋಮಾಂಸ ತಿನ್ನಬೇಡಿ’ ಹೇಳಿಕೆಗೆ ಮಲಯಾಳಂನಲ್ಲಿ ಸ್ಪಷ್ಟನೆ ನೀಡಿದ ಸಿ.ಎಂ. ಇಬ್ರಾಹಿಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...