Homeಮುಖಪುಟರಾಜೀನಾಮೆ ನೀಡದೆ ಸರ್ಕಾರಿ ಮನೆ ತೊರೆದ ವಿಧಾನ ಪರಿಷತ್ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ

ರಾಜೀನಾಮೆ ನೀಡದೆ ಸರ್ಕಾರಿ ಮನೆ ತೊರೆದ ವಿಧಾನ ಪರಿಷತ್ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ

ಗೋಹತ್ಯೆ ಪ್ರತಿಬಂಧಕ ಕಾಯ್ದೆ ರಾಜ್ಯ ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷೆಯ ಕಾಯ್ದೆ. ಇದನ್ನು ವಿಧಾನಸಭೆಯಲ್ಲಿ ಮಂಡಿಸಿದ್ದ ಬಿಜೆಪಿ ಅಂಗೀಕಾರ ಪಡೆದಿತ್ತು. ಆದರೆ, ವಿಧಾನ ಪರಿಷತ್​ನಲ್ಲಿ ಬಿಜೆಪಿ ಪಕ್ಷಕ್ಕೆ ಬಹುಮತ ಇರಲಿಲ್ಲ.

- Advertisement -
- Advertisement -

“ಗೋಹತ್ಯೆ ಪ್ರತಿಬಂಧಕ ಕಾಯ್ದೆ 2020” ವಿಧಾನ ಪರಿಷತ್​ನಲ್ಲಿ ಮಂಡನೆಯಾಗಿ ಇಡೀ ಪರಿಷತ್​ ರಣಾಂಗಣವಾಗಿ ಇಡೀ ದೇಶದ ಜನ ಛೀಮಾರಿ ಹಾಕಿದ ಬೆನ್ನಿಗೆ ಇಂದು ವಿಧಾನ ಪರಿಷತ್​ ಸಭಾಪತಿ ಪ್ರತಾಪ್​ಚಂದ್ರ ಶೆಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದೆ ಸರ್ಕಾರಿ ಬಂಗಲೆಯನ್ನು ತ್ಯಜಿಸಿ ಸ್ವಕ್ಷೇತ್ರಕ್ಕೆ ಮರಳಿದ್ದಾರೆ ಎಂಬ ಮಾಹಿತಿ ನಾನು ಗೌರಿ ಮೀಡಿಯಾ. ಕಾಮ್​ಗೆ ಲಭ್ಯವಾಗಿದೆ.

ಇಂದು ಬೆಳಗ್ಗೆಯೇ ಸ್ವಕ್ಷೇತ್ರಕ್ಕೆ ತೆರಳಿರುವ ಪ್ರತಾಪ್​ಚಂದ್ರ ಶೆಟ್ಟಿ ಸ್ವತಃ ಲೋಕೋಪಯೋಗಿ ಇಲಾಖೆಗೆ ಕರೆ ಮಾಡಿ ಇಂದು ಸಂಜೆ ಒಳಗೆ ಮನೆಯನ್ನು ಸುಪರ್ದಿಗೆ ಪಡೆಯಿರಿ. ಸರ್ಕಾರಿ ಪೀಠೋಪಕರಣ ಮತ್ತು ಕಾರನ್ನು ತೆಗೆದುಕೊಂಡು ಹೋಗಿ ಎಂದು ಸೂಚನೆ ನೀಡಿದ್ದಾರೆ ಎನ್ನಲಾಗುತ್ತಿದೆ.

ಗೋಹತ್ಯೆ ಪ್ರತಿಬಂಧಕ ಕಾಯ್ದೆ ರಾಜ್ಯ ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷೆಯ ಕಾಯ್ದೆ. ಇದನ್ನು ವಿಧಾನಸಭೆಯಲ್ಲಿ ಮಂಡಿಸಿದ್ದ ಬಿಜೆಪಿ ಅಂಗೀಕಾರ ಪಡೆದಿತ್ತು. ಆದರೆ, ವಿಧಾನ ಪರಿಷತ್​ನಲ್ಲಿ ಬಿಜೆಪಿ ಪಕ್ಷಕ್ಕೆ ಬಹುಮತ ಇರಲಿಲ್ಲ. ಅಲ್ಲದೆ ಪರಿಷತ್​ ಸಭಾಪತಿ ಸಹ ಕಾಂಗ್ರೆಸ್​ ಪಕ್ಷಕ್ಕೆ ಸೇರಿದ ಪ್ರತಾಪ್​ ಚಂದ್ರ ಶೆಟ್ಟಿ. ಹೀಗಾಗಿ ಪ್ರತಾಪ್ ಚಂದ್ರ ಶೆಟ್ಟಿ ಈ ಕಾಯ್ದೆ ಮಂಡನೆಗೆ ಮಾಡುವುದಕ್ಕೆ ಅವಕಾಶ ನೀಡುವುದಿಲ್ಲ ಎಂಬುದು ಬಿಜೆಪಿಯವರಿಗೆ ತಿಳಿದಿತ್ತು.

ಇದೇ ಕಾರಣಕ್ಕೆ ಪರಿಷತ್​ಗೆ ಸಭಾಪತಿ ಆಗಮಿಸುವ ಮುನ್ನವೇ ಜಿಡಿಎಸ್​ ಜೊತೆಗೆ ತಂತ್ರ ರೂಪಿಸಿದ್ದ ಬಿಜೆಪಿ ನಾಯಕರು ಜೆಡಿಎಸ್​ ಪಕ್ಷಕ್ಕೆ ಸೇರಿದ ಉಪ ಸಭಾಪತಿ ಧರ್ಮೇಗೌಡ ಅವರನ್ನು ಸಭಾಪತಿ ಪೀಠದಲ್ಲಿ ಕೂರಿಸಿದ್ದರು. ನಂತರ ಈ ಘಟನೆಗೆ ಪರಿಷತ್​ನಲ್ಲಿ ದೊಡ್ಡ ಗಲಭೆಗೆ ಕಾರಣವಾಗಿದ್ದು, ಪ್ರಜ್ಞಾವಂತದ ಸದನ ಎಂದು ಗೌರವ ಪಡೆದಿದ್ದ ಪರಿಷತ್​ ಜನರಿಂದ ಛೀಮಾರಿಗೆ ಗುರಿಯಾದದ್ದು ಇಂದು ಇತಿಹಾಸ. ಒಟ್ಟಾರೆ ಈ ಎಲ್ಲಾ ಘಟನೆಯಿಂದ ನೊಂದಿರುವ ಸಭಾಪತಿ ಪ್ರತಾಪ್​ ಚಂದ್ರ ಶೆಟ್ಟಿ ತಮ್ಮ ಸರ್ಕಾರಿ ನಿವಾಸವನ್ನೇ ತೊರೆದಿದ್ಧಾರೆ.


ಇದನ್ನೂ ಓದಿ :ಈಗ ಯಾವುದೇ ಚುನಾವಣೆ ಇಲ್ಲ, ಜೆಡಿಎಸ್​ ಜೊತೆಗೆ ಮೈತ್ರಿ ಅವಶ್ಯಕತೆ ಇಲ್ಲ; ಬಿ.ಸಿ. ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...