Homeಚಳವಳಿವಿರೋಧದ ನಡುವೆಯೂ ಕೃಷಿ ಕಾಯ್ದೆಗಳ ಜಾರಿ ಕ್ರೌರ್ಯದ ಪರಮಾವಧಿ: ದೇವನೂರ ಮಹಾದೇವ

ವಿರೋಧದ ನಡುವೆಯೂ ಕೃಷಿ ಕಾಯ್ದೆಗಳ ಜಾರಿ ಕ್ರೌರ್ಯದ ಪರಮಾವಧಿ: ದೇವನೂರ ಮಹಾದೇವ

ಬಡತನದ, ಹಸಿವಿನ, ಅಪೌಷ್ಠಿಕತೆಯ, ರಕ್ತಹೀನತೆಯ ಅಭಿವೃದ್ದಿ ಮಾಡಿದ್ದು ಸಾಕು, ನಿಲ್ಲಿಸಿ ಎಂದು ಹೇಳಬೇಕು. ಬೆಲೆ ಏರಿಕೆಗೆ ಕಾರಣವಾಗುವ, ಕೃಷಿ ಆಧಾರ ಕಿತ್ತು ಗ್ರಾಮೀಣ ಸಮುದಾಯ ಬೇರುಕಿತ್ತುಕೊಂಡು ನಗರಕ್ಕೆ ಜೋತು ಬೀಳುವ, ಸ್ಲಂ ಹೆಚ್ಚು ಮಾಡುವ ಭಾರತ ನಮಗೆ ಬೇಡ.

- Advertisement -
- Advertisement -

ಕೇಂದ್ರದ ಕೃಷಿ ಕಾಯ್ದೆಗಳು ಮತ್ತು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಬೆಂಗಳೂರಿನಲ್ಲಿ ಹೋರಾಟ ಮುಂದುವರೆದಿದೆ. ಐಕ್ಯ ಹೋರಾಟ ಸಮಿತಿ, AIKSCC, ಜಂಟಿ ಕಾರ್ಮಿಕ ಸಂಘಟನೆಗಳ ಒಕ್ಕೂಟ ಮತ್ತು ಕರ್ನಾಟಕ ಜನಶಕ್ತಿ ನೇತೃತ್ವದಲ್ಲಿ ಇಂದು ಪ್ರತಿಭಟನಾ ಧರಣಿ ನಡೆಯಿತು. ಈ ಸಂದರ್ಭದಲ್ಲಿ ಹಿರಿಯ ಸಾಹಿತಿಗಳು ಮತ್ತು ಹೋರಾಟಗಾರರಾದ ದೇವನೂರು ಮಹಾದೇವರವರು ಭಾಗವಹಿಸಿ ಮಾತನಾಡಿದರು. ಅವರ ಭಾಷಣ ಪೂರ್ಣಪಾಠ ಇಲ್ಲಿದೆ.

ರಾಜ್ಯದ ರಾಜಧಾನಿಯಲ್ಲಿ ಕುಳಿತು ನಾವು ಕೂಗಿ ಕೂಗಿ ಹೇಳುತ್ತಿದ್ದೇವೆ. ನಮ್ಮ ಸುತ್ತ ಮುತ್ತಲೂ ಮೂರು ದಾರಿ ಇದೆ. ನಮ್ಮ ಸುತ್ತಲೂ ಚಲಿಸುತ್ತಿರುವ ವಾಹನಗಳೇ ಹೆಚ್ಚು. ವಾಹನಗಳಿಗೆ ತಮ್ಮ ಅಕ್ಕ ಪಕ್ಕ ನೋಡುವ ವ್ಯವಧಾನ ಇರುವುದಿಲ್ಲ. ಈ ಈ ಧಾವಂತ ಮತ್ತು ವೇಗವನ್ನು ನಗರಗಳ ಲಕ್ಷಣ ಎನ್ನುತ್ತಾರೆ. ಇಂಥ ಕಡೆ ನಮ್ಮ ಮಾತು ಕೇಳಿಸುತ್ತಾ?

ಆದರೂ, ವೇಗವಾಗಿ ಓಡುತ್ತಿರುವವರಿಗೆ ಒಂದು ಕಿವಿಮಾತು ಹೇಳುತ್ತಿರುವೆ. ಏನೆಂದರೆ ನೀವು ನಮ್ಮ ಮಾತನ್ನು ಕೇಳುವುದು ಬೇಡ. 78 ಮಾಜಿ ಐಎಎಸ್‌, ಐಪಿಎಸ್ ಅಧಿಕಾರಿಗಳು ಒಂದು ಬಹಿರಂಗ ಪತ್ರ ಬರೆದಿದ್ದಾರೆ. ಅದರಲ್ಲಿ “ಕೃಷಿ ಕ್ಷೇತ್ರ ರಾಜ್ಯಗಳಿಗೆ ಸಂಬಂಧಪಟ್ಟಿದ್ದು, ಇಂಥದರಲ್ಲಿ ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಕೃಷಿ ಕಾನೂನುಗಳಲ್ಲಿ ಅಮೂಲಾಗ್ರ ಬದಲಾವಣೆ ತಂದಿದ್ದು ಯಾಕೆ?” ಎಂದು ಪ್ರಶ್ನಿಸಿದ್ದಾರೆ. ಈ (ಮೋದಿ) ಕಾನೂನುಗಳು ಭಾರತದ ಸಂವಿಧಾನದ ಫೆಡರಲ್ ಸ್ವರೂಪದ ಮೇಲಿನ ದಾಳಿ ಎಂದು ಆತಂಕಪಡುತ್ತಾರೆ.

ಮುಂದೆ ಆ ಅನುಭವಸ್ಥ ನಿವೃತ್ತ ಉನ್ನತಾಧಿಕಾರಿಗಳು “ಈ ಕೃಷಿ ಕಾನೂನುಗಳು ನೇರವಾಗಿ ಬಾಧಿಸುವ ರೈತರ ಜತೆ ಸರಕಾರ ಅವುಗಳನ್ನು ಜಾರಿಗೊಳಿಸುವ ಮುನ್ನ ಚರ್ಚಿಸಿಲ್ಲ. ಸಂಸತ್‌ನಲ್ಲಿ ಕಾನೂನುಗಳ ವಿರುದ್ಧ ಕೇಳಿಬಂದ ಆಕ್ಷೇಪಗಳಿಗೆ ಸರ್ಕಾರ ಕಿವಿಗೊಟ್ಟಿಲ್ಲ. ಮಸೂದೆಗಳ ಕುರಿತು ಚರ್ಚೆಗೆ ಸಮಯಾವಕಾಶ ನೀಡಲಾಗಿರಲಿಲ್ಲ. ಹಾಗೂ ಗೊಂದಲಕಾರಿ ವಾತಾವರಣದ ನಡುವೆ ಧ್ವನಿಮತದಿಂದ ರಾಜ್ಯಸಭೆಯಲ್ಲಿ ಅಂಗೀಕರಿಸಲಾಯಿತು. ಇದು ಅನುಮಾನಾಸ್ಪದ” ಎನ್ನುತ್ತಾರೆ.

ಹೌದು, ಇದು ದಾಳಿ ಮತ್ತು ಅನುಮಾನಾಸ್ಪದ. ಕೋವಿಡ್ ಸಾಂಕ್ರಾಮಿಕದ ಈ ದಯಾನೀಯ, ಧಾರುಣ ಕಾಲಮಾನದಲ್ಲಿ ಯಾರೂ ಉಸಿರೆತ್ತುವುದಿಲ್ಲ, ಇದೇ ಸರಿಯಾದ ಕಾಲ ಅಂದುಕೊಂಡು ಈ ಹಿಂದೆ ಬಿಜೆಪಿ ಸರ್ಕಾರ ಹಿಂತೆಗೆದುಕೊಂಡಿದ್ದ ಕೃಷಿ ಕಾನೂನುಗಳನ್ನು ಈಗ ಜಾರಿಗೊಳಿಸಲು ಹೊರಟಿದೆ. ಇದು ಕ್ರೌರ್ಯದ ಪರಮಾವಧಿ.

ಹೌದು, ಇದು ಸಂವಿಧಾನ, ಪ್ರಜಾಪ್ರಭುತ್ವ, ಭಾರತದ ಒಕ್ಕೂಟದ ಸ್ವರೂಪದ ಮೇಲೆ ಅಂದರೆ ಭಾರತ ಸ್ವಾತಂತ್ರ್ಯ ಪಡೆದ ಕನಸಿನ ಮೇಲೆ ನಡೆದ ದಾಳಿಯಾಗಿದೆ. ಅಂದರೆ ಇದು ಎಲ್ಲಾ ಪ್ರಜೆಗಳ ಮೇಲೆ ನಡೆಸಿದ ದಾಳಿಯಾಗಿದೆ.

ಹಾಗೆ ಇನ್ನೊಂದು ಕಿತಿಮಾತು. ಯಾವ ಕಡೆಗೂ ನೋಡದೆ ವೇಗವಾಗಿ ಚಲಿಸುತ್ತಿರುವವರಿಗೆ ಆಲಿಸಿ ಎಂದು ವಿನಂತಿಸುವೆ. 107 ದೇಶಗಳಲ್ಲಿ ನಡೆಸಲಾದ ಜಾಗತಿಕ ಹಸಿವಿನ ಸೂಚ್ಯಂಕ ಅಧ್ಯಯನದ ಪ್ರಕಾರ 2015- 2020ರ ಅವಧಿಯಲ್ಲಿ ಭಾರತ 94ನೇ ಸ್ಥಾನದಲ್ಲಿದ್ದು, ಗಂಭೀರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇದು ಮೋದಿ ಸಾಹೇಬರ ಜಮಾನದಲ್ಲೆ ಆಗಿದೆ. ಆಫ್ರಿಕಾದ ಕಡುಬಡರಾಷ್ಟ್ರ ಸುಡಾನ್ ಜತೆ ಇದೆ. ಅಷ್ಟು ಮಾತ್ರವಲ್ಲ ಭಾರತದ ಅಕ್ಕಪಕ್ಕದ ದೇಶಗಳಾದ ಪಾಕಿಸ್ತಾನ, ಶ್ರೀಲಂಕಾ, ನೇಪಾಳ, ಬಾಂಗ್ಲಾದೇಶಗಳ ಪರಿಸ್ಥಿತಿ ಭಾರತಕ್ಕಿಂತ ಉತ್ತಮವಾಗಿದೆ ಎಂದು ಆ ಅಧ್ಯಯನ ವರದಿ ಹೇಳುತ್ತದೆ. ಇಷ್ಟು ಸಾಕೇ? ಅಥವಾ ಮೋದಿ ಶಾ ಉಣಬಡಿಸುತ್ತಿರುವ ಮಾತಿನ ಮೃಷ್ಠಾನ್ನ ಭೋಜನ ಇನ್ನೂ ಬೇಕೆ? ಇಂಥ ದಯಾನೀಯ ಪರಿಸ್ಥಿತಿಯಲ್ಲೂ ಕೇಂದ್ರ ಸರ್ಕಾರ ಭಾರತದ ಆಹಾರ ಭದ್ರತೆ ಮೇಲೂ ದಾಳಿ ನಡೆಸುತ್ತಿದೆ. ಕೇಂದ್ರ ಸರ್ಕಾರ ನೇಮಿಸಿದ್ದ ಶಾಂತರಾಂ ಕಮಿಟಿಯು ಈಗ ಆಹಾರ ಭದ್ರತೆಯ ಕಾನೂನು ಮುಖಾಂತರ ಶೇಕಡಾ 67 ರಷ್ಟು ನೀಡಲಾಗುತ್ತಿದ್ದ ಆಹಾರ ಪಡಿತರವನ್ನು ಶೇಕಡ 40ಕ್ಕೆ ಇಳಿಸಬೇಕು ಎಂದು ಶಿಫಾರಸ್ಸು ಮಾಡಿದೆ. ಹಾಗಾಗಿಯೇ ಕೃಷಿಯ ಕತ್ತು ಹಿಸುಕುವ ಈ ಕಾನೂನುಗಳು ಬಂದಂತಿವೆ. ಪರಿಣಾಮ ಏನಾಗಬಹುದು?

ಈಗಾಗಲೇ ಜಾಗತಿಕ ಹಸಿವಿನ ಸೂಚ್ಯಂಕದ ಪ್ರಕಾರ ಅಪೌಷ್ಠಿಕ ಮಕ್ಕಳಲ್ಲಿ ವಿಶ್ವದಲ್ಲಿನ ಮೂರನೇ ಒಂದು ಭಾಗ ಮಕ್ಕಳು ಭಾರತದಲ್ಲಿದ್ದಾರೆ. ಆಫ್ರಿಕಾಗಿಂತ ದುಪ್ಪಟ್ಟು. ವಿಶ್ವಸಂಸ್ಥೆಯ ಆಹಾರ ಮತ್ತು ವ್ಯವಸಾಯ ಸಂಘಟನೆಯ ರಕ್ತಹೀನತೆಯ ಬಳಲುವಿಕೆಯ ಸರ್ವೇ ವರದಿ ಪ್ರಕಾರ 180 ದೇಶಗಳ ಪೈಕಿ ಭಾರತದ ಸ್ಥಾನ 170. ಹಾಗೇ ಮಕ್ಕಳ ಬೆಳವಣಿಗೆ ಕುಂಠಿತ ಸರ್ವೆಯಲ್ಲಿ 132 ದೇಶಗಳಲ್ಲಿ ಭಾರತದ ಸ್ಥಾನ 114. ಅಷ್ಟೇ ಯಾಕೆ ನಮ್ಮ ರಾಷ್ಟ್ರೀಯ ಕುಟುಂಬ ಆರೋಗ್ಯ ಸರ್ವೇ 2015-2020ರ ಅವಧಿಯಲ್ಲಿ ಅಪೌಷ್ಠಿಕ ಮಕ್ಕಳ ಸಂಖ್ಯೆ ಹೆಚ್ಚಾಗಿದೆ ಎಂದೇ ವರದಿ ಮಾಡಿದೆ. ಹೀಗಿರುವಾಗ ಮುಂದೇನು?

ಇನ್ನಾದರೂ ನಾವು ಕೇಳಬೇಕು – ಬಡತನದ, ಹಸಿವಿನ, ಅಪೌಷ್ಠಿಕತೆಯ, ರಕ್ತಹೀನತೆಯ ಅಭಿವೃದ್ದಿ ಮಾಡಿದ್ದು ಸಾಕು, ನಿಲ್ಲಿಸಿ ಎಂದು ಹೇಳಬೇಕು. ಬೆಲೆ ಏರಿಕೆಗೆ ಕಾರಣವಾಗುವ, ಕೃಷಿ ಆಧಾರ ಕಿತ್ತು ಗ್ರಾಮೀಣ ಸಮುದಾಯ ಬೇರುಕಿತ್ತುಕೊಂಡು ನಗರಕ್ಕೆ ಜೋತು ಬೀಳುವ, ಸ್ಲಂ ಹೆಚ್ಚು ಮಾಡುವ ಸ್ಲಂ ಭಾರತ ನಮಗೆ ಬೇಡ ಎಂದು ಹೇಳಬೇಕು.

ಆದರೆ ಮೋದಿ-ಶಾರು ಕೇಳಿಸಿಕೊಳ್ಳುತ್ತಿಲ್ಲ. ತಮ್ಮ ಭ್ರಮೆ ಮತ್ತು ಸುಳ್ಳುಗಳಲ್ಲಿ ತಾವೇ ಹೂತು ಹೋಗಿದ್ದಾರೆ. ಇವರು ವಿಥ್ಯಾವತಾರ ಪುರುಷರು. ಇವರಿಗೆ ಕಣ್ಣೂ ಕಾಣಿಸುತ್ತಿಲ್ಲ. ಕಿವಿಯೂ ಕೇಳಿಸುತ್ತಿಲ್ಲ. ಏನು ಮಾಡಬೇಕು? ‘ಗೊತ್ತು.. ಹೇಗೆ ಗೆಲ್ಲೋದು ಅಂತ ಗೊತ್ತು’ ಎಂಬ ಅಹಂಭಾವದಲ್ಲಿ ಅವರು ಇದ್ದಿರುವಂತಿದೆ. ಇಂತಹ ರಾಜಕಾರಣದ ಹಿಮ್ಮಡಿ ನರ ಕತ್ತರಿಸಿ ಇವರ ಅಧಿಕಾರದ ಚಲನೆ ನಿಲ್ಲುಸುವಂತಾದರೆ ಇವರಿಗೆ ಕಣ್ಣು ಕಾಣಿಸಬಹುದು, ಕಿವಿಯೂ ಕೇಳಿಸಬಹುದು. ಸಂವೇದನಾಶೀಲತೆ ಉಂಟಾಗಲೂಬಹುದು. ಇಂಥವರ ಒಳಗೂ ಮಾನವೀಯತೆ ಉಸಿರಾಡಬಹುದು. ಇದಕ್ಕಾಗಿ ಎಲ್ಲರ ಚಿತ್ತ ಮತದಾರರತ್ತ ನಡೆಯಬೇಕಾಗಿದೆ.

  • ದೇವನೂರ ಮಹಾದೇವ

ಪ್ರತಿಭಟನೆಯಲ್ಲಿ ಹಿರಿಯ ಹೋರಾಟಗಾರರಾದ ಶಿವಸುಂದರ್, ಅರಳಾಳು ಅನುಸೂಯಮ್ಮ, ನೂರ್ ಶ್ರೀಧರ್, ಬಿ.ಶ್ರೀಪಾದ್ ಭಟ್, ಕುಮಾರ್ ಸಮತಳ, ಸಿರಿಮನೆ ನಾಗರಾಜ್, ವರದರಾಜೇಂದ್ರ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ರೈತ ಹೋರಾಟ: ಇತಿಹಾಸದ ಕೆಲವು ಘಟ್ಟಗಳಲ್ಲಂತೂ ಮಧ್ಯದ ದಾರಿ ಇರುವುದಿಲ್ಲ – ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...