Homeಮುಖಪುಟಟಿಎಂಸಿ ಸೇರಿದ ಬಿಜೆಪಿ ಸಂಸದನ ಪತ್ನಿ: ಡೈವರ್ಸ್‌ಗೆ ಮುಂದಾದ ಸಂಸದ!

ಟಿಎಂಸಿ ಸೇರಿದ ಬಿಜೆಪಿ ಸಂಸದನ ಪತ್ನಿ: ಡೈವರ್ಸ್‌ಗೆ ಮುಂದಾದ ಸಂಸದ!

ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಕಮಲ ಪಾಳಯಕ್ಕೆ ಶಾಕ್ ನೀಡಿದ್ದ ಸುಜಾತಾ ಮೊಂಡಾಲ್ ಖಾನ್‌ಗೆ ಪತಿ ವಿಚ್ಚೇದನ ನೀಡಿ ಶಾಕ್ ನೀಡಲು ಹೊರಟಿದ್ದಾರೆ.

- Advertisement -
- Advertisement -

ಪಶ್ಚಿಮ ಬಂಗಾಳ ಚುನಾವಣಾ ಕಣ ರಂಗೇರುತ್ತಲೇ ಇದೆ. ಆ ಪಕ್ಷದಿಂದ ಈ ಪಕ್ಷಕ್ಕೆ ಈ ಪಕ್ಷದಿಂದ ಆ ಪಕ್ಷಕ್ಕೆ ಹಾರುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಹೀಗಾಗಿಯೇ ಬಿಜೆಪಿ ಸಂಸದ ಸೌಮಿತ್ರಾ ಖಾನ್ ಅವರ ಪತ್ನಿ ಸುಜಾತಾ ಮೊಂಡಾಲ್ ಖಾನ್ ಟಿಎಂಸಿಗೆ ಸೇರ್ಪಡೆಯಾಗಿದ್ದರು. ಈಗ ಸಂಸದ ಸೌಮಿತ್ರಾ ಖಾನ್ ಪತ್ನಿಗೆ ಡೈವರ್ಸ್ ನಿಡಲು ಮುಂದಾಗಿದ್ದಾರೆ.

ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಕಮಲ ಪಾಳಯಕ್ಕೆ ಶಾಕ್ ನೀಡಿದ್ದ ಸುಜಾತಾ ಮೊಂಡಾಲ್ ಖಾನ್‌ಗೆ ಪತಿ ವಿಚ್ಚೇದನ ನೀಡಿ ಶಾಕ್ ನೀಡಲು ಹೊರಟಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆ ಹಿನ್ನೆಲೆ ನಡೆಯುತ್ತಿರುವ ರಾಜಕೀಯ ನಾಯಕರುಗಳ ಜಗಳದಿಂದಾಗಿ ಒಂದು ಮದುವೆ ಮುರಿದುಬೀಳುವ ಹಂತಕ್ಕೆ ಬಂದಿದೆ. ರಾಜಕೀಯ ನಮ್ಮ ಮದುವೆಯನ್ನು ಕೊನೆಗೊಳಿಸಿದೆ ಎಂದು ಸಂಸದ ಸೌಮಿತ್ರಾ ಖಾನ್ ಕಣ್ಣೀರಿಟ್ಟು ಹೇಳಿದ್ದಾರೆ

ಇದನ್ನೂ ಓದಿ: ಕೋಲ್ಕತ್ತಾ ಕಮಲಕ್ಕೆ ಮುಖಭಂಗ; ಟಿಎಂಸಿ ಸೇರಿದ ಬಿಜೆಪಿ ಸಂಸದನ ಪತ್ನಿ!

ತೃಣಮೂಲ ಸಂಸದ ಸೌಗತಾ ರಾಯ್ ಮತ್ತು ವಕ್ತಾರ ಕುನಾಲ್ ಘೋಷ್ ಅವರ ಸಮ್ಮುಖದಲ್ಲಿ ಸುಜಾತಾ ಮಂಡಲ್ ಖಾನ್ ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

“ನಾನು ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಬೆಳೆಸಲು ಸಾಕಷ್ಟು ಶ್ರಮವಹಿಸಿ ಕೆಲಸ ಮಾಡಿದ್ದೇನೆ. ಆದರೆ, ಸದ್ಯಕ್ಕೆ ಮೂಲ ಬಿಜೆಪಿಗರಿಗೇ ಪಕ್ಷದಲ್ಲಿ ಬೆಲೆ ಗೌರವ ಇಲ್ಲದಂತಾಗಿದೆ. ಇದೇ ಕಾರಣಕ್ಕಾಗಿ ನಾನು ಪಕ್ಷವನ್ನು ತ್ಯಜಿಸುತ್ತಿದ್ದೇನೆ. ಅಲ್ಲದೆ, ಓರ್ವ ಮಹಿಳೆಯಾಗಿ ನನಗೆ ಆ ಪಕ್ಷದಲ್ಲಿರುವುದು ಕಷ್ಟವಾಗುತ್ತಿದೆ” ಎಂದು ಸುಜಾತಾ ಮೊಂಡಾಲ್ ತಿಳಿಸಿದ್ದರು.

ಅಲ್ಲದೆ, “ಬಿಜೆಪಿ ಪಕ್ಷ ತೃಣಮೂಲ ಕಾಂಗ್ರೆಸ್​ನಲ್ಲಿರುವ ಎಲ್ಲಾ ರಾಜಕಾರಣಿಗಳನ್ನು ಪಕ್ಷಾಂತರದ ಹೆಸರಿನಲ್ಲಿ ಭ್ರಷ್ಟಗೊಳಿಸುತ್ತಿದೆ. ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ವರ್ಚಸ್ಸನ್ನು ಬಿಜೆಪಿ ಏನೇ ಮಾಡಿದರು ಕುಗ್ಗಿಸಲು ಸಾಧ್ಯವಿಲ್ಲ. ಹೀಗಾಗಿ ಓರ್ವ ಮಹಿಳೆಯಾಗಿ ಮಮತಾ ಬ್ಯಾನರ್ಜಿ ಜೊತೆಗೆ ಕೆಲಸ ಮಾಡುವುದು ನನಗೆ ಗೌರವಾನ್ವಿತವಾದ ವಿಚಾರ ಎಂದು ನಾನು ಭಾವಿಸುತ್ತೇನೆ” ಎಂದು ಸುಜಾತಾ ಮಂಡಲ್ ಖಾನ್ ತಿಳಿಸಿದ್ದಾರೆ.

ಒಟ್ಟಾರೆ, ಪಕ್ಷಗಳ ಜಗಳಕ್ಕೆ, ರಾಜಕೀಯಕ್ಕೆ ಕುಟುಂಬವೊಂದು ಬಿರುಕು ಬಿಡುವ ಸಂದರ್ಭ ಬಂದಿದೆ. ರಾಜಕೀಯ ಎಂಬುದು ಮನೆಯೊಳಗೆ ಬಂದರೆ ಇಂತಹ ಘಟನೆಗಳು ನಡೆಯುತ್ತವೆ. ರಾಜಕೀಯವನ್ನು ಮನೆ, ಕುಟುಂಬಗಳಿಂದ ಹೊರಗಿಟ್ಟರೆ ಎಷ್ಟೋ ಮದುವೆಗಳು, ಸಂಸಾರಗಳು ಉಳಿಯಬಹುದು.

ಇತ್ತ, ಪಶ್ಚಿಮ ಬಂಗಾಳದ ದುರ್ಗಾಪುರ ರ್‍ಯಾಲಿಯಲ್ಲಿ ಬಿಜೆಪಿಯ ಹೊಸ ಕಾರ್ಯಕರ್ತರು ಮತ್ತು ಹಳೇ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಪಕ್ಷದ ರಾಜ್ಯದ್ಯಕ್ಷ ದಿಲೀಪ್‌ ಘೋಷ್‌ ಮತ್ತು ಪಕ್ಷದ ನಾಯಕ ಅರ್ಜುನ್‌ ಸಿಂಗ್‌ ಜೊತೆಗೆ ಯಾರು ವೇದಿಕೆ ಹಂಚಿಕೊಳ್ಳಬೇಕು ಎಂಬ ವಿಚಾರಕ್ಕೆ ಪರಸ್ಪರ ಕುರ್ಚಿಗಳು ಮತ್ತು ಕೋಲುಗಳಿಂದ ಬಡಿದಾಡಿಕೊಂಡಿದ್ದಾರೆ.


ಇದನ್ನೂ ಓದಿ: ಪ.ಬಂಗಾಳದಲ್ಲಿ BJP ಎರಡಂಕಿ ದಾಟುವುದಿಲ್ಲ: ಒಂದು ವೇಳೆ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ- ಪ್ರಶಾಂತ್ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...