Homeಮುಖಪುಟಲಂಚ ಪಡೆದು ಸ್ಟಿಂಗ್ ಆಪರೇಷನ್‌ನಲ್ಲಿ ಸಿಕ್ಕಿಬಿದ್ದವರು ಬಿಜೆಪಿ ಸೇರ್ಪಡೆ: ಧೃವ್ ರಾಠೀ ಟ್ವೀಟ್ ವೈರಲ್

ಲಂಚ ಪಡೆದು ಸ್ಟಿಂಗ್ ಆಪರೇಷನ್‌ನಲ್ಲಿ ಸಿಕ್ಕಿಬಿದ್ದವರು ಬಿಜೆಪಿ ಸೇರ್ಪಡೆ: ಧೃವ್ ರಾಠೀ ಟ್ವೀಟ್ ವೈರಲ್

ಟಿಎಂಸಿಯಲ್ಲಿದ್ದ ಮುಕುಲ್ ರಾಯ್ 2017 ರ ನವೆಂಬರ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರೆ, ಸುವೇಂದು ಅಧಿಕಾರಿ ಇತ್ತಿಚೆಗೆ ಬಿಜೆಪಿ ಪಾಳಯಕ್ಕೆ ಸೇರಿದ್ದಾರೆ.

- Advertisement -
- Advertisement -

ಬಿಜೆಪಿ ಮುಖಂಡರಾದ ಸುವೇಂದು ಅಧಿಕಾರಿ ಮತ್ತು ಮುಕುಲ್ ರಾಯ್ ಲಂಚ ಪಡೆಯುವುದರ ಸ್ಟಿಂಗ್ ಆಪರೇಷನ್‌ ವಿಡಿಯೋಗಳ ಸ್ಕ್ರೀನ್‌ಶಾಟ್‌ಗಳನ್ನು ಖ್ಯಾತ ಯೂಟ್ಯೂಬರ್, ಯುವಚಿಂತಕ ಧೃವ್ ರಾಠೀ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅವರಿಬ್ಬರೂ ಬಿಜೆಪಿ ಸೇರಿರುವುದರಿಂದ ಆ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

ನಾಲ್ಕು ವರ್ಷಗಳ ಹಿಂದೆ 2016 ರಲ್ಲಿ ನಾರದ ನ್ಯೂಸ್‌ನ ಸಿಇಒ, ಪತ್ರಕರ್ತ ಮ್ಯಾಥ್ಯೂ ಸ್ಯಾಮುಯೆಲ್ಸ್ ನಡೆಸಿದ ಸ್ಟಿಂಗ್ ಕಾರ್ಯಾಚರಣೆಯ ವಿಡಿಯೋವನ್ನು ಬಿಜೆಪಿ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿತ್ತು. ಇದರಲ್ಲಿ, ಪತ್ರಕರ್ತ ಸ್ಯಾಮ್ಯುಯೆಲ್ಸ್‌ ತನ್ನನ್ನು ಉದ್ಯಮಿ ಎಂದು ಬಿಂಬಿಸಿಕೊಂಡು, 11 ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡರಿಗೆ ಹಣವನ್ನು ನೀಡುವುದನ್ನು ಸೆರೆ ಹಿಡಿಯಲಾಗಿತ್ತು.

ಆ 11 ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡರಲ್ಲಿ ಅಂದಿನ ಟಿಎಂಸಿ ನಾಯಕರಾದ ಮುಕುಲ್ ರಾಯ್ ಮತ್ತು ಸುವೇಂದು ಅಧಿಕಾರಿ ಕೂಡ ಪ್ರಮುಖರಾಗಿದ್ದರು. ಈ ವಿಡಿಯೋದ ಸ್ಕ್ರೀನ್ ಶಾಟ್‌ಗಳನ್ನು ಯೂಟ್ಯೂಬರ್‌ ಧೃವ್ ರಾಠೀ ಹಂಚಿಕೊಂಡಿದ್ದರು.

ಇದನ್ನೂ ಓದಿ: ಬಂಗಾಳ ಗಲಭೆ: ಬಿಜೆಪಿ ನಾಯಕರ ವಿರುದ್ಧ ಯಾವುದೇ ಬಂಧನ ಬೇಡ ಎಂದ ಸುಪ್ರೀಂ

“4 ವರ್ಷಗಳ ಹಿಂದೆ ಲಂಚ ತೆಗೆದುಕೊಳ್ಳುತ್ತಾ ಸಿಕ್ಕಿಬಿದ್ದ ಈ ಇಬ್ಬರು ರಾಜಕಾರಣಿಗಳ ಕುಟುಕು ಕಾರ್ಯಾಚರಣೆಯನ್ನು ಬಿಜೆಪಿ ಪೋಸ್ಟ್ ಮಾಡಿತ್ತು. ಈಗ ಮುಕುಲ್ ರಾಯ್ ಮತ್ತು ಸುವೇಂದು ಅಧಿಕಾರಿ ಇಬ್ಬರೂ ಸಂತೋಷದಿಂದ ಬಿಜೆಪಿಗೆ ಸೇರಿದ್ದಾರೆ” ಎಂದು ಧೃವ್ ರಾಠೀ ಟ್ವೀಟ್ ಮಾಡಿದ್ದಾರೆ.

ಟಿಎಂಸಿಯ ಪ್ರಬಲ ನಾಯಕ ಎಂದು ಹೆಸರಾಗಿದ್ದ ಸುವೇಂದು ಅಧಿಕಾರಿ, ಬಿಜೆಪಿಗೆ ಸೇರಿದ ಕೆಲ ದಿನಗಳಲ್ಲೇ ಯೂಟ್ಯೂಬರ್ ಧೃವ್ ರಾಠೀ‌  ಈ ಚಿತ್ರಗಳನ್ನು ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಈ ಟ್ವೀಟ್, 7,800 ಕ್ಕೂ ಹೆಚ್ಚು ರಿಟ್ವೀಟ್‌ಗಳು ಮತ್ತು 35,000ಕ್ಕೂ ಹೆಚ್ಚು ಲೈಕ್‌ಗಳನ್ನು ಪಡೆದಿದೆ.

ಇದನ್ನೂ ಓದಿ: ಅಮಿತ್ ಶಾ ಭಾಷಣದ ಸುಳ್ಳು ಕಂಡುಹಿಡಿದು ತಿರುಗೇಟು ನೀಡಿದ ಡೆರೆಕ್ ಒಬ್ರಿಯೆನ್

ಆ ಸಮಯದಲ್ಲಿ ಸಂಸದರಾಗಿದ್ದ ಮುಕುಲ್ ರಾಯ್ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪಶ್ಚಿಮ ಬಂಗಾಳದಾದ್ಯಂತ ಬೃಹತ್ ಪ್ರತಿಭಟನೆ ನಡೆಸಿತ್ತು.

ಸದ್ಯ ಬಂಗಾಳದಲ್ಲಿ ಅಧಿಕಾರ ಹಿಡಿಯಲು ಪ್ರಯತ್ನ ನಡೆಸುತ್ತಿರುವ ಬಿಜೆಪಿಯು ಟಿಎಂಸಿ ನಾಯಕರುಗಳ ಮೇಲೆ ಕಣ್ಣು ಹಾಕಿದೆ. ಈಗಾಗಲೇ ಟಿಎಂಸಿ ಸೇರಿದಂತೆ ಅನೇಕ ಪಕ್ಷಗಳ 9 ಮಂದಿ ಪ್ರಮುಖ ನಾಯಕರು ಬಿಜೆಪಿ  ಸೇರಿದ್ದಾರೆ. ಅವರಲ್ಲಿ ಟಿಎಂಸಿಯ ಸುವೇಂದು ಅಧಿಕಾರಿಯು ಒಬ್ಬರು. ಟಿಎಂಸಿಯಲ್ಲಿದ್ದ ಮುಕುಲ್ ರಾಯ್ 2017 ರ ನವೆಂಬರ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.

ಸದ್ಯ ಬಿಜೆಪಿ ಯೂಟ್ಯೂಬ್ ಚಾನೆಲ್‌ನಿಂದ  ಆ ಸ್ಟಿಂಗ್‌ ವಿಡಿಯೋವನ್ನು ತೆಗೆದುಹಾಕಲಾಗಿದೆ ಎಂದು ನೆಟ್ಟಿಗರು ಆರೋಪಿಸಿದ್ದಾರೆ.


ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರದ ಬಿರುಗಾಳಿ: ಬಿಜೆಪಿ ಸೇರಿದ 9 ಶಾಸಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...