Homeಕರ್ನಾಟಕ’ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಉಪಯೋಜನೆ’ಯಲ್ಲಿನ ವಂಚನೆಗಳು!

’ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಉಪಯೋಜನೆ’ಯಲ್ಲಿನ ವಂಚನೆಗಳು!

ಶತಮಾನಗಳಿಂದ ಶೋಷಣೆ/ದಮನಕ್ಕೆ ಒಳಗಾದ ತಳ ಸಮುದಾಯಗಳಿಗೆ ಸಮಾಜೋ-ಆರ್ಥಿಕ ನ್ಯಾಯ ಒದಗಿಸಲು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳಿಗೆ ಸಮಾಜೋ-ಆರ್ಥಿಕ ನ್ಯಾಯ ಒದಗಿಸಲು ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು

- Advertisement -
- Advertisement -

ಶತಮಾನಗಳಿಂದ ಶೋಷಣೆ/ದಮನಕ್ಕೆ ಒಳಗಾದ ತಳ ಸಮುದಾಯಗಳಿಗೆ ಸಮಾಜೋ-ಆರ್ಥಿಕ ನ್ಯಾಯ ಒದಗಿಸಲು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳಿಗೆ “ಎಸ್‌ಸಿಎಸ್‌ಪಿ/ಟಿಎಸ್‌ಪಿ” (ಪರಿಶಿಷ್ಟ ಜಾತಿ ಉಪಯೋಜನೆ/ ಪರಿಶಿಷ್ಟ ಪಂಗಡ ಉಪಯೋಜನೆ) ಯೋಜನೆಯನ್ನು ಜಾರಿಗೊಳಿಸಲಾಯಿತು. ಕರ‍್ನಾಟಕದಲ್ಲಿ ಅದನ್ನು ಪರಿಶ್ಕರಿಸಿ 2013ರಲ್ಲಿ “ಎಸ್‌ಸಿಎಸ್‌ಪಿ/ಟಿಎಸ್‌ಪಿ (ಯೋಜನೆ, ಹಂಚಿಕೆ, ಹಣಕಾಸು ಸಂಪನ್ಮೂಲದ ಬಳಕೆ) ಕಾಯಿದೆ” ಜಾರಿಗೊಳಿಸಲಾಯಿತು.

2011ರ ಜನಗಣತಿಯ ಆದಾರದಲ್ಲಿ “ಎಸ್‌ಸಿಎಸ್‌ಪಿ/ಟಿಎಸ್‌ಪಿ” ಯೋಜನೆಗೆ ಪ್ರತಿ ಇಲಾಖೆಯು ಶೇ.24.1 ಪ್ರಮಾಣದ ಆರ್ಥಿಕ ಅನುದಾನವನ್ನು ಮೀಸಲಿಡಬೇಕು. ಇದರ ಅನುಸಾರ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವ್ಯಕ್ತಿಗೆ/ಕುಟುಂಬಕ್ಕೆ ಈ ಯೋಜನೆಯ ಅನುದಾನವು ನೇರವಾಗಿ ತಲುಪಬೇಕು. ಯೋಜನೆಗಳನ್ನು ರೂಪಿಸುವುದಕ್ಕೂ ಮೊದಲು ರಾಜ್ಯ ಮಟ್ಟದ ನೋಡಲ್ ಏಜೆನ್ಸಿ ಸಂಬಂದಪಟ್ಟ ಸಮುದಾಯಗಳೊಂದಿಗೆ ಸಮಾಲೋಚಿಸಬೇಕು. ಖರ್ಚಿನ ವಿವರಗಳು ಪಾರದರ್ಶಕವಾಗಿರಬೇಕು, ಇದರ ಸಮರ್ಪಕ ಜಾರಿಯ ಕುರಿತು ನಿಗಾ ವಹಿಸಲು ಒಂದು ಅಂತರ್ಜಾಲ ತಾಣವನ್ನು ಆರಂಬಿಸಬೇಕು, ಈ ಯೋಜನೆಯ ಜಾರಿಯಾಗಿರುವುದರ ವಿವರಗಳನ್ನು ಕಾಲಕಾಲಕ್ಕೆ ಪ್ರಕಟಿಸಬೇಕು. ಮತ್ತು ಮುಖ್ಯವಾಗಿ ಈ ಯೋಜನೆಗೆ ಮೀಸಲಿಟ್ಟ ಹಣವನ್ನು ಸಾಮಾನ್ಯ ಯೋಜನೆಗಳಿಗೆ ಬಳಸಿಕೊಳ್ಳಬಾರದು.

PC: Mahima A Jain

ಇದನ್ನೂ ಓದಿ: ‘ಮಹಾಡ್ – ಮೊದಲ ದಲಿತ ಬಂಡಾಯ’ ಪುಸ್ತಕದ ಆಯ್ದ ಭಾಗಗಳು

ಆದರೆ ಈ ಎಲ್ಲಾ ನಿಯಾಮವಳಿಗಳು ಕೇವಲ ಕಾಗದದ ಮೇಲೆ ಮಾತ್ರ ಉಳಿದುಕೊಂಡಿವೆ. ಮೊದಲಿಗೆ ಜಿಲ್ಲಾ ಮಟ್ಟದ ಪರಿಶೀಲನ ಸಮಿತಿಗಳನ್ನು ಸೂಕ್ತವಾಗಿ ರಚಿಸಲ್ಪಟ್ಟಿರುವುದಿಲ್ಲ, ಮತ್ತು ರಚಿತಗೊಂಡ ಸಮಿತಿಗಳು ಕಾಲ ಕಾಲಕ್ಕೆ ಸಬೆಗಳನ್ನು ನಡೆಸುವುದಿಲ್ಲ. ಇನ್ನು ಇಲ್ಲಿನ ಬಹುತೇಕ ಅದಿಕಾರಿಗಳಿಗೆ ಈ ಯೋಜನೆ ಕುರಿತು ಯಾವುದೇ ತಿಳುವಳಿಕೆಯಿರುವುದಿಲ್ಲ ಮತ್ತು ಅವರಿಗೆ ತರಬೇತಿಯನ್ನು ಸಹ ಕೊಟ್ಟಿರುವುದಿಲ್ಲ.

ದಲಿತ ಸಂಘಟನೆಗಳು “ಎಸ್‌ಸಿಎಸ್‌ಪಿ/ಟಿಎಸ್‌ಪಿ ಹೆಸರಿನಲ್ಲಿ ಪ್ರತ್ಯೇಕವಾಗಿ ಎರಡು ಬ್ಯಾಂಕ್ ಖಾತೆ ತೆರೆಯಬೇಕು ಮತ್ತು ಈ ಖಾತೆಯನ್ನು ನೋಡಲ್ ಇಲಾಖೆಗಳು ನಿರ್ವಹಿಸಬೇಕು. ಈ ಯೋಜನೆಯ ನಿಗಾ ವಹಿಸಲು ಲೋಕಪಾಲರನ್ನು ನೇಮಿಸಬೇಕು” ಎಂದು ಆಗ್ರಹಪಡಿಸಿದ್ದರು. ಈ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯನ್ನು ವಿಶ್ಲೇಷಿಸಿದಾಗ ಮೇಲಿನ ಎಲ್ಲಾ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ ಮತ್ತು ತಮಾಶೆಯೆಂದರೆ ಸಬಂದಪಟ್ಟ ಅದಿಕಾರಿಗಳಿಗೆ ಯಾವುದೇ ವಿಚಾರಣೆ ನಡಸಿಲ್ಲ

2020-21ರ ಹಣಕಾಸು ವರ್ಶವನ್ನು ಪರಿಶೀಲನೆ ಮಾಡೋಣ. ಈ ವರ್ಶಕ್ಕೆ ಎಸ್‌ಸಿಎಸ್‌ಪಿ/ಟಿಎಸ್‌ಪಿಗೆ 27,699.52 ಕೋಟಿ ಮೊತ್ತವನ್ನು ಹಂಚಿಕೆ ಮಾಡಲಾಯಿತು. ಆದರೆ ನಂತರ 1,084 ಕೋಟಿಯನ್ನು ಕಡಿತಗೊಳಿಸಲಾಯಿತು. ನಂತರ ಉಳಿದ ಅನುದಾನ 26,614.69 ಕೋಟಿ. ಇದಕ್ಕೆ ಯಾವುದೇ ಕಾರಣವನ್ನು ಕೊಟ್ಟಲ್ಲ.

ಇದನ್ನೂ ಓದಿ: ದೇಶದಲ್ಲಿ ಹಚ್ಚಿರುವ ಕಿಚ್ಚು ಮುಸಲ್ಮಾನರನ್ನು ಮುಕ್ಕತೊಡಗಿದೆ. ಮುಂದಿನ ಸರದಿ ದಲಿತರದು, ಕ್ರೈಸ್ತರದು ಇದ್ದೀತು

ಎಸ್‌ಸಿಎಸ್‌ಪಿ ಯೋಜನೆ:

ಹಂಚಿಕೆ : 19,432.22 ಕೋಟಿ.
ಕಡಿತಗೊಳಿಸಿದ ನಂತರದ ಮೊತ್ತ : 18,659.65 ಕೋಟಿ.
ವೆಚ್ಚ : 5,856.84 ಕೋಟಿ (ಶೇಕಡ. 31%)
ಬಳಕೆಯಾಗದೆ ಉಳಿದ ಮೊತ್ತ : 12,802.81 ಕೋಟಿ.

ಟಿಎಸ್‌ಪಿ ಯೋಜನೆ:

ಹಂಚಿಕೆ : 8,267.30 ಕೋಟಿ.
ಕಡಿತಗೊಳಿಸಿದ ನಂತರದ ಮೊತ್ತ : 7,955.69 ಕೋಟಿ.
ವೆಚ್ಚ : 2307.25 ಕೋಟಿ (ಶೇಕಡ. 32%)
ಬಳಕೆಯಾಗದೆ ಉಳಿದ ಮೊತ್ತ : 5648.44 ಕೋಟಿ.

ಒಟ್ಟಾಗಿ 2020-21ರ ಎಸ್‌ಸಿಎಸ್‌ಪಿ/ಟಿಎಸ್‌ಪಿ ಗೆ ಕೇವಲ 8164 ಕೋಟಿ ವೆಚ್ಚವಾಗಿದ್ದರೆ, 18,451.25 ಕೋಟಿ ಬಳಕೆಯಾಗದೆ ಉಳಿದುಕೊಂಡಿದೆ

  • ಮೊದಲಿಗೆ ಅಗತ್ಯವಾದ ಹಣಕಾಸು ಮೊತ್ತವನ್ನು ಹಂಚಿಕೆ ಮಾಡಿಲ್ಲ.
  • ಎರಡನೆಯದಾಗಿ ಹಂಚಿಕೆಯಾದ ಮೊತ್ತವನ್ನು ಕಡಿತಗೊಳಿಸಲಾಗಿದೆ.
  • ಮೂರನೆಯದಾಗಿ ಕಡಿತಗೊಳಿಸದ ಮೊತ್ತದಲ್ಲಿ ಶೇಕಡಾ 31ರಶ್ಟನ್ನು ಮಾತ್ರ ವೆಚ್ಚ ಮಾಡಲಾಗಿದೆ ಮತ್ತು ಶೇಕಡಾ 69ರಶ್ಟನ್ನು ಬಳಸಿಕೊಂಡಿಲ್ಲ.
  • ನಾಲ್ಕನೆಯದಾಗಿ ವೆಚ್ಚ ಮಾಡಿದ ಮೊತ್ತವನ್ನು ಈ ಯೋಜನೆಗೆ ಬಳಸಿಕೊಂಡಿಲ್ಲ, ಇತರೆ ಸಾಮಾನ್ಯ ಕೆಲಸಗಳಿಗೆ ವೆಚ್ಚ ಮಾಡಿದ್ದಾರೆ.

ಇದನ್ನೂ ಓದಿ: ದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವಹಿಸಿದ್ದ ಮೂಕನಾಯಕ

ಇದು ದ್ರೋಹದ ಕೆಲಸ. ಇದು ಒಂದು ಮಹಾವಂಚನೆ. ಉದಾಹರಣೆಗೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಗೆ ಮೀಸಲಿಟ್ಟ ಹಣವನ್ನು ಮೆಟ್ರೋ ರೈಲು ಕಾಮಗಾರಿಗೆ ಬಳಸಿಕೊಳ್ಳಲಾಗಿದೆ. ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ವೆಚ್ಚ ಮಾಡಲಾಗಿದೆ. ಹೆದ್ದಾರಿಗಳ ಕಾಮಗಾರಿಗೆ ಬಳಸಿಕೊಳ್ಳಲಾಗಿದೆ. ಅಂದರೆ ಬ್ರಶ್ಟಾಚಾರಕ್ಕೆ ಭರಪೂರು ಅವಕಾಶವಿರುವ ‘ಕಾಮಗಾರಿ’ ಯೋಜನೆಗಳಿಗೆ ಈ ಆರ್ಥಿಕ ಅನುದಾನವನ್ನು ಬಳಸಿಕೊಳ್ಳಲಾಗಿದೆ. ಇದು ಶಿಕ್ಷಾರ್ಹ ಅಪರಾದವಾಗಿದೆ. ಆದರೆ ಇಲ್ಲಿ ಪ್ರಬುತ್ವವೇ ಈ ಬ್ರಶ್ಟಾಚಾರದಲ್ಲಿ ತೊಡಗಿಕೊಂಡಿರುವುದರಿಂದ ಇದರ ವಿರುದ್ದದ ಕೂಗು ಅರಣ್ಯರೋದನವಾಗಿದೆ.

ದಲಿತ ಬಹುಜನ ಸಂಘಟನೆಯು (ದಬಸ) ಈ ಹಿಂದೆ ರಾಜ್ಯದ ಅಬಿವೃದ್ದಿಗೂ ಮತ್ತು ಪ.ಜಾತಿ/ಪ.ಪಂಗಡದ ಅಬಿವೃದ್ದಿ ಸೂಚಕಗಳಿಗೂ ನಡುವಿನ ವ್ಯತ್ಯಾಸವನ್ನು ‘ಅಬಿವೃದ್ದಿಗಳ ಅಂತರ’ದ ಮೂಲಕ ವಿಶ್ಲೇಷಣೆ ಮಾಡಿದೆ.

‘ದಬಸ’ ಮುಂದಿಟ್ಟ ಮುಖ್ಯ ಪ್ರಶ್ನೆಗಳು:

  • ಬಡತನ ರೇಖೆಗಿಂತ ಮೇಲಿರುವ ಪ.ಜಾತಿ/ಪ.ಪಂಗಡದ ಜನಸಂಖ್ಯೆಯ ಪ್ರಮಾಣವೇನು?
  • ಆರ್ಥಿಕವಾಗಿ ಸಬಲೀಕರಣಗೊಂಡವರೆಶ್ಟು?
  • ಇದಕ್ಕೂ ಮತ್ತು ಕರ‍್ನಾಟಕದ ಸೂಚ್ಯಕಂಗಳಿಗೂ ದಲಿತ ಸಮುದಾಯದ ಅಬಿವೃದ್ದಿ ಸೂಚ್ಯಂಕಗಳ ನಡುವಿನ ವ್ಯತ್ಯಾಸವೇನು?
  • ಕರ‍್ನಾಟಕ ರಾಜ್ಯದ/ ಜಿಲ್ಲೆಗಳ ಮುನ್ನೋಟ ಮತ್ತು ಅದಕ್ಕೆ ಪ್ರತಿಯಾಗಿ ಪ.ಜಾತಿ/ಪ.ಪಂಗಡದ ಮಾನವ ಅಬಿವೃದ್ದಿ ಸೂಚ್ಯಂಕದ ಕುರಿತು ದತ್ತಾಂಶವಿದೆಯೇ?
  • ಮಾನವ ಅಬಿವೃದ್ದಿ ಆದಾಯದ ಅಂತರದ ಕುರಿತು ದತ್ತಾಂಶ ಸಂಚಯವಿದೆಯೇ?
  • ಉದಾಹರಣೆಗೆ ಇತರ ಜಾತಿಗಳಿಗೆ ಹೋಲಿಸಿದರೆ ಪ.ಜಾತಿ/ಪ.ಪಂಗಡದ 100 ಮಕ್ಕಳ ಪೈಕೆ ಎಶ್ಟು ಮಕ್ಕಳು ಒಂದನೆ ತರಗತಿಗೆ ದಾಖಲಾಗಿದ್ದಾರೆ?

ಇದನ್ನೂ ಓದಿ: ಮೊದಲ ದಲಿತ ರಾಷ್ಟ್ರಪತಿ ಕೆ.ಆರ್ ನಾರಾಯಣನ್ ಸ್ಮರಣೆ: ಡಾ.ಬಿ.ಪಿ.ಮಹೇಶ ಚಂದ್ರ ಗುರು

ಆದರೆ ‘ದಬಸ’ ಪ್ರಕಾರ ‘ಅಬಿವೃದ್ದಿಯಲ್ಲಿನ ಅಂತರ’ದ ಕುರಿತು ಯಾವುದೇ ದಾಖಲೆಗಳಿಲ್ಲ, ದತ್ತಾಂಶ ಸಂಚಯಗಳಿಲ್ಲ. ಅಂದರೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಗೆ ಹಣಕಾಸು ಹಂಚಿಕೆ ಮಾಡುವಾಗ ಆ ಸಮುದಾಯಗಳ ಜನಸಂಖ್ಯೆಯ ಪ್ರಮಾಣವೆಶ್ಟು? ಅದರಲ್ಲಿ ಅಗತ್ಯವಿರುವ ಪ್ರಮಾಣವೆಶ್ಟು? ಮುಂತಾದ ಸಂಗತಿಗಳ ಕುರಿತು ಸರಕಾರಕ್ಕೆ ಯಾವುದೇ ಮಾಹಿತಿಯಿಲ್ಲ. ಸಂಶೋದನೆ ನೆರವು, ಪ.ಜಾತಿ/ಪ.ಪಂಗಡಗಳಿಗೆ ವೈದ್ಯಕೀಯ ಶಿಕ್ಷಣ ಸಂಸ್ಥೆಗಳು, ಪ.ಜಾತಿ/ಪ.ಪಂಗಡ ಪಂಚಾಯತ್‌ಗೆ ಅನುದಾನ, ಪುಸ್ತಕ ಅನುದಾನ, ಕೌಶಲ್ಯ ಅಬಿವೃದ್ದಿ ಮುಂತಾದ ಹೊಸ ಬಗೆಯ ಕಾರ್ಯಯೋಜನೆಗಳಿಗೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಆದ್ಯತೆಯ ಮೇರೆಗೆ ಕೆಲಸ ಮಾಡಬೇಕಿತ್ತು. ಆದರೆ ಪ್ರಬುತ್ವಕ್ಕೆ ಇದರ ಖಬರೂ ಸಹ ಇಲ್ಲ.

ಮುಂದೇನು?

ದಲಿತ ಸಂಘಟನೆಗಳು, ಎಡ ಸಂಘಟನೆಗಳು, ಪ್ರಗತಿಪರ ವಿದ್ಯಾರ್ಥಿ ಸಂಘಟನೆಗಳು ಒಗ್ಗಟ್ಟಾಗಿ ಈ ಕುರಿತು ತುರ್ತಾಗಿ ಸಮಾಲೋಚನೆ ಸಬೆ ನಡೆಸಬೇಕು ಮತ್ತು ಪ್ರಬುತ್ವದ ಈ ತಾರತಮ್ಯ ಮತ್ತು ವಂಚನೆಯ ವಿರುದ್ದ ಜನಾಂದೋಲನ ರೂಪಿಸಬೇಕು, ಇದನ್ನು ಹೊರತುಪಡಿಸಿ ಮತ್ಯಾವುದೇ ಮಾರ್ಗಗಳಿಲ್ಲ.

ಇದನ್ನೂ ಓದಿ: ಕೇರಳ: ದಲಿತ ವ್ಯಕ್ತಿಯನ್ನು ಅರ್ಚಕರಾಗಿ ನೇಮಿಸುತ್ತಿರುವ ದೇವಸ್ವಂ ಬೋರ್ಡ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...