Homeಅಂತರಾಷ್ಟ್ರೀಯಆಕ್ಷೇಪಾರ್ಹ ಕಾರ್ಯಕ್ರಮ: ರಿಪಬ್ಲಿಕ್ ಟಿವಿಗೆ 20,000 ಪೌಂಡ್ ದಂಡ ವಿಧಿಸಿದ ಬ್ರಿಟನ್!

ಆಕ್ಷೇಪಾರ್ಹ ಕಾರ್ಯಕ್ರಮ: ರಿಪಬ್ಲಿಕ್ ಟಿವಿಗೆ 20,000 ಪೌಂಡ್ ದಂಡ ವಿಧಿಸಿದ ಬ್ರಿಟನ್!

2019 ಸೆಪ್ಟಂಬರ್ 6 ರಂದು "ಪೂಚ್ ತಾ ಹೈ ಭಾರತ್" ಎನ್ನುವ ಕಾರ್ಯಕ್ರಮದಲ್ಲಿ ಅರ್ನಾಬ್‌ ಗೋಸ್ವಾಮಿ ಮತ್ತು ಅಂದಿನ ಚರ್ಚೆಯ ಪ್ಯಾನೆಲ್‌ನಲ್ಲಿದ್ದವರು ಆಕ್ಷೇಪಾರ್ಹ ಚರ್ಚೆಯನ್ನು ನಡೆಸಿದ್ದರು.

- Advertisement -
- Advertisement -

ರಿಪಬ್ಲಿಕ್ ಟಿವಿಯು ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡುವ ಮತ್ತು ದ್ವೇಷ ಹರಡುವ ಕಾರ್ಯಕ್ರಮಗಳನ್ನು ಪ್ರಸಾರ ಮಾಡಿದೆ ಎಂದು ಬ್ರಿಟನ್‌ನ ಸಂವಹನ ನಿಯಂತ್ರಣ ಕಚೇರಿಯು ಅರ್ನಾಬ್‌ ಗೋಸ್ವಾಮಿಗೆ 20,000 ಪೌಂಡ್‌ ದಂಡ ವಿಧಿಸಿದೆ.

ಆಕ್ರಮಣಕಾರಿ, ಆಕ್ಷೇಪಾರ್ಹ, ಒಂದು ಗುಂಪು ಅಥವಾ ಸಮುದಾಯದ ಧಾರ್ಮಿಕ ಭಾವನೆಗಳನ್ನು ಅವಹೇಳನ ಮಾಡಿದ ಪ್ರಕರಣದಡಿ ಈ ದಂಡವನ್ನು ವಿಧಿಸಲಾಗಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಇದನ್ನೂ ಓದಿ: ಅರ್ನಾಬ್, ಕಂಗನಾ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದ ಶಿವಸೇನೆ ಶಾಸಕನ ಮನೆ ಮೇಲೆ ಇ.ಡಿ ದಾಳಿ!

2019 ಸೆಪ್ಟಂಬರ್ 6 ರಂದು “ಪೂಚ್ ತಾ ಹೈ ಭಾರತ್” ಎನ್ನುವ ಕಾರ್ಯಕ್ರಮದಲ್ಲಿ ಅರ್ನಾಬ್‌ ಗೋಸ್ವಾಮಿ ಮತ್ತು ಅಂದಿನ ಚರ್ಚೆಯ ಪ್ಯಾನೆಲ್‌ನಲ್ಲಿದ್ದವರು ಆಕ್ಷೇಪಾರ್ಹ ಚರ್ಚೆಯನ್ನು ನಡೆಸಿದ್ದಾರೆ ಎಂದು ವರದಿಯು ತಿಳಿಸಿದೆ.

ಚಂದ್ರಯಾನ-2ರ ಕುರಿತು ಕಾರ್ಯಕ್ರಮ ನಡೆಸುವ ವೇಳೆ ಪಾಕಿಸ್ತಾನ ಕುರಿತಂತೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆಂದು ದಂಡ ವಿಧಿಸಲಾಗಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಅರ್ನಾಬ್‌ ಗೋಸ್ವಾಮಿ, “ಅವರ ವಿಜ್ಞಾನಿಗಳು, ಅವರ ಡಾಕ್ಟರ್‌ಗಳು, ಅವರ ನಾಯಕರು, ಅವರ ರಾಜಕೀಯ ಮುಖಂಡರು ಎಲ್ಲರೂ ಭಯೋತ್ಪಾದಕರು. ಅವರ ಕ್ರೀಡಾಪಟುಗಳು ಕೂಡಾ ಭಯೋತ್ಪಾದಕರು. ಪಾಕಿಸ್ತಾನದಲ್ಲಿರುವ ಪ್ರತಿಯೊಂದು ಮಕ್ಕಳು ಕೂಡಾ ಭಯೋತ್ಪಾದಕರು” ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಆತನ ಚಾನೆಲ್ ನೋಡುವುದೇ ಇಲ್ಲ: ಅರ್ನಾಬ್‌ಗೆ ಜಾಮೀನು ನೀಡಿದ ನ್ಯಾಯಮೂರ್ತಿ ಹೇಳಿಕೆ!

ಅಲ್ಲದೇ ಪ್ಯಾನೆಲ್‌ನಲ್ಲಿದ್ದ ಇತರರು ಕೂಡಾ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಈ ಕಾರಣದಿಂದಾಗಿ ರಿಪಬ್ಲಿಕ್ ಟಿವಿ ಮುಖ್ಯಸ್ಥರ ವಿರುದ್ಧ ಬ್ರಿಟನ್‌ನ ಸಂವಹನ ನಿಯಂತ್ರಣ ಕಚೇರಿಯು 20,000 ಪೌಂಡ್ ದಂಡ ವಿಧಿಸಿದೆ ಎಂದು ತಿಳಿದು ಬಂದಿದೆ. ಇದು ಭಾರತದ ಕರೆನ್ಸಿಯಲ್ಲಿ ಸುಮಾರು 19 ಲಕ್ಷವಾಗುತ್ತದೆ.

ಭಾರತದಲ್ಲಿಯೂ ಸಹ ರಿಪಬ್ಲಿಕ್ ಟಿವಿ ಮತ್ತು ಅರ್ನಾಬ್ ಗೋಸ್ವಾಮಿಯ ಮೇಲೆ ಸಾಕಷ್ಟು ಪ್ರಕರಣಗಳು ದಾಖಲಾಗಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣವೊಂದರಲ್ಲಿ ಇತ್ತೀಚೆಗೆ ಬಂಧನಕ್ಕೂ ಒಳಗಾಗಿದ್ದರು.


ಇದನ್ನೂ ಓದಿ: ನಾನೊಬ್ಬ ಪತ್ರಕರ್ತೆ, ಹಾಗಾಗಿ ಅರ್ನಾಬ್ ಪರ ನಿಲ್ಲುವುದಿಲ್ಲ!- ಅರ್ಫಾ ಖಾನಮ್ ಶೇರ್ವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...