Homeಮುಖಪುಟಡಿಡಿಸಿ ಚುನಾವಣೆ: ಗುಪ್ಕರ್​ ಮೈತ್ರಿಕೂಟಕ್ಕೆ ಭರ್ಜರಿ ಗೆಲುವು - ಪಕ್ಷೇತರರು ಕಿಂಗ್ ಮೇಕರ್?

ಡಿಡಿಸಿ ಚುನಾವಣೆ: ಗುಪ್ಕರ್​ ಮೈತ್ರಿಕೂಟಕ್ಕೆ ಭರ್ಜರಿ ಗೆಲುವು – ಪಕ್ಷೇತರರು ಕಿಂಗ್ ಮೇಕರ್?

"ಕಳೆದ ವರ್ಷ ಆಗಸ್ಟ್‌ನಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರದ ನಿರ್ಧಾರವನ್ನು ಜಮ್ಮು ಮತ್ತು ಕಾಶ್ಮೀರದ ಜನರು ತಿರಸ್ಕರಿಸಿದ್ದಾರೆ ಎಂಬುದನ್ನು ಈ ಚುನಾವಣಾ ಫಲಿತಾಂಶಗಳು ಸ್ಪಷ್ಟಪಡಿಸಿವೆ- ಗುಪ್ಕರ್ ಮೈತ್ರಿಕೂಟ

- Advertisement -
- Advertisement -

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದಾದ ನಂತರ ನಡೆದ ಮೊದಲ ಡಿಸ್ಟ್ರಿಕ್ಟ್ ಡೆವಲಪ್‌ಮೆಂಟ್‌ ಕೌನ್ಸಿಲ್(ಡಿಡಿಸಿ) ಸ್ಥಳೀಯ ಚುನಾವಣೆಯಲ್ಲಿ ಫಾರೂಕ್​​ ಅಬ್ದುಲ್ಲಾ ನೇತೃತ್ವದ ಗುಪ್ಕರ್​ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ.

ಒಟ್ಟು 20 ಜಿಲ್ಲೆಗಳಲ್ಲಿ ನಡೆದ ಡಿಡಿಸಿ ಚುನಾವಣೆಯಲ್ಲಿ ಎನ್‌ಸಿ, ಪಿಡಿಪಿ ಸೇರಿದಂತೆ ಏಳು ಪ್ರಾದೇಶಿಕ ಪಕ್ಷಗಳ ಗುಂಪಾಗಿರುವ ಗುಪ್ಕರ್ ಮೈತ್ರಿಕೂಟ 13 ಜಿಲ್ಲೆಗಳಲ್ಲಿ ಜಯಗಳಿಸಿದೆ. ಜಮ್ಮುವಿನ ಆರು ಜಿಲ್ಲೆಗಳಲ್ಲಿ ಬಿಜೆಪಿ ಜಯ ಸಾಧಿಸಿದೆ.

ಪ್ರತಿ ಜಿಲ್ಲೆಯಲ್ಲಿ 14 ಸ್ಥಾನಗಳಂತೆ ಎಲ್ಲಾ 20 ಜಿಲ್ಲೆಗಳೂ ಸೇರಿ ಜಮ್ಮು ಕಾಶ್ಮೀರದ ಒಟ್ಟು 280 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಗುಪ್ಕರ್ ಮೈತ್ರಿಕೂಟ 110 ಸ್ಥಾನಗಳನ್ನು ಪಡೆದಿದೆ. ಆದರೆ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು 74 ಸ್ಥಾನಗಳನ್ನು ಪಡೆದಿದೆ. ಕಾಂಗ್ರೆಸ್ 27 ಸ್ಥಾನಗಳನ್ನು ಗೆದ್ದು ತೃಪ್ತಿ ಪಟ್ಟುಕೊಂಡಿದೆ.

ಇದನ್ನೂ ಓದಿ: ಜಮ್ಮು ಕಾಶ್ಮೀರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಗುಪ್ಕರ್ ಒಕ್ಕೂಟಕ್ಕೆ ಸ್ಪಷ್ಟ ಮುನ್ನಡೆ, ಬಿಜೆಪಿಗೆ ಹಿನ್ನಡೆ

49 ಸ್ಥಾನಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಜಯ ಸಾಧಿಸಿದ್ದು, ಇವರು ಕಿಂಗ್ ಮೇಕರ್‌ಗಳಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಒಂದು ಜಿಲ್ಲೆಯ ಫಲಿತಾಂಶ ಹೊರಬೀಳುವುದು ಬಾಕಿ ಇದೆ.

ಕಾಶ್ಮೀರದಲ್ಲಿ ಫಾರೂಕ್ ಅಬ್ದುಲ್ಲಾ ನೇತೃತ್ವದ ಮೈತ್ರಿ 72 ಸ್ಥಾನಗಳನ್ನು ಗಳಿಸಿದರೆ, ಬಿಜೆಪಿ ಮೂರು ಸ್ಥಾನಗಳನ್ನು, ಕಾಂಗ್ರೆಸ್​​ 10 ಸ್ಥಾನಗಳನ್ನ ಗೆದ್ದುಕೊಂಡಿದೆ. ಗುಪ್ಕರ್​ ಮೈತ್ರಿಕೂಟ 9 ಜಿಲ್ಲಾ ಮಂಡಳಿಗಳ ಉಸ್ತುವಾರಿ ವಹಿಸಿಕೊಂಡರೆ, ಸ್ವತಂತ್ರ ಅಭ್ಯರ್ಥಿಗಳು ಗೆದ್ದಿರುವ ಶ್ರೀನಗರ ಜಿಲ್ಲಾ ಮಂಡಳಿಗಳ ಉಸ್ತುವಾರಿಯ ಕುರಿತು ಇನ್ನೂ ತೀರ್ಮಾನವಾಗಿಲ್ಲ.

ಜಮ್ಮು ಪ್ರಾಂತ್ಯದಲ್ಲಿ ಬಿಜೆಪಿ 71 ಸ್ಥಾನಗಳನ್ನು ಗೆದ್ದಿದ್ದು, ಜಮ್ಮು, ಉಧಂಪುರ್, ಸಾಂಬಾ, ಕಥುವಾ, ರಿಯಾಸಿ ಮತ್ತು ದೋಡಾದಲ್ಲಿ ಗೆದ್ದಿದೆ. ಗುಪ್ಕರ್ ಕೂಟ 35 ಸ್ಥಾನ, ಕಾಂಗ್ರೆಸ್ 17 ಸ್ಥಾನಗಳಲ್ಲಿ ಜಯ ಸಾಧಿಸಿದೆ.

ಇದನ್ನೂ ಓದಿ: ರೈತರ ಸಮಸ್ಯೆ ಬಗೆಹರಿಯುವವರೆಗೂ ಇಂಗ್ಲೆಂಡ್ ಪ್ರಧಾನಿ ಭಾರತಕ್ಕೆ ಬರುವುದು ಬೇಡ: ರೈತ ಮುಖಂಡರ ಪತ್ರ

49 ಸ್ಥಾನಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಜಯ ಸಾಧಿಸಿದ್ದು, ಅವರು ಯಾವ ಕಡೆ ಹೊರಳುತ್ತಾರೆ ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಪಕ್ಷೇತರರ ಸಂಖ್ಯೆ ಕಾಂಗ್ರೆಸ್ ಮತ್ತು ಪಿಡಿಪಿಗಿಂತ ಹೆಚ್ಚಾಗಿದೆ.

“ಕಳೆದ ವರ್ಷ ಆಗಸ್ಟ್‌ನಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರದ ನಿರ್ಧಾರವನ್ನು ಜಮ್ಮು ಮತ್ತು ಕಾಶ್ಮೀರದ ಜನರು ತಿರಸ್ಕರಿಸಿದ್ದಾರೆ ಎಂಬುದನ್ನು ಈ ಚುನಾವಣಾ ಫಲಿತಾಂಶಗಳು ಸ್ಪಷ್ಟಪಡಿಸಿವೆ” ಎಂದು ಗುಪ್ಕರ್‌ ಮೈತ್ರಿಕೂಟದ ಸದಸ್ಯರಾದ ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಹೇಳಿದ್ದಾರೆ.

ಇನ್ನು ಡಿಡಿಸಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಕೆಲವೇ ದಿನಗಳಲ್ಲಿ ಎನ್‌ಐಎಯಿಂದ ಬಂಧನಕ್ಕೆ ಒಳಗಾಗಿದ್ದ ಪೀಪಲ್‌ ಡೆಮಾಕ್ರಟಿಕ್‌ ಪಕ್ಷದ (ಪಿಡಿಪಿ) ಯುವ ಘಟಕದ ಅಧ್ಯಕ್ಷ ವಹೀದ್ ಪರ್ರಾ ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ ಜಯಗಳಿಸಿದ್ದಾರೆ.


ಇದನ್ನೂ ಓದಿ: ಡಿಡಿಸಿ ಚುನಾವಣೆ: NIA ಬಂಧಿಸಿದ್ದ ಪಿಡಿಪಿಯ ವಹೀದ್‌ ಪರ್ರಾಗೆ ಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...