Homeಮುಖಪುಟಡಿಡಿಸಿ ಚುನಾವಣೆ: ಗುಪ್ಕರ್​ ಮೈತ್ರಿಕೂಟಕ್ಕೆ ಭರ್ಜರಿ ಗೆಲುವು - ಪಕ್ಷೇತರರು ಕಿಂಗ್ ಮೇಕರ್?

ಡಿಡಿಸಿ ಚುನಾವಣೆ: ಗುಪ್ಕರ್​ ಮೈತ್ರಿಕೂಟಕ್ಕೆ ಭರ್ಜರಿ ಗೆಲುವು – ಪಕ್ಷೇತರರು ಕಿಂಗ್ ಮೇಕರ್?

"ಕಳೆದ ವರ್ಷ ಆಗಸ್ಟ್‌ನಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರದ ನಿರ್ಧಾರವನ್ನು ಜಮ್ಮು ಮತ್ತು ಕಾಶ್ಮೀರದ ಜನರು ತಿರಸ್ಕರಿಸಿದ್ದಾರೆ ಎಂಬುದನ್ನು ಈ ಚುನಾವಣಾ ಫಲಿತಾಂಶಗಳು ಸ್ಪಷ್ಟಪಡಿಸಿವೆ- ಗುಪ್ಕರ್ ಮೈತ್ರಿಕೂಟ

- Advertisement -
- Advertisement -

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದಾದ ನಂತರ ನಡೆದ ಮೊದಲ ಡಿಸ್ಟ್ರಿಕ್ಟ್ ಡೆವಲಪ್‌ಮೆಂಟ್‌ ಕೌನ್ಸಿಲ್(ಡಿಡಿಸಿ) ಸ್ಥಳೀಯ ಚುನಾವಣೆಯಲ್ಲಿ ಫಾರೂಕ್​​ ಅಬ್ದುಲ್ಲಾ ನೇತೃತ್ವದ ಗುಪ್ಕರ್​ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ.

ಒಟ್ಟು 20 ಜಿಲ್ಲೆಗಳಲ್ಲಿ ನಡೆದ ಡಿಡಿಸಿ ಚುನಾವಣೆಯಲ್ಲಿ ಎನ್‌ಸಿ, ಪಿಡಿಪಿ ಸೇರಿದಂತೆ ಏಳು ಪ್ರಾದೇಶಿಕ ಪಕ್ಷಗಳ ಗುಂಪಾಗಿರುವ ಗುಪ್ಕರ್ ಮೈತ್ರಿಕೂಟ 13 ಜಿಲ್ಲೆಗಳಲ್ಲಿ ಜಯಗಳಿಸಿದೆ. ಜಮ್ಮುವಿನ ಆರು ಜಿಲ್ಲೆಗಳಲ್ಲಿ ಬಿಜೆಪಿ ಜಯ ಸಾಧಿಸಿದೆ.

ಪ್ರತಿ ಜಿಲ್ಲೆಯಲ್ಲಿ 14 ಸ್ಥಾನಗಳಂತೆ ಎಲ್ಲಾ 20 ಜಿಲ್ಲೆಗಳೂ ಸೇರಿ ಜಮ್ಮು ಕಾಶ್ಮೀರದ ಒಟ್ಟು 280 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಗುಪ್ಕರ್ ಮೈತ್ರಿಕೂಟ 110 ಸ್ಥಾನಗಳನ್ನು ಪಡೆದಿದೆ. ಆದರೆ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು 74 ಸ್ಥಾನಗಳನ್ನು ಪಡೆದಿದೆ. ಕಾಂಗ್ರೆಸ್ 27 ಸ್ಥಾನಗಳನ್ನು ಗೆದ್ದು ತೃಪ್ತಿ ಪಟ್ಟುಕೊಂಡಿದೆ.

ಇದನ್ನೂ ಓದಿ: ಜಮ್ಮು ಕಾಶ್ಮೀರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಗುಪ್ಕರ್ ಒಕ್ಕೂಟಕ್ಕೆ ಸ್ಪಷ್ಟ ಮುನ್ನಡೆ, ಬಿಜೆಪಿಗೆ ಹಿನ್ನಡೆ

49 ಸ್ಥಾನಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಜಯ ಸಾಧಿಸಿದ್ದು, ಇವರು ಕಿಂಗ್ ಮೇಕರ್‌ಗಳಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಒಂದು ಜಿಲ್ಲೆಯ ಫಲಿತಾಂಶ ಹೊರಬೀಳುವುದು ಬಾಕಿ ಇದೆ.

ಕಾಶ್ಮೀರದಲ್ಲಿ ಫಾರೂಕ್ ಅಬ್ದುಲ್ಲಾ ನೇತೃತ್ವದ ಮೈತ್ರಿ 72 ಸ್ಥಾನಗಳನ್ನು ಗಳಿಸಿದರೆ, ಬಿಜೆಪಿ ಮೂರು ಸ್ಥಾನಗಳನ್ನು, ಕಾಂಗ್ರೆಸ್​​ 10 ಸ್ಥಾನಗಳನ್ನ ಗೆದ್ದುಕೊಂಡಿದೆ. ಗುಪ್ಕರ್​ ಮೈತ್ರಿಕೂಟ 9 ಜಿಲ್ಲಾ ಮಂಡಳಿಗಳ ಉಸ್ತುವಾರಿ ವಹಿಸಿಕೊಂಡರೆ, ಸ್ವತಂತ್ರ ಅಭ್ಯರ್ಥಿಗಳು ಗೆದ್ದಿರುವ ಶ್ರೀನಗರ ಜಿಲ್ಲಾ ಮಂಡಳಿಗಳ ಉಸ್ತುವಾರಿಯ ಕುರಿತು ಇನ್ನೂ ತೀರ್ಮಾನವಾಗಿಲ್ಲ.

ಜಮ್ಮು ಪ್ರಾಂತ್ಯದಲ್ಲಿ ಬಿಜೆಪಿ 71 ಸ್ಥಾನಗಳನ್ನು ಗೆದ್ದಿದ್ದು, ಜಮ್ಮು, ಉಧಂಪುರ್, ಸಾಂಬಾ, ಕಥುವಾ, ರಿಯಾಸಿ ಮತ್ತು ದೋಡಾದಲ್ಲಿ ಗೆದ್ದಿದೆ. ಗುಪ್ಕರ್ ಕೂಟ 35 ಸ್ಥಾನ, ಕಾಂಗ್ರೆಸ್ 17 ಸ್ಥಾನಗಳಲ್ಲಿ ಜಯ ಸಾಧಿಸಿದೆ.

ಇದನ್ನೂ ಓದಿ: ರೈತರ ಸಮಸ್ಯೆ ಬಗೆಹರಿಯುವವರೆಗೂ ಇಂಗ್ಲೆಂಡ್ ಪ್ರಧಾನಿ ಭಾರತಕ್ಕೆ ಬರುವುದು ಬೇಡ: ರೈತ ಮುಖಂಡರ ಪತ್ರ

49 ಸ್ಥಾನಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಜಯ ಸಾಧಿಸಿದ್ದು, ಅವರು ಯಾವ ಕಡೆ ಹೊರಳುತ್ತಾರೆ ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಪಕ್ಷೇತರರ ಸಂಖ್ಯೆ ಕಾಂಗ್ರೆಸ್ ಮತ್ತು ಪಿಡಿಪಿಗಿಂತ ಹೆಚ್ಚಾಗಿದೆ.

“ಕಳೆದ ವರ್ಷ ಆಗಸ್ಟ್‌ನಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರದ ನಿರ್ಧಾರವನ್ನು ಜಮ್ಮು ಮತ್ತು ಕಾಶ್ಮೀರದ ಜನರು ತಿರಸ್ಕರಿಸಿದ್ದಾರೆ ಎಂಬುದನ್ನು ಈ ಚುನಾವಣಾ ಫಲಿತಾಂಶಗಳು ಸ್ಪಷ್ಟಪಡಿಸಿವೆ” ಎಂದು ಗುಪ್ಕರ್‌ ಮೈತ್ರಿಕೂಟದ ಸದಸ್ಯರಾದ ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಹೇಳಿದ್ದಾರೆ.

ಇನ್ನು ಡಿಡಿಸಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಕೆಲವೇ ದಿನಗಳಲ್ಲಿ ಎನ್‌ಐಎಯಿಂದ ಬಂಧನಕ್ಕೆ ಒಳಗಾಗಿದ್ದ ಪೀಪಲ್‌ ಡೆಮಾಕ್ರಟಿಕ್‌ ಪಕ್ಷದ (ಪಿಡಿಪಿ) ಯುವ ಘಟಕದ ಅಧ್ಯಕ್ಷ ವಹೀದ್ ಪರ್ರಾ ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ ಜಯಗಳಿಸಿದ್ದಾರೆ.


ಇದನ್ನೂ ಓದಿ: ಡಿಡಿಸಿ ಚುನಾವಣೆ: NIA ಬಂಧಿಸಿದ್ದ ಪಿಡಿಪಿಯ ವಹೀದ್‌ ಪರ್ರಾಗೆ ಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...