Homeಅಂಕಣಗಳುಕಾಂಗ್ರೆಸ್ ಪ್ರಣಾಳಿಕೆ: ಮಾಸಿದ ಗೋಡೆಯ ಮೇಲಿನ ಹಳೆ ಸಿನೆಮಾ ಪೋಸ್ಟರ್

ಕಾಂಗ್ರೆಸ್ ಪ್ರಣಾಳಿಕೆ: ಮಾಸಿದ ಗೋಡೆಯ ಮೇಲಿನ ಹಳೆ ಸಿನೆಮಾ ಪೋಸ್ಟರ್

- Advertisement -
- Advertisement -

| ಸುರೇಶ ಕೆ.ಪಿ |

ಕಾಂಗ್ರೆಸ್ ತನ್ನ ಪ್ರಣಾಲಿಕೆ ಬಿಡುಗಡೆ ಮಾಡಿದೆ. ಕಾಂಗ್ರೆಸ್ಸಿನ  ಸದ್ಯದ ದುಸ್ಥಿತಿ ನೋಡಿದರೆ ಈ ಪ್ರಣಾಳಿಕೆಯನ್ನು ಯಾರೂ  ಗಂಭೀರವಾಗಿ  ತೆಗೆದುಕೊಳ್ಳಲಾರರು..  ಭಾಜಪಕ್ಕೆ ಪ್ರಣಾಳಿಕೆಯ ಅಗತ್ಯವೇ ಇದ್ದಂತಿಲ್ಲ! ( ದಮನ ಮಾಡಲು ಯಾವ ಪ್ರಣಾಳಿಕೆ ಬೇಕು?) ಪ್ರಾದೇಶಿಕ ಪಕ್ಷಗಳ ಪ್ರಣಾಳಿಕೆ ಹೇಗಿದೆಯೆಂದು ನಮಗೆ ಗೊತ್ತಿಲ್ಲ.!!

ಆದರೆ ಈ ಕಾಂಗ್ರೆಸ್ ಪ್ರಣಾಳಿಕೆಯ ಕೆಲವೊಂದು ಅಂಶವನ್ನು ಅಕ್ಷರ ಶತ್ರು ಭಾಜಪ ಹಾಗೂ  ಮೋದಿ ಕಾಪಿ ಚೀಟಿ ಮಾಡಬಹುದು ಅಷ್ಟರ ಮಟ್ಟಿಗೆ ಈ ಪ್ರಣಾಳಿಕೆ ಭಾಜಪದ ಗಮನ ಸೆಳೆದೀತು!!

‘ಉದ್ಯೋಗ ಸೃಷ್ಠಿ’ ಮತ್ತು ‘ಕನಿಷ್ಠ  ಆದಾಯ ಬೆಂಬಲ’ಗಳೆರಡು ಕಾಂಗ್ರೆಸ್ಸಿನ ಈ  ಬಾರಿಯ ಪ್ರಮುಖ ಘೋಷಣೆಗಳು.

ಉದ್ಯೋಗ ಸೃಷ್ಟಿ ವಿಚಾರದಲ್ಲಿ ಕಾಂಗ್ರೆಸ್ ಕೆಲವು ಭರವಸೆಗಳನ್ನು ನೀಡಿದೆ.

*     ಖಾಲಿ ಇರುವ 4 ಲಕ್ಷ ಸರ್ಕಾರೀ ಹುದ್ದೆಗಳ ಭರ್ತಿ (ಮುಂದಿನ ಮಾರ್ಚ್ ಒಳಗೆ)

*     ಗ್ರಾಮ ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ 10 ಲಕ್ಷ ಹುದ್ದೆ ಸೃಷ್ಟಿ

ಇವೆರಡೂ ಕಣ್ಣು ಕೋರೈಸುವಂಥಾ ಸಂಗತಿಗಳು.  ಆದರೆ ಇವು ಮೂಲತಃ ರಾಜ್ಯ- ಕೇಂದ್ರ ಜಂಟಿ ಕಾರ್ಯಾಚರಣೆ!!  ಸರ್ಕಾರೀ ವೆಚ್ಚ ಕಡಿತಗೊಳಿಸುವ ವಚನ  ಕೊಟ್ಟ ಮೇಲೆಯೇ ವಿಶ್ವ ಬ್ಯಾಂಕ್ ನಮಗೆ ಸಾಲ ಕೊಟ್ಟಿದ್ದು!! ಜಗತ್ತಿನ ಯಾವ ದೇಶದಲ್ಲೂ  ಸರ್ಕಾರಗಳು ಆರೋಗ್ಯ ಮತ್ತು ಶಿಕ್ಷಣ  ಕ್ಷೇತ್ರ ಹೊರತುಪಡಿಸಿ  ಉಳಿದಂತೆ  ಹುದ್ದೆ ಹೆಚ್ಚಿಸುತ್ತಾ ಹೋದ ಉದಾಹರಣೆ ಇಲ್ಲ!!   ಆದ್ದರಿಂದ ಈ ಭರವಸೆ ಎಷ್ಟು ವಿಶ್ವಾಸಾರ್ಹ ಎಂಬುದು ಅವರವರಿಗೆ ಬಿಟ್ಟಿದ್ದು.

ಕಾಂಗ್ರೆಸ್ಸಿನ ಉಳಿದ ಉದ್ಯೋಗ ಸೃಷ್ಟಿಯ ವಿವರಗಳು ಜೊಲ್ಲು ತುಂಬಿದ ಬಾಯಲ್ಲಿ ವಾದ್ಯ ಊದಿದ ಹಾಗಿದೆ..!! ಉದಾ: ಕಡಿಮೆ ಕೌಶಲ್ಯದ ಉದ್ಯೋಗ ಸೃಷ್ಟಿಗಾಗಿ ‘ಜಲಾಶ್ರಯಗಳ  ಪುನಶ್ಚೇತನ ಮಿಷನ್’, ‘ಬೀಳುಭೂಮಿ ಪುನಶ್ಚೇತನ ಮಿಶನ್’ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಲಕ್ಷಾಂತರ ಉದ್ಯೋಗ ಸೃಷ್ಟಿಯ ನೀಲ ನಕ್ಷೆ ಕಾಂಗ್ರೆಸ್ ಮುಂದಿಟ್ಟಿದೆ. ಹಾಗೇ 2500 ಜನಸಂಖ್ಯೆ ಮೀರಿದ ಹಳ್ಳಿಗಳಲ್ಲಿ 2ನೇ ಆಶಾ ಕಾರ್ಯಕರ್ತೆಯರ ನೇಮಕ.

ಇವೆಲ್ಲವೂ ತಾತ್ಕಾಲಿಕ ಮತ್ತು ಅಭದ್ರ ಉದ್ಯೋಗಗಳು ಎಂದು ಕಾಂಗ್ರೆಸ್ಸಿಗೆ ಗೊತ್ತು.  ಅದು ಕೂರಲು ಆಶಿಸುತ್ತಿರುವುದು ಮೋದಿ ಕೂತ ಕುರ್ಚಿಯಲ್ಲೇ  ತಾನೇ.. ಆದ್ದರಿಂದ ಮೂಲತಃ ಉದ್ಯೋಗ ಸೃಷ್ಟಿಯ ಸೂಚಿಗಳನ್ನಿಟ್ಟಾಗಲೂ ಎಲ್ಲೂ ಸುಭದ್ರ ಖಾಯಂ ಉದ್ಯೋಗ ಅನ್ನುವುದನ್ನು ತಪ್ಪಿಯೂ ಹೇಳಿಲ್ಲ!!

ಆಟದ ಖದರು ಬದಲಾಗುತ್ತೆ ಅಂತ ಕಾಂಗ್ರೆಸ್  ನಂಬಿಕೆ ಇಟ್ಟುಕೊಂಡಿರುವುದು ರೂ 72000/-ದ  ಕನಿಷ್ಠ ಆದಾಯದ ಬೆಂಬಲ ಘೋಷಣೆ ಮೇಲೆ.

ಪ್ರಣಾಳಿಕೆಪ್ರಕಾರ ಐದು ಕೋಟಿ ಕುಟುಂಬಗಳಿಗೆ ಈ ಸಹಾಯ ಸಿಗಲಿದೆ. ಆದರೆ  ಯಥಾಪ್ರಕಾರದ ಜಾರಿಕೊಳ್ಳುವ ಜಾಣ ವಿವರಗಳು ತದನಂತರ ಕಾಣುತ್ತದೆ.  ಪ್ರಣಾಳಿಕೆ ಪ್ರಕಾರ ಇದು ರಾಜ್ಯ- ಕೇಂದ್ರದ ಜಂಟಿ ಕಾರ್ಯಕ್ರಮ. ‘ಕುಟುಂಬಗಳು ಬಡತನದಿಂದ ಹೊರಬಂದ ಮೇಲೆ ಸತತವಾಗಿ ಸರ್ಕಾರಕ್ಕೆ ಆರ್ಥಿಕವಾಗಿ ಹೊರೆಯಾಗದು’ ಎನ್ನುತ್ತೆ ಪ್ರಣಾಳಿಕೆ.   ಅಂದರೆ ಪ್ರಾಯಶಃ ಕಾಲಮಿತಿಯ ಬೆಂಬಲ ಅಥವಾ ಶರತ್ತುಗಳನ್ನಿಟ್ಟುಕೊಂಡು  ಕುಟುಂಬಗಳಿಗೆ ಸಹಾಯ ಸಿಗಬಹುದು.  ಉದಾ: ಕುಟುಂಬದ ಯಾರಿಗೂ ಉದ್ಯೋಗ ಇಲ್ಲ ಎಂಬ ಪ್ರಮಾಣ ಪತ್ರ. ಉದ್ಯೋಗ ಸಿಕ್ಕಿದ ತಕ್ಷಣ ಬೆಂಬಲ ಸ್ಥಗಿತ ಹೀಗೆ..

ಇಂಥಾ ಕೇವಿಯೆಟ್‍ಗಳಿಲ್ಲದೇ  ಈ ಸಾರ್ವತ್ರಿಕ ಬೆಂಬಲದ ಘೋಷಣೆ ಕಾಂಗ್ರೆಸ್ ಬಿಡಿ, ಸಾಕ್ಷಾತ್ ಲಕ್ಷ್ಮೀಪತಿ ತಿಮ್ಮಪ್ಪನೂ ಮಾಡಲಾರ. ಅಂದರೆ ಇಂಥಾ ಝಲಕ್ ಇರುವ ಯೋಜನೆಯೇ ಗಿಲೀಟು ಅನ್ನಿಸತೊಡಗಿದರೆ  ಉಳಿದವು ಹೇಗಿರಬಹುದು?

ಉಳಿದವು? ಕಾಂಗ್ರೆಸ್ಸಿನ ಬೌದ್ಧಿಕ ದಾರಿದ್ರ್ಯ  ನೋಡಬೇಕೆಂದಿದ್ದರೆ ಕೆಲವು ಹಾರು ಹೇಳಿಕೆಯ ಭಾಗಗಳನ್ನು ಗಮನಿಸಬೇಕು.

ಉದಾ:  ಕೈಮಗ್ಗ ಮತ್ತಿತರ ಪಾರಂಪರಿಕ ಉತ್ಪನ್ನಗಳ ಉತ್ಪಾದನೆ ಮತ್ತು ರಪ್ತಿಗೆ ವಿಶೇಷ ಪ್ರೋತ್ಸಾಹ ನೀಡಲಾಗುವುದು ‘ ಎಂಬ ವಾಕ್ಯ ಇದೆ. ಅದರಿಂದಾಚೆ ಯಾವ ಗಟ್ಟಿ ವಿವರಗಳೂ ಇಲ್ಲ! ಏನಿದರ ಅರ್ಥ?

ಹಾಗೇ ಮೋದಿಯವರ ‘ಮೇಕ್ ಇನ್ ಇಂಡಿಯಾ’ಕ್ಕೆ ಪ್ರತಿಯಾಗಿ ‘ಮೇಕ್ ಫಾರ್ ದಿ ವರ್ಲ್ಡ್’ ಎನ್ನುವ ಘೋಷಣೆ  ಕಾಂಗ್ರೆಸ್ ಪ್ರಣಾಳಿಕೆಯಲ್ಲಿದೆ. ಇದೇನಪ್ಪಾ ಅಂದರೆ ಅದೇ ಹಳೇ ಎಸ್.ಇ.ಜೆಡ್ ಬಾಟಲನ್ನು ತೊಳೆದು ಹೊಸ ಲೇಬಲ್ ಹಾಕಿ ಕೂತಿದೆ ಕಾಂಗ್ರೆಸ್. ಹಳೇ ಎಸ್.ಇ.ಜೆಡ್ ನ ಕಮಟು ವಾಸನೆ ಇದರಲ್ಲೂ ಮುಂದುವರಿದಿದೆ.

ಕೃಷಿಯಲ್ಲಿ ಏನಪ್ಪಾ ಅಂದರೆ ‘ಕೃಷಿ ಅಭಿವೃದ್ಧಿ ಮತ್ತು ಯೋಜನೆಯ ರಾಷ್ಟ್ರೀಯ ಆಯೋಗ’  ಹಾಗೂ ‘ಅತೀ ಸಣ್ಣ ರೈತ ಮತ್ತು ಕೃಷಿ ಕೂಲಿಕಾರ ಆಯೋಗ’ ಸ್ಥಾಪಿಸಲಾಗುವುದು ಎಂದು ಕಾಂಗ್ರೆಸ್ ಎದೆ ತಟ್ಟಿ ಹೇಳಿಕೊಂಡಿದೆ.!

ಈ  ಆಯೋಗ ಸ್ಥಾಪಿಸುವುದೆಂದರೆ  ಸಮಸ್ಯೆಗೆ ಪರಿಹಾರ ಹೊಳೆಯದೇ ಉಸುಕಲ್ಲಿ ತಲೆ ಹುದುಗಿಸುವುದು ಎಂದರ್ಥ

ಈಗಾಗಲೇ ಇಂಥಾ  ಬೋರ್ಡ್, ಸೀಟು ಕವರ್ ಬದಲಾಯಿಸಿ  ಹಳೇ ಬಸ್ಸಿಗೇ  ರಯ್ಯಾ ಎಂದ ಮೋದಿ ನಮ್ಮನ್ನು ಎಲ್ಲಿ ತಂದು ಕೆಡವಿದ್ದಾರೆ ಎಂಬುದನ್ನು ಗಮನಿಸಿದರೆ ಕಾಂಗ್ರೆಸ್ ಬಗ್ಗೆ ವಿಶ್ವಾಸ ಹುಟ್ಟುವುದಿಲ್ಲ.

ಕಾಂಗ್ರೆಸ್ಸಿನ ಸಮಸ್ಯೆ ಏನು? ಕೋಮುವಾದೀ ರಾಜಕೀಯ ಹೊರತುಪಡಿಸಿ ಕಾಂಗ್ರೆಸ್ಸಿಗೆ ಭಾಜಪದ ಜೊತೆ ತಕರಾರಿಲ್ಲ!! ಭಾಜಪ  ತನ್ನ ಕನ್ನಡಿ ಬಿಂಬದಂಥಾ ಎದುರಾಳಿಯಾಗಿ ತನ್ನ ಕುರ್ಚಿಯಲ್ಲಿ ಕೂತಿದೆ ಎಂಬುದಷ್ಟೇ ಬೇಗುದಿ. ಇಷ್ಟು ವರ್ಷ ತಾನು ಆಳುವಾಗ ಕೆಡಿಸಿ ಕೂತ ಸಂಗತಿಗಳನ್ನೆಲ್ಲಾ ಭಾಜಪ ಕೆದಕಿ ತನ್ನ ಮೇಲೆ ಎಸೆಯುವ ಪರಿಗೆ ಕಾಂಗ್ರೆಸ್ ಬ್ರೈನ್ ಡೆಡ್ ಆಗಿ ಕೂತಿದೆ. ಅದಕ್ಕೀಗ ಹೊಸ ಹೊಳಹುಗಳೂ ಇಲ್ಲ. ಅದನ್ನು ನೆಚ್ಚುವ ಕನಸುಗಣ್ಣಿನ ಯುವ ಪಡೆಯೂ ಇಲ್ಲ. ಉಳಿದ ಪಕ್ಷಗಳಿಗಿಂತ ಭಿನ್ನವಾದ ದೇಶದ ನಿಜ ಅಭಿವೃದ್ಧಿಯ ನೀಲನಕ್ಷೆ ತನ್ನಲ್ಲಿದೆ ಎಂದು ಕ್ಲೈಮ್ ಮಾಡುವ ಕಾಣ್ಕೆಯೂ ಇಲ್ಲ.  ಸಕಾರೀ ಉದ್ಯೋಗ ಕಡಿತ ಮಾಡಿ ಅಭದ್ರ ಗುತ್ತಿಗೆ  ಉದ್ಯೋಗದ ಪರ್ವ ಶುರು ಮಾಡಿದ ಕಾಂಗ್ರೆಸ್  ಸಂಪೂರ್ಣ ಭಿನ್ನವಾಗಿ ಯೋಚಿಸಲು ಸಾಧ್ಯವಿಲ್ಲ. ಕೃಷಿ ಮತ್ತು ಉದ್ಯೋಗ ಸೃಷ್ಟಿಯಲ್ಲಿ  ಇತ್ಯಾತ್ಮಕ ಬದಲಾವಣೆ ತರಲು ದೊಡ್ಡ ವಿವರಗಳ ದೀರ್ಘ ಕಾಲೀನ ಕಲ್ಪನೆ ಇರಬೇಕು. ಈಗ ಘೋಷಿಸಿರುವಂಥಾದ್ದು ಮೀನು ಕೊಡುವ ವಿಧಾನವೇ ಹೊರತು ಮೀನು ಹಿಡಿಯುವುದನ್ನು ಕಲಿಸುವ ವಿಧಾನ ಅಲ್ಲ. ಮೋದಿಯೇನೋ ತೊಲಗಬೇಕು. ಆದರೆ ಕಾಂಗ್ರೆಸ್ ಕೈಗೆ ಕೊಟ್ಟರೆ  ಪರಿಸ್ಥಿತಿ ಸುಧಾರಿಸಿತೆಂಬ ಭರವಸೆ ಇಲ್ಲಿ ಕಾಣಿಸುವುದಿಲ್ಲ.  ಅಷ್ಟಕ್ಕೂ ಕಾಂಗ್ರಸ್ಸಿಗೇ ಇಷ್ಟು ಸ್ಥಾನ ಬಂದೀತೆಂಬ ನಂಬಿಕೆ ಇಲ್ಲದಿರುವಾಗ ಪ್ರಣಾಳಿಕೆಯಲ್ಲಿ ಬರೆಯಲು ತೊಡಕೇನೂ ಇಲ್ಲ!!

ಕಳೆದ ಬಾರಿಯ  ರಾಜ್ಯದ ಪ್ರಣಾಳಿಕೆ ಎಷ್ಟು ಅಧ್ವಾನವಾಗಿತ್ತೆಂದರೆ ಥೇಟ್ ಮೊಯಿಲಿಯಂಥಾ ಕಲಸುಮೇಲೋಗರ ನಿಪುಣರೇ ಬರೆದಂತಿತ್ತು. ಈ ಪ್ರಣಾಲಿಕೆ ಸ್ಟಾಂಪ್ ಪೇಪರ್ ಮೇಲೆ ಗಾಳಿಯಲ್ಲಿ ಸಹಿ ಹಾಕುವ  ನಟನೆಯಂತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...