Homeಮುಖಪುಟ’ದೆಹಲಿ ಕ್ರಿಕೆಟ್ ಮಂಡಳಿ’ಗೆ ರಾಜೀನಾಮೆ ನೀಡಿದ ಕ್ರಿಕೆಟ್ ದಂತಕತೆ ಬಿಷನ್ ಸಿಂಗ್ ಬೇಡಿ!

’ದೆಹಲಿ ಕ್ರಿಕೆಟ್ ಮಂಡಳಿ’ಗೆ ರಾಜೀನಾಮೆ ನೀಡಿದ ಕ್ರಿಕೆಟ್ ದಂತಕತೆ ಬಿಷನ್ ಸಿಂಗ್ ಬೇಡಿ!

ನಾನು ಅಪಾರ ಸಹಿಷ್ಣುತೆ ಮತ್ತು ತಾಳ್ಮೆಯ ಮನುಷ್ಯ. ಈ ಬಗ್ಗೆ ನನಗೆ ಹೆಮ್ಮೆ ಇತ್ತು. ಆದರೆ, ಡಿಡಿಸಿಎ ಇದೀಗ ನನ್ನ ಸಹಿಷ್ಣುತೆಯನ್ನು ನಿಜವಾಗಿಯೂ ಪರೀಕ್ಷಿಸುತ್ತಿದೆ ಎಂದು ಅವರು ಕಿಡಿ ಕಾರಿದ್ದಾರೆ

- Advertisement -
- Advertisement -

ದೆಹಲಿ ಕ್ರಿಕೆಟ್​ ಸಂಸ್ಥೆಯ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ದಿವಂಗತ ಮಾಜಿ ಕೇಂದ್ರ ಸಚಿವ ಅರುಣ್​ ಜೇಟ್ಲಿ ಅವರ ಮೂರ್ತಿಯನ್ನು ದೆಹಲಿಯ ಫಿರೋಜ್​ ಷಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿದೆ. ಆದರೆ, ಈ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿರುವ ಮಾಜಿ ಕ್ರಿಕೆಟಿಗ ಸ್ಪಿನ್​ ದಂತಕಥೆ ಬಿಷನ್​ ಸಿಂಗ್ ಬೇಡಿ ದೆಹಲಿ ಕ್ರಿಕೆಟ್​ ಅಸೋಸಿಯೇಷನ್​ನಿಂದಲೇ ಹೊರ ನಡೆದಿದ್ದಾರೆ. ರಾಜಕಾರಣಿಗಳ ಪುತ್ಥಳಿಯನ್ನು ಕ್ರಿಕೆಟ್​ ಅಂಗಳದಲ್ಲಿ ಸ್ಥಾಪಿಸುವುದರಿಂದ ಸ್ವಜನಪಕ್ಷಪಾತವನ್ನು ಉತ್ತೇಜಿಸುವಂತಾಗುತ್ತದೆ ಮತ್ತು ಆಟಗಾರರಿಗಿಂತ ನಿರ್ವಾಹಕರೇ ಅಧಿಕ ಎನ್ನುವಂತಹ ಸಂಸ್ಕೃತಿಗೆ ಕಾರಣವಾಗುತ್ತದೆ, ಹೀಗಾಗಿ ಸ್ಟೇಡಿಯಂನ ವೀಕ್ಷಕರ ಸ್ಟಾಂಡ್​ಗೆ ಇಟ್ಟಿರುವ ನನ್ನ ಹೆಸರನ್ನೂ ಶೀಘ್ರವಾಗಿ ಅಳಿಸಿ ಹಾಕಿ ಎಂದು, ಪ್ರಸ್ತುತ ದೆಹಲಿ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ಅರುಣ್ ಜೇಟ್ಲಿ ಅವರ ಮಗ ರೋಹನ್​ ಜೇಟ್ಲಿಗೆ ಪತ್ರ ಬರೆದು ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

ಮಾಜಿ ಕ್ರಿಕೆಟ್​ ದಂತಕಥೆ ಹಾಗೂ 1983 ವಿಶ್ವಕಪ್ ವಿಜೇತ ತಂಡದ ಸದಸ್ಯರಾದ ಮೊಹಿಂದರ್​ ಅಮರನಾಥ್​ ಹಾಗೂ ಬಿಷನ್​ ಸಿಂಗ್ ಬೇಡಿ ಅವರ ಹೆಸರನ್ನು 2017 ರಲ್ಲಿ ದೆಹಲಿ ಕ್ರಿಕೆಟ್​ ಅಸೋಸಿಯೇಷನ್ ಕ್ರೀಡಾಂಗಣದ ಒಂದು ಸ್ಟ್ಯಾಂಡ್​ಗೆ ನಾಮಕರಣ ಮಾಡಿತ್ತು.​

ಇದನ್ನೂ ಓದಿ: ಅರುಣ್ ಜೈಟ್ಲಿ ಕೆಲ ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದರೆ? ಇಲ್ಲಿದೆ ಹೊಸ ವಿವಾದ

ಬಿಷನ್​ ಸಿಂಗ್ ಬೇಡಿ ಡಿಡಿಸಿಎ ಅಧ್ಯಕ್ಷರಿಗೆ ತಾವು ಬರೆದಿರುವ ಪತ್ರದಲ್ಲಿ, “ನಾನು ಅಪಾರ ಸಹಿಷ್ಣುತೆ ಮತ್ತು ತಾಳ್ಮೆಯ ಮನುಷ್ಯ. ಈ ಬಗ್ಗೆ ನನಗೆ ಹೆಮ್ಮೆ ಇತ್ತು. ಆದರೆ, ಡಿಡಿಸಿಎ ಇದೀಗ ನನ್ನ ಸಹಿಷ್ಣುತೆಯನ್ನು ನಿಜವಾಗಿಯೂ ಪರೀಕ್ಷಿಸುತ್ತಿದೆ. ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ನನ್ನನ್ನು ಪ್ರೇರೇಪಿಸುತ್ತಿದೆ.

ಆದ್ದರಿಂದ ಡಿಡಿಸಿಎ ಅಧ್ಯಕ್ಷರಾದ ರೋಹನ್​ ಜೇಟ್ಲಿ ಅವರಿಗೆ ನನ್ನ ಹೆಸರಿನ ನಿಲುವನ್ನು ತಕ್ಷಣದಿಂದ ಜಾರಿಗೆ ತರಲು ನಾನು ವಿನಂತಿಸುತ್ತೇನೆ. ವೀಕ್ಷಕರ ಸ್ಟಾಂಡ್​ಗೆ ಇಟ್ಟಿರುವ ನನ್ನ ಹೆಸರನ್ನು ಶೀಘ್ರದಲ್ಲೇ ತೆಗೆದುಹಾಕಿ. ಅಲ್ಲದೆ, ನನ್ನ ಡಿಡಿಸಿಎ ಸದಸ್ಯತ್ವವನ್ನು ನಾನು ತ್ಯಜಿಸುತ್ತಿದ್ದೇನೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

ಅಲ್ಲದೆ, “ನಾನು ಸಾಕಷ್ಟು ಯೋಚಿಸಿಯೇ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ನನಗೆ ದೊರೆತ ಗೌರವವನ್ನು ನಾನು ನಿರ್ಲಕ್ಷಿಸುತ್ತಿಲ್ಲ. ಎಲ್ಲರೂ ತಿಳಿದಿರುವಂತೆ ಗೌರವ ಎಂಬುದು ನಮ್ಮ ಜವಾಬ್ದಾರಿಗಳಿಂದ ನಮಗೆ ಧಕ್ಕುತ್ತದೆ. ನನಗೆ ಸಿಕ್ಕ ಗೌರವವೂ ಅಂಗಳದಲ್ಲಿ ನಾನು ತೋರಿದ ಪ್ರದರ್ಶನ ನನಗೆ ತಂದುಕೊಟ್ಟದ್ದು.

ಇದನ್ನೂ ಓದಿ: ಜೈಶ್ರೀರಾಮ್, ಭಾರತ್ ಮಾತಾಕೀ ಜೈ ಘೋಷಣೆ ವಿರೋಧಿಗಳಿಗೆ ಮತ ನೀಡಬೇಕೆ? ಪ್ರಧಾನಿ ಬಾಯಲ್ಲಿ ಎಂತಹ ಮಾತು?

ಆದರೆ, ನಾನೀಗ ಕ್ರಿಕೆಟ್​ ಅಂಗಳದಿಂದ ನಿವೃತ್ತನಾಗಿದ್ದೇನೆ. ನಾನು ನಂಬಿದ ಮೌಲ್ಯಗಳ ಭರವಸೆಯನ್ನು ಉಳಿಸಿಕೊಳ್ಳುವ ಸಲುವಾಗಿ ನಾನು ಈಗ ನನ್ನ ಗೌರವವನ್ನು ಹಿಂದಿರುಗಿಸುತ್ತಿದ್ದೇನೆ. ಏಕೆಂದರೆ ನಾನೂ ಇನ್ನೂ ನನ್ನ ಮೌಲ್ಯಗಳನ್ನು ಉಳಿಸಿಕೊಂಡಿದ್ದೇನೆ.

ನನ್ನ ಈ ನಿರ್ಧಾರವನ್ನು ಇಂದಿನ ಸಂದರ್ಭಕ್ಕೆ ತಕ್ಕಂತೆ ಹೇಳುವುದಾದರೆ ನಾನು ಎಂದಿಗೂ ಅರುಣ್​ ಜೇಟ್ಲಿ ಅವರ ಕಾರ್ಯಶೈಲಿಯ ಅಭಿಮಾನಿಯಲ್ಲ. ನಾನು ಒಪ್ಪದ ಯಾವುದೇ ನಿರ್ಧಾರಗಳನ್ನು ಎಂದಿಗೂ ವಿರೋಧಿಸುತ್ತಲೇ ಇರುತ್ತೇನೆ” ಎಂದು ತಿಳಿಸಿದ್ದಾರೆ.

ದಿವಂಗತ ಅರುಣ್​ ಜೇಟ್ಲಿ ಕೇಂದ್ರ ಸರ್ಕಾರದ ಸಚಿವರಾಗಿ ಅಧಿಕಾರ ಸ್ವೀಕರಿಸುವ ಮುನ್ನ 1999 ರಿಂದ 2013 ರವರೆಗೆ ಸತತ 14 ವರ್ಷಗಳ ಕಾಲ ದೆಹಲಿ ಕ್ರಿಕೆಟ್​ ಅಸೋಸಿಯೇಷನ್​ನಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಹೀಗಾಗಿ ಅವರ ಸ್ಮರಣಾರ್ಥ ಫಿರೋಜ್​ ಷಾ ಕೋಟ್ಲಾದಲ್ಲಿ ಅರುಣ್​ ಜೇಟ್ಲಿ ಅವರ ಆರು ಅಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸಲು ಡಿಡಿಸಿಎ ನಿರ್ಧರಿಸಿದೆ.

ಇದನ್ನೂ ಓದಿ: ಮದ್ದೂರಿನ ಹೆಸರು ಅರ್ಜುನಪುರಿಯೇ? ಊರ ಹೆಸರುಗಳ ಮೇಲೂ ಪುರೋಹಿತಶಾಹಿ ಆಕ್ರಮಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...