Homeಮುಖಪುಟ’ದೆಹಲಿ ಕ್ರಿಕೆಟ್ ಮಂಡಳಿ’ಗೆ ರಾಜೀನಾಮೆ ನೀಡಿದ ಕ್ರಿಕೆಟ್ ದಂತಕತೆ ಬಿಷನ್ ಸಿಂಗ್ ಬೇಡಿ!

’ದೆಹಲಿ ಕ್ರಿಕೆಟ್ ಮಂಡಳಿ’ಗೆ ರಾಜೀನಾಮೆ ನೀಡಿದ ಕ್ರಿಕೆಟ್ ದಂತಕತೆ ಬಿಷನ್ ಸಿಂಗ್ ಬೇಡಿ!

ನಾನು ಅಪಾರ ಸಹಿಷ್ಣುತೆ ಮತ್ತು ತಾಳ್ಮೆಯ ಮನುಷ್ಯ. ಈ ಬಗ್ಗೆ ನನಗೆ ಹೆಮ್ಮೆ ಇತ್ತು. ಆದರೆ, ಡಿಡಿಸಿಎ ಇದೀಗ ನನ್ನ ಸಹಿಷ್ಣುತೆಯನ್ನು ನಿಜವಾಗಿಯೂ ಪರೀಕ್ಷಿಸುತ್ತಿದೆ ಎಂದು ಅವರು ಕಿಡಿ ಕಾರಿದ್ದಾರೆ

- Advertisement -
- Advertisement -

ದೆಹಲಿ ಕ್ರಿಕೆಟ್​ ಸಂಸ್ಥೆಯ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ದಿವಂಗತ ಮಾಜಿ ಕೇಂದ್ರ ಸಚಿವ ಅರುಣ್​ ಜೇಟ್ಲಿ ಅವರ ಮೂರ್ತಿಯನ್ನು ದೆಹಲಿಯ ಫಿರೋಜ್​ ಷಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿದೆ. ಆದರೆ, ಈ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿರುವ ಮಾಜಿ ಕ್ರಿಕೆಟಿಗ ಸ್ಪಿನ್​ ದಂತಕಥೆ ಬಿಷನ್​ ಸಿಂಗ್ ಬೇಡಿ ದೆಹಲಿ ಕ್ರಿಕೆಟ್​ ಅಸೋಸಿಯೇಷನ್​ನಿಂದಲೇ ಹೊರ ನಡೆದಿದ್ದಾರೆ. ರಾಜಕಾರಣಿಗಳ ಪುತ್ಥಳಿಯನ್ನು ಕ್ರಿಕೆಟ್​ ಅಂಗಳದಲ್ಲಿ ಸ್ಥಾಪಿಸುವುದರಿಂದ ಸ್ವಜನಪಕ್ಷಪಾತವನ್ನು ಉತ್ತೇಜಿಸುವಂತಾಗುತ್ತದೆ ಮತ್ತು ಆಟಗಾರರಿಗಿಂತ ನಿರ್ವಾಹಕರೇ ಅಧಿಕ ಎನ್ನುವಂತಹ ಸಂಸ್ಕೃತಿಗೆ ಕಾರಣವಾಗುತ್ತದೆ, ಹೀಗಾಗಿ ಸ್ಟೇಡಿಯಂನ ವೀಕ್ಷಕರ ಸ್ಟಾಂಡ್​ಗೆ ಇಟ್ಟಿರುವ ನನ್ನ ಹೆಸರನ್ನೂ ಶೀಘ್ರವಾಗಿ ಅಳಿಸಿ ಹಾಕಿ ಎಂದು, ಪ್ರಸ್ತುತ ದೆಹಲಿ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ಅರುಣ್ ಜೇಟ್ಲಿ ಅವರ ಮಗ ರೋಹನ್​ ಜೇಟ್ಲಿಗೆ ಪತ್ರ ಬರೆದು ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

ಮಾಜಿ ಕ್ರಿಕೆಟ್​ ದಂತಕಥೆ ಹಾಗೂ 1983 ವಿಶ್ವಕಪ್ ವಿಜೇತ ತಂಡದ ಸದಸ್ಯರಾದ ಮೊಹಿಂದರ್​ ಅಮರನಾಥ್​ ಹಾಗೂ ಬಿಷನ್​ ಸಿಂಗ್ ಬೇಡಿ ಅವರ ಹೆಸರನ್ನು 2017 ರಲ್ಲಿ ದೆಹಲಿ ಕ್ರಿಕೆಟ್​ ಅಸೋಸಿಯೇಷನ್ ಕ್ರೀಡಾಂಗಣದ ಒಂದು ಸ್ಟ್ಯಾಂಡ್​ಗೆ ನಾಮಕರಣ ಮಾಡಿತ್ತು.​

ಇದನ್ನೂ ಓದಿ: ಅರುಣ್ ಜೈಟ್ಲಿ ಕೆಲ ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದರೆ? ಇಲ್ಲಿದೆ ಹೊಸ ವಿವಾದ

ಬಿಷನ್​ ಸಿಂಗ್ ಬೇಡಿ ಡಿಡಿಸಿಎ ಅಧ್ಯಕ್ಷರಿಗೆ ತಾವು ಬರೆದಿರುವ ಪತ್ರದಲ್ಲಿ, “ನಾನು ಅಪಾರ ಸಹಿಷ್ಣುತೆ ಮತ್ತು ತಾಳ್ಮೆಯ ಮನುಷ್ಯ. ಈ ಬಗ್ಗೆ ನನಗೆ ಹೆಮ್ಮೆ ಇತ್ತು. ಆದರೆ, ಡಿಡಿಸಿಎ ಇದೀಗ ನನ್ನ ಸಹಿಷ್ಣುತೆಯನ್ನು ನಿಜವಾಗಿಯೂ ಪರೀಕ್ಷಿಸುತ್ತಿದೆ. ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ನನ್ನನ್ನು ಪ್ರೇರೇಪಿಸುತ್ತಿದೆ.

ಆದ್ದರಿಂದ ಡಿಡಿಸಿಎ ಅಧ್ಯಕ್ಷರಾದ ರೋಹನ್​ ಜೇಟ್ಲಿ ಅವರಿಗೆ ನನ್ನ ಹೆಸರಿನ ನಿಲುವನ್ನು ತಕ್ಷಣದಿಂದ ಜಾರಿಗೆ ತರಲು ನಾನು ವಿನಂತಿಸುತ್ತೇನೆ. ವೀಕ್ಷಕರ ಸ್ಟಾಂಡ್​ಗೆ ಇಟ್ಟಿರುವ ನನ್ನ ಹೆಸರನ್ನು ಶೀಘ್ರದಲ್ಲೇ ತೆಗೆದುಹಾಕಿ. ಅಲ್ಲದೆ, ನನ್ನ ಡಿಡಿಸಿಎ ಸದಸ್ಯತ್ವವನ್ನು ನಾನು ತ್ಯಜಿಸುತ್ತಿದ್ದೇನೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

ಅಲ್ಲದೆ, “ನಾನು ಸಾಕಷ್ಟು ಯೋಚಿಸಿಯೇ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ನನಗೆ ದೊರೆತ ಗೌರವವನ್ನು ನಾನು ನಿರ್ಲಕ್ಷಿಸುತ್ತಿಲ್ಲ. ಎಲ್ಲರೂ ತಿಳಿದಿರುವಂತೆ ಗೌರವ ಎಂಬುದು ನಮ್ಮ ಜವಾಬ್ದಾರಿಗಳಿಂದ ನಮಗೆ ಧಕ್ಕುತ್ತದೆ. ನನಗೆ ಸಿಕ್ಕ ಗೌರವವೂ ಅಂಗಳದಲ್ಲಿ ನಾನು ತೋರಿದ ಪ್ರದರ್ಶನ ನನಗೆ ತಂದುಕೊಟ್ಟದ್ದು.

ಇದನ್ನೂ ಓದಿ: ಜೈಶ್ರೀರಾಮ್, ಭಾರತ್ ಮಾತಾಕೀ ಜೈ ಘೋಷಣೆ ವಿರೋಧಿಗಳಿಗೆ ಮತ ನೀಡಬೇಕೆ? ಪ್ರಧಾನಿ ಬಾಯಲ್ಲಿ ಎಂತಹ ಮಾತು?

ಆದರೆ, ನಾನೀಗ ಕ್ರಿಕೆಟ್​ ಅಂಗಳದಿಂದ ನಿವೃತ್ತನಾಗಿದ್ದೇನೆ. ನಾನು ನಂಬಿದ ಮೌಲ್ಯಗಳ ಭರವಸೆಯನ್ನು ಉಳಿಸಿಕೊಳ್ಳುವ ಸಲುವಾಗಿ ನಾನು ಈಗ ನನ್ನ ಗೌರವವನ್ನು ಹಿಂದಿರುಗಿಸುತ್ತಿದ್ದೇನೆ. ಏಕೆಂದರೆ ನಾನೂ ಇನ್ನೂ ನನ್ನ ಮೌಲ್ಯಗಳನ್ನು ಉಳಿಸಿಕೊಂಡಿದ್ದೇನೆ.

ನನ್ನ ಈ ನಿರ್ಧಾರವನ್ನು ಇಂದಿನ ಸಂದರ್ಭಕ್ಕೆ ತಕ್ಕಂತೆ ಹೇಳುವುದಾದರೆ ನಾನು ಎಂದಿಗೂ ಅರುಣ್​ ಜೇಟ್ಲಿ ಅವರ ಕಾರ್ಯಶೈಲಿಯ ಅಭಿಮಾನಿಯಲ್ಲ. ನಾನು ಒಪ್ಪದ ಯಾವುದೇ ನಿರ್ಧಾರಗಳನ್ನು ಎಂದಿಗೂ ವಿರೋಧಿಸುತ್ತಲೇ ಇರುತ್ತೇನೆ” ಎಂದು ತಿಳಿಸಿದ್ದಾರೆ.

ದಿವಂಗತ ಅರುಣ್​ ಜೇಟ್ಲಿ ಕೇಂದ್ರ ಸರ್ಕಾರದ ಸಚಿವರಾಗಿ ಅಧಿಕಾರ ಸ್ವೀಕರಿಸುವ ಮುನ್ನ 1999 ರಿಂದ 2013 ರವರೆಗೆ ಸತತ 14 ವರ್ಷಗಳ ಕಾಲ ದೆಹಲಿ ಕ್ರಿಕೆಟ್​ ಅಸೋಸಿಯೇಷನ್​ನಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಹೀಗಾಗಿ ಅವರ ಸ್ಮರಣಾರ್ಥ ಫಿರೋಜ್​ ಷಾ ಕೋಟ್ಲಾದಲ್ಲಿ ಅರುಣ್​ ಜೇಟ್ಲಿ ಅವರ ಆರು ಅಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸಲು ಡಿಡಿಸಿಎ ನಿರ್ಧರಿಸಿದೆ.

ಇದನ್ನೂ ಓದಿ: ಮದ್ದೂರಿನ ಹೆಸರು ಅರ್ಜುನಪುರಿಯೇ? ಊರ ಹೆಸರುಗಳ ಮೇಲೂ ಪುರೋಹಿತಶಾಹಿ ಆಕ್ರಮಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...