HomeUncategorizedಜಲ್ಲಿಕಟ್ಟು ಕ್ರೀಡೆಗೆ ಒಪ್ಪಿಗೆ: ಕೊರೊನಾ ಮಾರ್ಗಸೂಚಿ ಪಾಲಿಸಿ ಎಂದ ತಮಿಳುನಾಡು ಸರ್ಕಾರ

ಜಲ್ಲಿಕಟ್ಟು ಕ್ರೀಡೆಗೆ ಒಪ್ಪಿಗೆ: ಕೊರೊನಾ ಮಾರ್ಗಸೂಚಿ ಪಾಲಿಸಿ ಎಂದ ತಮಿಳುನಾಡು ಸರ್ಕಾರ

ಅನಿಮಲ್ ವೆಲ್‌ಫೇರ್‌ ಬೋರ್ಡ್ ಆಫ್ ಇಂಡಿಯಾ ಮತ್ತು ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (ಪೇಟಾ) ಜಲ್ಲಿಕಟ್ಟು ವಿರುದ್ಧ ಅರ್ಜಿ ಸಲ್ಲಿಸಿದ್ದ ಕಾರಣ ಸುಪ್ರೀಂಕೋರ್ಟ್ 2014 ರಲ್ಲಿ 'ಜಲ್ಲಿಕಟ್ಟು' ಮೇಲೆ ನಿಷೇಧ ಹೇರಿತ್ತು.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದಿಂದ ವಿಧಿಸಲಾಗಿರುವ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು, ಮುಂದಿನ ತಿಂಗಳು ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟು ಆಯೋಜಿಸಬಹುದು ಎಂದು ತಮಿಳುನಾಡು ಸರ್ಕಾರ ಬುಧವಾರ ತಿಳಿಸಿದೆ.

ಕ್ರೀಡೆ ವೀಕ್ಷಣೆಗೆ 300 ಮಂದಿಗೆ ಮಾತ್ರ ಅನುಮತಿ ನೀಡಲಾಗಿದೆ. ಕ್ರೀಡೆಯ ಮತ್ತೊಂದು ವೈವಿಧ್ಯಮಯ ‘ಎರುದು ವಿಡುಮ್ ನಿಗಳ್ಚಿ’ (ಹೋರಿ ಹಿಡಿಯುವ ಸ್ಪರ್ಧೆ)ಯಲ್ಲಿ 150 ಮಂದಿ ಮಾತ್ರ ಪಾಲ್ಗೊಳ್ಳಲು ಅನುಮತಿ ನೀಡಲಾಗಿದೆ.

ಜಲ್ಲಿಕಟ್ಟು ನಡೆಯುವ ಸ್ಥಳಗಳಿಗೆ ಪ್ರವೇಶಿಸುವ ಮೊದಲು ಕ್ರೀಡಾ ವೀಕ್ಷಕರನ್ನು ಥರ್ಮಲ್ ಸ್ಕ್ಯಾನಿಂಗ್‌ಗೆ ಒಳಪಡಿಸಲಾಗುತ್ತದೆ. ಎಲ್ಲರೂ ದೈಹಿಕ ಅಂತರ ಪಾಲಿಸುವುದು ಖಡ್ಡಾಯ. ಖಡ್ಡಾಯವಾಗಿ ಮಾಸ್ಕ್‌ಗಳನ್ನು ಧರಿಸಬೇಕು ಎಂದು ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಭಾರತದಿಂದ ಆಸ್ಕರ್‌ಗೆ ನಾಮ ನಿರ್ದೇಶನಗೊಂಡ ಮಲಯಾಳಂ ಚಿತ್ರ ‘ಜಲ್ಲಿಕಟ್ಟು’

ಕ್ರೀಡೆಯಲ್ಲಿ ಭಾಗವಹಿಸುವವರಿಗೆ ಕೊರೊನಾ ನೆಗೆಟೆವ್ ವರದಿ ಇರುವ ಪ್ರಮಾಣಪತ್ರಗಳನ್ನು ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ಅಧಿಕೃತ ಪ್ರಯೋಗಾಲಯಗಳಿಂದ ಕೊರೊನಾ ನೆಗೆಟಿವ್ ಪ್ರಮಾಣಪತ್ರವನ್ನು ಹೊಂದಿರಬೇಕು. ತಮಿಳುನಾಡಿನಲ್ಲಿ ಒಟ್ಟು 235 ಕೊರೊನಾ ಪ್ರಯೋಗಾಲಯಗಳಿವೆ.

ಜನವರಿ 2021 ರಲ್ಲಿ ಕ್ರೀಡೆಗಾಗಿ ಪ್ರತ್ಯೇಕವಾದ ವಿವರವಾದ Standard Operating Procedure (SOP’s) ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ.

ಅನಿಮಲ್ ವೆಲ್‌ಫೇರ್‌ ಬೋರ್ಡ್ ಆಫ್ ಇಂಡಿಯಾ ಮತ್ತು ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (ಪೇಟಾ) ಜಲ್ಲಿಕಟ್ಟು ವಿರುದ್ಧ ಅರ್ಜಿ ಸಲ್ಲಿಸಿದ್ದ ಕಾರಣ ಸುಪ್ರೀಂಕೋರ್ಟ್ 2014 ರಲ್ಲಿ ‘ಜಲ್ಲಿಕಟ್ಟು’ ಮೇಲೆ ನಿಷೇಧ ಹೇರಿತ್ತು.

ಆದರೆ ರಾಜ್ಯ ಸರ್ಕಾರವು ಈ ಹಬ್ಬ ತಮಿಳುನಾಡಿನ ಸಂಸ್ಕೃತಿ ಮತ್ತು ಗುರುತು ಎಂದು ವಾದಿಸಿತ್ತು. ಚೆನ್ನೈನಲ್ಲಿ ಭಾರಿ ಪ್ರತಿಭಟನೆ ಕೂಡ ನಡೆಯಿತು. ನಂತರ ತಿದ್ದುಪಡಿಯೊಂದಿಗೆ 2017 ರ ಜನವರಿಯಲ್ಲಿ ನಿಷೇಧವನ್ನು ತೆಗೆದುಹಾಕಲಾಯಿತು.


ಇದನ್ನೂ ಓದಿ: ರೈತರ ಸಮಸ್ಯೆ ಬಗೆಹರಿಯುವವರೆಗೂ ಇಂಗ್ಲೆಂಡ್ ಪ್ರಧಾನಿ ಭಾರತಕ್ಕೆ ಬರುವುದು ಬೇಡ: ರೈತ ಮುಖಂಡರ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...