Homeಮುಖಪುಟಕೋಮು ಗಲಭೆಯಲ್ಲಿ ತಂದೆಯನ್ನು ಕಳೆದುಕೊಂಡರೂ ಜಾತ್ಯಾತೀತ ಮೌಲ್ಯಗಳನ್ನು ಉಳಿಸಿಕೊಂಡಿದ್ದ ದೇವೇಂದ್ರ ಸಿಂಗ್ ಯಾದವ್

ಕೋಮು ಗಲಭೆಯಲ್ಲಿ ತಂದೆಯನ್ನು ಕಳೆದುಕೊಂಡರೂ ಜಾತ್ಯಾತೀತ ಮೌಲ್ಯಗಳನ್ನು ಉಳಿಸಿಕೊಂಡಿದ್ದ ದೇವೇಂದ್ರ ಸಿಂಗ್ ಯಾದವ್

"ತನ್ನ ಕಣ್ಣೆದುರಿಗೆ ಆದ ತನ್ನ ತಂದೆಯ ಕೊಲೆಯಿಂದ ಆ ಬಾಲಕನ ಮೇಲೆ ಏನೆಲ್ಲ ಪರಿಣಾಮ ಬೀರಿತೋ ಏನೋ. ತಂದೆಯನ್ನು ತನ್ನ ಕಣ್ಣೆದುರಿಗೇ ಕೊಂದ ಮುಸಲ್ಮಾನರನ್ನು ದ್ವೇಷಿಸಲು ಅವರಿಗೆ ಸಾಕಷ್ಟು ಕಾರಣಗಳಿದ್ದವು"

- Advertisement -
- Advertisement -

ಸ್ವರಾಜ್ ಇಂಡಿಯಾ ಪಕ್ಷದ ಮುಖ್ಯಸ್ಥ ಯೋಗೇಂದ್ರ ಯಾದವ್ ಅವರ ತಂದೆ ಪ್ರೊ.ದೇವೇಂದ್ರ ಸಿಂಗ್ ಯಾದವ್ (1930-2020) ಬುಧವಾರ ನಿಧನರಾಗಿದ್ದು, ಅವರ ಕುರಿತ ಪರಿಚಯ ಮಾಡಿಕೊಳ್ಳುತ್ತಾ ಅವರಿಗೆ ಈ ನುಡಿ ನಮನ.

ದೇವೇಂದ್ರ ಎಂಟು ವರ್ಷದ ಬಾಲಕನಾಗಿದ್ದಾಗ ಕಣ್ಣೆದುರೇ ತನ್ನ ತಂದೆಯ ಕೊಲೆಗೆ ಸಾಕ್ಷಿಯಾದ. 1936 ರ ಸಮಯ. ಈಗಿನ ಹರಿಯಾಣಾದ ಹಿಸಾರ್ ಎನ್ನುವ ಪಟ್ಟಣದಲ್ಲಿ ರಾಮ್ ಸಿಂಗ್ ಒಂದು ಶಾಲೆಯ ಶಿಕ್ಷಕರಾಗಿದ್ದರು. ಸ್ವಾತಂತ್ರಪೂರ್ವದ ಸಮಯ. ಅಲ್ಲಲ್ಲಿ ಕೋಮು ದಳ್ಳುರಿಗಳು ನಡೆಯುತ್ತಿದ್ದವು. ರಾಮ್‌ಸಿಂಗ್ ಅವರು ಶಿಕ್ಷಕರಾಗಿದ್ದ ಶಾಲೆಗೆ ಕೋಮು ಗಲಭೆಯನ್ನೆಬ್ಬಿಸುತ್ತ ಮುಸಲ್ಮಾನರ ಗುಂಪೊಂದು ಬಂದು ಅಲ್ಲಿದ್ದ ಮಕ್ಕಳನ್ನು ತಮ್ಮ ವಶಕ್ಕೆ ನೀಡಬೇಕೆಂದು ಆದೇಶಿಸಿದರು. ಮಕ್ಕಳನ್ನು ಮುಟ್ಟುವುದಕ್ಕಿಂತ ಮುಂಚೆ ಮೊದಲು ನನ್ನನ್ನು ನೋಡಿಕೊಳ್ಳಿ ಎಂದು ತಮ್ಮ ಕರ್ತವ್ಯ ಪಾಲಿಸಿದರು ರಾಮ್‌ಸಿಂಗ್. ಆಗ ಅವರ ಕುತ್ತಿಗೆಯನ್ನು ಆ ಗಲಭೆಕೋರರು ಕುಡಗೋಲಿನಿಂದ ಸೀಳಿದರು. ಈ ಘಟನೆಯನ್ನು ನೋಡುತ್ತ ನಿಂತವರಲ್ಲಿದ್ದ ಏಳು ವರ್ಷದ ಬಾಲಕನೇ ಈ ದೇವೇಂದ್ರ ಸಿಂಗ್, ಕೊಲೆಗೀಡಾದ ಶಿಕ್ಷಕ ರಾಮ್‌ಸಿಂಗ್ ಅವರ ಪುತ್ರ.

ಇದನ್ನೂ ಓದಿ: ಕರ್ತವ್ಯದ ನಡುವೆ ಮದ್ಯ ಸೇವಿಸಿದ್ದ ಪೊಲೀಸರ ವೀಡಿಯೋ ವೈರಲ್: ಅಮಾನತು

ತನ್ನ ಕಣ್ಣೆದುರಿಗೆ ಆದ ತನ್ನ ತಂದೆಯ ಕೊಲೆಯಿಂದ ಆ ಬಾಲಕನ ಮೇಲೆ ಏನೆಲ್ಲ ಪರಿಣಾಮ ಬೀರಿತೋ ಏನೋ. ತಂದೆಯನ್ನು ತನ್ನ ಕಣ್ಣೆದುರಿಗೇ ಕೊಂದ ಮುಸಲ್ಮಾನರನ್ನು ದ್ವೇಷಿಸಲು ಅವರಿಗೆ ಸಾಕಷ್ಟು ಕಾರಣಗಳಿದ್ದವು. ಆದರೆ ಆ ಬಾಲಕ ಬೆಳೆಯುತ್ತಿರುವ ಸಮಯ ಸ್ವಾತಂತ್ರ ಸಂಗ್ರಾಮದ ಸಮಯ. ಗಾಂಧೀಜಿಯವರ ಸತ್ಯಾಗ್ರಹಗಳ, ಹಿಂದು ಮುಸ್ಲಿಂ ಏಕತೆಗಾಗಿ ಜೀವ ತೇಯುತ್ತಿದ್ದ ಸಮಯ. ನಾನೊಬ್ಬ ಹಿಂದು ಆಗಲಿ, ಮುಸಲ್ಮಾನನಾಗಲಿ ಆಗುವುದಿಲ್ಲ, ನಾನು ಆಗುವುದು ಒಬ್ಬ ಮನುಷ್ಯ ಎನ್ನುವ ಮಾತುಗಳನ್ನು ಕೇಳಿದ ದೇವೇಂದ್ರ ಸಿಂಗ್, ತಮ್ಮ ಜೀವನವನ್ನು ದ್ವೇಷ ಆಕ್ರಮಿಸಿಕೊಳ್ಳಲು ಅವಕಾಶ ನೀಡಲಿಲ್ಲ.

ಬೆಳೆದು ಅರ್ಥಶಾಸ್ತ್ರದ ಪ್ರಾಧ್ಯಾಪಕರಾದ ದೇವೇಂದ್ರ ಸಿಂಗ್, ತಮ್ಮ ಮಕ್ಕಳಿಗೆ ಮುಸ್ಲಿಂ ಹೆಸರುಗಳನ್ನಿಡಲು ನಿರ್ಧರಿಸಿದರು. ತನ್ನ ತಂದೆಯನ್ನು ತನ್ನೆದುರಿಗೆ ಕೊಂದ ಸಮುದಾಯದವರ ಹೆಸರನ್ನು ನೀಡಲು ನಿರ್ಧರಿಸಿದರು. ಮೊದಲ ಮಗುವಿಗೆ ನಜ್ಮಾ ಎಂದು ಹೆಸರಿಡುವಾಗ ಅವರ ಹೆಂಡತಿ, ಮಗಳಿಗೆ ಬೇಡ, ಮುಂದೆ ಗಂಡು ಮಗುವಾದಾಗ ಈ ಪ್ರಯೋಗವನ್ನು ಮಾಡುವ, ಹೆಣ್ಣು ಮಗಳ ಮೇಲೆ ಬೇಡ, ಮುಂದೆ ಮದುವೆಗೆ ಸಮಸ್ಯೆಯಾಗುತ್ತೆ ಎಂದರು. ಹಾಗಾಗಿ ಆ ಹೆಣ್ಣು ಮಗುವಿಗೆ ನೀಲಂ ಎಂದು ನಾಮಕರಣ ಮಾಡಲಾಯಿತು. ನಂತರ ಗಂಡು ಮಗುವಾದಾಗ ಸಲೀಂ ಎನ್ನುವ ಹೆಸರನ್ನಿಟ್ಟರು.

ಇದನ್ನೂ ಓದಿ: ರೂಪಾಂತರಿ ಕೊರೊನಾ ವೈರಸ್ ಭೀತಿ: ರಾತ್ರಿ ಕರ್ಫ್ಯೂ ದಿನಾಂಕ ಬದಲಿಸಿದ ಮುಖ್ಯಮಂತ್ರಿ!

ರಾಜಸ್ಥಾನದ ಒಂದು ಹಳ್ಳಿಯಲ್ಲಿ ಶಾಲೆಗೆ ಹೋಗುತ್ತಿದ್ದ ಆ ಬಾಲಕನ ಶಾಲೆಯಲ್ಲಿ ಯಾವ ಮುಸಲ್ಮಾನ ಮಕ್ಕಳೂ ಇರಲಿಲ್ಲ. ಹಾಗಾಗಿ, ಎಲ್ಲ ಮಕ್ಕಳಿಗೂ ಇವನ ಬಗ್ಗೆ ಕುತೂಹಲ. ನೀನ್ಯಾರು, ನಿನ್ನನ್ನು ದತ್ತು ತೆಗೆದುಕೊಂಡಿದ್ದಾರಾ? ಮುಸಲ್ಮಾನರು ಹೇಗಿರುತ್ತಾರೆ? ಎಂದೆಲ್ಲಾ ಪೀಡಿಸಲಾರಂಭಿಸಿದರು. ದೇವೇಂದ್ರ ಅವರು ಜಾತ್ಯತೀತತೆಯ ಬಗ್ಗೆ, ಆ ಪುಟ್ಟ ಮಗು ಸಲೀಂನಿಗೆ ಏನೆಲ್ಲಾ ಹೇಳಿದರೂ ಅವನಿಗೆ ತಲೆಬುಡ ಅರ್ಥವಾಗಲಿಲ್ಲ. ಒಂದು ದಿನ ಮನೆಗೆ ಬಂದು, ಇಲ್ಲ ನನ್ನ ಹೆಸರನ್ನು ಬದಲಾಯಿಸಿ, ಇಲ್ಲವಾದರೆ ಇನ್ನು ಮುಂದೆ ನಾನು ಶಾಲೆಗೆ ಹೋಗೂದಿಲ್ಲ ಎಂದು ಘೋಷಿಸಿದರು. ಆಗ ಸಲೀಂ ಅಂತ ಇದ್ದ ಹೆಸರು ಯೋಗೇಂದ್ರ ಎಂದಾಯಿತು.

ನುಡಿ ನಮನ: ಕೋಮುಗಲಭೆಯಲ್ಲಿ ತಂದೆಯನ್ನು ಕಳೆದುಕೊಂಡರೂ ಜಾತ್ಯಾತೀತ ಮೌಲ್ಯಗಳನ್ನು ಉಳಿಸಿಕೊಂಡಿದ್ದ ದೇವೇಂದ್ರ ಸಿಂಗ್ ಯಾದವ್

 

ನಿನ್ನೆ ದೇವೇಂದ್ರ ಸಿಂಗ್ ತಮ್ಮ ಹಳ್ಳಿ ಸಹಾರನವಾಸ್‌ನಲ್ಲಿ ಕೊನೆಯುಸಿರೆಳೆದರು. ಇದೇ ಹಳ್ಳಿಯಲ್ಲಿ ಹುಟ್ಟಿದ ದೇವೇಂದ್ರ ಮೊದಲ ಕೆಲ ವರ್ಷ ಹಿಸಾರ್‌ನಲ್ಲಿದ್ದು, ತಂದೆಯ ಕೊಲೆಯ ನಂತರ ಹಳ್ಳಿಗೆ ಮರಳಿ, ಹೊಸ ಜೀವನ ಶುರು ಮಾಡಿದರು. 5ನೇ ತರಗತಿಯ ತನಕ ಹಳ್ಳಿಯಲ್ಲಿ ಓದಿ, ನಂತರ ರೇವಾಡಿಯಲ್ಲಿ, ತದನಂತರ ಜಲಂಧರ್‌ನಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಮಾಡಿ, ಗಂಗಾನಗರದ ಖಾಲ್ಸಾ ಕಾಲೇಜಿನಲ್ಲಿ ಅಧ್ಯಾಪಕರಾಗಿ ದುಡಿದು, ನಿವೃತ್ತಿಯ ನಂತರ 1987 ರಲ್ಲಿ ಮತ್ತೆ ತನ್ನ ಹುಟ್ಟೂರಾದ ಸಹಾರನವಾಸ್‌ಗೆ ಮರಳಿ, ಕೊನೆಯ ತನಕ ಅಲ್ಲಿಯೇ ಉಳಿದರು.

ಅಲ್ಲಿ ಬಂದು ಒಂದು ಗ್ರಂಥಾಲಯವನ್ನು ಸ್ಥಾಪಿಸಿದರು. ತದನಂತರ ಅದೇ ಗ್ರಾಮದಲ್ಲಿ ಪ್ರಾರಂಭವಾದ ಅಂಬೇಡ್ಕರ್ ಗ್ರಂಥಾಲಯವನ್ನು ಮುನ್ನಡೆಸಿದರು. ಅದರೊಂದಿಗೆ ‘ಸಂಪೂರ್ಣ ಕ್ರಾಂತಿ ಮಂಚ್’ ಎಂಬ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಚಳವಳಿಗಳಲ್ಲಿ ನಂಬಿಕೆಯಿಟ್ಟಿದ್ದ ದೇವೇಂದ್ರ ಯಾದವ್ ಅವರು ತಮ್ಮ ಪಿಂಚಣಿಯಲ್ಲಿ ಒಂದು ಭಾಗವನ್ನು ಸಾಮಾಜಿಕ ಕಾರ್ಯಕರ್ತರಿಗೆ ಕೊಡುತ್ತಿದ್ದರು.

ಇದನ್ನೂ ಓದಿ: ಜಲ್ಲಿಕಟ್ಟು ಕ್ರೀಡೆಗೆ ಒಪ್ಪಿಗೆ: ಕೊರೊನಾ ಮಾರ್ಗಸೂಚಿ ಪಾಲಿಸಿ ಎಂದ ತಮಿಳುನಾಡು ಸರ್ಕಾರ

ಮಿತಭಾಷಿಯಾಗಿದ್ದ ದೇವೇಂದ್ರ ಅವರು ತಮ್ಮ ಭಾವನೆಗಳನ್ನು ಅತ್ಯಂತ ವಿರಳವಾಗಿ ವ್ಯಕ್ತಪಡಿಸುತ್ತಿದ್ದರು ಎಂದು ಅವರ ಪುತ್ರ ಚುನಾವಣಾ ಶಾಸ್ತ್ರಜ್ಞ, ರಾಜಕೀಯ ಮುಖಂಡ ಯೋಗೇಂದ್ರ ಯಾದವ್ ಅವರು ನೆನಪಿಸಿಕೊಳ್ಳುತ್ತಾರೆ. ಯೋಗೇಂದ್ರ ಅವರು ಹತ್ತನೇ ತರಗತಿಯಲ್ಲಿ ಒಳ್ಳೆಯ ಅಂಕಗಳನ್ನು ಪಡೆದಾಗ, ಐಐಟಿಗೆ ಸೇರಿಸಿ, ಐಎಎಸ್ ಮಾಡಿಸಿ ಎಂದು ಎಲ್ಲರೂ ಸಲಹೆ ನೀಡಿದರಂತೆ. ಆದರೆ ಇವೆಲ್ಲವುಗಳಿಗಿಂತ ಸಮಾಜಕ್ಕಾಗಿ ದುಡಿಯುವುದು ಮುಖ್ಯ ಎಂದು ಕಲಾ ವಿಭಾಗಗಕ್ಕೆ (ಹ್ಯುಮಾನಿಟಿಸ್) ಸೇರಲು ಮಗನಿಗೆ ಪ್ರೋತ್ಸಾಹಿದರಂತೆ. ತನ್ನ ಹುಟ್ಟಿನ ಸಂಯೋಗದಿಂದ ವಿಚಾರಧಾರೆಯನ್ನು ಬೆಳೆಸಿಕೊಳ್ಳಬಾರದು ಹಾಗೂ ತನ್ನ ವಿರೋಧಿಗಳ ಮಾತನ್ನು ಆಲಿಸಬೇಕು ಎಂಬ ಎರಡು ಪಾಠಗಳನ್ನು ನನಗೆ ಕಲಿಸಿದರು ಹಾಗೂ ಈ ಎರಡು ಪಾಠಗಳು ಈಗಲೂ ನನ್ನನ್ನು ಪ್ರಭಾವಿಸುತ್ತವೆ ಎಂದು ಯೋಗೇಂದ್ರ ಯಾದವ್ ಅವರು ತನ್ನ ತಂದೆಯ ಅಂತ್ಯ ಸಂಸ್ಕಾರವನ್ನು ನಿರ್ವಹಿಸಿ ಹೇಳಿದರು.

ತನ್ನ ಕೊನೆಗಾಲದ ತನಕ ತಾನು ನಂಬಿದ ಆದರ್ಶಗಳ ಮೇಲೆ ಸರಳ ಜೀವನ ನಡೆಸಿ, ತನ್ನ ಗ್ರಾಮದ ಮನೆಯಲ್ಲೇ ಕೊನೆಯುಸಿರೆಳೆದ ದೇವೇಂದ್ರ ಸಿಂಗ್ ಯಾದವ್ ಅವರ ಜೀವನ ದೇಶಕ್ಕೆ ಜಾತ್ಯತೀತತೆಯ ಪಾಠವನ್ನು ಇನ್ನೊಮ್ಮೆ ನೆನಪಿಸಲಿ ಎಂದು ಆಶಿಸುವ.


ಇದನ್ನೂ ಓದಿ: ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಪ್ರಕರಣ: FIR ರದ್ದತಿ ಕೋರಿದ್ದ ಮನವಿ ತಿರಸ್ಕರಿಸಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...