Homeಮುಖಪುಟಕೋಮು ಗಲಭೆಯಲ್ಲಿ ತಂದೆಯನ್ನು ಕಳೆದುಕೊಂಡರೂ ಜಾತ್ಯಾತೀತ ಮೌಲ್ಯಗಳನ್ನು ಉಳಿಸಿಕೊಂಡಿದ್ದ ದೇವೇಂದ್ರ ಸಿಂಗ್ ಯಾದವ್

ಕೋಮು ಗಲಭೆಯಲ್ಲಿ ತಂದೆಯನ್ನು ಕಳೆದುಕೊಂಡರೂ ಜಾತ್ಯಾತೀತ ಮೌಲ್ಯಗಳನ್ನು ಉಳಿಸಿಕೊಂಡಿದ್ದ ದೇವೇಂದ್ರ ಸಿಂಗ್ ಯಾದವ್

"ತನ್ನ ಕಣ್ಣೆದುರಿಗೆ ಆದ ತನ್ನ ತಂದೆಯ ಕೊಲೆಯಿಂದ ಆ ಬಾಲಕನ ಮೇಲೆ ಏನೆಲ್ಲ ಪರಿಣಾಮ ಬೀರಿತೋ ಏನೋ. ತಂದೆಯನ್ನು ತನ್ನ ಕಣ್ಣೆದುರಿಗೇ ಕೊಂದ ಮುಸಲ್ಮಾನರನ್ನು ದ್ವೇಷಿಸಲು ಅವರಿಗೆ ಸಾಕಷ್ಟು ಕಾರಣಗಳಿದ್ದವು"

- Advertisement -
- Advertisement -

ಸ್ವರಾಜ್ ಇಂಡಿಯಾ ಪಕ್ಷದ ಮುಖ್ಯಸ್ಥ ಯೋಗೇಂದ್ರ ಯಾದವ್ ಅವರ ತಂದೆ ಪ್ರೊ.ದೇವೇಂದ್ರ ಸಿಂಗ್ ಯಾದವ್ (1930-2020) ಬುಧವಾರ ನಿಧನರಾಗಿದ್ದು, ಅವರ ಕುರಿತ ಪರಿಚಯ ಮಾಡಿಕೊಳ್ಳುತ್ತಾ ಅವರಿಗೆ ಈ ನುಡಿ ನಮನ.

ದೇವೇಂದ್ರ ಎಂಟು ವರ್ಷದ ಬಾಲಕನಾಗಿದ್ದಾಗ ಕಣ್ಣೆದುರೇ ತನ್ನ ತಂದೆಯ ಕೊಲೆಗೆ ಸಾಕ್ಷಿಯಾದ. 1936 ರ ಸಮಯ. ಈಗಿನ ಹರಿಯಾಣಾದ ಹಿಸಾರ್ ಎನ್ನುವ ಪಟ್ಟಣದಲ್ಲಿ ರಾಮ್ ಸಿಂಗ್ ಒಂದು ಶಾಲೆಯ ಶಿಕ್ಷಕರಾಗಿದ್ದರು. ಸ್ವಾತಂತ್ರಪೂರ್ವದ ಸಮಯ. ಅಲ್ಲಲ್ಲಿ ಕೋಮು ದಳ್ಳುರಿಗಳು ನಡೆಯುತ್ತಿದ್ದವು. ರಾಮ್‌ಸಿಂಗ್ ಅವರು ಶಿಕ್ಷಕರಾಗಿದ್ದ ಶಾಲೆಗೆ ಕೋಮು ಗಲಭೆಯನ್ನೆಬ್ಬಿಸುತ್ತ ಮುಸಲ್ಮಾನರ ಗುಂಪೊಂದು ಬಂದು ಅಲ್ಲಿದ್ದ ಮಕ್ಕಳನ್ನು ತಮ್ಮ ವಶಕ್ಕೆ ನೀಡಬೇಕೆಂದು ಆದೇಶಿಸಿದರು. ಮಕ್ಕಳನ್ನು ಮುಟ್ಟುವುದಕ್ಕಿಂತ ಮುಂಚೆ ಮೊದಲು ನನ್ನನ್ನು ನೋಡಿಕೊಳ್ಳಿ ಎಂದು ತಮ್ಮ ಕರ್ತವ್ಯ ಪಾಲಿಸಿದರು ರಾಮ್‌ಸಿಂಗ್. ಆಗ ಅವರ ಕುತ್ತಿಗೆಯನ್ನು ಆ ಗಲಭೆಕೋರರು ಕುಡಗೋಲಿನಿಂದ ಸೀಳಿದರು. ಈ ಘಟನೆಯನ್ನು ನೋಡುತ್ತ ನಿಂತವರಲ್ಲಿದ್ದ ಏಳು ವರ್ಷದ ಬಾಲಕನೇ ಈ ದೇವೇಂದ್ರ ಸಿಂಗ್, ಕೊಲೆಗೀಡಾದ ಶಿಕ್ಷಕ ರಾಮ್‌ಸಿಂಗ್ ಅವರ ಪುತ್ರ.

ಇದನ್ನೂ ಓದಿ: ಕರ್ತವ್ಯದ ನಡುವೆ ಮದ್ಯ ಸೇವಿಸಿದ್ದ ಪೊಲೀಸರ ವೀಡಿಯೋ ವೈರಲ್: ಅಮಾನತು

ತನ್ನ ಕಣ್ಣೆದುರಿಗೆ ಆದ ತನ್ನ ತಂದೆಯ ಕೊಲೆಯಿಂದ ಆ ಬಾಲಕನ ಮೇಲೆ ಏನೆಲ್ಲ ಪರಿಣಾಮ ಬೀರಿತೋ ಏನೋ. ತಂದೆಯನ್ನು ತನ್ನ ಕಣ್ಣೆದುರಿಗೇ ಕೊಂದ ಮುಸಲ್ಮಾನರನ್ನು ದ್ವೇಷಿಸಲು ಅವರಿಗೆ ಸಾಕಷ್ಟು ಕಾರಣಗಳಿದ್ದವು. ಆದರೆ ಆ ಬಾಲಕ ಬೆಳೆಯುತ್ತಿರುವ ಸಮಯ ಸ್ವಾತಂತ್ರ ಸಂಗ್ರಾಮದ ಸಮಯ. ಗಾಂಧೀಜಿಯವರ ಸತ್ಯಾಗ್ರಹಗಳ, ಹಿಂದು ಮುಸ್ಲಿಂ ಏಕತೆಗಾಗಿ ಜೀವ ತೇಯುತ್ತಿದ್ದ ಸಮಯ. ನಾನೊಬ್ಬ ಹಿಂದು ಆಗಲಿ, ಮುಸಲ್ಮಾನನಾಗಲಿ ಆಗುವುದಿಲ್ಲ, ನಾನು ಆಗುವುದು ಒಬ್ಬ ಮನುಷ್ಯ ಎನ್ನುವ ಮಾತುಗಳನ್ನು ಕೇಳಿದ ದೇವೇಂದ್ರ ಸಿಂಗ್, ತಮ್ಮ ಜೀವನವನ್ನು ದ್ವೇಷ ಆಕ್ರಮಿಸಿಕೊಳ್ಳಲು ಅವಕಾಶ ನೀಡಲಿಲ್ಲ.

ಬೆಳೆದು ಅರ್ಥಶಾಸ್ತ್ರದ ಪ್ರಾಧ್ಯಾಪಕರಾದ ದೇವೇಂದ್ರ ಸಿಂಗ್, ತಮ್ಮ ಮಕ್ಕಳಿಗೆ ಮುಸ್ಲಿಂ ಹೆಸರುಗಳನ್ನಿಡಲು ನಿರ್ಧರಿಸಿದರು. ತನ್ನ ತಂದೆಯನ್ನು ತನ್ನೆದುರಿಗೆ ಕೊಂದ ಸಮುದಾಯದವರ ಹೆಸರನ್ನು ನೀಡಲು ನಿರ್ಧರಿಸಿದರು. ಮೊದಲ ಮಗುವಿಗೆ ನಜ್ಮಾ ಎಂದು ಹೆಸರಿಡುವಾಗ ಅವರ ಹೆಂಡತಿ, ಮಗಳಿಗೆ ಬೇಡ, ಮುಂದೆ ಗಂಡು ಮಗುವಾದಾಗ ಈ ಪ್ರಯೋಗವನ್ನು ಮಾಡುವ, ಹೆಣ್ಣು ಮಗಳ ಮೇಲೆ ಬೇಡ, ಮುಂದೆ ಮದುವೆಗೆ ಸಮಸ್ಯೆಯಾಗುತ್ತೆ ಎಂದರು. ಹಾಗಾಗಿ ಆ ಹೆಣ್ಣು ಮಗುವಿಗೆ ನೀಲಂ ಎಂದು ನಾಮಕರಣ ಮಾಡಲಾಯಿತು. ನಂತರ ಗಂಡು ಮಗುವಾದಾಗ ಸಲೀಂ ಎನ್ನುವ ಹೆಸರನ್ನಿಟ್ಟರು.

ಇದನ್ನೂ ಓದಿ: ರೂಪಾಂತರಿ ಕೊರೊನಾ ವೈರಸ್ ಭೀತಿ: ರಾತ್ರಿ ಕರ್ಫ್ಯೂ ದಿನಾಂಕ ಬದಲಿಸಿದ ಮುಖ್ಯಮಂತ್ರಿ!

ರಾಜಸ್ಥಾನದ ಒಂದು ಹಳ್ಳಿಯಲ್ಲಿ ಶಾಲೆಗೆ ಹೋಗುತ್ತಿದ್ದ ಆ ಬಾಲಕನ ಶಾಲೆಯಲ್ಲಿ ಯಾವ ಮುಸಲ್ಮಾನ ಮಕ್ಕಳೂ ಇರಲಿಲ್ಲ. ಹಾಗಾಗಿ, ಎಲ್ಲ ಮಕ್ಕಳಿಗೂ ಇವನ ಬಗ್ಗೆ ಕುತೂಹಲ. ನೀನ್ಯಾರು, ನಿನ್ನನ್ನು ದತ್ತು ತೆಗೆದುಕೊಂಡಿದ್ದಾರಾ? ಮುಸಲ್ಮಾನರು ಹೇಗಿರುತ್ತಾರೆ? ಎಂದೆಲ್ಲಾ ಪೀಡಿಸಲಾರಂಭಿಸಿದರು. ದೇವೇಂದ್ರ ಅವರು ಜಾತ್ಯತೀತತೆಯ ಬಗ್ಗೆ, ಆ ಪುಟ್ಟ ಮಗು ಸಲೀಂನಿಗೆ ಏನೆಲ್ಲಾ ಹೇಳಿದರೂ ಅವನಿಗೆ ತಲೆಬುಡ ಅರ್ಥವಾಗಲಿಲ್ಲ. ಒಂದು ದಿನ ಮನೆಗೆ ಬಂದು, ಇಲ್ಲ ನನ್ನ ಹೆಸರನ್ನು ಬದಲಾಯಿಸಿ, ಇಲ್ಲವಾದರೆ ಇನ್ನು ಮುಂದೆ ನಾನು ಶಾಲೆಗೆ ಹೋಗೂದಿಲ್ಲ ಎಂದು ಘೋಷಿಸಿದರು. ಆಗ ಸಲೀಂ ಅಂತ ಇದ್ದ ಹೆಸರು ಯೋಗೇಂದ್ರ ಎಂದಾಯಿತು.

ನುಡಿ ನಮನ: ಕೋಮುಗಲಭೆಯಲ್ಲಿ ತಂದೆಯನ್ನು ಕಳೆದುಕೊಂಡರೂ ಜಾತ್ಯಾತೀತ ಮೌಲ್ಯಗಳನ್ನು ಉಳಿಸಿಕೊಂಡಿದ್ದ ದೇವೇಂದ್ರ ಸಿಂಗ್ ಯಾದವ್

 

ನಿನ್ನೆ ದೇವೇಂದ್ರ ಸಿಂಗ್ ತಮ್ಮ ಹಳ್ಳಿ ಸಹಾರನವಾಸ್‌ನಲ್ಲಿ ಕೊನೆಯುಸಿರೆಳೆದರು. ಇದೇ ಹಳ್ಳಿಯಲ್ಲಿ ಹುಟ್ಟಿದ ದೇವೇಂದ್ರ ಮೊದಲ ಕೆಲ ವರ್ಷ ಹಿಸಾರ್‌ನಲ್ಲಿದ್ದು, ತಂದೆಯ ಕೊಲೆಯ ನಂತರ ಹಳ್ಳಿಗೆ ಮರಳಿ, ಹೊಸ ಜೀವನ ಶುರು ಮಾಡಿದರು. 5ನೇ ತರಗತಿಯ ತನಕ ಹಳ್ಳಿಯಲ್ಲಿ ಓದಿ, ನಂತರ ರೇವಾಡಿಯಲ್ಲಿ, ತದನಂತರ ಜಲಂಧರ್‌ನಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಮಾಡಿ, ಗಂಗಾನಗರದ ಖಾಲ್ಸಾ ಕಾಲೇಜಿನಲ್ಲಿ ಅಧ್ಯಾಪಕರಾಗಿ ದುಡಿದು, ನಿವೃತ್ತಿಯ ನಂತರ 1987 ರಲ್ಲಿ ಮತ್ತೆ ತನ್ನ ಹುಟ್ಟೂರಾದ ಸಹಾರನವಾಸ್‌ಗೆ ಮರಳಿ, ಕೊನೆಯ ತನಕ ಅಲ್ಲಿಯೇ ಉಳಿದರು.

ಅಲ್ಲಿ ಬಂದು ಒಂದು ಗ್ರಂಥಾಲಯವನ್ನು ಸ್ಥಾಪಿಸಿದರು. ತದನಂತರ ಅದೇ ಗ್ರಾಮದಲ್ಲಿ ಪ್ರಾರಂಭವಾದ ಅಂಬೇಡ್ಕರ್ ಗ್ರಂಥಾಲಯವನ್ನು ಮುನ್ನಡೆಸಿದರು. ಅದರೊಂದಿಗೆ ‘ಸಂಪೂರ್ಣ ಕ್ರಾಂತಿ ಮಂಚ್’ ಎಂಬ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಚಳವಳಿಗಳಲ್ಲಿ ನಂಬಿಕೆಯಿಟ್ಟಿದ್ದ ದೇವೇಂದ್ರ ಯಾದವ್ ಅವರು ತಮ್ಮ ಪಿಂಚಣಿಯಲ್ಲಿ ಒಂದು ಭಾಗವನ್ನು ಸಾಮಾಜಿಕ ಕಾರ್ಯಕರ್ತರಿಗೆ ಕೊಡುತ್ತಿದ್ದರು.

ಇದನ್ನೂ ಓದಿ: ಜಲ್ಲಿಕಟ್ಟು ಕ್ರೀಡೆಗೆ ಒಪ್ಪಿಗೆ: ಕೊರೊನಾ ಮಾರ್ಗಸೂಚಿ ಪಾಲಿಸಿ ಎಂದ ತಮಿಳುನಾಡು ಸರ್ಕಾರ

ಮಿತಭಾಷಿಯಾಗಿದ್ದ ದೇವೇಂದ್ರ ಅವರು ತಮ್ಮ ಭಾವನೆಗಳನ್ನು ಅತ್ಯಂತ ವಿರಳವಾಗಿ ವ್ಯಕ್ತಪಡಿಸುತ್ತಿದ್ದರು ಎಂದು ಅವರ ಪುತ್ರ ಚುನಾವಣಾ ಶಾಸ್ತ್ರಜ್ಞ, ರಾಜಕೀಯ ಮುಖಂಡ ಯೋಗೇಂದ್ರ ಯಾದವ್ ಅವರು ನೆನಪಿಸಿಕೊಳ್ಳುತ್ತಾರೆ. ಯೋಗೇಂದ್ರ ಅವರು ಹತ್ತನೇ ತರಗತಿಯಲ್ಲಿ ಒಳ್ಳೆಯ ಅಂಕಗಳನ್ನು ಪಡೆದಾಗ, ಐಐಟಿಗೆ ಸೇರಿಸಿ, ಐಎಎಸ್ ಮಾಡಿಸಿ ಎಂದು ಎಲ್ಲರೂ ಸಲಹೆ ನೀಡಿದರಂತೆ. ಆದರೆ ಇವೆಲ್ಲವುಗಳಿಗಿಂತ ಸಮಾಜಕ್ಕಾಗಿ ದುಡಿಯುವುದು ಮುಖ್ಯ ಎಂದು ಕಲಾ ವಿಭಾಗಗಕ್ಕೆ (ಹ್ಯುಮಾನಿಟಿಸ್) ಸೇರಲು ಮಗನಿಗೆ ಪ್ರೋತ್ಸಾಹಿದರಂತೆ. ತನ್ನ ಹುಟ್ಟಿನ ಸಂಯೋಗದಿಂದ ವಿಚಾರಧಾರೆಯನ್ನು ಬೆಳೆಸಿಕೊಳ್ಳಬಾರದು ಹಾಗೂ ತನ್ನ ವಿರೋಧಿಗಳ ಮಾತನ್ನು ಆಲಿಸಬೇಕು ಎಂಬ ಎರಡು ಪಾಠಗಳನ್ನು ನನಗೆ ಕಲಿಸಿದರು ಹಾಗೂ ಈ ಎರಡು ಪಾಠಗಳು ಈಗಲೂ ನನ್ನನ್ನು ಪ್ರಭಾವಿಸುತ್ತವೆ ಎಂದು ಯೋಗೇಂದ್ರ ಯಾದವ್ ಅವರು ತನ್ನ ತಂದೆಯ ಅಂತ್ಯ ಸಂಸ್ಕಾರವನ್ನು ನಿರ್ವಹಿಸಿ ಹೇಳಿದರು.

ತನ್ನ ಕೊನೆಗಾಲದ ತನಕ ತಾನು ನಂಬಿದ ಆದರ್ಶಗಳ ಮೇಲೆ ಸರಳ ಜೀವನ ನಡೆಸಿ, ತನ್ನ ಗ್ರಾಮದ ಮನೆಯಲ್ಲೇ ಕೊನೆಯುಸಿರೆಳೆದ ದೇವೇಂದ್ರ ಸಿಂಗ್ ಯಾದವ್ ಅವರ ಜೀವನ ದೇಶಕ್ಕೆ ಜಾತ್ಯತೀತತೆಯ ಪಾಠವನ್ನು ಇನ್ನೊಮ್ಮೆ ನೆನಪಿಸಲಿ ಎಂದು ಆಶಿಸುವ.


ಇದನ್ನೂ ಓದಿ: ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಪ್ರಕರಣ: FIR ರದ್ದತಿ ಕೋರಿದ್ದ ಮನವಿ ತಿರಸ್ಕರಿಸಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...