Homeಕರೋನಾ ತಲ್ಲಣರಾತ್ರಿ ಕರ್ಫ್ಯೂ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ರಾತ್ರಿ ಕರ್ಫ್ಯೂ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಬಿಬಿಎಂಪಿ ಕೂಡಾ ಕ್ರಿಸ್ಮಸ್‌ ಹಾಗೂ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ

- Advertisement -
- Advertisement -

ರೂಪಾಂತರಿ ಕೊರೊನಾ ವೈರಸ್‌ ಕಂಡು ಬಂದಿರುವ ಹಿನ್ನಲೆಯಲ್ಲಿ ಗುರುವಾರ ರಾತ್ರಿಯಿಂದ ಜನವರಿ 2 ರ ಮುಂಜಾನೆಯವರೆಗೆ ’ರಾತ್ರಿ ಕರ್ಫ್ಯೂ’ವನ್ನು ರಾಜ್ಯ ಸರ್ಕಾರ ಜಾರಿಗೊಳಿಸಿತ್ತು. ಇದೀಗ ಈ ರಾತ್ರಿ ಕರ್ಫ್ಯೂವಿನ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದೆ.

ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಕಟ್ಟುನಿಟ್ಟಾಗಿ ಕರ್ಫ್ಯೂ ಜಾರಿಯಾಗಲಿದೆ. ದೀರ್ಘ ಪ್ರಯಾಣದ, ಬಸ್, ರೈಲು ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಸರಕು ವಾಹನಗಳ ಸಂಚಾರಕ್ಕೆ ಕರ್ಫ್ಯೂನಿಂದ ವಿನಾಯಿತಿ ನೀಡಲಾಗಿದೆ. 50% ರಷ್ಟು ಮಾನವ ಶಕ್ತಿಯೊಂದಿಗೆ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ರೀತಿಯ ಕೈಗಾರಿಕಾ ಸಂಸ್ಥೆಗಳಿಗೂ ರಾಜ್ಯ ಸರ್ಕಾರ ಸಡಿಲಿಕೆ ನೀಡಿದೆ. ಆದರೆ ಇದಕ್ಕೆ ಆ ಸಂಸ್ಥೆಯ ಗುರುತಿನ ಚೀಯನ್ನು ಇಟ್ಟುಕೊಳ್ಳುವುದು ಅವಶ್ಯಕವಾಗಿದೆ.

ಇದನ್ನೂ ಓದಿ: ರೂಪಾಂತರಿ ಕೊರೊನಾ ವೈರಸ್ ಭೀತಿ: ರಾತ್ರಿ ಕರ್ಫ್ಯೂ ದಿನಾಂಕ ಬದಲಿಸಿದ ಮುಖ್ಯಮಂತ್ರಿ!

ರಾತ್ರಿ 11 ರಿಂದ ಬೆಳಗ್ಗೆ 5 ರವರೆಗೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಜನರ ಪ್ರಯಾಣಕ್ಕೆ ನಿಷೇಧ ಹೇರಲಾಗಿದೆ. ದಿನದ 24 ಗಂಟೆ ಕರ್ತವ್ಯ ನಿರ್ವಹಿಸುತ್ತಿರುವ ಕೈಗಾರಿಕೆಗಳು, ಕಾರ್ಖಾನೆಗಳಿಗೆ ಯಾವುದೇ ರೀತಿಯ ನಿರ್ಬಂಧವಿಲ್ಲದೆ ನಿರಂತರ ಕಾರ್ಯಾಚರಣೆ ನಡೆಸಲು ಅನುಮತಿಯಿದೆ.

ಅಲ್ಲದೆ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳಿಂದ ಪ್ರಯಾಣಿಕರನ್ನು ಕರೆತರಲು ಹಾಗೂ ಕರೆದೊಯ್ಯುವ ಟ್ಯಾಕ್ಸಿ ಹಾಗೂ ಆಟೋಗಳಿಗೆ ಅನುಮತಿಯಿದೆ. ಆದರೆ ಈ ವೇಳೆ ಪ್ರಯಾಣದ ಟಿಕೆಟ್​​ಅನ್ನು ಪ್ರಯಾಣಿಕರು ಹೊಂದಿರುವುದು ಕಡ್ಡಾಯವಾಗಿರುತ್ತದೆ.

ಕ್ರಿಸ್ಮಸ್ ಆಚರಣೆಗೆ ಅವಕಾಶ ನೀಡಲಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡಬಹುದು ಎಂದು ಮುಖ್ಯಮಂತ್ರಿ ಸಂಜೆ ಟ್ವೀಟ್ ಮಾಡಿ ತಿಳಿಸಿದ್ದರು.

ಇದನ್ನೂ ಓದಿ: ಇಂದಿನಿಂದ ರಾಜ್ಯದಲ್ಲಿ ’ರಾತ್ರಿ ಕರ್ಫ್ಯೂ’ ಜಾರಿ: ಮುಖ್ಯಮಂತ್ರಿ ಯಡಿಯೂರಪ್ಪ

ಕ್ರಿಸ್ಮಸ್‌ ಹಾಗೂ ಹೊಸ ವರ್ಷಾಚರಣೆಗೆ ಬಿಬಿಎಂಪಿ ಮಾರ್ಗಸೂಚಿ

ಚರ್ಚ್‌, ದೇವಸ್ಥಾನ, ಮಸೀದಿ ಮತ್ತು ಇತರ ಧಾರ್ಮಿಕ ಸ್ಥಳಗಳಲ್ಲಿ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತರ ಕಾಪಾಡಿಕೊಂಡು, ಹಸ್ತಲಾಘವ ಮತ್ತು ಆಲಿಂಗನದಿಂದ ದೂರವಿರಬೇಕು ಎಂದು ಬಿಬಿಎಂಪಿ ತನ್ನ ಮಾರ್ಗಸೂಚಿಯಲ್ಲಿ ಹೇಳಿದೆ.

ಡಿಸೆಂಬರ್‌ 30 ರಿಂದ 2021ರ ಜನವರಿ 2 ರವರೆಗೆ ಕ್ಲಬ್‌, ಪಬ್, ರೆಸ್ಟೋರೆಂಟ್‌ ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಗುಂಪುಗೂಡುವಿಕೆ, ವಿಶೇಷ ಡಿಜೆ, ನೃತ್ಯ ಕಾರ್ಯಕ್ರಮಗಳನ್ನು, ವಿಶೇಷ ಪಾರ್ಟಿಗಳನ್ನು ನಿಷೇಧಿಸಲಾಗಿದೆ. ಆದರೆ, ಕ್ಲಬ್‌, ಪಬ್‌, ರೆಸ್ಟೋರೆಂಟ್‌ಗಳು ಎಂದಿನಂತೆ ತೆರೆದಿರಲಿದೆ ಎಂದು ಬಿಬಿಎಂಪಿ ಆದೇಶದಲ್ಲಿ ತಿಳಿಸಿದೆ.

ಈ ಸಮಯದಲ್ಲಿ 65 ವರ್ಷದ ಹಿರಿಯರು ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಇರಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಿದ್ದು, ಹೋಟೆಲ್‌, ಮಾಲ್‌, ಪಬ್‌, ರೆಸ್ಟೋರೆಂಟ್‌ಗಳಲ್ಲಿ ಥರ್ಮಲ್‌ ಸ್ಕ್ರೀನಿಂಗ್‌ ಮತ್ತು ಸ್ಯಾನಿಟೈಸರ್‌ ಬಳಕೆ ಕಡ್ಡಾಯ ಎಂದು ಹೇಳಿದೆ. ಅಲ್ಲದೆ ಆನ್‌ಲೈನ್‌ ಅಥವಾ ಟೋಕನ್‌ ಪದ್ಧತಿಯಲ್ಲಿ ಸ್ಥಳ ಕಾಯ್ದಿರಿಸಲು ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ: ಹೊಸ ಕೊರೊನಾ ಆತಂಕ: ಲಂಡನ್‌ನಿಂದ ಬಂದಿದ್ದ 6 ಮಂದಿಗೆ ಕೊರೊನಾ ಸೋಂಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...