Homeಅಂಕಣಗಳುಧರ್ಮಗಳನು ಮೀರಿದ ಈ ಮಾತೃತ್ವ

ಧರ್ಮಗಳನು ಮೀರಿದ ಈ ಮಾತೃತ್ವ

- Advertisement -
- Advertisement -

ಗೌರಿ ಲಂಕೇಶ್
20 ಆಗಸ್ಟ್, 2008 (`ಕಂಡಹಾಗೆ’ ಸಂಪಾದಕೀಯದಿಂದ) |

ನಾನು ಸಿನಿಕಳಲ್ಲ. ಆದ್ದರಿಂದ ನಮ್ಮ ದೇಶಕ್ಕೆ ಇನ್ನೂ ಭವಿಷ್ಯವಿದೆ ಇಲ್ಲಿ ಜಾತಿ, ಧರ್ಮ ದಂತಹ ಭೇದಗಳನ್ನು ಮೀರುವ ಜನರಿದ್ದಾರೆ. ಮಮತೆ ಮತ್ತು ಮಾನವೀಯತೆಗೆ ಇನ್ನೂ ಮೌಲ್ಯವಿದೆ ಎಂದು ಸಾರುವ ಒಂದು ನಿಜ ಕಥೆಯನ್ನು ಇಲ್ಲಿ ಹೇಳುತ್ತೇನೆ. ಈ ಕತೆಯ ಕೇಂದ್ರಬಿಂದು ವಿವೇಕ್ ಅಲಿಯಾಸ್ ಮುಜಾಫರ್ ಎಂಬ ಎಂಟು ವರ್ಷದ ಬಾಲಕ. ಮುಖ್ಯಪಾತ್ರಧಾರಿಗಳು ಆತನಿಗೆ ಜನ್ಮಕೊಟ್ಟ ಜಬುನ್ನೀಸಾ ಮತ್ತು ಸಲೀಂ ಎಂಬ ಮುಸ್ಲಿಂ ದಂಪತಿಗಳು ಹಾಗೂ ಆತನನ್ನು ಕಳೆದ ಆರು ವರ್ಷಗಳಿಂದ ಅಕ್ಕರೆಯಿಂದ ಸಾಕಿರುವ ವೀಣಾಪಟ್ನಿ ಎಂಬ ಹಿಂದೂ ತಾಯಿ.
ವಿವೇಕ್ ಅಲಿಯಾಸ್ ಮುಜಾಫರ್‍ನ ಕಥೆ ಪ್ರಾರಂಭವಾಗುವುದು 2002ರಿಂದ. ಅದು ಫೆಬ್ರವರಿ 28. ಹಿಂದಿನ ದಿನವೇ ಗೋದ್ರದಲ್ಲಿ ಸಬರಮತಿ ರೈಲಿನ ಹಲವು ಬೋಗಿಗಳಿಗೆ ಬೆಂಕಿ ಬಿದ್ದು 59 ಅಮಾಯಕರು ಆಹುತಿಯಾಗಿದ್ದರು. ಅದಕ್ಕೆ ಪ್ರತಿಯಾಗಿ ಅಮಾಯಕ ಮುಸಲ್ಮಾನರ ಮೇಲೆ ಹಿಂದುತ್ವವಾದಿಗಳ ದಾಳಿ ಶುರುವಾಗಿತ್ತು.
ಸಲೀಂ ತನ್ನ 2 ವರ್ಷದ ಮಗ ಮುಜಾಫರ್‍ನೊಂದಿಗೆ ಅಹಮದಾಬಾದಿನ ಗುಲ್ಬರ್ಗ್ ಸೊಸೈಟಿಗೆ ಹೋಗಿದ್ದರು. ಆಗ ಅಲ್ಲೇ ಇದ್ದ ಕಾಂಗ್ರೆಸ್‍ನ ಮಾಜಿ ಸಂಸದ ಇಶಾನ್ ಜಾಫ್ರಿಯವರ ಮನೆ ಮೇಲೆ ಹಿಂದೂತ್ವವಾದಿಗಳ ಗುಂಪೊಂದು ದಾಳಿ ಇಟ್ಟು, ಜಾಫ್ರಿ ಅವರನ್ನು ತುಂಡು ತುಂಡಾಗಿ ಕತ್ತರಿಸಿ ಕೊಂದಿತ್ತಲ್ಲದೆ, ಅವರ ಮನೆಗೆ ಬೆಂಕಿ ಇಟ್ಟು ಅವತ್ತು ಅವರೊಂದಿಗಿದ್ದ ಎಷ್ಟೋ ಜನರನ್ನು ಕೊಂದು ಹಾಕಿತು. ಇಂತಹ ಅಮಾನುಷ ಗುಂಪಿನಿಂದ ತಪ್ಪಿಸಿಕೊಳ್ಳಲು ಸಲೀಂ ಓಡಿದರು. ಅವರು ವಾಪಸ್ಸು ಬಂದಾಗ, ಹಿಂದುತ್ವವಾದಿಗಳ ಗುಂಪು ಕೊಂದು ಹಾಕಿದ್ದ ಅವರ ಅಜ್ಜಿಯ ಹೆಣ ಇತ್ತೇ ಹೊರತು ಮಗ ಮುಜಾಫರ್‍ನ ಸುಳಿವಿರಲಿಲ್ಲ. ಸುಮಾರು ಎರಡು ತಿಂಗಳ ಕಾಲ ನಡೆದ ಮಾರಣ ಹೋಮದಲ್ಲಿ ಸುಮಾರು ಮೂರು ಸಾವಿರ ಮುಸಲ್ಮಾನರು ಸಾವನ್ನಪ್ಪಿದರೆ, 400ಕ್ಕೂ ಹೆಚ್ಚು ಜನ ಮತ್ತು ಮಕ್ಕಳು ನಾಪತ್ತೆಯಾದರು.
ಅವತ್ತಿನಿಂದ ಮುಜಾಫರ್‍ಗಾಗಿ ತುಂಬಾ ಹುಡುಕಾಡಿದರು, ಪೊಲೀಸರಿಗೆ ದೂರು ನೀಡಿದರು, ತಮ್ಮ ಮಗ ಎಲ್ಲೋ ಸುರಕ್ಷಿತವಾಗಿದ್ದಾನೆ, ಸಿಕ್ಕೇ ಸಿಗುತ್ತಾನೆ ಎಂಬ ಆಶೆಯಲ್ಲಿ ಬದುಕುತ್ತಿದ್ದರು.

veena patni and muzaffar

ಅವರಿಗೆ ಗೊತ್ತಿಲ್ಲದಿದ್ದು ಏನೆಂದರೆ ಪ್ರವೀಣ್ ಪಟ್ನಿ ಎಂಬ ಪೊಲೀಸ್ ಪೇದೆ ತನಗೆ ಸಿಕ್ಕ ಮುಜಾಫರ್‍ನನ್ನು ತನ್ನ ಸಂಬಂಧಿಕರಾದ ವಿಕ್ರಮ್ ಮತ್ತು ವೀಣಾ ಪಟ್ನಿ ಎಂಬ ದಂಪತಿಗಳಿಗೆ ನೀಡಿದ್ದ. ಪಟ್ನಿ ದಂಪತಿಗಳು ಮಕ್ಕಳಿಲ್ಲದವರಾಗಿರಲಿಲ್ಲ, ಹಣವಂತರೂ ಆಗಿರಲಿಲ್ಲ. ಅವರಿಬ್ಬರಿಗೆ ಬೆಳೆದು ನಿಂತಿದ್ದ 4 ಮಕ್ಕಳಿದ್ದರು. ವಿಕ್ರಂ ಕೂಲಿ ಕೆಲಸ ಮಾಡುತ್ತಿದ್ದರೆ, ವೀಣಾ ಮೀನು ಮಾರಿ ಹಣ ಸಂಪಾದಿಸುತ್ತಿದ್ದರು.
ನಾನು ಯಾರು, ಎಲ್ಲಿಂದ ಬಂದೆ ಎಂಬುದು ಗೊತ್ತಿರದ 2 ವರ್ಷದ ಬಾಲಕ ತಮ್ಮ ಸುಪರ್ದಿಗೆ ಬಂದ ನಂತರ ಆತನಿಗೆ ವಿವೇಕ್ ಎಂದು ಮರುನಾಮಕರಣ ಮಾಡಿದ ಪಟ್ನಿ ದಂಪತಿಗಳು ಅವನನ್ನು ಪ್ರೀತಿಯಿಂದಲೇ ಸಲಹಲಾರಂಭಿಸಿದರು. ಆತನಿಗೆ ಕೈತುತ್ತು ನೀಡುತ್ತಾ, ಕೈ ಹಿಡಿದು ನಡೆಸುತ್ತ, ಜೋಗುಳ ಹಾಡುತ್ತಾ, ಆತ ತನಗೆ ಹುಟ್ಟಿದ ಮಗು ಎಂಬಷ್ಟು ಅಕ್ಕರೆಯಿಂದ ವೀಣಾ ಬೆಳೆಸಿದರು.
ಇತ್ತ ತೀಸ್ತಾ ಸೆಟಲ್ವಾಡ್‍ರ ನೆರವಿನೊಂದಿಗೆ ಮಗನಿಗಾಗಿ ಹುಡುಕಾಟವನ್ನು ಸಲೀಂ, ಜಬುನ್ನೀಸಾ ಮುಂದುವರಿಸಿದ್ದರು. ಕೊನೆಗೂ ಮುಜಾಫರ್ ಎಲ್ಲಿದ್ದಾನೆ ಎಂದು ಪತ್ತೆ ಹೆಚ್ಚಿದ ಅವರು ಆತನನ್ನು ಹಿಂದಿರುಗಿಸುವಂತೆ ಕೇಳಿಕೊಂಡರು. ವಿವೇಕ್ ಅವರ ಮಗ ಎಂಬುದಕ್ಕೆ ಸಾಕ್ಷಿ ಏನೆಂದು ವೀಣಾ ಪ್ರಶ್ನಿಸಿದಾಗ ಸಲೀಂ ಮತ್ತು ವಿವೇಕ್ ಆಲಿಯಾಸ್ ಮುಜಾಫರ್ ಡಿಎನ್‍ಎ ಪರೀಕ್ಷಿಸಲಾಯಿತು. ಅದರಿಂದ ವಿವೇಕ್ ನಿಜವಾಗಲೂ ಸಲೀಂ ಮತ್ತು ಜಬುನ್ನೀಸ್ಸಾರ ಮಗ ಎಂದು ಸಾಬೀತಾಯಿತು.
ಆದರೆ ಆರು ವರ್ಷಗಳ ಕಾಲ ಆತನನ್ನು ತನ್ನ ಮಗನೆಂದು ಬೆಳೆಸಿದ್ದ ವೀಣಾ ಅವನನ್ನು ಹೆತ್ತವರಿಗೆ ಹಿಂದಿರುಗಿಸಲು ಒಪ್ಪಲಿಲ್ಲ. ಆಗ ಸಲೀಂ ಮತ್ತು ಜಬುನ್ನೀಸಾ ನ್ಯಾಯಾಲಯದ ಮೆಟ್ಟಿಲೇರಿದ್ದರು. ಅವರ ದುರಂತಕ್ಕೆ ವಿವೇಕನಿಗೆ ತನಗೆ ಜನ್ಮ ನೀಡಿರುವವವರ ನೆನಪೇ ಇರಲಿಲ್ಲ ಮಾತ್ರವಲ್ಲ, ನ್ಯಾಯಾಧೀಶರ ಮುಂದೆ ತಾನು ವೀಣಾ ಅಮ್ಮನೊಂದಿಗೆ ಇರುತ್ತೇನೆ ಎಂದ. ಕಾನೂನಿನ ಪ್ರಕಾರ ಆತ ಹೆತ್ತವರಿಗೆ ಸೇರಬೇಕಿದ್ದರು ಆ ಬಾಲಕನ ಮನಸ್ಸನ್ನು ನೋಯಿಸಬಾರದು ಎಂದು ಅವನನ್ನು ವೀಣಾರೊಂದಿಗೆ ಬಿಡಲಾಯಿತು.
ಸಲೀಂ ಮತ್ತು ಜಬುನ್ನಿಸ್ಸಾರಿಗೆ ತಮ್ಮ ಮಗನ ಮೇಲೆ ವೀಣಾರವರಿಗೆ ಇರುವ ಪ್ರೀತಿ ಅರ್ಥವಾಗುತ್ತದೆ. ಹಾಗಂತ ಹೆತ್ತ ಕುಡಿಯನ್ನು ಮರೆತು ಸುಮ್ಮನಿರಲಾಗುವುದಿಲ್ಲ. ಹೈಕೋರ್ಟ್ ಮೊರೆ ಹೋಗಲು ನಿರ್ಧರಿಸುವ ಸಲೀಂ “ವೀಣಾ ನನ್ನ ಮಗನ ದೊಡ್ಡಮ್ಮ ಆಗಿರಲಿ, ನನ್ನ ಹೆಂಡತಿಯೇ ಆತನಿಗೆ ಚಿಕ್ಕಮ್ಮನಾಗಿರಲಿ. ನಾನು ಅವರನ್ನು ಅತ್ತಿಗೆಯಂತೆ ನೋಡಿಕೊಳ್ಳುತ್ತೇನೆ. ಆದರೆ ನಮಗೆ ನಮ್ಮ ಮಗ ಬೇಕು” ಎನ್ನುತ್ತಾರೆ.
ಬರ್ಟೋಲ್ಡ್ ಬ್ರೆಕ್ಟ್ ರವರ ‘ಕಕೇಶಿಯನ್ ಚಾಕ್ ಸರ್ಕಲ್’ ಎಂಬ ನಾಟಕದಲ್ಲಿ ಹೆತ್ತ ತಾಯಿಯೇ ತನ್ನ ಮಗನನ್ನು ಎಳೆದಾಡಲು ಸಿದ್ಧರಿರುತ್ತಾಳೆ. ಆದರೆ ಆತನನ್ನು ಸಾಕಿ ಸಲುಹಿದ ದತ್ತು ತಾಯಿ ಅವರಿಗೆ ನೋವಾಗಕೂಡದೆಂದು ಅವನನ್ನು ತನ್ನತ್ತ ಎಳೆಯಲು ನಿರಾಕರಿಸುತ್ತಾಳೆ.
ಆದರೆ ಬೈಬಲ್‍ನಲ್ಲಿ ಬರುವ ‘ಜಡ್ಜ್‍ಮೆಂಟ್ ಆಫ್ ಸೋಲಮನ್’ ಪ್ರಸಂಗದಲ್ಲಿ ನ್ಯಾಯಾಧೀಶ ಸೊಲಮನ್ ಮಗುವನ್ನು ಕತ್ತರಿಸಿ ಇಬ್ಬರು ತಾಯಂದಿರಿಗೆ ಹಂಚಲು ತಯಾರಾದಾಗ, ಆತನನ್ನು ಹೆತ್ತ ತಾಯಿ “ತನ್ನ ಮಗುವನ್ನು ಕೊಲ್ಲಬೇಡಿ ಅವಳಿಗೆ ಕೊಡಿ” ಎಂದು ಕಣ್ಣೀರಿಡುತ್ತಾಳೆ.
ಅಂದರೆ ಹೆತ್ತ ತಾಯಿಯ ಪ್ರೀತಿ ದೊಡ್ಡದು, ಸಾಕಿ ಸಲುಹಿದ ತಾಯಿಯ ಮಮತೆ ಹೆಚ್ಚಿನದು ಎಂದು ತೀರ್ಮಾನಿಸುವುದು ಸುಲಭವಲ್ಲ. ಇವತ್ತು ಜಾತಿ, ಧರ್ಮ, ಅಂತಸ್ತು ಎಂದೆಲ್ಲ ಬಹಳಷ್ಟು ಜನ ಅಂಧರಾಗಿರುವಾಗ ಈ ಪುಟ್ಟ ಬಾಲಕ ಮತ್ತು ಆತನ ಇಬ್ಬರು ತಾಯಂದಿರು ಅವುಗಳನ್ನೆಲ್ಲ ಮೀರಿ ಮಾತೃತ್ವ, ಮಮತೆ ಮತ್ತು ಮಾನವೀಯತೆಯ ಪ್ರತಿಬಿಂಬಗಳಾಗಿದ್ದಾರೆ.
ಈಗಾಗಲೇ ಧರ್ಮದ ಹೆಸರಲ್ಲಿ ಸಾಕಷ್ಟು ದ್ವೇಷ ಮತ್ತು ರಕ್ತಪಾತವನ್ನು ಕಂಡಿರುವ ಗುಜರಾತ್ ಈ ಪ್ರಕರಣದಲ್ಲಾದರೂ ತನ್ನ ಅಂತರಾಳದಲ್ಲಿರುವ ಮನುಷ್ಯತ್ವವನ್ನು ಕಂಡುಕೊಳ್ಳುವಂತಾಗಲಿ.
ಹಾಗಾದರೆ ಎಷ್ಟು ಚೆನ್ನ ಅಲ್ಲವೇ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...