Homeಮುಖಪುಟಅನಿಕೇತನದ ಕಿಡಿ ಬಿತ್ತಿದ ವಿಶ್ವಮಾನವ ಸಂದೇಶ

ಅನಿಕೇತನದ ಕಿಡಿ ಬಿತ್ತಿದ ವಿಶ್ವಮಾನವ ಸಂದೇಶ

- Advertisement -
- Advertisement -

ಕುವೆಂಪು ಅವರ ಜನ್ಮದಿನ ಹತ್ತಿರ ಬರುತ್ತಿದೆ. ಕರ್ನಾಟಕ ಸರ್ಕಾರವು 2005ರ ಡಿಸೆಂಬರ್‌ನಲ್ಲಿ ಕುವೆಂಪು ಜನ್ಮದಿನವಾದ ಡಿಸೆಂಬರ್ 29ಅನ್ನು ’ವಿಶ್ವ ಮಾನವ’ ದಿನವನ್ನಾಗಿ ಆಚರಿಸುವುದಾಗಿ ಆದೇಶ ಹೊರಡಿಸಿತು. ಕುವೆಂಪು ಅವರು ತಮ್ಮ ಬರವಣಿಗೆ ಮತ್ತು ಬದುಕಿನುದ್ದಕ್ಕೂ ಪಾಲಿಸಿಕೊಂಡು ಬಂದ, ತಾವು ದರ್ಶನ ಪಡೆದ ಹಲವು ತತ್ವಗಳು ವಿಶ್ವಮಾನವ ಸಂದೇಶದ ಮೂಲಕ ಸಾರಿದ್ದರು. ಈ ಸಂದೇಶಗಳು ವರ್ಷಕ್ಕೊಮ್ಮೆ ನೆನಪಿಸಿಕೊಳ್ಳುವ, ವೈದಿಕರ ಮಂತ್ರಗಳಂತೆ ಪಠಿಸಬೇಕಾದವುಗಳಲ್ಲ, ಹೃದಯದಿಂದ ಕೇಳಿಸಿಕೊಳ್ಳಬೇಕಾದ ಮತ್ತು ನಮಗೆ ನಾವೇ ಕನ್ನಡಿ ಹಿಡಿದುಕೊಳ್ಳುವಂತೆ ಮಾಡುವ ದರ್ಶನಗಳು.

ಕುವೆಂಪು ಅವರು ಬರೆದಿರುವ ಎರಡು ಮಹಾಕಾವ್ಯದಂತಹ ಕಾದಂಬರಿಗಳು ಮತ್ತು ವಿಶ್ವಮಾನವ ಸಂದೇಶ ಎರಡನ್ನೂ ಒಟ್ಟಿಗೆ ನೋಡಿದಾಗ, ಅವರು ’ಮಲೆಗಳಲ್ಲಿ ಮದುಮಗಳು’ ಕಾದಂಬರಿಯಲ್ಲಿ ಮುನ್ನುಡಿ ರೂಪದಲ್ಲಿ ಬರೆದಿರುವ ಅತ್ಯಂತ ಜನಪ್ರಿಯವಾದ

“ಇಲ್ಲಿ
ಯಾರೂ ಮುಖ್ಯರಲ್ಲ
ಯಾರೂ ಅಮುಖ್ಯರಲ್ಲ”

ಎಂಬ ಸಾಲುಗಳು ಕೇವಲ ತಮ್ಮ ಕಾದಂಬರಿಯ ಕುರಿತು ಹೇಳಿದಲ್ಲ. ಇಡೀ ಸಮಾಜದ ರಚನೆ ಕುರಿತು ಸಹ ಆ ಸಾಲುಗಳು ಆಗಿರಬಹುದು. ಕುವೆಂಪು ಅವರು ತಮ್ಮ ಕಾದಂಬರಿಗಳಲ್ಲಿ, ತಾವು ಪ್ರತಿನಿಧಿಸುವ ಸಮುದಾಯದ ಕುರಿತು ಸಹ ಎಲ್ಲಿಯೂ ಹಿಂಜರಿಕೆ ಇಲ್ಲದೆ ಮಾತನಾಡುವ ಧೈರ್ಯ ತೋರಿಸಿದ್ದಾರೆ. ಒಬ್ಬ ಲೇಖಕನಿಗೆ ಇರಬೇಕಾದ ಮುಖ್ಯ ಗುಣ ಅದು ಎಂಬುದು ನನ್ನ ನಂಬಿಕೆ. ಕುವೆಂಪು ಅವರು ತಮ್ಮ ’ಮಲೆನಾಡಿನ ಚಿತ್ರಗಳು’ ಪುಸ್ತಕದಲ್ಲಿ ಹೇಳಿಕೊಂಡಿರುವ ಲಘು ಹಾಸ್ಯದ ಬೆರೆತ ಹಲವು ಅನುಭವಗಳಲ್ಲಿ, ತಾವು ಬಾಲಕರಾಗಿದ್ದಾಗಲೇ ಶಿಕ್ಷಣದ ಪದ್ಧತಿಗಳು, ತಮ್ಮ ಸುತ್ತಲಿನ ದಿನ ನಿತ್ಯದ ಚಟುವಟಿಕೆಗಳ ಅಸಮಾನತೆಯ ಗೆರೆ ಗುರುತಿಸುವ ಸೂಕ್ಷ್ಮವಾದ ಪ್ರವೃತ್ತಿ ಬೆಳೆಸಿಕೊಂಡಿದ್ದು ತಿಳಿಯುತ್ತದೆ. ಅವರು ಮುಂದೆ ವಿಶ್ವಮಾನವ ಸಂದೇಶದ ಮೂಲಕ ಹೇಳಲು ಹೊರಟಿರುವುದು ಸಹ ಅದೇ ಆಗಿದೆ.

“ಯಾವ ಒಂದು ಗ್ರಂಥವೂ ’ಏಕೈಕ ಪರಮ ಪೂಜ್ಯ’ ಧರ್ಮಗ್ರಂಥವಾಗಬಾರದು. ಪ್ರತಿಯೊಬ್ಬ ವ್ಯಕ್ತಿಯೂ ತನಗೆ ಸಾಧ್ಯವಾದವುಗಳನ್ನೆಲ್ಲ ಓದಿ ತಿಳಿದು ತನ್ನ ’ದರ್ಶನ’ವನ್ನು ತಾನೇ ನಿರ್ಣಯಿಸಿ ಕಟ್ಟಿಕೊಳ್ಳಬೇಕು” ಎಂಬ ಕುವೆಂಪು ಅವರ ಈ ಸಂದೇಶವನ್ನು ನವಯುವಕರ ಕಿವಿಗೆ ಎಲ್ಲಾ ಕಾಲಕ್ಕಿಂತಲೂ ಹೆಚ್ಚಾಗಿ ಈ ದಿನದಲ್ಲಿ ಮುಟ್ಟಿಸಬೇಕಾದ ಜರೂರತ್ತು ಇದೆ. ಮನುಷ್ಯನ ಮೂಲಭೂತ ಅವಶ್ಯಕತೆಗಳು ಈಡೇರಿಕೆಗೆ ಕಾಯಕ ಮುಖ್ಯವೇ ಹೊರತು, ಹೊಟ್ಟೆ ತುಂಬಿದವರು ಹೇಳುವ ಪ್ರವಚನಗಳಲ್ಲ ಎಂಬ ವಾಸ್ತವವನ್ನು ಜಾತಿಗಳ ಅಮಲು ತಲೆಗೇರಿಸಿಕೊಂಡವರಿಗೆ ತೋರಿಸಬೇಕಿದೆ.

ಇದನ್ನೂ ಓದಿ:ಪೌರೋಹಿತ್ಯ ಧಿಕ್ಕರಿಸಿದ ವಿವಾಹದ ಪರಿಕಲ್ಪನೆ ’ಮಂತ್ರ ಮಾಂಗಲ್ಯ’

ಮಲೆಗಳಲ್ಲಿ ಮದುಮಗಳು ಕಾದಂಬರಿಯಲ್ಲಿ ಕುವೆಂಪು ಅವರು ಪ್ರಕೃತಿಯ ಬಗ್ಗೆ ಎಷ್ಟು ವರ್ಣಿಸಿದ್ದಾರೊ ಇನ್ನೂ ಹೆಚ್ಚು ಜೀವಂತವಾಗಿ ನಾಯಿಗುತ್ತಿಯನ್ನು ಪರಿಚಯಿಸುತ್ತಾರೆ. ಕಗ್ಗತ್ತಲಿನ ಕಾಡುಗಳ ರಾತ್ರಿಯ ಎದೆಯಲ್ಲಿ ನಡುಗದೆ, ಪ್ರೀತಿಯ ಬೀಜಗಳನ್ನು ಎದೆಯೊಳಗಿಟ್ಟುಕೊಂಡ ಗುತ್ತಿಯ ಬಿಗಿ ಉಸಿರಿನಲ್ಲಿ ಸಹ ಕುವೆಂಪು ಅವರ ವಿಶ್ವಮಾನವ ಸಂದೇಶ ಇದೆ.

ಕಾನೂರು ಹೆಗ್ಗಡತಿಯ ಹೂವಯ್ಯನ ಹೊಸ ವಿಚಾರಗಳಲ್ಲಿನ ಕ್ರಾಂತಿಯ ಕಿಡಿಯೊಳಗೆ ಬುದ್ಧನ ಶಾಂತಸಾಗರದ ನಗು ಮತ್ತು ಕುವೆಂಪು ಅವರು ಹೇಳುವ “ಪ್ರತಿಯೊಂದು ಮಗುವೂ ಹುಟ್ಟುತ್ತಲೆ – ವಿಶ್ವಮಾನವ. ಬೆಳೆಯುತ್ತಾ ನಾವು ಅದನ್ನು ’ಅಲ್ಪಮಾನವ’ನನ್ನಾಗಿ ಮಾಡುತ್ತೇವೆ. ಮತ್ತೆ ಅದನ್ನು ’ವಿಶ್ವಮಾನವ’ನನ್ನಾಗಿ ಮಾಡುವುದೇ ವಿದ್ಯೆಯ ಕರ್ತವ್ಯವಾಗಬೇಕು” ಎನ್ನುವ ಮಾತು ಅಡಗಿದೆ. ಹೂವಯ್ಯನ ಮೂಲಕ ಕಟ್ಟಿಕೊಟ್ಟ ದರ್ಶನ ನನಗೆ ಹೆಚ್ಚು ಆಪ್ತವಾಗುತ್ತದೆ.

ಕುವೆಂಪು ಅವರ ನಾಟಕ, ಕಥೆ, ಕಾದಂಬರಿ ಮತ್ತು ಅವರ ಒಟ್ಟು ಬರವಣಿಗೆಯ ಪಯಣವೇ ವಿಶ್ವಮಾನವದೆಡೆಗಿನ ಪ್ರಯಾಣವಾಗಿತ್ತು. ಅವರು ಬರೆದಿರುವ ಬರಹಗಳಲ್ಲಿ ಒಂದು ರೀತಿಯ ಪ್ರಕೃತಿಯ ದಿವ್ಯಸ್ಪರ್ಶ ಇದೆ, ಮೂಢನಂಬಿಕೆಗಳು ಮತ್ತು ವೈದಿಕರ ಕೆಡುಕಿನ ಜಾಣತನದ ವಿರುದ್ಧ ಗಟ್ಟಿಯಾದ ಸಿಟ್ಟಿದ್ದು ಅದರ ಬಿಸಿ ತಾಗುತ್ತದೆ.

ಇದನ್ನೂ ಓದಿ: ಸಾಂಸ್ಕೃತಿಕ ಕ್ರಾಂತಿಯ ರೂವಾರಿ ಕುವೆಂಪು ಹೊರಿಸಿದ ಹೊರೆಗಳು

ಅವರ ಆತ್ಮಕಥೆ ’ನೆನಪಿನ ದೋಣಿಯಲ್ಲಿ ನಿವೇದಿಸಿಕೊಂಡಿರುವಂತೆ, ಯುವಕರಾಗಿದ್ದಾಗ ಕುವೆಂಪು ಅವರು ಒಂದು ಸಲ “ಲೈಬ್ರರಿಯಲ್ಲಿ ಸಾಲಾಗಿ ಜೋಡಿಸಿಟ್ಟ ಪುಸ್ತಕಗಳ ಹೆಸರು ನೋಡಿ”, ಓದುತ್ತಾ ಬೆರಗಾಗಿ ನಿಲ್ಲುತ್ತಾರೆ. ಅವರಿಗೆ ಇದ್ದ ಜ್ಞಾನದಾಹ ಇದರಿಂದ ತಿಳಿಯುತ್ತದೆ. ನಮ್ಮನ್ನು ಆಂತರಿಕವಾಗಿ ಮತ್ತು ಬಾಹ್ಯವಾಗಿ ಶೋಷಿಸುವ ಹಲವು ಸಂಗತಿಗಳಿಗೆ ಪ್ರಶ್ನಿಸುವ ಮತ್ತು ಪ್ರತಿಭಟಿಸುವ ಶಕ್ತಿ ಓದಿನಿಂದ ಮಾತ್ರ ಬರುವಂತಹುದು.

’ವಿಚಾರ ಕ್ರಾಂತಿಗೆ ಆಹ್ವಾನ’ ಪುಸ್ತಕದಲ್ಲಿ ಕುವೆಂಪು ಅವರು ತಮ್ಮ ಬದುಕಿನ ವಿಚಾರಗಳಲ್ಲಿದ್ದ ’ಎಷ್ಟೊಂದು ಮಡಿವಂತಿಕೆಗಳಿಗೆ ಛಿದ್ರ ಮಾಡಿದ್ದಾರೆ’ ಎಂಬುದು ತಿಳಿಯುತ್ತದೆ. ಬರವಣಿಗೆಯಂತೆ ಬದುಕಿದ ಕುವೆಂಪು ಅವರು ವಿಶ್ವಮಾನವರಾಗಿದ್ದು ಹೀಗೆ.

“ಜಾತಿ-ಮತ ಇವೆಲ್ಲಾ ಇರಬೇಕು ಅನ್ನುವವರು, ಅವನು ಎಂಥಾ ಸಾಹಿತಿಯೇ ಆಗಿರಲಿ ಅವನಿಗೆ ಧಿಕ್ಕಾರ”- ಕುವೆಂಪು.

ಈ ಮೇಲಿನ ಮಾತುಗಳನ್ನು ಗಮನಿಸಿದಾಗ, ನಿರಂತರವಾಗಿ ಯಾವುದೋ ಒಂದು ಧರ್ಮ ಶ್ರೇಷ್ಠವೆಂದು ಸಾರುವ ಲೇಖಕರ ಹಿಂದೆ ಯುವಪಡೆ ಓಡುತ್ತಿರುವ ಸನ್ನಿವೇಶದಲ್ಲಿ, ಪ್ರಶ್ನಿಸುವ ಮನಸ್ಸು ಕಳೆದುಕೊಂಡಿರುವ ವಿದ್ಯಾವಂತರ ಕುರಿತು, ಭವಿಷ್ಯದ ನಮ್ಮ ನಾಡಿನ ಬಗ್ಗೆ ಆತಂಕ ಹುಟ್ಟುತ್ತದೆ. ಕುವೆಂಪು ಅವರ ಜನ್ಮದಿನದ ಹೊತ್ತಿನಲ್ಲಿ ಆದರೂ ನಾವೆಲ್ಲ ಗಟ್ಟಿಯಾಗಿ ನಿಂತು ’ಜೀವಪರ’ ವಿಚಾರಗಳನ್ನು ಬೆಂಬಲಿಸುತ್ತ, ಇನ್ನೊಬ್ಬರ ತಲೆಯಲ್ಲಿ ಸೆಗಣಿ ತುಂಬಲು ಪ್ರಯತ್ನಿಸುತ್ತಿರುವವರ ಕೈಕೆಳಗಿನಿಂದ ಪಾರಾಗಿ ಹೊರಬರುವ ಪ್ರತಿಜ್ಞೆ ಮಾಡಿ ಅದನ್ನು ಆಚರಿಸಬೇಕಿದೆ.

ಓ ನನ್ನ ಚೇತನ,
ಆಗು ನೀ ಅನಿಕೇತನ!
ನೂರು ಮತದ ಹೊಟ್ಟ ತೂರಿ,
ಎಲ್ಲ ತತ್ತ್ವದೆಲ್ಲೆ ಮೀರಿ,
ನಿರ್ದಿಗಂತವಾಗಿ ಏರಿ,
ಓ ನನ್ನ ಚೇತನ,
ಆಗು ನೀ ಅನಿಕೇತನ!

ಕುವೆಂಪು ಅವರ ವಿಶ್ವಮಾನವ ಗೀತೆಯಂತೆ ನಾವೆಲ್ಲ ನಮ್ಮ ನಮ್ಮ ಮತಗಳ ಹೊಟ್ಟ ತೂರಿ, ನಿಜವಾದ ಬೇರು ಬಿಟ್ಟು ಚಿಗುರೊಡೆಯಬಲ್ಲ ಕಾಳುಗಳನ್ನು ಹುಡುಕಬೇಕಿದೆ.

ಕಪಿಲ ಪಿ ಹುಮನಾಬಾದೆ

ಯುವ ಬರಹಗಾರ ಕಪಿಲ ಪಿ ಹುಮನಾಬಾದೆ ಅವರು ಮೂಲತಃ ಬೀದರ್‌ನವರು. ಸದ್ಯ ಕಾವ್ಯಮನೆ ಪ್ರಕಾಶನ ಬಳ್ಳಾರಿ, ಮುಖ್ಯ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಕಾದಂಬರಿ ಹಾಣಾದಿ ಸಾಕಷ್ಟು ಮೆಚ್ಚುಗೆಯನ್ನು ಗಳಿಸಿದೆ. ಈಗ ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ವಿದ್ಯಾರ್ಥಿ.


ಇದನ್ನೂ ಓದಿ: ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, ‘ಬಹುಭಾಷೆಗಳಲ್ಲಿ ದ್ವಿಭಾಷೆ’: ಕುವೆಂಪು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...