Homeಮುಖಪುಟಹೃದ್ಯ ಕತೆ ಕಟ್ಟಿಕೊಟ್ಟ ’ಸೂಫಿಯು ಸುಜಾದಯುಂ’ ನಿರ್ದೇಶಕ ’ಶಾನವಾಸ್’ ನಿಧನ

ಹೃದ್ಯ ಕತೆ ಕಟ್ಟಿಕೊಟ್ಟ ’ಸೂಫಿಯು ಸುಜಾದಯುಂ’ ನಿರ್ದೇಶಕ ’ಶಾನವಾಸ್’ ನಿಧನ

ಚಿತ್ರದ ಜೀವಾಳವೇ ಪ್ರೇಮ. ತಿಳಿಯದವರ ಕಣ್ಣಲ್ಲಿ ಲವ್‌ ಜಿಹಾದ್ ಆಗಿರಬಹುದು ಎಂಬ ಅನುಮಾನ, ಆದರೆ ತಿಳಿದವರ ಕಣ್ಣಲ್ಲಿ ಅದು ಅಪ್ಪಟ ಪ್ರೇಮ.

- Advertisement -
- Advertisement -

ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಸಿನಿಮಾ ಪ್ರಿಯರ ಮನಗೆದ್ದ ಇಬ್ಬರು ’ಸೂಫಿ’ಯರ ಅಮರ ಪ್ರೇಮದ ಕತೆಯಿರುವ ’ಸೂಫಿಯುಂ ಸುಜಾತಯುಂ’ ಚಿತ್ರದ ನಿರ್ದೇಶಕ ಶಾನವಾಸ್ ನಾರನೀಪುಳ ಅವರು ಹೃದಯಾಘಾತದಿಂದ ನಿನ್ನೆ ಮೃತಪಟ್ಟಿದ್ದಾರೆ.

ಶಾನವಾಸ್ ಅವರು ’ಕರಿ’ ಮತ್ತು ’ಸೂಫಿಯುಂ ಸುಜಾದಯುಂ’ ಎಂಬ ಎರಡು ಚಿತ್ರಗಳನ್ನಷ್ಟೇ ನಿರ್ದೇಶಿಸಿ ಹೆಸರು ಗಳಿಸಿದ್ದರು. ಇದರಲ್ಲಿ ಸೂಫಿಯುಂ ಸುಜಾದಯುಂ ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಒಟಿಟಿ ಫ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಯಾದ ಚಿತ್ರವಾಗಿದೆ. ಹೃದ್ಯ ಪ್ರೇಮ ಕತೆಯಿರುವ ಈ ಚಿತ್ರವು ಸಿನಮಾ ಪ್ರಿಯರ ಮನಸ್ಸನ್ನು ಗೆದ್ದಿತ್ತು. ಸಂಗೀತ, ಸಿನಿಮಾಟೋಗ್ರಾಫಿ, ಎಡಿಟಿಂಗ್ ಸೇರಿದಂತೆ ಬೇರೆಯೆ ಲೋಕಕ್ಕೆ ಕೊಂಡೊಯ್ಯುವ ಸಿನಿಮಾವಾಗಿದೆ ’ಸೂಫಿಯುಂ ಸುಜಾದಯುಂ’.

ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

ಸೂಫಿಯುಂ ಸುಜಾದಯುಂ ಚಿತ್ರದ ಒಂದು ದೃಶ್ಯ

ಚಿತ್ರದ ನಾಯಕಿ ಅದಿತಿ ರಾಮ್ ಹೈದರಿ, ತಮ್ಮ ಚಿತ್ರದ ನಿರ್ದೇಶಕನ ಸಾವಿನ ಬಗ್ಗೆ, “ಅವರ ಕಥೆಗಳಂತೆ ಅವರು ಮಾನವೀಯತೆ ಮತ್ತು ಸೂಕ್ಷ್ಮ ಮನಸ್ಸಿನವರಾಗಿದ್ದರು. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಶಾನವಾಸ್ ಸರ್‌. ಸೂಫಿಯುಂ ಸುಜಾದಯುಂನಲ್ಲಿ ನಮಗಾಗಿ ರಚಿಸಿದ ಸುಂದರವಾದ ಸ್ಥಳವನ್ನು ನಿಮ್ಮ ಸೂಫಿ ಆತ್ಮ ಕಂಡುಕೊಳ್ಳುತ್ತದೆ. ತುಂಬಾ ಬೇಗ ಹೋದಿರಿ, ನಿಮ್ಮ ಕುಟುಂಬಕ್ಕೆ ನನ್ನ ಸಂತಾಪ” ಎಂದು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆದಿದ್ದಾರೆ.

ಚಿತ್ರದ ಸಹನಟನಾದ ಜಯಸೂರ್ಯ ಕೂಡಾ ತಮ್ಮ ನಿರ್ದೇಶಕನ ಸಾವಿಗೆ ಶ್ರದ್ದಾಂಜಲಿ ಕೋರಿದ್ದಾರೆ.

ಇದನ್ನೂ ಓದಿ: ನುಡಿ ನಮನ | ಮಾನವೀಯ ಕತೆಗಳನ್ನು ಕಟ್ಟಿಕೊಟ್ಟ ನಿರ್ದೇಶಕ ‘ಕಿಮ್‌ ಕಿ ಡುಕ್‌’

’ಸೂಫಿಯುಂ ಸುಜಾದಯುಂ’ ಸಿನಿಮಾದಲ್ಲಿ ’ಮುಲ್ಲಾ ಬಝಾರ್‌’ ಎಂಬ ಪ್ರೇಮದ ಸುಗಂಧ‌ ಮಾರುವ ಮಾರುಕಟ್ಟೆ ಕಾಣುತ್ತದೆ. ಇಲ್ಲಿ ಸುಗಂಧದ ಬಾಟಲಿಯ ಮುಚ್ಚಳ ತೆರೆದು ಇಬ್ಬರಲ್ಲೂ ಪ್ರೇಮ ಮೂಡಿಸುವುದರೊಂದಿಗೆ ನಮ್ಮನ್ನೂ ಪ್ರೇಮ ಲೋಕಕ್ಕೆ ದೂಡಿದ್ದರು ಶಾನವಾಝ್. ಸುಮಧುರವಾದ ಆಜಾನ್‌‌ಗೆ ತಕ್ಕಂತೆ ಕಥಕ್ ನೃತ್ಯವಾಡುವ ನಾಯಕಿ ಇಡೀ ಚಿತ್ರದಲ್ಲಿ ಒಂದು ಮಾತೂ ಆಡದ ಮೂಕಿ. ತನ್ನ ಸೂಫೀ ಗುರುಗಳ ಸಮಾಧಿಯಿಂದ ಎದ್ದು ಬಂದ ನೇರಳೆ ಮರದಲ್ಲಿ ಹಣ್ಣು ಬಿಟ್ಟಾಗ ನಿನಗೆ ಮಾತು ಬರುತ್ತದೆ ಎಂದು ಸೂಫಿ ಹೇಳುತ್ತಾನೆ. ಆದರೆ ಮನೆಯವರ ಒತ್ತಾಯಕ್ಕೆ ಮಣಿದು ನಾಯಕಿಯು ಅನಿವಾಸಿ ಭಾರತೀಯನನ್ನು ಮದುವೆಯಾಗುವ ಆಕೆ ಸೂಫಿಯ ನೆನಪಲ್ಲೇ ಇರುತ್ತಾಳೆ.

ಚಿತ್ರದ ಜೀವಾಳವೇ ಪ್ರೇಮ. ತಿಳಿಯದವರ ಕಣ್ಣಲ್ಲಿ ಲವ್‌ ಜಿಹಾದ್ ಆಗಿರಬಹುದು ಎಂಬ ಅನುಮಾನ, ಆದರೆ ತಿಳಿದವರ ಕಣ್ಣಲ್ಲಿ ಅದು ಅಪ್ಪಟ ಪ್ರೇಮ. ಕೊನೆಗೊಮ್ಮೆ ತನ್ನ ಪ್ರೇಮಿಯನ್ನು ಭೇಟಿಯಾಗಲು ಬರುವ ಅನಿವಾರ್ಯ ಸಂದಂರ್ಭವೆ ಇಡೀ ಸಿನಿಮಾವನ್ನು ಜೀವಂತವಾಗಿಡುತ್ತದೆ. ಶಾನವಾಸ್ ಸಿನಿಮಾಗೆ ನಿರ್ದೇಶನ ಮಾಡಿರುವುದು ಮಾತ್ರವಲ್ಲದೆ, ಕತೆ ಕೂಡಾ ಅವರದ್ದೇ ಕಲ್ಪನೆಯದ್ದಾಗಿದೆ. ಒಂದು ಒಳ್ಳೆಯ ಸಿನಿಮಾ ನೀಡಿರುವ ಉದಯೋನ್ಮಕ ನಿರ್ದೇಶಕ ಅಗಲಿಕೆಯು, ಸಿನಿಮಾ ಪ್ರಿಯರನ್ನು ಕಣ್ಣೀರಾಗಿಸಿದೆ.

ಇದನ್ನೂ ಓದಿ: ಇಂಟರ್​​ನ್ಯಾಷನಲ್ ಎಮ್ಮಿ ಪ್ರಶಸ್ತಿ ಮುಡಿಗೇರಿಸಿಕೊಂಡ ’ಡೆಲ್ಲಿ ಕ್ರೈಂ’ ವೆಬ್ ಸರಣಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...