Homeಮುಖಪುಟಹೃದ್ಯ ಕತೆ ಕಟ್ಟಿಕೊಟ್ಟ ’ಸೂಫಿಯು ಸುಜಾದಯುಂ’ ನಿರ್ದೇಶಕ ’ಶಾನವಾಸ್’ ನಿಧನ

ಹೃದ್ಯ ಕತೆ ಕಟ್ಟಿಕೊಟ್ಟ ’ಸೂಫಿಯು ಸುಜಾದಯುಂ’ ನಿರ್ದೇಶಕ ’ಶಾನವಾಸ್’ ನಿಧನ

ಚಿತ್ರದ ಜೀವಾಳವೇ ಪ್ರೇಮ. ತಿಳಿಯದವರ ಕಣ್ಣಲ್ಲಿ ಲವ್‌ ಜಿಹಾದ್ ಆಗಿರಬಹುದು ಎಂಬ ಅನುಮಾನ, ಆದರೆ ತಿಳಿದವರ ಕಣ್ಣಲ್ಲಿ ಅದು ಅಪ್ಪಟ ಪ್ರೇಮ.

- Advertisement -
- Advertisement -

ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಸಿನಿಮಾ ಪ್ರಿಯರ ಮನಗೆದ್ದ ಇಬ್ಬರು ’ಸೂಫಿ’ಯರ ಅಮರ ಪ್ರೇಮದ ಕತೆಯಿರುವ ’ಸೂಫಿಯುಂ ಸುಜಾತಯುಂ’ ಚಿತ್ರದ ನಿರ್ದೇಶಕ ಶಾನವಾಸ್ ನಾರನೀಪುಳ ಅವರು ಹೃದಯಾಘಾತದಿಂದ ನಿನ್ನೆ ಮೃತಪಟ್ಟಿದ್ದಾರೆ.

ಶಾನವಾಸ್ ಅವರು ’ಕರಿ’ ಮತ್ತು ’ಸೂಫಿಯುಂ ಸುಜಾದಯುಂ’ ಎಂಬ ಎರಡು ಚಿತ್ರಗಳನ್ನಷ್ಟೇ ನಿರ್ದೇಶಿಸಿ ಹೆಸರು ಗಳಿಸಿದ್ದರು. ಇದರಲ್ಲಿ ಸೂಫಿಯುಂ ಸುಜಾದಯುಂ ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಒಟಿಟಿ ಫ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಯಾದ ಚಿತ್ರವಾಗಿದೆ. ಹೃದ್ಯ ಪ್ರೇಮ ಕತೆಯಿರುವ ಈ ಚಿತ್ರವು ಸಿನಮಾ ಪ್ರಿಯರ ಮನಸ್ಸನ್ನು ಗೆದ್ದಿತ್ತು. ಸಂಗೀತ, ಸಿನಿಮಾಟೋಗ್ರಾಫಿ, ಎಡಿಟಿಂಗ್ ಸೇರಿದಂತೆ ಬೇರೆಯೆ ಲೋಕಕ್ಕೆ ಕೊಂಡೊಯ್ಯುವ ಸಿನಿಮಾವಾಗಿದೆ ’ಸೂಫಿಯುಂ ಸುಜಾದಯುಂ’.

ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

ಸೂಫಿಯುಂ ಸುಜಾದಯುಂ ಚಿತ್ರದ ಒಂದು ದೃಶ್ಯ

ಚಿತ್ರದ ನಾಯಕಿ ಅದಿತಿ ರಾಮ್ ಹೈದರಿ, ತಮ್ಮ ಚಿತ್ರದ ನಿರ್ದೇಶಕನ ಸಾವಿನ ಬಗ್ಗೆ, “ಅವರ ಕಥೆಗಳಂತೆ ಅವರು ಮಾನವೀಯತೆ ಮತ್ತು ಸೂಕ್ಷ್ಮ ಮನಸ್ಸಿನವರಾಗಿದ್ದರು. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಶಾನವಾಸ್ ಸರ್‌. ಸೂಫಿಯುಂ ಸುಜಾದಯುಂನಲ್ಲಿ ನಮಗಾಗಿ ರಚಿಸಿದ ಸುಂದರವಾದ ಸ್ಥಳವನ್ನು ನಿಮ್ಮ ಸೂಫಿ ಆತ್ಮ ಕಂಡುಕೊಳ್ಳುತ್ತದೆ. ತುಂಬಾ ಬೇಗ ಹೋದಿರಿ, ನಿಮ್ಮ ಕುಟುಂಬಕ್ಕೆ ನನ್ನ ಸಂತಾಪ” ಎಂದು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆದಿದ್ದಾರೆ.

ಚಿತ್ರದ ಸಹನಟನಾದ ಜಯಸೂರ್ಯ ಕೂಡಾ ತಮ್ಮ ನಿರ್ದೇಶಕನ ಸಾವಿಗೆ ಶ್ರದ್ದಾಂಜಲಿ ಕೋರಿದ್ದಾರೆ.

ಇದನ್ನೂ ಓದಿ: ನುಡಿ ನಮನ | ಮಾನವೀಯ ಕತೆಗಳನ್ನು ಕಟ್ಟಿಕೊಟ್ಟ ನಿರ್ದೇಶಕ ‘ಕಿಮ್‌ ಕಿ ಡುಕ್‌’

’ಸೂಫಿಯುಂ ಸುಜಾದಯುಂ’ ಸಿನಿಮಾದಲ್ಲಿ ’ಮುಲ್ಲಾ ಬಝಾರ್‌’ ಎಂಬ ಪ್ರೇಮದ ಸುಗಂಧ‌ ಮಾರುವ ಮಾರುಕಟ್ಟೆ ಕಾಣುತ್ತದೆ. ಇಲ್ಲಿ ಸುಗಂಧದ ಬಾಟಲಿಯ ಮುಚ್ಚಳ ತೆರೆದು ಇಬ್ಬರಲ್ಲೂ ಪ್ರೇಮ ಮೂಡಿಸುವುದರೊಂದಿಗೆ ನಮ್ಮನ್ನೂ ಪ್ರೇಮ ಲೋಕಕ್ಕೆ ದೂಡಿದ್ದರು ಶಾನವಾಝ್. ಸುಮಧುರವಾದ ಆಜಾನ್‌‌ಗೆ ತಕ್ಕಂತೆ ಕಥಕ್ ನೃತ್ಯವಾಡುವ ನಾಯಕಿ ಇಡೀ ಚಿತ್ರದಲ್ಲಿ ಒಂದು ಮಾತೂ ಆಡದ ಮೂಕಿ. ತನ್ನ ಸೂಫೀ ಗುರುಗಳ ಸಮಾಧಿಯಿಂದ ಎದ್ದು ಬಂದ ನೇರಳೆ ಮರದಲ್ಲಿ ಹಣ್ಣು ಬಿಟ್ಟಾಗ ನಿನಗೆ ಮಾತು ಬರುತ್ತದೆ ಎಂದು ಸೂಫಿ ಹೇಳುತ್ತಾನೆ. ಆದರೆ ಮನೆಯವರ ಒತ್ತಾಯಕ್ಕೆ ಮಣಿದು ನಾಯಕಿಯು ಅನಿವಾಸಿ ಭಾರತೀಯನನ್ನು ಮದುವೆಯಾಗುವ ಆಕೆ ಸೂಫಿಯ ನೆನಪಲ್ಲೇ ಇರುತ್ತಾಳೆ.

ಚಿತ್ರದ ಜೀವಾಳವೇ ಪ್ರೇಮ. ತಿಳಿಯದವರ ಕಣ್ಣಲ್ಲಿ ಲವ್‌ ಜಿಹಾದ್ ಆಗಿರಬಹುದು ಎಂಬ ಅನುಮಾನ, ಆದರೆ ತಿಳಿದವರ ಕಣ್ಣಲ್ಲಿ ಅದು ಅಪ್ಪಟ ಪ್ರೇಮ. ಕೊನೆಗೊಮ್ಮೆ ತನ್ನ ಪ್ರೇಮಿಯನ್ನು ಭೇಟಿಯಾಗಲು ಬರುವ ಅನಿವಾರ್ಯ ಸಂದಂರ್ಭವೆ ಇಡೀ ಸಿನಿಮಾವನ್ನು ಜೀವಂತವಾಗಿಡುತ್ತದೆ. ಶಾನವಾಸ್ ಸಿನಿಮಾಗೆ ನಿರ್ದೇಶನ ಮಾಡಿರುವುದು ಮಾತ್ರವಲ್ಲದೆ, ಕತೆ ಕೂಡಾ ಅವರದ್ದೇ ಕಲ್ಪನೆಯದ್ದಾಗಿದೆ. ಒಂದು ಒಳ್ಳೆಯ ಸಿನಿಮಾ ನೀಡಿರುವ ಉದಯೋನ್ಮಕ ನಿರ್ದೇಶಕ ಅಗಲಿಕೆಯು, ಸಿನಿಮಾ ಪ್ರಿಯರನ್ನು ಕಣ್ಣೀರಾಗಿಸಿದೆ.

ಇದನ್ನೂ ಓದಿ: ಇಂಟರ್​​ನ್ಯಾಷನಲ್ ಎಮ್ಮಿ ಪ್ರಶಸ್ತಿ ಮುಡಿಗೇರಿಸಿಕೊಂಡ ’ಡೆಲ್ಲಿ ಕ್ರೈಂ’ ವೆಬ್ ಸರಣಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...