Homeಮುಖಪುಟಹೃದ್ಯ ಕತೆ ಕಟ್ಟಿಕೊಟ್ಟ ’ಸೂಫಿಯು ಸುಜಾದಯುಂ’ ನಿರ್ದೇಶಕ ’ಶಾನವಾಸ್’ ನಿಧನ

ಹೃದ್ಯ ಕತೆ ಕಟ್ಟಿಕೊಟ್ಟ ’ಸೂಫಿಯು ಸುಜಾದಯುಂ’ ನಿರ್ದೇಶಕ ’ಶಾನವಾಸ್’ ನಿಧನ

ಚಿತ್ರದ ಜೀವಾಳವೇ ಪ್ರೇಮ. ತಿಳಿಯದವರ ಕಣ್ಣಲ್ಲಿ ಲವ್‌ ಜಿಹಾದ್ ಆಗಿರಬಹುದು ಎಂಬ ಅನುಮಾನ, ಆದರೆ ತಿಳಿದವರ ಕಣ್ಣಲ್ಲಿ ಅದು ಅಪ್ಪಟ ಪ್ರೇಮ.

- Advertisement -
- Advertisement -

ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಸಿನಿಮಾ ಪ್ರಿಯರ ಮನಗೆದ್ದ ಇಬ್ಬರು ’ಸೂಫಿ’ಯರ ಅಮರ ಪ್ರೇಮದ ಕತೆಯಿರುವ ’ಸೂಫಿಯುಂ ಸುಜಾತಯುಂ’ ಚಿತ್ರದ ನಿರ್ದೇಶಕ ಶಾನವಾಸ್ ನಾರನೀಪುಳ ಅವರು ಹೃದಯಾಘಾತದಿಂದ ನಿನ್ನೆ ಮೃತಪಟ್ಟಿದ್ದಾರೆ.

ಶಾನವಾಸ್ ಅವರು ’ಕರಿ’ ಮತ್ತು ’ಸೂಫಿಯುಂ ಸುಜಾದಯುಂ’ ಎಂಬ ಎರಡು ಚಿತ್ರಗಳನ್ನಷ್ಟೇ ನಿರ್ದೇಶಿಸಿ ಹೆಸರು ಗಳಿಸಿದ್ದರು. ಇದರಲ್ಲಿ ಸೂಫಿಯುಂ ಸುಜಾದಯುಂ ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಒಟಿಟಿ ಫ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಯಾದ ಚಿತ್ರವಾಗಿದೆ. ಹೃದ್ಯ ಪ್ರೇಮ ಕತೆಯಿರುವ ಈ ಚಿತ್ರವು ಸಿನಮಾ ಪ್ರಿಯರ ಮನಸ್ಸನ್ನು ಗೆದ್ದಿತ್ತು. ಸಂಗೀತ, ಸಿನಿಮಾಟೋಗ್ರಾಫಿ, ಎಡಿಟಿಂಗ್ ಸೇರಿದಂತೆ ಬೇರೆಯೆ ಲೋಕಕ್ಕೆ ಕೊಂಡೊಯ್ಯುವ ಸಿನಿಮಾವಾಗಿದೆ ’ಸೂಫಿಯುಂ ಸುಜಾದಯುಂ’.

ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

ಸೂಫಿಯುಂ ಸುಜಾದಯುಂ ಚಿತ್ರದ ಒಂದು ದೃಶ್ಯ

ಚಿತ್ರದ ನಾಯಕಿ ಅದಿತಿ ರಾಮ್ ಹೈದರಿ, ತಮ್ಮ ಚಿತ್ರದ ನಿರ್ದೇಶಕನ ಸಾವಿನ ಬಗ್ಗೆ, “ಅವರ ಕಥೆಗಳಂತೆ ಅವರು ಮಾನವೀಯತೆ ಮತ್ತು ಸೂಕ್ಷ್ಮ ಮನಸ್ಸಿನವರಾಗಿದ್ದರು. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಶಾನವಾಸ್ ಸರ್‌. ಸೂಫಿಯುಂ ಸುಜಾದಯುಂನಲ್ಲಿ ನಮಗಾಗಿ ರಚಿಸಿದ ಸುಂದರವಾದ ಸ್ಥಳವನ್ನು ನಿಮ್ಮ ಸೂಫಿ ಆತ್ಮ ಕಂಡುಕೊಳ್ಳುತ್ತದೆ. ತುಂಬಾ ಬೇಗ ಹೋದಿರಿ, ನಿಮ್ಮ ಕುಟುಂಬಕ್ಕೆ ನನ್ನ ಸಂತಾಪ” ಎಂದು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆದಿದ್ದಾರೆ.

ಚಿತ್ರದ ಸಹನಟನಾದ ಜಯಸೂರ್ಯ ಕೂಡಾ ತಮ್ಮ ನಿರ್ದೇಶಕನ ಸಾವಿಗೆ ಶ್ರದ್ದಾಂಜಲಿ ಕೋರಿದ್ದಾರೆ.

ಇದನ್ನೂ ಓದಿ: ನುಡಿ ನಮನ | ಮಾನವೀಯ ಕತೆಗಳನ್ನು ಕಟ್ಟಿಕೊಟ್ಟ ನಿರ್ದೇಶಕ ‘ಕಿಮ್‌ ಕಿ ಡುಕ್‌’

’ಸೂಫಿಯುಂ ಸುಜಾದಯುಂ’ ಸಿನಿಮಾದಲ್ಲಿ ’ಮುಲ್ಲಾ ಬಝಾರ್‌’ ಎಂಬ ಪ್ರೇಮದ ಸುಗಂಧ‌ ಮಾರುವ ಮಾರುಕಟ್ಟೆ ಕಾಣುತ್ತದೆ. ಇಲ್ಲಿ ಸುಗಂಧದ ಬಾಟಲಿಯ ಮುಚ್ಚಳ ತೆರೆದು ಇಬ್ಬರಲ್ಲೂ ಪ್ರೇಮ ಮೂಡಿಸುವುದರೊಂದಿಗೆ ನಮ್ಮನ್ನೂ ಪ್ರೇಮ ಲೋಕಕ್ಕೆ ದೂಡಿದ್ದರು ಶಾನವಾಝ್. ಸುಮಧುರವಾದ ಆಜಾನ್‌‌ಗೆ ತಕ್ಕಂತೆ ಕಥಕ್ ನೃತ್ಯವಾಡುವ ನಾಯಕಿ ಇಡೀ ಚಿತ್ರದಲ್ಲಿ ಒಂದು ಮಾತೂ ಆಡದ ಮೂಕಿ. ತನ್ನ ಸೂಫೀ ಗುರುಗಳ ಸಮಾಧಿಯಿಂದ ಎದ್ದು ಬಂದ ನೇರಳೆ ಮರದಲ್ಲಿ ಹಣ್ಣು ಬಿಟ್ಟಾಗ ನಿನಗೆ ಮಾತು ಬರುತ್ತದೆ ಎಂದು ಸೂಫಿ ಹೇಳುತ್ತಾನೆ. ಆದರೆ ಮನೆಯವರ ಒತ್ತಾಯಕ್ಕೆ ಮಣಿದು ನಾಯಕಿಯು ಅನಿವಾಸಿ ಭಾರತೀಯನನ್ನು ಮದುವೆಯಾಗುವ ಆಕೆ ಸೂಫಿಯ ನೆನಪಲ್ಲೇ ಇರುತ್ತಾಳೆ.

ಚಿತ್ರದ ಜೀವಾಳವೇ ಪ್ರೇಮ. ತಿಳಿಯದವರ ಕಣ್ಣಲ್ಲಿ ಲವ್‌ ಜಿಹಾದ್ ಆಗಿರಬಹುದು ಎಂಬ ಅನುಮಾನ, ಆದರೆ ತಿಳಿದವರ ಕಣ್ಣಲ್ಲಿ ಅದು ಅಪ್ಪಟ ಪ್ರೇಮ. ಕೊನೆಗೊಮ್ಮೆ ತನ್ನ ಪ್ರೇಮಿಯನ್ನು ಭೇಟಿಯಾಗಲು ಬರುವ ಅನಿವಾರ್ಯ ಸಂದಂರ್ಭವೆ ಇಡೀ ಸಿನಿಮಾವನ್ನು ಜೀವಂತವಾಗಿಡುತ್ತದೆ. ಶಾನವಾಸ್ ಸಿನಿಮಾಗೆ ನಿರ್ದೇಶನ ಮಾಡಿರುವುದು ಮಾತ್ರವಲ್ಲದೆ, ಕತೆ ಕೂಡಾ ಅವರದ್ದೇ ಕಲ್ಪನೆಯದ್ದಾಗಿದೆ. ಒಂದು ಒಳ್ಳೆಯ ಸಿನಿಮಾ ನೀಡಿರುವ ಉದಯೋನ್ಮಕ ನಿರ್ದೇಶಕ ಅಗಲಿಕೆಯು, ಸಿನಿಮಾ ಪ್ರಿಯರನ್ನು ಕಣ್ಣೀರಾಗಿಸಿದೆ.

ಇದನ್ನೂ ಓದಿ: ಇಂಟರ್​​ನ್ಯಾಷನಲ್ ಎಮ್ಮಿ ಪ್ರಶಸ್ತಿ ಮುಡಿಗೇರಿಸಿಕೊಂಡ ’ಡೆಲ್ಲಿ ಕ್ರೈಂ’ ವೆಬ್ ಸರಣಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...