Homeಮುಖಪುಟಪ್ರಧಾನಿ ವಿರುದ್ಧ ದನಿಯೆತ್ತಿದರೆ ಮೋಹನ್ ಭಾಗವತ್ ಕೂಡಾ ಭಯೋತ್ಪಾದಕರೇ! - ರಾಹುಲ್ ಗಾಂಧಿ

ಪ್ರಧಾನಿ ವಿರುದ್ಧ ದನಿಯೆತ್ತಿದರೆ ಮೋಹನ್ ಭಾಗವತ್ ಕೂಡಾ ಭಯೋತ್ಪಾದಕರೇ! – ರಾಹುಲ್ ಗಾಂಧಿ

"ಯುವಕರು ಮತ್ತು ಈ ದೇಶದ ಎಲ್ಲಾ ಜನರು ತಿಳಿದುಕೊಳ್ಳಬೇಕಾದ ಅಂಶವೆಂದರೆ, ಪ್ರಧಾನ ಮಂತ್ರಿ ಅಸಮರ್ಥ ವ್ಯಕ್ತಿ. ಅವರಿಗೆ ಏನೂ ತಿಳಿದಿಲ್ಲ. ಅವರು ಕ್ರೋನಿ ಬಂಡವಾಳಶಾಹಿಗಳಿಗೆ ಮಾತ್ರ ಕಿವಿಗೊಡುತ್ತಾರೆ. ಅವರು ಏನು ಹೇಳಿದರೂ ಅದನ್ನೇ ಮಾಡುತ್ತಾರೆ"

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಭಾರತದಲ್ಲಿ ಪ್ರಜಾಪ್ರಭುತ್ವವಿಲ್ಲ. ಪ್ರಧಾನ ಮಂತ್ರಿಯ ವಿರುದ್ಧ ಎದ್ದುನಿಲ್ಲುವವರಿಗೆ ಭಯೋತ್ಪಾದಕರು ಎಂದು ಹಣೆಪಟ್ಟಿ ಕಟ್ಟಲಾಗುತ್ತದೆ. ಅದು RSS‌ ಮುಖ್ಯಸ್ಥರಾದ ಮೋಹನ್ ಭಾಗವತ್ ಆದರೂ ಸರಿಯೆ” ಎಂದು ಹೇಳಿದ್ದಾರೆ.

“ಪ್ರಧಾನಿ ಮೋದಿ ಕ್ರೋನಿ ಕ್ಯಾಪಿಟಲಿಸ್ಟ್‌ಗಳಿಗಾಗಿ ಹಣ ಸಂಪಾದಿಸುತ್ತಿದ್ದಾರೆ. ಅವರ ವಿರುದ್ಧ ದನಿಯೆತ್ತಲು ಪ್ರಯತ್ನಿಸುವ ರೈತರು, ಕಾರ್ಮಿಕರು ಅಥವಾ ಮೋಹನ್ ಭಾಗವತ್ ಆವರೇ ಆಗಿದ್ದರೂ ಸಹ ಅವರನ್ನೂ ಭಯೋತ್ಪಾದಕರು ಎಂದು ಕರೆಯಲಾಗುತ್ತದೆ” ಎಂದು ಹೇಳಿದ್ದಾರೆ.

“ಭಾರತದಲ್ಲಿ ಯಾವುದೇ ಪ್ರಜಾಪ್ರಭುತ್ವ ಇಲ್ಲ. ನಿಮ್ಮಲ್ಲಿ ಕೆಲವರಿಗೆ ಅದು ಇದೆ ಎನಿಸಿದರೆ, ಅದು ನಿಮ್ಮ ಕಲ್ಪನೆಯಷ್ಟೆ”

ಇದನ್ನೂ ಓದಿ: ಬಹುತ್ವದ ದೇಶದಲ್ಲಿ ಸಂಧಾನ-ಚೌಕಾಶಿಗೆ ಕದ ಮುಚ್ಚುತ್ತಿರುವ ಪ್ರಭುತ್ವಗಳು

ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಗಳನ್ನು ಕೊನೆಗೊಳಿಸುವ ಸಲುವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಧ್ಯಪ್ರವೇಸಿಸುವಂತೆ ಒತ್ತಾಯಿಸಲು ಕಾಂಗ್ರೆಸ್ ಕಾರ್ಯಕರ್ತರ ನಿಯೋಗವನ್ನು ಕರೆದುಕೊಂಡು ರಾಹುಲ್ ಗಾಂಧಿ ಹೊರಟಿದ್ದರು. ಈ ಸಂದರ್ಭದಲ್ಲಿ ಮೆರವಣಿಗೆ ಹೊರಟಿದ್ದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರನ್ನು ಪೊಲೀಸರು ತಡೆದು ಹಲವು ಮುಖಂಡರೂ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡರು.

ರಾಷ್ಟ್ರಪತಿಗಳ ಭೇಟಿಯ ನಂತರ ಮಾತನಾಡಿದ ರಾಹುಲ್ ಗಾಂಧಿ, “ಈ ಕಾನೂನುಗಳು ಲಕ್ಷಾಂತರ ರೈತರ ಜೀವನೋಪಾಯವನ್ನು ಕಸಿದುಕೊಳ್ಳುತ್ತವೆ. ಜೊತೆಗೆ ನಾಲ್ಕು ಅಥವಾ ಐದು ಉದ್ಯಮಿಗಳಿಗೆ ಅನುಕೂಲಕರವಾಗುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ” ಎಂದು ಹೇಳಿದರು.

ಕಾಂಗ್ರೆಸ್‌ನ ಮೂವರು ಮುಖಂಡರಿಗೆ ಮಾತ್ರ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡುವ ಅವಕಾಶ ದೊರಕಿತ್ತು. ಈ ವೇಳೆ ಕೃಷಿ ಕಾನೂನು ರದ್ದುಗೊಳಿಸುವಂತೆ ಆಗ್ರಹಿಸಿ ಎರಡು ಕೋಟಿ ಹಸ್ತಾಕ್ಷರವಿರುವ ಮನವಿ ಪತ್ರವನ್ನು ರಾಷ್ಟ್ರಪತಿಗೆ ಸಲ್ಲಿಸಿರುವ ರಾಹುಲ್ ಗಾಂಧಿ, ಈ ಕೃಷಿ ಕಾಯ್ದೆಗಳು ರೈತ ವಿರೋಧಿ ಎಂದು ರಾಷ್ಟ್ರಪತಿಗೆ ಮನವರಿಕೆ ಮಾಡಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಗೌರಿ ಕಾರ್ನರ್: ನಮ್ಮನ್ನೆಲ್ಲ ತಿದ್ದಿ ಗೆಳೆಯರಂತೆ ನೋಡಿಕೊಳ್ಳುತ್ತಿದ್ದರು…

“ಯುವಕರು ಮತ್ತು ಈ ದೇಶದ ಎಲ್ಲಾ ಜನರು ತಿಳಿದುಕೊಳ್ಳಬೇಕಾದ ಅಂಶವೆಂದರೆ, ಪ್ರಧಾನ ಮಂತ್ರಿ ಅಸಮರ್ಥ ವ್ಯಕ್ತಿ. ಅವರಿಗೆ ಏನೂ ತಿಳಿದಿಲ್ಲ. ಅವರು ಕ್ರೋನಿ ಬಂಡವಾಳಶಾಹಿಗಳಿಗೆ ಮಾತ್ರ ಕಿವಿಗೊಡುತ್ತಾರೆ. ಅವರು ಏನು ಹೇಳಿದರೂ ಅದನ್ನೇ ಮಾಡುತ್ತಾರೆ” ಎಂದು ಕಿಡಿ ಕಾರಿದರು.

ಈ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವವರೆಗೂ ರೈತರು ಮನೆಗೆ ಹಿಂದಿರುಗುವುದಿಲ್ಲ ಎಂದು ನಾನು ಪ್ರಧಾನಿಗೆ ಹೇಳಲು ಬಯಸುತ್ತೇನೆ. ಸರ್ಕಾರವು ಸಂಸತ್ತಿನ ಜಂಟಿ ಅಧಿವೇಶನವನ್ನು ಕರೆದು ಈ ಕಾಯ್ದೆಗಳನ್ನು ಹಿಂಪಡೆಯಬೇಕು. ವಿರೋಧ ಪಕ್ಷವು ರೈತರಿಗೆ ಸಾಥ್ ನೀಡಲಿದೆ ಎಂದು ಹೇಳಿದರು.


ಇದನ್ನೂ ಓದಿ: ಹರಿಯಾಣ ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿದ ರೈತರ ಮೇಲೆ ದಾಖಲಾಯ್ತು ಗಲಭೆ, ಕೊಲೆಯತ್ನದ ಕೇಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...