Homeಚಳವಳಿಜಗತ್‌ ಪ್ರಸಿದ್ಧ ಪ್ರತಿರೋಧದ ಹಾಡು! - ರೈತರ ಹೋರಾಟದಲ್ಲೂ ಪ್ರತಿಧ್ವನಿಸಿದ 'ಬೆಲ್ಲಾ ಚಾವ್'

ಜಗತ್‌ ಪ್ರಸಿದ್ಧ ಪ್ರತಿರೋಧದ ಹಾಡು! – ರೈತರ ಹೋರಾಟದಲ್ಲೂ ಪ್ರತಿಧ್ವನಿಸಿದ ‘ಬೆಲ್ಲಾ ಚಾವ್’

"ಈ ಹಾಡನ್ನು ಫ್ಯಾಸಿಸ್ಟ್ ವಿರೋಧಿ ಗುಂಪುಗಳ ಸದಸ್ಯರು ಎರಡನೇ ವಿಶ್ವಯುದ್ಧದ ಸಮಯದಲ್ಲಿ ಬೆನಿಟೊ ಮುಸೊಲೊನಿ ವಿರುದ್ಧ ಬಳಸಿದ್ದರು"

- Advertisement -
- Advertisement -

ಪ್ರತಿರೋಧದ ಗೀತೆಯಾಗಿ ಪ್ರಪಂಚದಾದ್ಯಂತ ಪ್ರಸಿದ್ಧಿ ಪಡೆದಿರುವ ‘ಬೆಲ್ಲಾ ಚಾವ್’ ಹಾಡು ಇದೀಗ ರೈತರ ಪ್ರತಿಭಟನೆಯನ್ನೂ ಪ್ರತಿಧ್ವನಿಸುತ್ತಿದೆ. ಇಟಲಿ ಮೂಲದ ಈ ಹಾಡನ್ನು 27 ವರ್ಷದ ಪೂಜನ್ ಸಾಹಿಲ್ ಪಂಜಾಬಿ ಭಾಷೆಗೆ ಅನುವಾದಿಸಿ ಹಾಡಿದ್ದಾರೆ. ಹೋರಾಟನಿರತ ರೈತರೇ ಆರಂಭಿಸಿರುವ ಯೂಟೂಬ್ ಚಾನೆಲ್‌ನಲ್ಲಿ ಇದು ಕೇವಲ ಒಂದು ವಾರದಲ್ಲಿ 2 ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿ ದಾಖಲೆ ಮಾಡಿದೆ. ಪ್ರಸ್ತುತ ಈ ಹಾಡು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ದೆಹಲಿಯ ಶಾಲೆಯೊಂದರಲ್ಲಿ ಗಣಿತ ಪಾಠ ಮಾಡುವ ಸಾಹಿಲ್, “ಸಾಮಾಜಿಕ ಪ್ರಜ್ಞೆಯಿರುವ ಸಂಗೀತಗಾರನಿಗೆ ಭಯ, ನಿಂದನೆ ಮತ್ತು ನಿರಾಶೆಗಳು ಒಂದು ಕೋರ್ಸ್‌ಗೆ ಸಮನಾಗಿರುತ್ತದೆ. ನಮ್ಮ ಪದಗಳು ಪ್ರತಿಭಟನೆ ನಡೆಸುತ್ತಿರುವ ಸಾವಿರಾರು ರೈತರಿಗೆ ಬಲ ನೀಡಿದರೆ ಅದು ಸಾರ್ಥಕವಾದಂತೆ. ಕೇಂದ್ರವು ತನ್ನ ಹೊಸ ಕೃಷಿ ಕಾನೂನುಗಳನ್ನು ಹಿಂಪಡೆಯಲು ಈ ಮೂಲಕ ಒತ್ತಾಯಿಸುತ್ತಿದ್ದೇನೆ” ಎಂದು ಪಿಟಿಐಗೆ ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ ದೇಶದಾದ್ಯಂತ ನಡೆದ ಸಿಎಎ ಪ್ರತಿಭಟನೆಯ ಸಂದರ್ಭದಲ್ಲಿ ‘ಬೆಲ್ಲಾ ಚಾವ್’ ಹಾಡನ್ನು ಹಿಂದಿಗೆ ಅನುವಾದ ಮಾಡಿ ಹಾಡಲಾಗಿತ್ತು. ಕಳೆದ ಜುಲೈನಲ್ಲಿ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾದ ‘ಮನಿ ಹೈಸ್ಟ್‌’ ವೆಬ್‌ ಸರಣಿಯಲ್ಲಿ ಈ ಮೂಲ ಹಾಡನ್ನು ಬಳಸಿಕೊಳ್ಳಲಾಗಿತ್ತು. ಇದರಿಂದ ವಿಶ್ವದಾದ್ಯಂತ ಈ ಹಾಡು ಇನ್ನಷ್ಟು ಜನಪ್ರಿಯತೆ ಗಳಿಸಿತು.

ಇದನ್ನೂ ಓದಿ: ಜಾತಿ ದುರಹಂಕಾರ ಮತ್ತು ಮೀಸಲಾತಿ ಬಗ್ಗೆ ಗೌರಿ ಲಂಕೇಶ್‌ ಬರಹ

“ನಾನು ಈಗಾಗಲೇ ಭಾರತದ ವಿವಿಧ ವಿದ್ಯಾರ್ಥಿ ಪ್ರತಿಭಟನೆಗಳಲ್ಲಿ ‘ಬೆಲ್ಲಾ ಚಾವ್’ ಹಾಡಿನ ಹಿಂದಿ ಅನುವಾದ ‘ವಾಪಾಸ್ ಜಾವೊ’ ಹಾಡನ್ನು ರಚಿಸಿದ್ದೆ. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ನಂತರ ಇದನ್ನು ಸಿಎಎ ಪ್ರತಿಭಟನೆಗಳಲ್ಲಿ ಹಲವು ಬಾರಿ ಬಳಸಿಕೊಳ್ಳಲಾಗಿದೆ. ಈ ಹಾಡಿನ ಇತಿಹಾಸವನ್ನು ಗಮನಿಸಿದಾಗ ಇದು ರೈತರ ಪ್ರತಿಭಟನೆಗೆ ಚೆನ್ನಾಗಿ ಹೊಂದುತ್ತದೆ ಎಂದು ನಾನು ಭಾವಿಸಿದೆ” ಎಂದು ಸಾಹಿಲ್ ಹೇಳಿದರು.

ಉತ್ತರ ಇಟಲಿಯಲ್ಲಿ 19 ನೇ ಶತಮಾನದ ಉತ್ತರಾರ್ಧದಲ್ಲಿ “ಬೆಲ್ಲಾ ಚಾವ್” (ಗುಡ್‌ಬೈ ಬ್ಯೂಟಿಫುಲ್) ಹಾಡು ಹುಟ್ಟಿಕೊಂಡಿತ್ತು. ಅಲ್ಲಿನ ಮಹಿಳಾ ರೈತರು ಕಠಿಣ ಕೆಲಸದ ಸಂದರ್ಭಗಳಲ್ಲಿ ಇದನ್ನು ಹಾಡುತ್ತಿದ್ದರು. ನಂತರ ಈ ಹಾಡನ್ನು ಫ್ಯಾಸಿಸ್ಟ್ ವಿರೋಧಿ ಗುಂಪುಗಳ ಸದಸ್ಯರು ಎರಡನೇ ವಿಶ್ವಯುದ್ಧದ ಸಮಯದಲ್ಲಿ ಬೆನಿಟೊ ಮುಸೊಲೊನಿ ವಿರುದ್ಧ ಬಳಸಿದ್ದರು. ನಂತರದ ವರ್ಷಗಳಲ್ಲಿ ಇದು ಗ್ರೀಸ್, ಫ್ರಾನ್ಸ್ ಸೇರಿದಂತೆ ಜಗತ್ತಿನಾದ್ಯಂತ ನಡೆಯುವ ಎಲ್ಲಾ ಪ್ರತಿಭಟನೆಯಲ್ಲಿಯೂ ಬಳಕೆಗೆ ಬಂತು.

ಇದನ್ನೂ ಓದಿ: ಪ್ರಧಾನಿ ವಿರುದ್ಧ ದನಿಯೆತ್ತಿದರೆ ಮೋಹನ್ ಭಾಗವತ್ ಕೂಡಾ ಭಯೋತ್ಪಾದಕರೇ! – ರಾಹುಲ್ ಗಾಂಧಿ

ಹಾಡಿನ ಪಂಜಾಬಿ ಸಾಹಿತ್ಯದ ಅನುವಾದದಲ್ಲಿ, ಸಾಮಾಜಿಕ ಸಾಮರಸ್ಯ, ನಾಗರಿಕ ಸಮಾಜದ ಅಭಿಯಾನ, ರೈತರ ತ್ಯಾಗ, ಕೇಂದ್ರದ ಕೃಷಿ ಕಾನೂನುಗಳಿಗೆ ವಿರೋಧ, ಪ್ರತಿಭಟನೆ ಮುಂತಾದ ಅಂಶಗಳು ಧ್ವನಿಸಿದೆ.

ದೆಹಲಿ ಮತ್ತು ಹರಿಯಾಣ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 29 ನೇ ದಿನಕ್ಕೆ ಕಾಲಿಟ್ಟಿದ್ದು, ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ತಮ್ಮ ವಿರೋಧವನ್ನು ಇನ್ನಷ್ಟು ತೀವ್ರಗೊಳಿಸುವ ಉದ್ದೇಶದಿಂದ ಇತ್ತೀಚೆಗೆ ದೇಶದಾದ್ಯಂತ ಉಪವಾಸಕ್ಕೆ ಕರೆ ನೀಡಿದ್ದರು.

ಇದನ್ನೂ ಓದಿ: ಸರ್ವಾಧಿಕಾರಿ ಹಿಟ್ಲರ್ ಮತ್ತು ಆತನ ಬಗೆಗಿನ ಗಮನ ಸೆಳೆದ ವ್ಯಂಗ್ಯಚಿತ್ರಗಳು

ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಅವುಗಳೆಲ್ಲಾ ವಿಫಲವಾಗಿವೆ. ಇತ್ತೀಚೆಗೆ ಈ ವಿಷಯವನ್ನು ಕೈಗೆತ್ತಿಕೊಂಡು ಸುಪ್ರೀಂಕೋರ್ಟ್, ಈ ಕುರಿತು ಶೋಧನೆ ಮಾಡಲು ಒಂದು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ಸಲಹೆ ನೀಡಿತ್ತು.

ಜೊತೆಗೆ ರೈತರು ತಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳಬೇಕಾಗಿಲ್ಲ. ಹೋರಾಟ ಮಾಡುವುದು ಅವರ ಹಕ್ಕು ಎಂದು ಸುಪ್ರೀಂ ಹೇಳಿತ್ತು. ಆದರೆ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ, ಶಾಂತಿಯುತವಾಗಿ ಪ್ರತಿಭಟಿಸುವಂತೆ ಹೇಳಿತ್ತು.


ಇದನ್ನೂ ಓದಿ: ’ಶಗ್ಗಿ ಬೈನ್’ಗೆ ಬುಕರ್: ಜೀವನ ಸಂಘರ್ಷವೇ ಈ ಕತೆಗಾರನ ಜೀವಾಳ ಮತ್ತು ಬಂಡವಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...