HomeUncategorizedದಿಕ್ಕು ತಪ್ಪಿದ ಮಾತುಗಳು ಮತ್ತು ಅಡ್ಡ ಹಾದಿ ಹಿಡಿದ ಚುನಾವಣಾ ಕಥನ

ದಿಕ್ಕು ತಪ್ಪಿದ ಮಾತುಗಳು ಮತ್ತು ಅಡ್ಡ ಹಾದಿ ಹಿಡಿದ ಚುನಾವಣಾ ಕಥನ

- Advertisement -
- Advertisement -

ಪ್ರಜಾತಂತ್ರದ ಹಬ್ಬಗಳೆಂದು ಕರೆಯುವ ಚುನಾವಣೆಗಳು ಬಂದಿವೆ. ಜನರ ಬೇಕುಬೇಡಗಳನ್ನು ನಿರ್ಧರಿಸುವ ಸಮಯವಿದು. ಹಾಗಾಗಿ ಜನರ ದನಿಗಳು ಜೋರಾದರೆ ಮಾತ್ರ ಆಳಲು ಹೋಗುವವರಿಗೆ ಕೇಳಿಸಲು ಸಾಧ್ಯ. ಏಕೆಂದರೆ ಈಗ ಮಾತ್ರ ರಾಜಕೀಯ ಪಕ್ಷಗಳ ನಾಯಕರುಗಳು ಜನರ ಮನೆ ಮುಂದೆ ಬರುತ್ತಾರೆ. ಹೀಗೆ ಬರುವುದು ಅವರಿಗೆ ಅನಿವಾರ್ಯವಾಗಿರುತ್ತದೆ. ಇದನ್ನೆ ನಾವು ಪ್ರಜಾತಂತ್ರ ಎಂದು ಕರೆಯುವುದು. ಈ ಸಂದರ್ಭದಲ್ಲಿ ಮಾಧ್ಯಮಗಳು ಜನರ ದನಿಯಾಗಿ ಜನ ಮತ್ತು ರಾಜಕೀಯ ಪಕ್ಷಗಳ ನಡುವೆ ಸೇತುವೆಯಾಗಿ ಕೆಲಸ ಮಾಡಬೇಕು. ಪ್ರಜಾತಂತ್ರದ ಯಶಸ್ಸಿಗೆ ಇದು ಅಗತ್ಯ.
ಕರ್ನಾಟಕದಲ್ಲಿ ಚುನಾವಣೆ ಎರಡು ಹಂತಗಳಲ್ಲಿ ನಡೆಯುತ್ತಿದ್ದು ದಿನೇ ದಿನೇ ಕಾವೇರುತ್ತಿದೆ. ಆದರೆ ಬಹುತೇಕ ಮಾಧ್ಯಮಗಳು ಮಂಡ್ಯ ಕ್ಷೇತ್ರದ ಮೇಲೆ ಮಾತ್ರ ಗಮನ ಹರಿಸುತ್ತಿದ್ದಾರೆ, ಉಳಿದ ಕ್ಷೇತ್ರಗಳನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಎಂಬ ಆರೋಪಗಳು ದೊಡ್ಡ ಮಟ್ಟದಲ್ಲಿ ಕೇಳಿ ಬರುತ್ತಿವೆ. ಮಂಡ್ಯ ಅಂದ್ರೆ ಇಂಡ್ಯ ಇದ್ದ ಹಾಗೆ ಎಂದು ತಮಾಷೆಗೆ ಹೇಳುತ್ತಿದ್ದುದ್ದನ್ನು ನಿಜ ಮಾಡಲು ಹೊರಟಂತಿದೆ ಮಾಧ್ಯಮಗಳ ನಡೆ. ಚಿತ್ರನಟರು ಇದ್ದರೆ ಟಿಆರ್‍ಪಿ ಸಿಗುತ್ತದೆ ಎಂಬ ಕಾರಣಕ್ಕೆ ಹೆಚ್ಚಿನ ಸಮಯ ಅದಕ್ಕೆ ಮೀಸಲಿಡುವುದು ಎಷ್ಟು ಸರಿ?
ಕರ್ನಾಟಕದಲ್ಲಿರುವ ಚಾಮರಾಜನಗರದಲ್ಲಿ ಅಭಿವೃದ್ದಿ ಕೆಲಸಗಳು ಆಗುತ್ತಿವೆಯೇ ಇಲ್ಲವೇ? ಬೀದರ್‍ನ ಜನಗಳ ಪರಿಸ್ಥಿತಿ ಏನು? ರಾಜ್ಯದ ಜನರಿಗೆ ವಿದ್ಯುತ್ ಕೊಡುವುದಕ್ಕೋಸ್ಕರ ನೆಲೆ ಕಳೆದುಕೊಂಡ ಉತ್ತರ ಕನ್ನಡದ ಜನ ಈಗ ಹೇಗಿದ್ದಾರೆ? ಅಲ್ಲಿನ ಸಂಸದನ ಬೆಂಕಿಯುಗುಳುವ, ತೇಜೋವಧೆಯ ಭಾಷಣಗಳಿಂದ ಅಲ್ಲಿನ ಜನಕ್ಕೇನಾದರೂ ಉಪಯೋಗವಿದೆಯೇ? ಚಿತ್ರದುರ್ಗದ ಜನರು ಬರದಿಂದ ಬೇಯುತ್ತಿರುವುದಕ್ಕೆ ಪರಿಹಾರಗಳೇನು? ಕೋಲಾರ ಚಿಕ್ಕಬಳ್ಳಾಪುರದ ಜನರಿಗೆ ಕುಡಿಯಲು ಉತ್ತಮ ನೀರು ಸಿಗುತ್ತಿದೆಯೇ? ಈ ಯಾವ ವಿಷಯಗಳ ಕುರಿತು ಚುನಾವಣಾ ಸಂದರ್ಭದಲ್ಲಾದರೂ ಮಾಧ್ಯಮಗಳು ಗಮನಹರಿಸುತ್ತಿಲ್ಲ ಎಂಬುದನ್ನು ನಾವು ಮರೆಯಬಾರದು.
ಇನ್ನು ಚುನಾವಣಾ ಸಮಯದಲ್ಲಿ ಕೆಲ ರಾಜಕಾರಣಿಗಳು ಮನಸ್ಸಿಗೆ ಬಂದಹಾಗೆ ಮಾತಾಡುವುದು, ಕೆಟ್ಟ ಕೊಳಕು ಬೈಯ್ಯುವುದನ್ನು ತಮ್ಮ ಕಾಯಕ ಮಾಡಿಕೊಂಡಿರುತ್ತಾರೆ. ಎದುರಾಳಿಗಳನ್ನು ಹಣಿಯಲು ಈ ಕುತಂತ್ರವನ್ನು ಬಳಸುತ್ತಾರೆ. ಕರ್ನಾಟಕದಲ್ಲಿ ಈ ಹಿಂದೆ ಉಪಚುನಾವಣೆಯೊಂದರ ಸಂದರ್ಭದಲ್ಲಿ ಬಿಜೆಪಿ ಪ್ರತಾಪ್ ಸಿಂಹ ಎಂಬ ವ್ಯಕ್ತಿ ‘ಇನ್ನೂ ಗಂಡ ಸತ್ತು ಒಂದು ವಾರ ಆಗಿಲ್ಲ, ಆಗಲೇ ಅವರಿಗೆ ಗೂಟದ ಕಾರಿನ ಮೇಲೆ ಆಸೆ’ ಎಂದಿದ್ದನು. ಇನ್ನು ಈ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅನ್ನು ಟೀಕಿಸುವ ಭರದಲ್ಲಿ ಗಂಡ ಸತ್ತು ತಿಂಗಳಾಗಿಲ್ಲ ಆಗಲೇ ಚುನಾವಣೆಗೆ ಬೇಕಾಯ್ತಾ ಎಂದು ಜೆಡಿಎಸ್‍ನ ಎಚ್.ಡಿ ರೇವಣ್ಣ ಹೇಳುವ ಮೂಲಕ ಸರಿಯಾಗಿ ಛೀಮಾರಿ ಹಾಕಿಸಿಕೊಂಡರು.
ಇಂದು ಕಾಂಗ್ರೆಸ್ ಜೊತೆಗಿರುವ ಪಕ್ಷದ ನಾಯಕಮಣಿಯೊಬ್ಬ ಉತ್ತರ ಪ್ರದೇಶದಲ್ಲಿ ತಮ್ಮ ಪ್ರತಿಸ್ಪರ್ಧಿ ಮಹಿಳಾ ಅಭ್ಯರ್ಥಿಯ ವಿರುದ್ಧ ಅವರು ಎಷ್ಟು ಅಗಲ ಬಿಂದಿ ಇಟ್ಟುಕೊಂಡಿದ್ದಾರೆ ಅಷ್ಟು ಗಂಡಂದಿರು ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಇದೇ ಉತ್ತರ ಪ್ರದೇಶದ ಬಿಜೆಪಿ ವ್ಯಕ್ತಿಯೊಬ್ಬರು ಮಾಯವತಿಯವರು ಫೇಶಿಯಲ್ ಮಾಡಿಸಿಕೊಳ್ಳುತ್ತಾರೆ, ಸೌಂದರ್ಯಕ್ಕೆ ಹೆಚ್ಚಿನ ಸಮಯ ನೀಡುತ್ತಾರೆ ಅವರನ್ನು ಗೆಲ್ಲಿಸಬಾರದು ಎಂದಿದ್ದ. ಇವೆಲ್ಲಾ ಉಸಾಬರಿ ಇವರಿಗೆ ಏಕೆ ಎಂಬುದು ಸರಳ ಪ್ರಶ್ನೆ. ಆದರೆ ಇವರೆಲ್ಲರೂ ಮಹಿಳೆಯವರ ವಿರುದ್ಧವೇ ಏಕೆ ತಮ್ಮ ನಾಲಿಗೆಯನ್ನು ಹರಿಯಬಿಡುತ್ತಾರೆ ಎಂಬುದು ಬಹಳ ದೊಡ್ಡ ಪ್ರಶ್ನೆಯಾಗಿದೆ. ಇಂದಿಗೂ ನಮ್ಮನ್ನು ಆಳಲು ಹೋಗುವವರು ಮಹಿಳೆಯರ ಕುರಿತು ಎಂತಹ ಕೀಳು ಮನಸ್ಥಿತಿ ಹೊಂದಿದ್ದಾರೆ ಎಂಬುದು ಇದರಿಂದ ತಿಳಿದುಬರುತ್ತದೆ. ಇದರಲ್ಲಿ ಪಕ್ಷಭೇದವೇ ಇಲ್ಲವಾದರೂ ಸಂಸ್ಕøತಿ ರಕ್ಷಕರ ಪಕ್ಷ ಎಂದು ಕರೆಸಿಕೊಳ್ಳುವ ಬಿಜೆಪಿಯವರು ಬೆಂಕಿ ಹಚ್ಚುವ ಮಾತಾಡುವುದರಲ್ಲಿ, ಸಮುದಾಯಗಳನ್ನು ಅವಮಾನಿಸುವ ವಿಚಾರದಲ್ಲಿ ಅಗ್ರಗಣ್ಯರು.
ಕಳೆದ ಐದು ವರ್ಷಗಳ ಅವಧಿಯಲ್ಲಿ ತಮ್ಮ ಪಕ್ಷ ಮತ್ತು ತಾನು ಏನೆಲ್ಲಾ ಮಾಡಿದ್ದೇನೆ ಎಂಬುದರ ಆಧಾರದಲ್ಲಿ ಆಡಳಿತ ಪಕ್ಷ ಮತ್ತು ಅದರ ಅಭ್ಯರ್ಥಿಗಳು ಮತ ಕೇಳಬೇಕು. ಹಾಗೆಯೇ ವಿರೋಧ ಪಕ್ಷಗಳು ಆಳುವ ಪಕ್ಷ ಹೇಗೆ ವಿಫಲವಾಗಿದೆ ಮತ್ತು ನಾವು ಅಧಿಕಾರಕ್ಕೆ ಬಂದರೆ ಏನು ಮಾಡುತ್ತೇವೆ ಎಂಬದರ ಮೇಲೆ ಮತಯಾಚಿಸಬೇಕು. ಆದರೆ ಇಂದು ಏನಾಗುತ್ತಿದೆ? ಆಡಳಿತ ನಡೆಸುತ್ತಿದ್ದ ಪಕ್ಷವೂ ಗಡಿಯನ್ನು, ಸೈನಿಕರನ್ನು ದೇಶದ ರಕ್ಷಣೆಯನ್ನು ಮುಂದಿಟ್ಟು ಓಟು ಕೇಳುತ್ತದೆ. ಸ್ವತಃ ಪ್ರಧಾನಿಯವರೇ ಧರ್ಮವನ್ನು ಮುಂದಿಟ್ಟು ಅತಿರೇಕದ ಮಾತುಗಳನ್ನು ಆಡುತ್ತಿದ್ದರೆ, ಮಾಧ್ಯಮಗಳು ಸಹ ರಾಷ್ಟ್ರ ಅಪಾಯದಲ್ಲಿದೆ ಎಂದು ಬಿಂಬಿಸುತ್ತವೆ. ದುರ್ಬಲ ಪ್ರತಿಪಕ್ಷಗಳು ದಿಕ್ಕು ತೋಚದೇ ಕೂರುತ್ತವೆ. ಎಲ್ಲೊ ಒಂದಿಷ್ಟು ಜನಪರವಾಗಿ ಪ್ರತಿಪಕ್ಷಗಳು ಮಾತಾಡಿದರೂ ಸಹ ಈಗಾಗಲೇ ಮಾರಿಕೊಂಡಿರುವ ಮಾಧ್ಯಮಗಳು ಅದಕ್ಕೆ ಮಹತ್ವ ಕೊಡುವುದಿಲ್ಲ.
ಇಂದು ದೊಡ್ಡ ಕಾರ್ಪೊರೇಟ್‍ಗಳು, ಯಾರು ಗೆದ್ದರೆ ನಮಗೆ ಅನುಕೂಲ ಎಂಬ ಆಧಾರದಲ್ಲಿ ಚುನಾವಣೆಗಳನ್ನು ನಿರ್ಧರಿಸಲು ಸಾವಿರಾರು ಕೋಟಿ ಫಂಡ್ ಮಾಡಲು ಚುನಾವಣಾ ಬಾಂಡ್‍ಗಳಂತಹ ಅಧಿಕೃತ ದಾರಿಗಳೂ ತೆರೆದುಕೊಂಡಿವೆ. ತಮ್ಮ ಅನುಕೂಲಕ್ಕೆ ತಕ್ಕಂತೆ ಅಭಿಪ್ರಾಯ ರೂಪಿಸಲು ಅವರು ಮಾಧ್ಯಮಗಳನ್ನು ತಯಾರು ಮಾಡಿಕೊಂಡಿರುತ್ತಾರೆ. ಮಾಧ್ಯಮಗಳು ಅವರು ಹೇಳಿದಂತೆ ತುತ್ತೂರಿ ಊದುತ್ತವೆ. ಇದನ್ನು ಬದಲಿಸಬೇಕಾದ ಜವಾಬ್ದಾರಿಯನ್ನು ಇಂದು ಪರ್ಯಾಯ ಮಾಧ್ಯಮಗಳು ಹೊತ್ತಿಕೊಳ್ಳಲೇಬೇಕಿದೆ. ಇದು ಕಾಲದ ತುರ್ತಾಗಿದ್ದು ದೇಶದ ಆರೋಗ್ಯದ ದೃಷ್ಟಿಯಿಂದ, ಪ್ರಜಾತಂತ್ರದ ದೃಷ್ಟಿಯಿಂದ, ಭವಿಷ್ಯದ ದೃಷ್ಟಿಯಿಂದ ಬಹಳ ಬಹಳ ಮಹತ್ವದ್ದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...