Homeಕರ್ನಾಟಕಮುತ್ತು ಸುತ್ತು: ಟಿಪ್ಪುವಿನ ಪ್ರಸ್ತುತ ಸ್ಥಿತಿ ಸಾರುವ ನಂದಿಬೆಟ್ಟಕ್ಕೊಮ್ಮೆ ಹೋಗಿಬನ್ನಿ

ಮುತ್ತು ಸುತ್ತು: ಟಿಪ್ಪುವಿನ ಪ್ರಸ್ತುತ ಸ್ಥಿತಿ ಸಾರುವ ನಂದಿಬೆಟ್ಟಕ್ಕೊಮ್ಮೆ ಹೋಗಿಬನ್ನಿ

ಆಧುನಿಕತೆ ಮತ್ತು ಮುನ್ನೋಟಕ್ಕೆ ಹೆಸರಾಗಿದ್ದ ಟಿಪ್ಪು ಸುಲ್ತಾನ್ ಇಲ್ಲೊಂದು ಬೇಸಿಗೆ ಅರಮನೆ ಕಟ್ಟಿಸಿದ್ದಾರೆ. ಮೂರನೇ ಆಂಗ್ಲೋ ಮೈಸೂರು ಯುದ್ಧದಲ್ಲಿ ಟಿಪ್ಪು ಸೋಲನ್ನಪ್ಪಿದ ಬಳಿಕ ಇದು ಬ್ರಿಟಿಷರ ಕೈವಶವಾಯಿತು.

- Advertisement -
- Advertisement -

ಆಕಾಶದಲ್ಲಿ ಮೋಡಗಳು ಸ್ವಚ್ಛಂದವಾಗಿ ತೇಲಾಡುವಾಗ ಅದರ ಮೇಲೊಮ್ಮೆ ಕೂರಬೇಕೆಂದು ಯಾರಿಗೆ ತಾನೇ ಅನಿಸುವುದಿಲ್ಲ. ಅಂತ ಬಯಕೆ ನಿಮಗೇನಾದರೂ ಬಂದಿದ್ದಲ್ಲಿ ಅದನ್ನು ನನಸಾಗಿಸುವ ಅವಕಾಶ ಈ ತಿಂಗಳಲ್ಲಿ ಲಭ್ಯವಿದೆ. ಅದಕ್ಕೆ ನೀವು ಮಾಡಬೇಕಾದದ್ದು ಇಷ್ಟೇ.. ಬೆಂಗಳೂರಿನಿಂದ ಹೊರಡುವುದಿದ್ದರೆ ಅರ್ಧದಿನ ಸಮಯ ಹೊಂದಿಸಿಕೊಳ್ಳುವುದು.

ಈ ಚಳಿಗಾಲದಲ್ಲಿ ಬೆಳ್ಳಂಬೆಳಿಗ್ಗೆಯೇ ಬೈಕ್ ಅಥವಾ ಕಾರ್ ಹತ್ತಿ ಹೊರಟರೆ ನಂದಿಬೆಟ್ಟಕ್ಕೆ ಕೇವಲ ಒಂದೂವರೆ ಗಂಟೆಗಳ (63 ಕಿ.ಮೀ) ಪ್ರಯಾಣ. ನಾನು ಸೆಪ್ಟಂಬರ್ 8 ರಂದು ನನ್ನ ಬೈಕ್ ಹತ್ತಿ ಹೊರಟೆ. ಯಲಹಂಕ ಮೇಲಿಂದ ಪ್ರಯಾಣ ಬೆಳೆಸಿ ದೇವನಹಳ್ಳಿ ದಾಟಿದೊಡನೆ ಎಡಕ್ಕೆ ತಿರುಗಿದರೆ ನಿಮಗೆ ನಂದಿ ಬೆಟ್ಟ ಕಾಣಸಿಗುತ್ತದೆ. ರಸ್ತೆಯ ಎರಡೂ ಬದಿಗೂ ಹಸಿರು ಮರಗಳು ನಿಮ್ಮನ್ನು ಸ್ವಾಗತಿಸುತ್ತವೆ. ಹೋಗುವ ರಸ್ತೆಯೇ ಚೆಂದ.

ಈ ಮೊದಲು ಬೆಳಿಗ್ಗೆ 5-6 ಗಂಟೆಗೇ ನಂದಿಬೆಟ್ಟಕ್ಕೆ ಪ್ರವೇಶವಿರುತ್ತಿತ್ತು. ಸುತ್ತಲು ಕಾವಳ ಮುತ್ತಿ 15-20 ಅಡಿ ದೂರದವರೆಗೆ ಮಾತ್ರ ಕಾಣುವಂತೆ ಮಂಜು ಆವರಿಸುತ್ತಿತ್ತು. ಆನಂತರ ನೀವು ಬೆಟ್ಟದ ತುದಿಯಲ್ಲಿ ಕುಳಿತು ಸೂರ್ಯೋದಯವನ್ನು ಕಣ್ತುಂಬಿಕೊಳ್ಳಬಹುದಿತ್ತು. ಇನ್ನು ದಿನವಿಡೀ ಆ ದಟ್ಟ ಕಾನನದಲ್ಲಿ ಸುತ್ತಾಡಿ, ವಿರಮಿಸಿ, ಹೊಟ್ಟೆ ತುಂಬ ಊಟ ಮಾಡಿ ಸಂಜೆಗೆ ಸೂರ್ಯಾಸ್ತವನ್ನು ನೋಡಿ ವಾಪಸ್ ಬರಬಹುದಿತ್ತು. ಇವೆಲ್ಲವೂ ಅದ್ಭುತ ಅನುಭವ. ಆದರೆ ಈಗ ಕೊರೊನಾ ಸಾಂಕ್ರಾಮಿಕದ ಕಾರಣಕ್ಕೆ ಆ ಅನುಭವಕ್ಕೆ ಅಡ್ಡಿಯಾಗಿದೆ. ಈಗ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಾತ್ರ ನಂದಿ ಬೆಟ್ಟಕ್ಕೆ ಪ್ರವೇಶಾವಕಾಶವಿದೆ.

ಆದರೂ ನೀವು ಮೇಘಗಳ ಜೊತೆಗೆ ನಿಂತು ಅವುಗಳ ಹಿಂಡನ್ನು ನೋಡಲು ಈಗಲೂ ಸಾಧ್ಯವಿದೆ. ಬೆಳಿಗ್ಗೆ 8 ಗಂಟೆಯ ಹೊತ್ತಿಗೆ ನೀವು ನಂದಿ ಬೆಟ್ಟದ ಮೇಲಿದ್ದರೆ ನಿಮ್ಮ ಕೆಳಗೆ ಮೋಡಗಳ ಹಿಂಡು ಚಲಿಸುವುದು ಗೋಚರಿಸುತ್ತದೆ. ಆ ಮೋಡಗಳ ಸಾಲು ಬಂದು ಬೆಟ್ಟಕ್ಕೆ ಢಿಕ್ಕಿ ಹೊಡೆದು ಮಾಯವಾಗುತ್ತವೆ. ಸಾಮಾನ್ಯವಾಗಿ ಎತ್ತರದ ಎಲ್ಲಾ ಗಿರಿ ಶಿಖರಗಳಲ್ಲಿಯೂ, ಚಳಿಗಾಲದಲ್ಲಿ ಈ ದೃಶ್ಯ ಸಾಮಾನ್ಯ. ಆದರೆ ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿ ಥರದ ಬಹಳ ಎತ್ತರದ ಬೆಟ್ಟಗಳಲ್ಲಿ ನಮ್ಮ ಸುತ್ತಲೂ ಮಂಜು ತುಂಬಿ ಏನನ್ನೂ ನೋಡಲು ಸಾಧ್ಯವಾಗುವುದಿಲ್ಲ.

ಇದನ್ನೂ ನೋಡಿ: Exploring Nandi Hills ಮೊಗೆದಷ್ಟು ನೀರು ನಂದಿ ಬೆಟ್ಟ.. ನಂದಿ ಬೆಟ್ಟಕ್ಕೆ ಬೈಕ್ ರೈಡಿಂಗ್

 

ಚಿಕ್ಕಬಳ್ಳಾಪುರ ಜಿಲ್ಲಾವ್ಯಾಪ್ತಿಗೆ ಬರುವ, ಚಿಕ್ಕಬಳ್ಳಾಪುರದಿಂದ ಕೇವಲ 10 ಕಿ.ಮೀ ದೂರದಲ್ಲಿರುವ ನಂದಿ ಬೆಟ್ಟದಲ್ಲಿ ನೀವು ಎಷ್ಟು ಹೊತ್ತು ಇದ್ದರೂ ಬೇಸರಿಸದೆ ನೋಡಬಹುದಾದ ಸ್ಥಳಗಳಿವೆ. ನಂದಿ ಬೆಟ್ಟ ಸಮುದ್ರ ಮಟ್ಟದಿಂದ 5841 ಅಡಿ ಎತ್ತರದಲ್ಲಿರುವ ಗಿರಿ ಶಿಖರ. ಚೋಳರ ಕಾಲದಲ್ಲಿ ಇಲ್ಲಿ ಕೋಟೆಗಳನ್ನು, ದೇವಾಲಯಗಳನ್ನು ಕಟ್ಟಲಾಯಿತು. ನಂತರ ಟಿಪ್ಪು ಸುಲ್ತಾನನ ಕಾಲದಲ್ಲಿ ಅವನ್ನು ಮತ್ತಷ್ಟು ಭದ್ರಪಡಿಸಲಾಯಿತು ಎಂದು ಇತಿಹಾಸ ಹೇಳುತ್ತದೆ.

ಆಧುನಿಕತೆ ಮತ್ತು ಮುನ್ನೋಟಕ್ಕೆ ಹೆಸರಾಗಿದ್ದ ಟಿಪ್ಪು ಸುಲ್ತಾನ್ ಇಲ್ಲೊಂದು ಬೇಸಿಗೆ ಅರಮನೆ ಕಟ್ಟಿಸಿದ್ದಾರೆ. 1791ರಲ್ಲಿ ಟಿಪ್ಪು ಮತ್ತು ಬ್ರಿಟಿಷರ ನಡುವೆ ನಡೆದ ಮೂರನೇ ಆಂಗ್ಲೋ ಮೈಸೂರು ಯುದ್ಧದಲ್ಲಿ ಟಿಪ್ಪು ಸೋಲನ್ನಪ್ಪಿದ ಬಳಿಕ ಇದು ಬ್ರಿಟಿಷರ ಕೈವಶವಾಯಿತು. ನಂತರ ಹಲವು ಬ್ರಿಟಿಷ್ ಅಧಿಕಾರಿಗಳು ಇಲ್ಲಿ ತಂಗುತ್ತಿದ್ದರು ಎನ್ನಲಾಗಿದೆ. ಆದರೆ ಇಂದು ಟಿಪ್ಪುವಿನ ಆ ಬೇಸಿಗೆ ಅರಮನೆ ಸರಿಯಾದ ಮೇಲ್ವೀಚಾರಣೆ ಮತ್ತು ನಿರ್ವಹಣೆ ಇಲ್ಲದ ಕಾರಣ ಅನಾಥವಾಗಿ ಬಿದ್ದಿದೆ. ಐತಿಹಾಸಿಕ ಮಹತ್ವ ಹೊಂದಿದ್ದ ಈ ಪಾರಂಪರಿಕ ತಾಣ ಪಾಳುಬಿದ್ದ ಮನೆಯ ರೀತಿ ಕಾಣುತ್ತಿದೆ. ಇನ್ನು ಟಿಪ್ಪು ಸುಲ್ತಾನ್ ಕಾಲದಲ್ಲಿ ಅಪರಾಧಿಗಳನ್ನು ಶಿಕ್ಷಿಸುವುದಕ್ಕಾಗಿ ಬಳಸುತ್ತಿದ್ದ ಟಿಪ್ಪು ಡ್ರಾಪ್ ಎಂಬ ದುರ್ಗಮ ಸ್ಥಳ ಇಂದು ಪ್ರವಾಸಿಸ್ಥಳವಾಗಿ ಬದಲಾವಣೆಯಾಗಿದೆ. ಇಲ್ಲಿಂದ ಕಡಿದಾದ ಆಳವನ್ನು ನೋಡಬಹುದು. ಬಂಡೆ ಮೇಲೆ ಕುಳಿತು ಮೋಡಗಳ ಹಿಂಡನ್ನು, ಅದರ ನೆರಳನ್ನು ಕಾಣಬಹುದು. ಸಂಜೆಯಾಗುತ್ತಿದ್ದಂತೆ ಸೂರ್ಯಾಸ್ತವನ್ನು ನೋಡಲು ಪ್ರಶಸ್ತವಾದ ಜಾಗ ಇದು.

ಟಿಪ್ಪು ಸುಲ್ತಾನ್ ಕಟ್ಟಿಸಿದ್ದ ಬೇಸಿಗೆ ಅರಮನೆ

ಯೋಗ ನಂದೀಶ್ವರ ಸ್ವಾಮಿ ದೇವಾಲಯ, ಗವಿ ವೀರಭದ್ರಸ್ವಾಮಿ ದೇವಾಲಯ, ನೆಲ್ಲಿಕಾಯಿ ಬಸವಣ್ಣ ದೇವಾಲಯ ಸೇರಿ ಹಲವು ದೇವಾಲಯಗಳು ಬೆಟ್ಟದಲ್ಲಿವೆ. ನಂದಿ ಬೆಟ್ಟದಲ್ಲಿನ ಇತರ ಆಕರ್ಷಣೆಯೆಂದರೆ ಬೆಟ್ಟದ ಮೇಲಿಂದ ಸುತ್ತಲಿನ ವಿಹಂಗಮ ನೋಟ. ನೋಡಲು ಹಲವು ವ್ಯೂ ಪಾಯಿಂಟ್‌ಗಳು ಇಲ್ಲಿವೆ. ತೋಟಗಾರಿಕೆ ಇಲಾಖೆಯ ಕೈತೋಟಗಳು, ದೊಡ್ಡ ದೊಡ್ಡ ಮರಗಳು ಇಲ್ಲಿವೆ. ಇಲ್ಲಿ ಹುಟ್ಟುವ ಪಾಲರ್ ಮತ್ತು ಅರ್ಕಾವತಿ ನದಿಮೂಲಗಳ ವೀಕ್ಷಣೆ ಮುದನೀಡುತ್ತವೆ.

ದೂರದ ಊರಿಂದ ಬರುವವರು ರಾತ್ರಿಯೇ ಬಂದು ಇಲ್ಲಿ ಉಳಿದು ಬೆಳಿಗ್ಗೆ ಬೆಟ್ಟಕ್ಕೆ ಬರಬಹುದು. ಬೆಟ್ಟದ ತಪ್ಪಲಿನಲ್ಲಿ ಪ್ರವಾಸಿಮಂದಿರ ಮತ್ತು ಹೋಟೆಲ್‌ಗಳಿವೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ವೆಜ್ ಮತ್ತು ನಾನ್‌ವೆಜ್ ಹೋಟೆಲ್ ಒಂದನ್ನು ತೆರೆದಿದೆ. ಇದು ಪ್ಲಾಸ್ಟಿಕ್ ನಿಷೇಧ ವಲಯವಾಗಿದ್ದು ಹೊರಗಿನಿಂದ ನೀರು, ತಿಂಡಿ ತರಲು ಅವಕಾಶವಿಲ್ಲ. ನಂದಿ ಬೆಟ್ಟದಲ್ಲಿಯೇ ತಿಂಡಿ ತಿನಿಸುಗಳು ಲಭ್ಯವಿದ್ದು ಕೋತಿಗಳ ಸಂಖ್ಯೆ ಹೆಚ್ಚಿರುವುದರಿಂದ ನೀವು ತಿಂದು ಅವುಗಳಿಗೂ ಕೊಡಬಹುದು. ಕೋತಿಗಳ ಸಂಗಡ ಸಣ್ಣ ಮಕ್ಕಳಿಗೆ ಹಬ್ಬವಾಗುವುದಂತೂ ನಿಜ.

ನಂದಿಬೆಟ್ಟದ ಪಕ್ಕದಲ್ಲಿಯೇ ಸ್ಕಂದಗಿರಿ ಮತ್ತು ಚನ್ನಗಿರಿ ಎಂಬ ಇನ್ನೆರಡು ಸುಂದರ ಬೆಟ್ಟಗಳಿವೆ. ಚಿಕ್ಕಬಳ್ಳಾಪುರಕ್ಕೆ ಹೋಗುವ ದಾರಿಯಲ್ಲಿ ಭೋಗ ನಂದೀಶ್ವರ ದೇವಾಲಯವಿದೆ. ಒಟ್ಟಿನಲ್ಲಿ ಅರ್ಧದಿನ ಅಥವಾ ದಿನವಿಡೀ ಕಳೆಯಲು ಇದು ಪ್ರಶಸ್ತ ಸ್ಥಳವಾಗಿದೆ.


ಇದನ್ನೂ ಓದಿ: ಜಗತ್‌ ಪ್ರಸಿದ್ಧ ಪ್ರತಿರೋಧದ ಹಾಡು! – ರೈತರ ಹೋರಾಟದಲ್ಲೂ ಪ್ರತಿಧ್ವನಿಸಿದ ‘ಬೆಲ್ಲಾ ಚಾವ್’
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...