Homeಕರ್ನಾಟಕಮುತ್ತು ಸುತ್ತು: ಟಿಪ್ಪುವಿನ ಪ್ರಸ್ತುತ ಸ್ಥಿತಿ ಸಾರುವ ನಂದಿಬೆಟ್ಟಕ್ಕೊಮ್ಮೆ ಹೋಗಿಬನ್ನಿ

ಮುತ್ತು ಸುತ್ತು: ಟಿಪ್ಪುವಿನ ಪ್ರಸ್ತುತ ಸ್ಥಿತಿ ಸಾರುವ ನಂದಿಬೆಟ್ಟಕ್ಕೊಮ್ಮೆ ಹೋಗಿಬನ್ನಿ

ಆಧುನಿಕತೆ ಮತ್ತು ಮುನ್ನೋಟಕ್ಕೆ ಹೆಸರಾಗಿದ್ದ ಟಿಪ್ಪು ಸುಲ್ತಾನ್ ಇಲ್ಲೊಂದು ಬೇಸಿಗೆ ಅರಮನೆ ಕಟ್ಟಿಸಿದ್ದಾರೆ. ಮೂರನೇ ಆಂಗ್ಲೋ ಮೈಸೂರು ಯುದ್ಧದಲ್ಲಿ ಟಿಪ್ಪು ಸೋಲನ್ನಪ್ಪಿದ ಬಳಿಕ ಇದು ಬ್ರಿಟಿಷರ ಕೈವಶವಾಯಿತು.

- Advertisement -
- Advertisement -

ಆಕಾಶದಲ್ಲಿ ಮೋಡಗಳು ಸ್ವಚ್ಛಂದವಾಗಿ ತೇಲಾಡುವಾಗ ಅದರ ಮೇಲೊಮ್ಮೆ ಕೂರಬೇಕೆಂದು ಯಾರಿಗೆ ತಾನೇ ಅನಿಸುವುದಿಲ್ಲ. ಅಂತ ಬಯಕೆ ನಿಮಗೇನಾದರೂ ಬಂದಿದ್ದಲ್ಲಿ ಅದನ್ನು ನನಸಾಗಿಸುವ ಅವಕಾಶ ಈ ತಿಂಗಳಲ್ಲಿ ಲಭ್ಯವಿದೆ. ಅದಕ್ಕೆ ನೀವು ಮಾಡಬೇಕಾದದ್ದು ಇಷ್ಟೇ.. ಬೆಂಗಳೂರಿನಿಂದ ಹೊರಡುವುದಿದ್ದರೆ ಅರ್ಧದಿನ ಸಮಯ ಹೊಂದಿಸಿಕೊಳ್ಳುವುದು.

ಈ ಚಳಿಗಾಲದಲ್ಲಿ ಬೆಳ್ಳಂಬೆಳಿಗ್ಗೆಯೇ ಬೈಕ್ ಅಥವಾ ಕಾರ್ ಹತ್ತಿ ಹೊರಟರೆ ನಂದಿಬೆಟ್ಟಕ್ಕೆ ಕೇವಲ ಒಂದೂವರೆ ಗಂಟೆಗಳ (63 ಕಿ.ಮೀ) ಪ್ರಯಾಣ. ನಾನು ಸೆಪ್ಟಂಬರ್ 8 ರಂದು ನನ್ನ ಬೈಕ್ ಹತ್ತಿ ಹೊರಟೆ. ಯಲಹಂಕ ಮೇಲಿಂದ ಪ್ರಯಾಣ ಬೆಳೆಸಿ ದೇವನಹಳ್ಳಿ ದಾಟಿದೊಡನೆ ಎಡಕ್ಕೆ ತಿರುಗಿದರೆ ನಿಮಗೆ ನಂದಿ ಬೆಟ್ಟ ಕಾಣಸಿಗುತ್ತದೆ. ರಸ್ತೆಯ ಎರಡೂ ಬದಿಗೂ ಹಸಿರು ಮರಗಳು ನಿಮ್ಮನ್ನು ಸ್ವಾಗತಿಸುತ್ತವೆ. ಹೋಗುವ ರಸ್ತೆಯೇ ಚೆಂದ.

ಈ ಮೊದಲು ಬೆಳಿಗ್ಗೆ 5-6 ಗಂಟೆಗೇ ನಂದಿಬೆಟ್ಟಕ್ಕೆ ಪ್ರವೇಶವಿರುತ್ತಿತ್ತು. ಸುತ್ತಲು ಕಾವಳ ಮುತ್ತಿ 15-20 ಅಡಿ ದೂರದವರೆಗೆ ಮಾತ್ರ ಕಾಣುವಂತೆ ಮಂಜು ಆವರಿಸುತ್ತಿತ್ತು. ಆನಂತರ ನೀವು ಬೆಟ್ಟದ ತುದಿಯಲ್ಲಿ ಕುಳಿತು ಸೂರ್ಯೋದಯವನ್ನು ಕಣ್ತುಂಬಿಕೊಳ್ಳಬಹುದಿತ್ತು. ಇನ್ನು ದಿನವಿಡೀ ಆ ದಟ್ಟ ಕಾನನದಲ್ಲಿ ಸುತ್ತಾಡಿ, ವಿರಮಿಸಿ, ಹೊಟ್ಟೆ ತುಂಬ ಊಟ ಮಾಡಿ ಸಂಜೆಗೆ ಸೂರ್ಯಾಸ್ತವನ್ನು ನೋಡಿ ವಾಪಸ್ ಬರಬಹುದಿತ್ತು. ಇವೆಲ್ಲವೂ ಅದ್ಭುತ ಅನುಭವ. ಆದರೆ ಈಗ ಕೊರೊನಾ ಸಾಂಕ್ರಾಮಿಕದ ಕಾರಣಕ್ಕೆ ಆ ಅನುಭವಕ್ಕೆ ಅಡ್ಡಿಯಾಗಿದೆ. ಈಗ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಾತ್ರ ನಂದಿ ಬೆಟ್ಟಕ್ಕೆ ಪ್ರವೇಶಾವಕಾಶವಿದೆ.

ಆದರೂ ನೀವು ಮೇಘಗಳ ಜೊತೆಗೆ ನಿಂತು ಅವುಗಳ ಹಿಂಡನ್ನು ನೋಡಲು ಈಗಲೂ ಸಾಧ್ಯವಿದೆ. ಬೆಳಿಗ್ಗೆ 8 ಗಂಟೆಯ ಹೊತ್ತಿಗೆ ನೀವು ನಂದಿ ಬೆಟ್ಟದ ಮೇಲಿದ್ದರೆ ನಿಮ್ಮ ಕೆಳಗೆ ಮೋಡಗಳ ಹಿಂಡು ಚಲಿಸುವುದು ಗೋಚರಿಸುತ್ತದೆ. ಆ ಮೋಡಗಳ ಸಾಲು ಬಂದು ಬೆಟ್ಟಕ್ಕೆ ಢಿಕ್ಕಿ ಹೊಡೆದು ಮಾಯವಾಗುತ್ತವೆ. ಸಾಮಾನ್ಯವಾಗಿ ಎತ್ತರದ ಎಲ್ಲಾ ಗಿರಿ ಶಿಖರಗಳಲ್ಲಿಯೂ, ಚಳಿಗಾಲದಲ್ಲಿ ಈ ದೃಶ್ಯ ಸಾಮಾನ್ಯ. ಆದರೆ ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿ ಥರದ ಬಹಳ ಎತ್ತರದ ಬೆಟ್ಟಗಳಲ್ಲಿ ನಮ್ಮ ಸುತ್ತಲೂ ಮಂಜು ತುಂಬಿ ಏನನ್ನೂ ನೋಡಲು ಸಾಧ್ಯವಾಗುವುದಿಲ್ಲ.

ಇದನ್ನೂ ನೋಡಿ: Exploring Nandi Hills ಮೊಗೆದಷ್ಟು ನೀರು ನಂದಿ ಬೆಟ್ಟ.. ನಂದಿ ಬೆಟ್ಟಕ್ಕೆ ಬೈಕ್ ರೈಡಿಂಗ್

 

ಚಿಕ್ಕಬಳ್ಳಾಪುರ ಜಿಲ್ಲಾವ್ಯಾಪ್ತಿಗೆ ಬರುವ, ಚಿಕ್ಕಬಳ್ಳಾಪುರದಿಂದ ಕೇವಲ 10 ಕಿ.ಮೀ ದೂರದಲ್ಲಿರುವ ನಂದಿ ಬೆಟ್ಟದಲ್ಲಿ ನೀವು ಎಷ್ಟು ಹೊತ್ತು ಇದ್ದರೂ ಬೇಸರಿಸದೆ ನೋಡಬಹುದಾದ ಸ್ಥಳಗಳಿವೆ. ನಂದಿ ಬೆಟ್ಟ ಸಮುದ್ರ ಮಟ್ಟದಿಂದ 5841 ಅಡಿ ಎತ್ತರದಲ್ಲಿರುವ ಗಿರಿ ಶಿಖರ. ಚೋಳರ ಕಾಲದಲ್ಲಿ ಇಲ್ಲಿ ಕೋಟೆಗಳನ್ನು, ದೇವಾಲಯಗಳನ್ನು ಕಟ್ಟಲಾಯಿತು. ನಂತರ ಟಿಪ್ಪು ಸುಲ್ತಾನನ ಕಾಲದಲ್ಲಿ ಅವನ್ನು ಮತ್ತಷ್ಟು ಭದ್ರಪಡಿಸಲಾಯಿತು ಎಂದು ಇತಿಹಾಸ ಹೇಳುತ್ತದೆ.

ಆಧುನಿಕತೆ ಮತ್ತು ಮುನ್ನೋಟಕ್ಕೆ ಹೆಸರಾಗಿದ್ದ ಟಿಪ್ಪು ಸುಲ್ತಾನ್ ಇಲ್ಲೊಂದು ಬೇಸಿಗೆ ಅರಮನೆ ಕಟ್ಟಿಸಿದ್ದಾರೆ. 1791ರಲ್ಲಿ ಟಿಪ್ಪು ಮತ್ತು ಬ್ರಿಟಿಷರ ನಡುವೆ ನಡೆದ ಮೂರನೇ ಆಂಗ್ಲೋ ಮೈಸೂರು ಯುದ್ಧದಲ್ಲಿ ಟಿಪ್ಪು ಸೋಲನ್ನಪ್ಪಿದ ಬಳಿಕ ಇದು ಬ್ರಿಟಿಷರ ಕೈವಶವಾಯಿತು. ನಂತರ ಹಲವು ಬ್ರಿಟಿಷ್ ಅಧಿಕಾರಿಗಳು ಇಲ್ಲಿ ತಂಗುತ್ತಿದ್ದರು ಎನ್ನಲಾಗಿದೆ. ಆದರೆ ಇಂದು ಟಿಪ್ಪುವಿನ ಆ ಬೇಸಿಗೆ ಅರಮನೆ ಸರಿಯಾದ ಮೇಲ್ವೀಚಾರಣೆ ಮತ್ತು ನಿರ್ವಹಣೆ ಇಲ್ಲದ ಕಾರಣ ಅನಾಥವಾಗಿ ಬಿದ್ದಿದೆ. ಐತಿಹಾಸಿಕ ಮಹತ್ವ ಹೊಂದಿದ್ದ ಈ ಪಾರಂಪರಿಕ ತಾಣ ಪಾಳುಬಿದ್ದ ಮನೆಯ ರೀತಿ ಕಾಣುತ್ತಿದೆ. ಇನ್ನು ಟಿಪ್ಪು ಸುಲ್ತಾನ್ ಕಾಲದಲ್ಲಿ ಅಪರಾಧಿಗಳನ್ನು ಶಿಕ್ಷಿಸುವುದಕ್ಕಾಗಿ ಬಳಸುತ್ತಿದ್ದ ಟಿಪ್ಪು ಡ್ರಾಪ್ ಎಂಬ ದುರ್ಗಮ ಸ್ಥಳ ಇಂದು ಪ್ರವಾಸಿಸ್ಥಳವಾಗಿ ಬದಲಾವಣೆಯಾಗಿದೆ. ಇಲ್ಲಿಂದ ಕಡಿದಾದ ಆಳವನ್ನು ನೋಡಬಹುದು. ಬಂಡೆ ಮೇಲೆ ಕುಳಿತು ಮೋಡಗಳ ಹಿಂಡನ್ನು, ಅದರ ನೆರಳನ್ನು ಕಾಣಬಹುದು. ಸಂಜೆಯಾಗುತ್ತಿದ್ದಂತೆ ಸೂರ್ಯಾಸ್ತವನ್ನು ನೋಡಲು ಪ್ರಶಸ್ತವಾದ ಜಾಗ ಇದು.

ಟಿಪ್ಪು ಸುಲ್ತಾನ್ ಕಟ್ಟಿಸಿದ್ದ ಬೇಸಿಗೆ ಅರಮನೆ

ಯೋಗ ನಂದೀಶ್ವರ ಸ್ವಾಮಿ ದೇವಾಲಯ, ಗವಿ ವೀರಭದ್ರಸ್ವಾಮಿ ದೇವಾಲಯ, ನೆಲ್ಲಿಕಾಯಿ ಬಸವಣ್ಣ ದೇವಾಲಯ ಸೇರಿ ಹಲವು ದೇವಾಲಯಗಳು ಬೆಟ್ಟದಲ್ಲಿವೆ. ನಂದಿ ಬೆಟ್ಟದಲ್ಲಿನ ಇತರ ಆಕರ್ಷಣೆಯೆಂದರೆ ಬೆಟ್ಟದ ಮೇಲಿಂದ ಸುತ್ತಲಿನ ವಿಹಂಗಮ ನೋಟ. ನೋಡಲು ಹಲವು ವ್ಯೂ ಪಾಯಿಂಟ್‌ಗಳು ಇಲ್ಲಿವೆ. ತೋಟಗಾರಿಕೆ ಇಲಾಖೆಯ ಕೈತೋಟಗಳು, ದೊಡ್ಡ ದೊಡ್ಡ ಮರಗಳು ಇಲ್ಲಿವೆ. ಇಲ್ಲಿ ಹುಟ್ಟುವ ಪಾಲರ್ ಮತ್ತು ಅರ್ಕಾವತಿ ನದಿಮೂಲಗಳ ವೀಕ್ಷಣೆ ಮುದನೀಡುತ್ತವೆ.

ದೂರದ ಊರಿಂದ ಬರುವವರು ರಾತ್ರಿಯೇ ಬಂದು ಇಲ್ಲಿ ಉಳಿದು ಬೆಳಿಗ್ಗೆ ಬೆಟ್ಟಕ್ಕೆ ಬರಬಹುದು. ಬೆಟ್ಟದ ತಪ್ಪಲಿನಲ್ಲಿ ಪ್ರವಾಸಿಮಂದಿರ ಮತ್ತು ಹೋಟೆಲ್‌ಗಳಿವೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ವೆಜ್ ಮತ್ತು ನಾನ್‌ವೆಜ್ ಹೋಟೆಲ್ ಒಂದನ್ನು ತೆರೆದಿದೆ. ಇದು ಪ್ಲಾಸ್ಟಿಕ್ ನಿಷೇಧ ವಲಯವಾಗಿದ್ದು ಹೊರಗಿನಿಂದ ನೀರು, ತಿಂಡಿ ತರಲು ಅವಕಾಶವಿಲ್ಲ. ನಂದಿ ಬೆಟ್ಟದಲ್ಲಿಯೇ ತಿಂಡಿ ತಿನಿಸುಗಳು ಲಭ್ಯವಿದ್ದು ಕೋತಿಗಳ ಸಂಖ್ಯೆ ಹೆಚ್ಚಿರುವುದರಿಂದ ನೀವು ತಿಂದು ಅವುಗಳಿಗೂ ಕೊಡಬಹುದು. ಕೋತಿಗಳ ಸಂಗಡ ಸಣ್ಣ ಮಕ್ಕಳಿಗೆ ಹಬ್ಬವಾಗುವುದಂತೂ ನಿಜ.

ನಂದಿಬೆಟ್ಟದ ಪಕ್ಕದಲ್ಲಿಯೇ ಸ್ಕಂದಗಿರಿ ಮತ್ತು ಚನ್ನಗಿರಿ ಎಂಬ ಇನ್ನೆರಡು ಸುಂದರ ಬೆಟ್ಟಗಳಿವೆ. ಚಿಕ್ಕಬಳ್ಳಾಪುರಕ್ಕೆ ಹೋಗುವ ದಾರಿಯಲ್ಲಿ ಭೋಗ ನಂದೀಶ್ವರ ದೇವಾಲಯವಿದೆ. ಒಟ್ಟಿನಲ್ಲಿ ಅರ್ಧದಿನ ಅಥವಾ ದಿನವಿಡೀ ಕಳೆಯಲು ಇದು ಪ್ರಶಸ್ತ ಸ್ಥಳವಾಗಿದೆ.


ಇದನ್ನೂ ಓದಿ: ಜಗತ್‌ ಪ್ರಸಿದ್ಧ ಪ್ರತಿರೋಧದ ಹಾಡು! – ರೈತರ ಹೋರಾಟದಲ್ಲೂ ಪ್ರತಿಧ್ವನಿಸಿದ ‘ಬೆಲ್ಲಾ ಚಾವ್’
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...