Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪತ್ರಕರ್ತರೊಬ್ಬರು ಪ್ರಧಾನಿ ಮೋದಿಯವರನ್ನು ಹೊಗಳಿದ್ದಾರೆಯೇ?

ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪತ್ರಕರ್ತರೊಬ್ಬರು ಪ್ರಧಾನಿ ಮೋದಿಯವರನ್ನು ಹೊಗಳಿದ್ದಾರೆಯೇ?

"ಪಾಕಿಸ್ತಾನದ ಪತ್ರಕರ್ತ ಮೋದಿಯವರನ್ನು ವರ್ಣಿಸಿದ ರೀತಿ" ಎಂದು ವ್ಯಕ್ತಿಯೊಬ್ಬರು ಮೋದಿಯವರನ್ನು ಹೊಗಳುತ್ತಿರುವ ವೀಡಿಯೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

- Advertisement -
- Advertisement -

ಪಾಕಿಸ್ತಾನದ ಪತ್ರಕರ್ತರೊಬ್ಬರು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿದ್ದಾರೆ ಎಂಬ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

“ಪಾಕಿಸ್ತಾನದ ಪತ್ರಕರ್ತ ಮೋದಿಯವರನ್ನು ವರ್ಣಿಸಿದ ರೀತಿ” ಎಂದು ವ್ಯಕ್ತಿಯೊಬ್ಬರು ಮೋದಿಯವರನ್ನು ಹೊಗಳುತ್ತಿರುವ ವೀಡಿಯೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

ಪೋಸ್ಟ್‌ನ ಆರ್ಕೈವ್‌ ಮಾಡಲಾದ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಸಾರ: ಬಲಪಂಥೀಯ ಮಹಿಳೆ ಮೇಲೆ ಕ್ರಮಕ್ಕೆ ಮುಂದಾದ ಕೋಲ್ಕತ್ತ ಪೊಲೀಸ್!

ಫ್ಯಾಕ್ಟ್‌ಚೆಕ್:

ಈ ವಿಡಿಯೋದ ಸೋಷಿಯಲ್ ಮೀಡಿಯಾ ಸಂಪರ್ಕದ ವಾಟರ್‌ ಮಾರ್ಕ್‌ನಲ್ಲಿ  ಹರ್ಷವರ್ಧನ್ ಜೈನ್ ಎಂದು ಬರೆಯಲಾಗಿದೆ. ಅಲ್ಲಿಂದ ಕ್ಯೂ ಪಡೆದು ವಿಡಿಯೋದ ಸ್ಕ್ರೀನ್‌ಶಾಟ್‌ಗಳನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ಇದೇ ವಿಡಿಯೋದ ಪೂರ್ತಿ ವಿಡಿಯೋ ಆಗಸ್ಟ್ 14, 2020ರಲ್ಲಿಹರ್ಷವರ್ಧನ್ ಜೈನ್’ ಎಂಬುವವರ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್ ಆಗಿದೆ. ಆ ಯೂಟ್ಯೂಬ್ ಚಾನೆಲ್‌ನ ‘ಪರಿಚಯ’ ವಿಭಾಗದಲ್ಲಿ ಹರ್ಷವರ್ಧನ್ ಜೈನ್ ಭಾರತೀಯ ಮೂಲದ ಪ್ರೇರಣ ನೀಡುವ ಭಾಷಣಕಾರರಾಗಿದ್ದು ತರಬೇತಿ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾರೆ ಎಂದು ಬರೆಯಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕ್ ಸದನದಲ್ಲಿ ’ಮೋದಿ ಮೋದಿ’ ಎಂದು ಘೋಷಣೆ ಹಾಕಲಾಗುತ್ತಿದೆಯೇ?

ಅಲ್ಲದೇ ಅವರ ಖಾಸಗಿ ವೆಬ್‌ಸೈಟ್ ಮತ್ತು ಅವರ ಸಾಮಾಜಿಕ ಜಾಲತಾಣ ಖಾತೆಗಳಲ್ಲಿಯೂ ಇದೇ ರೀತಿಯ ಹಲವು ಭಾಷಣಗಳನ್ನು ಕಾಣಬಹುದು. ಅಲ್ಲಿಯು ಅವರು ಭಾರತೀಯರೆಂದು ಪರಿಚಯಿಸಿಕೊಂಡಿದ್ದಾರೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇಂಡಿಯಾ ಟುಡೇ ಫ್ಯಾಕ್ಟ್‌ಚೆಕ್ ವಿಭಾಗವು ಹರ್ಷವರ್ಧನ್ ಜೈನ್‌ರವರ ಕಚೇರಿಯನ್ನು ಸಂಪರ್ಕಿಸಿದೆ. ಜೈನ್‌ರವರು ಪಾಕಿಸ್ತಾನದ ಪತ್ರಕರ್ತರಲ್ಲ, ಅವರು ಭಾರತದವರು ಎಂದಿದ್ದು, ಮತ್ತು ಈ ಭಾಷಣವನ್ನು ಭಾರತದ ಕಾರ್ಪೊರೇಟ್ ಕಂಪನಿಯೊಂದರಲ್ಲಿ ಮಾಡಿದ್ದಾರೆ ಎಂದು ಜೈನ್ ಕಚೇರಿಯು ಸಿಬ್ಬಂದಿ ತ್ರಿಲೋಕ್ ಶರ್ಮಾ ಎಂಬುವವರು ಸ್ಪಷ್ಟೀಕರಣ ನೀಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪ್ರತಿಭಟನೆಯೊಂದರಲ್ಲಿ ಭಾರತದ ಬಾವುಟವನ್ನು ಬಳಸಲಾಗಿದೆಯೇ?

ಹರ್ಷವರ್ಧನ್ ಜೈನ್‌ರವರು ರಾಜಸ್ಥಾನದ ಜೈಪುರ ಜಿಲ್ಲೆಯವರು. ಇವರಿಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧವಿಲ್ಲ. ಕಾರ್ಪೊರೇಟ್ ಕಂಪನಿಗಳ ಉದ್ಯೋಗಿಗಳಿಗೆ ನಾಯಕತ್ವ ಬಲವರ್ಧನೆ ಕುರಿತು ಪ್ರೇರಣೆಯ ಭಾಷಣ ಮತ್ತು ತರಬೇತಿ ನೀಡುತ್ತಾರೆ. ಕಾರ್ಪೊರೇಟ್ ಕಂಪನಿಯೊಂದರ ಮಾರುಕಟ್ಟೆ ವಿಭಾಗದ ಉದ್ಯೋಗಿಗಳಿಗೆ ಕೆಲದಿನಗಳ ಹಿಂದೆ ಅವರು ತರಬೇತಿ ನೀಡಿದ ವಿಡಿಯೋ ಇದು ಎಂದು ಶರ್ಮಾ ತಿಳಿಸಿದ್ದಾರೆ.

ಒಟ್ಟಿನಲ್ಲಿ ವಿಡಿಯೋದಲ್ಲಿ ಪ್ರಧಾನಿ ಮೋದಿಯವರನ್ನು ಹೊಗಳುತ್ತಿರುವ ವ್ಯಕ್ತಿ ಪಾಕಿಸ್ತಾನದ ಪತ್ರಕರ್ತರಲ್ಲ. ಅವರು ಭಾರತದ ಪ್ರೇರಣೆಯ ಭಾಷಣಕಾರರಾಗಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ತನಿಷ್ಕ್ ಜಾಹೀರಾತಿನ ವಿರುದ್ಧ ದೆಹಲಿಯ ಜಾಮಾ ಮಸೀದಿ ಫತ್ವಾ ಹೊರಡಿಸಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...