Homeಮುಖಪುಟತಮಿಳುನಾಡಿನಲ್ಲಿ ಮತ್ತೊಂದು ಹೊಸ ಪಕ್ಷ - ಕರುಣಾನಿಧಿ ಹಿರಿಯ ಪುತ್ರ ಎಂ.ಕೆ. ಅಳಗಿರಿ ಘೋಷಣೆ

ತಮಿಳುನಾಡಿನಲ್ಲಿ ಮತ್ತೊಂದು ಹೊಸ ಪಕ್ಷ – ಕರುಣಾನಿಧಿ ಹಿರಿಯ ಪುತ್ರ ಎಂ.ಕೆ. ಅಳಗಿರಿ ಘೋಷಣೆ

"ಕರುಣಾನಿಧಿ ಸಾವಿನ ನಂತರ ಪಕ್ಷದ ಚುಕ್ಕಾಣಿ ಯಾರಿಗೆ ಎಂಬುದು ದೊಡ್ಡ ಪ್ರಶ್ನೆಯಾಗಿತ್ತು. ಈ ವೇಳೆ ಎಂ.ಕೆ. ಸ್ಟಾಲಿನ್​ ಇಡೀ ಪಕ್ಷವನ್ನು ತನ್ನ ಹತೋಟಿಗೆ ತೆಗೆದುಕೊಂಡರು. ಅಲ್ಲದೆ, ಅಳಗಿರಿ ಅವರನ್ನು ಪಕ್ಷದಿಂದಲೇ ಉಚ್ಛಾಟನೆ ಮಾಡಿದ್ದರು"

- Advertisement -
- Advertisement -

ತಮಿಳುನಾಡು ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪ್ರಕ್ರಿಯೆಗಳು ಗರಿಗೆದರುತ್ತಿದೆ. ಈ ಹಿಂದೆ ನಟ ರಜನಿಕಾಂತ್​ ತಾವು ಹೊಸ ಪಕ್ಷ ಸ್ಥಾಪಿಸುವುದಾಗಿ ಮಾಹಿತಿ ನೀಡಿದ್ದರು. ಇದರ ಬೆನ್ನಿಗೆ ಡಿಎಂಕೆ ಪಕ್ಷದ ಹಿರಿಯ ಮಾಜಿ ಮುಖಂಡ ಮತ್ತು ಮಾಜಿ ಸಿಎಂ ಕರುಣಾನಿಧಿ ಅವರ ಹಿರಿಯ ಪುತ್ರ ಎಂ.ಕೆ. ಅಳಗಿರಿ ಹೊಸ ಪಕ್ಷ ಸ್ಥಾಪಿಸುವುದಾಗಿ ಘೋಷಣೆ ಮಾಡಿದ್ದಾರೆ.

ಈ ಕುರಿತು ಇಂದು ಅಧಿಕೃತ ಹೇಳಿಕೆ ನೀಡಿರುವ ಅಳಗಿರಿ, “ಜನತೆ, ಅಭಿಮಾನಿಗಳು ಹಾಗೂ ಕಾರ್ಯಕರ್ತರು ಬಯಸಿದರೆ ನಾನು ಖಂಡಿತವಾಗಿ ಹೊಸ ಪಕ್ಷ ಸ್ಥಾಪಿಸಿ ಮತ್ತೆ ರಾಜ್ಯ ರಾಜಕಾರಣಕ್ಕೆ ಇಳಿಯುತ್ತೇನೆ” ಎಂದು ತಿಳಿಸಿದ್ದಾರೆ.

ಎರಡನೇ ಯುಪಿಎ ಸರ್ಕಾರದ ಅವಧಿಯಲ್ಲಿ ಕೇಂದ್ರ ಸಚಿವರಾಗಿದ್ದ ಅಳಗಿರಿ ಸುದ್ದಿಗಾರರೊಂದಿಗೆ ಮಾತನಾಡಿ, “ಜನವರಿ 3 ರಂದು ತಮ್ಮ ಬೆಂಬಲಿಗರನ್ನು ಸಂಪರ್ಕಿಸಿ ಹೊಸ ಪಕ್ಷವನ್ನು ಪ್ರಾರಂಭಿಸುವ ಬಗ್ಗೆ ನಿರ್ಧರಿಸುತ್ತೇನೆ. ನನ್ನ ಬೆಂಬಲಿಗರು ಹೊಸ ಪಕ್ಷವನ್ನು ಬಯಸಿದರೆ, ನಾನು ಖಚಿತವಾಗಿ ಹೊಸ ಪಕ್ಷ ಸ್ಥಾಪನೆ ಮಾಡುತ್ತೇನೆ. ಆದರೆ, ಯಾವುದೇ ಕಾರಣಕ್ಕೂ ಡಿಎಂಕೆ ಪಕ್ಷವನ್ನು ಬೆಂಬಲಿಸುವುದಿಲ್ಲ. ಅಲ್ಲದೆ, ಪಕ್ಷಕ್ಕೆ ಮತ್ತೆ ಸೇರಲು ನನ್ನನ್ನು ಡಿಎಂಕೆ ಈವರೆಗೆ ಆಹ್ವಾನಿಸಿಯೂ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ವಿರುದ್ಧ ದನಿಯೆತ್ತಿದರೆ ಮೋಹನ್ ಭಾಗವತ್ ಕೂಡಾ ಭಯೋತ್ಪಾದಕರೇ! – ರಾಹುಲ್ ಗಾಂಧಿ

ಇದೇ ಸಂದರ್ಭದಲ್ಲಿ ನಟ ರಜನಿಕಾಂತ್​ ಅವರನ್ನು ಭೇಟಿ ಮಾಡುವ ಕುರಿತು ಮಾತನಾಡಿದ ಅವರು, “ಪ್ರಸ್ತುತ ನಟ ರಜನಿಕಾಂತ್​ ತಮ್ಮ ‘ಅಣ್ಣಾತೆ’ ಚಿತ್ರದ ಚಿತ್ರೀಕರಣದಲಿದ್ದಾರೆ ಎಂಬ ಮಾಹಿತಿ ಮಾಧ್ಯಮಗಳ ಮೂಲಕ ತಿಳಿದುಬಂದಿದೆ. ಅವರು ಹೈದ್ರಾಬಾದ್​ನಿಂದ ಹಿಂದಿರುಗಿದ ನಂತರ ನಾನು ಅವರನ್ನು ಭೇಟಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ದಿವಂಗತ ಮಾಜಿ ಸಿಎಂ ಕರುಣಾನಿಧಿ ಬದುಕಿದ್ದವರೆಗೆ ಅವರ ಇಬ್ಬರು ಮಕ್ಕಳಾದ ಎಂ.ಕೆ. ಅಳಗಿರಿ ಮತ್ತು ಎಂ.ಕೆ. ಸ್ಟಾಲಿನ್ ಅವರಿಗೆ ಪಕ್ಷದಲ್ಲಿ ಸಮಾನ ಸ್ಥಾನಮಾನ ನೀಡಲಾಗಿತ್ತು. ಅಳಗಿರಿ ಯುಪಿಎ ಎರಡನೇ ಅವಧಿಯಲ್ಲಿ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ ನೇಮಕವಾಗಿದ್ದರೆ, ರಾಜ್ಯ ರಾಜಕಾರಣದಲ್ಲಿ ಸ್ಟಾಲಿನ್​ ಪ್ರಬಲರಾಗಿದ್ದರು.

ಇದನ್ನೂ ಓದಿ: ಕಾಶ್ಮೀರ:10 ಜಿಲ್ಲೆಗಳಲ್ಲಿ 9 ಜಿಲ್ಲೆಗಳು ’ಗುಪ್ಕರ್‌’ ಪಾಲಿಗೆ-ಬಿಜೆಪಿಗೆ ಮುಖಭಂಗ

ಆದರೆ, ಕರುಣಾನಿಧಿ ಸಾವಿನ ನಂತರ ಪಕ್ಷದ ಚುಕ್ಕಾಣಿ ಯಾರಿಗೆ ಎಂಬುದು ದೊಡ್ಡ ಪ್ರಶ್ನೆಯಾಗಿತ್ತು. ಈ ವೇಳೆ ಎಂ.ಕೆ. ಸ್ಟಾಲಿನ್​ ಇಡೀ ಪಕ್ಷವನ್ನು ತನ್ನ ಹತೋಟಿಗೆ ತೆಗೆದುಕೊಂಡರು. ಅಲ್ಲದೆ, ಅಳಗಿರಿ ಅವರನ್ನು ಪಕ್ಷದಿಂದಲೇ ಉಚ್ಛಾಟನೆ ಮಾಡಿದ್ದರು. ಆ ನಂತರ ಅಳಗಿರಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿತ್ತು.

ಹೀಗಿರುವಾಗ ಅಳಗಿರಿಯವರ ಈ ಹೇಳಿಕೆ ಇಡೀ ತಮಿಳುನಾಡು ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.​ ಏಕೆಂದರೆ ಮಧುರೈ ಸೇರಿದಂತೆ ಇಡೀ ದಕ್ಷಿಣ ತಮಿಳುನಾಡಿನಲ್ಲಿ ಇವರಿಗೆ ಸಾಕಷ್ಟು ಹಿಡಿತವಿದೆ. ಹಾಗಾಗಿ ಇವರು ಹೊಸ ಪಕ್ಷ ಸ್ಥಾಪಿಸಿದರೆ ಡಿಎಂಕೆ ಮತಗಳು ಚದುರಿಹೋಗುವ ಸಾಧ್ಯತೆ ಇದೆ ಎಂಬುದು ಡಿಎಂಕೆ ಪಕ್ಷದ ಆತಂಕಕ್ಕೂ ಕಾರಣವಾಗಿದೆ ಎನ್ನುವುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ.


ಇದನ್ನೂ ಓದಿ: ಡಿಸೆಂಬರ್ 25 ವಾಜಪೇಯಿ ಜನ್ಮದಿನ: ‘ಆಯ್ದ’ ರೈತರೊಂದಿಗೆ ಪ್ರಧಾನಿ ಮೋದಿ ಸಂವಹನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...