Homeಮುಖಪುಟತಮಿಳುನಾಡಿನಲ್ಲಿ ಮತ್ತೊಂದು ಹೊಸ ಪಕ್ಷ - ಕರುಣಾನಿಧಿ ಹಿರಿಯ ಪುತ್ರ ಎಂ.ಕೆ. ಅಳಗಿರಿ ಘೋಷಣೆ

ತಮಿಳುನಾಡಿನಲ್ಲಿ ಮತ್ತೊಂದು ಹೊಸ ಪಕ್ಷ – ಕರುಣಾನಿಧಿ ಹಿರಿಯ ಪುತ್ರ ಎಂ.ಕೆ. ಅಳಗಿರಿ ಘೋಷಣೆ

"ಕರುಣಾನಿಧಿ ಸಾವಿನ ನಂತರ ಪಕ್ಷದ ಚುಕ್ಕಾಣಿ ಯಾರಿಗೆ ಎಂಬುದು ದೊಡ್ಡ ಪ್ರಶ್ನೆಯಾಗಿತ್ತು. ಈ ವೇಳೆ ಎಂ.ಕೆ. ಸ್ಟಾಲಿನ್​ ಇಡೀ ಪಕ್ಷವನ್ನು ತನ್ನ ಹತೋಟಿಗೆ ತೆಗೆದುಕೊಂಡರು. ಅಲ್ಲದೆ, ಅಳಗಿರಿ ಅವರನ್ನು ಪಕ್ಷದಿಂದಲೇ ಉಚ್ಛಾಟನೆ ಮಾಡಿದ್ದರು"

- Advertisement -
- Advertisement -

ತಮಿಳುನಾಡು ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪ್ರಕ್ರಿಯೆಗಳು ಗರಿಗೆದರುತ್ತಿದೆ. ಈ ಹಿಂದೆ ನಟ ರಜನಿಕಾಂತ್​ ತಾವು ಹೊಸ ಪಕ್ಷ ಸ್ಥಾಪಿಸುವುದಾಗಿ ಮಾಹಿತಿ ನೀಡಿದ್ದರು. ಇದರ ಬೆನ್ನಿಗೆ ಡಿಎಂಕೆ ಪಕ್ಷದ ಹಿರಿಯ ಮಾಜಿ ಮುಖಂಡ ಮತ್ತು ಮಾಜಿ ಸಿಎಂ ಕರುಣಾನಿಧಿ ಅವರ ಹಿರಿಯ ಪುತ್ರ ಎಂ.ಕೆ. ಅಳಗಿರಿ ಹೊಸ ಪಕ್ಷ ಸ್ಥಾಪಿಸುವುದಾಗಿ ಘೋಷಣೆ ಮಾಡಿದ್ದಾರೆ.

ಈ ಕುರಿತು ಇಂದು ಅಧಿಕೃತ ಹೇಳಿಕೆ ನೀಡಿರುವ ಅಳಗಿರಿ, “ಜನತೆ, ಅಭಿಮಾನಿಗಳು ಹಾಗೂ ಕಾರ್ಯಕರ್ತರು ಬಯಸಿದರೆ ನಾನು ಖಂಡಿತವಾಗಿ ಹೊಸ ಪಕ್ಷ ಸ್ಥಾಪಿಸಿ ಮತ್ತೆ ರಾಜ್ಯ ರಾಜಕಾರಣಕ್ಕೆ ಇಳಿಯುತ್ತೇನೆ” ಎಂದು ತಿಳಿಸಿದ್ದಾರೆ.

ಎರಡನೇ ಯುಪಿಎ ಸರ್ಕಾರದ ಅವಧಿಯಲ್ಲಿ ಕೇಂದ್ರ ಸಚಿವರಾಗಿದ್ದ ಅಳಗಿರಿ ಸುದ್ದಿಗಾರರೊಂದಿಗೆ ಮಾತನಾಡಿ, “ಜನವರಿ 3 ರಂದು ತಮ್ಮ ಬೆಂಬಲಿಗರನ್ನು ಸಂಪರ್ಕಿಸಿ ಹೊಸ ಪಕ್ಷವನ್ನು ಪ್ರಾರಂಭಿಸುವ ಬಗ್ಗೆ ನಿರ್ಧರಿಸುತ್ತೇನೆ. ನನ್ನ ಬೆಂಬಲಿಗರು ಹೊಸ ಪಕ್ಷವನ್ನು ಬಯಸಿದರೆ, ನಾನು ಖಚಿತವಾಗಿ ಹೊಸ ಪಕ್ಷ ಸ್ಥಾಪನೆ ಮಾಡುತ್ತೇನೆ. ಆದರೆ, ಯಾವುದೇ ಕಾರಣಕ್ಕೂ ಡಿಎಂಕೆ ಪಕ್ಷವನ್ನು ಬೆಂಬಲಿಸುವುದಿಲ್ಲ. ಅಲ್ಲದೆ, ಪಕ್ಷಕ್ಕೆ ಮತ್ತೆ ಸೇರಲು ನನ್ನನ್ನು ಡಿಎಂಕೆ ಈವರೆಗೆ ಆಹ್ವಾನಿಸಿಯೂ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ವಿರುದ್ಧ ದನಿಯೆತ್ತಿದರೆ ಮೋಹನ್ ಭಾಗವತ್ ಕೂಡಾ ಭಯೋತ್ಪಾದಕರೇ! – ರಾಹುಲ್ ಗಾಂಧಿ

ಇದೇ ಸಂದರ್ಭದಲ್ಲಿ ನಟ ರಜನಿಕಾಂತ್​ ಅವರನ್ನು ಭೇಟಿ ಮಾಡುವ ಕುರಿತು ಮಾತನಾಡಿದ ಅವರು, “ಪ್ರಸ್ತುತ ನಟ ರಜನಿಕಾಂತ್​ ತಮ್ಮ ‘ಅಣ್ಣಾತೆ’ ಚಿತ್ರದ ಚಿತ್ರೀಕರಣದಲಿದ್ದಾರೆ ಎಂಬ ಮಾಹಿತಿ ಮಾಧ್ಯಮಗಳ ಮೂಲಕ ತಿಳಿದುಬಂದಿದೆ. ಅವರು ಹೈದ್ರಾಬಾದ್​ನಿಂದ ಹಿಂದಿರುಗಿದ ನಂತರ ನಾನು ಅವರನ್ನು ಭೇಟಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ದಿವಂಗತ ಮಾಜಿ ಸಿಎಂ ಕರುಣಾನಿಧಿ ಬದುಕಿದ್ದವರೆಗೆ ಅವರ ಇಬ್ಬರು ಮಕ್ಕಳಾದ ಎಂ.ಕೆ. ಅಳಗಿರಿ ಮತ್ತು ಎಂ.ಕೆ. ಸ್ಟಾಲಿನ್ ಅವರಿಗೆ ಪಕ್ಷದಲ್ಲಿ ಸಮಾನ ಸ್ಥಾನಮಾನ ನೀಡಲಾಗಿತ್ತು. ಅಳಗಿರಿ ಯುಪಿಎ ಎರಡನೇ ಅವಧಿಯಲ್ಲಿ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ ನೇಮಕವಾಗಿದ್ದರೆ, ರಾಜ್ಯ ರಾಜಕಾರಣದಲ್ಲಿ ಸ್ಟಾಲಿನ್​ ಪ್ರಬಲರಾಗಿದ್ದರು.

ಇದನ್ನೂ ಓದಿ: ಕಾಶ್ಮೀರ:10 ಜಿಲ್ಲೆಗಳಲ್ಲಿ 9 ಜಿಲ್ಲೆಗಳು ’ಗುಪ್ಕರ್‌’ ಪಾಲಿಗೆ-ಬಿಜೆಪಿಗೆ ಮುಖಭಂಗ

ಆದರೆ, ಕರುಣಾನಿಧಿ ಸಾವಿನ ನಂತರ ಪಕ್ಷದ ಚುಕ್ಕಾಣಿ ಯಾರಿಗೆ ಎಂಬುದು ದೊಡ್ಡ ಪ್ರಶ್ನೆಯಾಗಿತ್ತು. ಈ ವೇಳೆ ಎಂ.ಕೆ. ಸ್ಟಾಲಿನ್​ ಇಡೀ ಪಕ್ಷವನ್ನು ತನ್ನ ಹತೋಟಿಗೆ ತೆಗೆದುಕೊಂಡರು. ಅಲ್ಲದೆ, ಅಳಗಿರಿ ಅವರನ್ನು ಪಕ್ಷದಿಂದಲೇ ಉಚ್ಛಾಟನೆ ಮಾಡಿದ್ದರು. ಆ ನಂತರ ಅಳಗಿರಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿತ್ತು.

ಹೀಗಿರುವಾಗ ಅಳಗಿರಿಯವರ ಈ ಹೇಳಿಕೆ ಇಡೀ ತಮಿಳುನಾಡು ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.​ ಏಕೆಂದರೆ ಮಧುರೈ ಸೇರಿದಂತೆ ಇಡೀ ದಕ್ಷಿಣ ತಮಿಳುನಾಡಿನಲ್ಲಿ ಇವರಿಗೆ ಸಾಕಷ್ಟು ಹಿಡಿತವಿದೆ. ಹಾಗಾಗಿ ಇವರು ಹೊಸ ಪಕ್ಷ ಸ್ಥಾಪಿಸಿದರೆ ಡಿಎಂಕೆ ಮತಗಳು ಚದುರಿಹೋಗುವ ಸಾಧ್ಯತೆ ಇದೆ ಎಂಬುದು ಡಿಎಂಕೆ ಪಕ್ಷದ ಆತಂಕಕ್ಕೂ ಕಾರಣವಾಗಿದೆ ಎನ್ನುವುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ.


ಇದನ್ನೂ ಓದಿ: ಡಿಸೆಂಬರ್ 25 ವಾಜಪೇಯಿ ಜನ್ಮದಿನ: ‘ಆಯ್ದ’ ರೈತರೊಂದಿಗೆ ಪ್ರಧಾನಿ ಮೋದಿ ಸಂವಹನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...