Homeಮುಖಪುಟತಮಿಳುನಾಡು: ಕಮಲ್ ಹಾಸನ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿಜೆಪಿ ಸೇರ್ಪಡೆ!

ತಮಿಳುನಾಡು: ಕಮಲ್ ಹಾಸನ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿಜೆಪಿ ಸೇರ್ಪಡೆ!

ರಜನಿಕಾಂತ್ ಮತ್ತು ಕಮಲ್ ಹಾಸನ್ ಇಬ್ಬರೂ ಒಟ್ಟಾಗಿ ಚುನಾವಣೆ ಎದುರಿಸುತ್ತಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಇದರ ಬಗ್ಗೆ ಇನ್ನು ಅಂತಿಮ ನಿರ್ಧಾರ ಹೊರಬಂದಿಲ್ಲ.

- Advertisement -
- Advertisement -

2021ರ ತಮಿಳುನಾಡು ವಿಧಾನಸಭೆ ಚುನಾವಣೆ ಕಣ ದಿನ ದಿನಕ್ಕೂ ರಂಗೇರುತ್ತಿದೆ. ಸಿನಿಮಾ ನಟರು, ಪಕ್ಷಗಳ ಒಡಕುಗಳು, ಹೊಸ ಹೊಸ ಪಕ್ಷಗಳ ಹುಟ್ಟು ಇವುಗಳ ಆಚೆಗೂ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ತನ್ನ ಹಳೆಯ ಅಭ್ಯಾಸದಂತೆ ಇತರ ಪಕ್ಷಗಳಿಂದ ಮುಖಂಡರನ್ನು ಸೆಳೆಯಲು ಮುಂದಾಗಿದೆ.

ನಟ, ರಾಜಕಾರಣಿ ಕಮಲ್ ಹಾಸನ್ ಈ ಬಾರಿಯ ವಿಧಾನಸಭಾ ಚುನಾವಣಾ ಆಖಾಡಕ್ಕೆ ಇಳಿದಿದ್ದಾರೆ. ಆದರೆ ಮಕ್ಕಳ ನಿಧಿ ಮಯ್ಯಂ ಪಕ್ಷದ ನಾಯಕ, ಪ್ರಧಾನ ಕಾರ್ಯದರ್ಶಿ ಎ.ಅರುಣಾಚಲಂ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಕಮಲ್ ಹಾಸನ್ ತಮಿಳುನಾಡಿನಲ್ಲಿ ಎರಡನೇ ಹಂತದ ಚುನಾವಣಾ ಪ್ರಚಾರ ನಡೆಸುತ್ತಿರುವ ಹೊತ್ತಿನಲ್ಲೇ ತನ್ನ ಪಕ್ಷದ ಹಿರಿಯ ಮುಖಂಡರು ಭಾರತೀಯ ಜನತಾ ಪಾಟಿಗೆ ಸೇರ್ಪಡೆಗೊಂಡಿರುವುದು ಕಮಲ್ ಹಾಸನ್‌ಗೆ  ಚುನಾವಣೆಗೂ ಮುನ್ನವೇ ಒಂದು ರೀತಿಯಲ್ಲಿ ಹಿನ್ನಡೆಯಾಗಿದೆ.

ಇದನ್ನೂ ಓದಿ: ಬಿಗ್‌ಬಾಸ್ ನಡೆಸುವವರಿ‌ಗೆ ರಾಜಕೀಯದ ಬಗ್ಗೆ ಏನು ಗೊತ್ತು – ತಮಿಳುನಾಡು ಸಿಎಂ: ತಿರುಗೇಟು ನೀಡಿದ ಕಮಲ್

ಚೆನ್ನೈನ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸಮ್ಮುಖದಲ್ಲಿ ಎಂಎನ್‌ಎಂ ಪ್ರಧಾನ ಕಾರ್ಯದರ್ಶಿ ಎ. ಅರುಣಾಚಲಂ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.

ಅರುಣಾಚಲಂ, ತೂತುಕುಡಿ ಜಿಲ್ಲೆಯ ಒಂದು ಹಳ್ಳಿಯವರಾಗಿದ್ದು, ತಮಿಳುನಾಡಿನ ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳ್ ನೀಧಿ ಮಯ್ಯಂಗೆ ಅಡಿಪಾಯ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಇದನ್ನೂ ಓದಿ: ದೇಶದ ಅರ್ಧದಷ್ಟು ಜನ ಹಸಿವಿನಲ್ಲಿರುವಾಗ ಹೊಸ ಸಂಸತ್ತು ಬೇಕೆ? ಮೋದಿಗೆ ಕಮಲ್ ಹಾಸನ್ ಪ್ರಶ್ನೆ

ಚುನಾವಣಾ ಪ್ರಚಾರ ಆರಂಭಿಸಿದ್ದ ವೇಳೆ ಪಕ್ಷದ ಮುಖಂಡ ಕಮಲ್ ಹಾಸನ್, ಪ್ರಚಾರ ಕಾರ್ಯಗಳಲ್ಲಿ ಅರುಣಾಚಲಂ ಅವರಿಗೆ ಪ್ರಾಮುಖ್ಯತೆ ನೀಡಲಾಗಿಲ್ಲ ಮತ್ತು ಕಮಲ್ ಹಾಸನ್ ಪಕ್ಷ ಮುನ್ನಡೆಸುತ್ತಿರುವ ಬಗ್ಗೆ ಇತರರಿಗೆ ಅಸಮಾಧಾನ ಇದೆ ಎಂದು ಮಾಹಿತಿ ದೊರೆತಿದೆ.

ಕಮಲ್ ಹಾಸನ್ ಈ ತಿಂಗಳ ಆರಂಭದಲ್ಲಿ ತಮ್ಮ ಪಕ್ಷದ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದರು. ಈಗ ಎರಡನೇ ಹಂತದಲ್ಲಿದೆ ಪ್ರಚಾರ ಕಾರ್ಯ ನಡೆಯುತ್ತಿದೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ವಿರುದ್ಧ ತೀವ್ರ ಟೀಕೆ, ಆರೋಪಗಳನ್ನು ಮಾಡುತ್ತಿದ್ದಾರೆ.

ತಮಿಳುನಾಡು ರಾಜಕೀಯದಲ್ಲಿ ವೇಗದ ಬೆಳವಣಿಗೆಗಳು ನಡೆಯುತ್ತಿವೆ. ಚುನಾವಣೆಗೆ  ಕೆಲವೇ ದಿನಗಳಲ್ಲಿ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದ್ದು, ಎಲ್ಲ ರಾಜಕೀಯ ಪಕ್ಷಗಳು ಪ್ರಚಾರ ಕಾರ್ಯ ಆರಂಭಿಸಿವೆ. ನಟ ರಜನಿಕಾಂತ್ ಇದೇ ತಿಂಗಳ ಅಂತ್ಯದಲ್ಲಿ ತಮ್ಮ ಪಕ್ಷವನ್ನು ಘೋಷಣೆ ಮಾಡಲಿದ್ದಾರೆ.

ರಜನಿಕಾಂತ್ ಮತ್ತು ಕಮಲ್ ಹಾಸನ್ ಇಬ್ಬರೂ ಒಟ್ಟಿಗೆ ಚುನಾವಣೆ ಎದುರಿಸುತ್ತಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಇದರ ಬಗ್ಗೆ ಇನ್ನು ಯಾವುದೇ ನಿರ್ಧಾರವನ್ನು ಅಧಿಕೃತವಾಗಿ ತಿಳಿಸಿಲ್ಲ. ಆದರೆ, “ನಮ್ಮ ಸಿದ್ಧಾಂತವು ಹೊಂದಿಕೆಯಾಗುವಂತಿದ್ದರೆ, ನಮ್ಮ ಮೈತ್ರಿಯಿಂದ ಜನರಿಗೆ ಪ್ರಯೋಜನವಾಗುವಂತಿದ್ದರೇ, ನಮ್ಮ ಅಹಂಕಾರವನ್ನು ಬದಿಗಿಟ್ಟು ಪರಸ್ಪರ ಸಹಕರಿಸಲು ನಾವು ಸಿದ್ಧ” ಎಂದು ಕಮಲ್ ಹಾಸನ್ ಸುದ್ದಿಗಾರರಿಗೆ ತಿಳಿಸಿದ್ದರು.


ಇದನ್ನೂ ಓದಿ: ’ಒಂದು’ ಎಂಬ ಕಲ್ಪನೆ ಯಾವಾಗಲೂ ಸರ್ವಾಧಿಕಾರ ಮತ್ತು ದಬ್ಬಾಳಿಕೆಗೆ ಕಾರಣ- ಕಮಲ್ ಹಾಸನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...