Homeಮುಖಪುಟಮಹರ್ ಸೈನಿಕರ 'ಭೀಮಾ ಕೋರೆಗಾಂವ್' ಹೋರಾಟ ನೆನಪಿಸುವ ಕನ್ನಡ ಹಾಡು...

ಮಹರ್ ಸೈನಿಕರ ‘ಭೀಮಾ ಕೋರೆಗಾಂವ್’ ಹೋರಾಟ ನೆನಪಿಸುವ ಕನ್ನಡ ಹಾಡು…

ಪೇಶ್ವೆಗಳ ಆಡಳಿತದಲ್ಲಿದ್ದ ಜಾತಿ, ಅಸ್ಪೃಶ್ಯತೆ, ಮೇಲು ಕೀಳುಗಳ ವಿರುದ್ಧ ಸೆಟೆದು ನಿಂತು ಮಾನವೀಯ ಮೌಲ್ಯಗಳಿಗಾಗಿ ಹಂಬಲಿಸುವ ಮಹರ್ ಸೈನಿಕರ ಧೈರ್ಯ ಸಾಹಸ, ಕೆಚ್ಚೆದೆಯ ಹೋರಾಟವೇ ಈ ಭೀಮಾ ಕೋರೆಗಾಂವ್

- Advertisement -
- Advertisement -

ಇತ್ತೀಚೆಗೆ ಪ್ರಮುಖ ಐತಿಹಾಸಿಕ ‘ಭೀಮಾ ಕೋರೆಗಾಂವ್’ ಘಟನೆಯನ್ನು ಆಧರಿಸಿದ ಚಲನಚಿತ್ರ ಬಾಲಿವುಡ್‌ನಲ್ಲಿ ನಿರ್ಮಾಣವಾಗುತ್ತಿರುವ ಸುದ್ದಿ ವೈರಲ್ ಆಗಿತ್ತು. ಈಗ ಭೀಮಾ ಕೋರೆಗಾಂವ್ ಘಟನೆಯನ್ನು ನೆನಪಿಸುವ ಕನ್ನಡದ ಹಾಡು ಯೂಟೂಬ್‌ನಲ್ಲಿ ಬಿಡುಗಡೆಯಾಗಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಈ ಹಾಡಿಗೆ ಅಶೋಕ್ ಜೋಟವರ್ ಸಂಗೀತ ಸಂಯೋಜನೆ ಮಾಡಿ ಹಾಡಿದ್ದು, ಸಂದೀಪ್ ಮತಿವಾಡೆ ಸಾಹಿತ್ಯ ರಚನೆ ಮಾಡಿದ್ದಾರೆ. ಇದರ ನಿರ್ಮಾಣದ ಹೊಣೆಯನ್ನು ಜೀತೇಂದ್ರ ಮರಡಿ ವಹಿಸಿಕೊಂಡಿದ್ದಾರೆ. ವೀಡಿಯೋ ಬಿಡುಗಡೆ ಮಾಡಿದ ಕೆಲವೇ ಗಂಟೆಗಳಲ್ಲಿ 1500 ಕ್ಕೂ ಹೆಚ್ಚು ಜನ ಇದನ್ನು ವೀಕ್ಷಿಸಿದ್ದಾರೆ.

 ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

ಇತ್ತೀಚಿನ ದಿನಗಳಲ್ಲಿ ಭೀಮಾ ಕೋರೆಗಾಂವ್ ಎಂಬ ಹೆಸರು ಸಾಕಷ್ಟು ಪ್ರಚಲಿತದಲ್ಲಿದೆ. ಕಳೆದ ಕೆಲವು ವರ್ಷಗಳಿಂದ ಈ ಐತಿಹಾಸಿಕ ಘಟನೆಯ ನೆನಪಿಗಾಗಿ ಮಹಾರಾ‍ಷ್ಟ್ರದಲ್ಲಿ ಉತ್ಸವವನ್ನು ನಡೆಸಿಕೊಂಡು ಬರಲಾಗುತ್ತಿದೆ. ಇತ್ತೀಚೆಗೆ ನಡೆದ ಉತ್ಸವದಲ್ಲಿ ಗಲಭೆ ಆರಂಭವಾಗಿತ್ತು. ಇದರ ಭಾಗವಾಗಿ ಹತ್ತಾರು ಹೋರಾಟಗಾರರನ್ನು ಅಕ್ರಮವಾಗಿ ಬಂಧಿಸಲಾಗಿದೆ. ಇದನ್ನು ವಿರೋಧಿಸಿ ದೇಶದಾದ್ಯಂತ ನೂರಾರು ಪ್ರತಿಭಟನೆಗಳು ನಡೆದಿವೆ.

ಏನಿದು ಕೋರೆಗಾಂವ್ ಯುದ್ಧ;

ಕೋರೇಗಾಂವ್ ಯುದ್ಧ ಇತಿಹಾಸದಲ್ಲಿ ಮುಚ್ಚಿಹೋದ ಸಾಹಸದ ಘಟನೆ. ಮೂವತ್ತು ಸಾವಿರ ಸೈನಿಕರನ್ನು ಕೇವಲ ಐನೂರು ಜನ ಸೈನಿಕರು ಸೇರಿಕೊಂಡು ಸೋಲಿಸಿದ ಕದನ. ಪೇಶ್ವೆಗಳ ಆಡಳಿತದಲ್ಲಿದ್ದ ಜಾತಿ, ಅಸ್ಪೃಶ್ಯತೆ, ಮೇಲು ಕೀಳುಗಳ ವಿರುದ್ಧ ಸೆಟೆದು ನಿಂತು ಮಾನವೀಯ ಮೌಲ್ಯಗಳಿಗಾಗಿ ಹಂಬಲಿಸುವ ಮಹರ್ ಸೈನಿಕರ ಧೈರ್ಯ ಸಾಹಸ, ಕೆಚ್ಚೆದೆಯ ಹೋರಾಟ. ಶೋಷಿತರು ಮೇಲ್ಜಾತಿ ಶೋಷಕರ ವಿರುದ್ಧ, ಅವರ ಶೋಷಣೆಯ ನಡವಳಿಕೆಯ ವಿರುದ್ಧ ಯುದ್ಧ ಘೋಷಿಸಿದ, ನಡೆಸಿ ಗೆಲುವು. ಅದು ಭೀಮಾ ತೀರದಲ್ಲಿ ನಡೆದಿದ್ದರಿಂದ ಅದು ಇತಿಹಾಸದಲ್ಲಿ ‘ಭೀಮಾ ಕೋರೇಗಾಂವ್ ಯುದ್ಧ’ವೆಂದೇ ಪ್ರಸಿದ್ಧವಾಗಿದೆ.


 ಇದನ್ನೂ ಓದಿ: Factcheck ಅಂಬೇಡ್ಕರ್‌ರವರಿಗೆ ಭಾರತ ರತ್ನ ಕೊಟ್ಟಿದ್ದು ಅಟಲ್ ಬಿಹಾರ ವಾಜಪೇಯಿ- ಬಿ.ಎಲ್ ಸಂತೋಷ್ : ಈ ಮಾತು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...