Homeಕರ್ನಾಟಕಯುವರಂಗ ನಾಟಕೋತ್ಸವ 2021: 15 ದಿನ, 15 ನಾಟಕಗಳು, 15 ನಿರ್ದೇಶಕರು!

ಯುವರಂಗ ನಾಟಕೋತ್ಸವ 2021: 15 ದಿನ, 15 ನಾಟಕಗಳು, 15 ನಿರ್ದೇಶಕರು!

"ಮುಂದಿನ ಬದುಕಿನ ಯೋಚನೆಗೆ ಬಿದ್ದೋ, ಇಷ್ಟು ದಿನಗಳ ಖಾಲಿ ಕೈ ಬರ್ತಿ ಮಾಡಲಿಕ್ಕೋ,‌ ಹಸಿವನ್ನೋ, ದೇವರನ್ನು ಪ್ರಾರ್ಥಿಸಲೋ ಈ ಕಾಯಕಕ್ಕೆ ಇಳಿದಿದ್ದೇವೆ" ಎಂದು ರಂಗ ತಂಡಗಳು ಮನವಿ ಮಾಡಿವೆ.

- Advertisement -
- Advertisement -

ಬೆಂಗಳೂರಿನಲ್ಲಿ ಕೊರೊನಾ ಸಾಂಕ್ರಾಮಿಕದ ನಡುವೆಯೇ ಎಲ್ಲಾ ಮುನ್ನೆಚ್ಚರಿಕೆ ತೆಗೆದುಕೊಂಡು ಜನರಿಗೆ ರಂಗಭೂಮಿಯ ಸವಿಯೂಣಿಸಲು 15 ರಂಗತಂಡಗಳು ಸಜ್ಜಾಗಿವೆ. ಬರೋಬ್ಬರಿ 15 ದಿನಗಳು, 15 ನಾಟಕಗಳು, 15 ನಿರ್ದೇಶಕರು ಮತ್ತು ವಿಭಿನ್ನ ಬರಹಗಾರರು ಸೇರಿ ಜ. 3 ರಿಂದ ಜ. 18ರ ವರೆಗೆ ’ಯುವರಂಗ ನಾಟಕೋತ್ಸವ 2021’ ಕಾರ್ಯಕ್ರಮ ಆಯೋಜಿಸಿವೆ.

ಕೊರೊನಾ ಭಯವನ್ನು ಪಕ್ಕಕಿಟ್ಟು, ಜವಾಬ್ದಾರಿಯನ್ನು ಹೆಗಲಿಗೆ ಹೊತ್ತು ಸದ್ದು ಮಾಡಲು ರಂಗಭೂಮಿ ಮತ್ತೆ ಸಜ್ಜಾಗಿದೆ. ’ಯುವರಂಗ ನಾಟಕೋತ್ಸವ 2021’ ವೇದಿಕೆ ಮೂಲಕ ಕೊರೊನಾ ಸಾಂಕ್ರಾಮಿಕದಿಂದ ಹೊಡೆತ ತಿಂದಿರುವ ರಂಗಭೂಮಿಯ ಹಲವು ಬಳಗಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿವೆ.

“ಪ್ರೇಕ್ಷಕರ ಮೇಲೆ ನಂಬಿಕೆ ಇಟ್ಟು, 15 ದಿನಗಳ ಕಾಲ 15  ನಾಟಕಗಳು ಬರೀ ಜನರನ್ನ ಮಾತ್ರ ನಂಬಿ ನಾಟಕಗಳನ್ನು ಪ್ರಸ್ತುತ ಪಡಿಸಲು ನಿರ್ಧರಿಸಿದ್ದೆವೆ. ಮುಂದಿನ ಬದುಕಿನ ಯೋಚನೆಗೆ ಬಿದ್ದೋ, ಇಷ್ಟು ದಿನಗಳ ಖಾಲಿ ಕೈ ಬರ್ತಿ ಮಾಡಲಿಕ್ಕೋ,‌ ಅವಮಾನಿಸಿದವರಿಗೆ ಉತ್ತರಿಸಲೆಂದೋ‌, ಹಸಿವನ್ನೋ, ದೇವರನ್ನು ಪ್ರಾರ್ಥಿಸಲೋ ಈ ಕಾಯಕಕ್ಕೆ ಇಳಿದಿದ್ದೇವೆ” ಎಂದು ರಂಗ ತಂಡಗಳು ಮನವಿ ಮಾಡಿವೆ.

ಇದನ್ನೂ ಓದಿ: ಐತಿಹಾಸಿಕ ರೈತ ಹೋರಾಟದೊಂದಿಗೆ ಕೈಜೋಡಿಸಿದ ದೊಡ್ಡ ಸಂಖ್ಯೆಯ ಕೃಷಿ ಕಾರ್ಮಿಕರು!

“ನಮ್ಮ ಈ ಪ್ರಯೋಗ ಹುಚ್ಚು ಸಾಹಸ ಎಂದೆನ್ನಿಸಬಹುದು. ಆದರೆ ಬಣ್ಣವನ್ನೇ ಬದುಕಾಗಿಸಿಕೊಂಡವರಿಗೆ  ಸಾಹಸಗಳನ್ನು ಮಾಡಿ ಅಭ್ಯಾಸ ಇರುತ್ತದೆ. ರಂಗಭೂಮಿ ಕಲಿಸೋದು ಹೋರಾಡು ಅಂತ. ಸಮಾಜಕ್ಕೆ ಕನ್ನಡಿ ರಂಗಭೂಮಿ ಎನ್ನುತ್ತಾರೆ. ಅದರಂತೆಯೇ 15 ಬಗೆಯ ವಿಭಿನ್ನ ಪ್ರಯೋಗಗಳನ್ನ ನಿಮ್ಮ ಮುಂದೆ ಇಡೋಕೆ ಯುವರಂಗ ಅನ್ನೋ ವೇದಿಕೆ ಸಿದ್ಧವಾಗಿದೆ. ಹೊಸ ವರ್ಷಕ್ಕೆ ಹೊಸ ಹೊಸ ಕನಸುಗಳನ್ನು ಹೊತ್ತು ಜನವರಿ 03 ರಿಂದ 18 ನೇ ತಾರೀಖಿನ 15ನ ದಿನಗಳು, 15 ತಂಡಗಳು ನಿಮ್ಮ ಮುಂದೆ ಬರುತ್ತಿವೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಪ್ರಕರಣ: FIR ರದ್ದತಿ ಕೋರಿದ್ದ ಮನವಿ ತಿರಸ್ಕರಿಸಿದ ಹೈಕೋರ್ಟ್‌

ದೃಶ್ಯಕಾವ್ಯ, ಖಾಲಿರಂಗ, ಥೇಮಾ, ರಂಗಭಾಸ್ಕರ, ಸವಿರಂಗ, ರಂಗವಿಜಯ, ನೆನಪುತಂಡ, ಅಶ್ವಘೋಷ ಥಿಯೇಟರ್ ಟ್ರಸ್ಟ್, ರಂಗನಿರಂತರ, ಸೈಡ್ ವಿಂಗ್, ವಿಶ್ವಪಥ ಕಲಾ ಸಂಗಮ, ಥಿಯೇಟರ್ ಥೇರಪಿ, ಸ್ಪಷ್ಟ, ಪ್ರವರ ಥಿಯೇಟರ್ ಮತ್ತು ರಂಗಪಯಣ ತಂಡಗಳು ಯುವರಂಗ ನಾಟಕೋತ್ಸವದಲ್ಲಿ ಪಾಲ್ಗೊಳ್ಳಲಿವೆ.

ಕೆ. ವೈ ನಾರಾಯಣ ಸ್ವಾಮಿ, ಬೇಲೂರು ರಘುನಂದನ್, ರಾಮಕೃಷ್ಣಕಲ್ಚಾರ್, ಲಿಂಗ ದೇವರು ಹಳೆ ಮನೆ, ರಾಜಗುರು, ಶೈಲೇಶ್ ಕುಮಾರ್, ಹನುಮಂತ ಹಾಲಿಗೇರಿ, ಎಂ. ಎಸ್ ನರಸಿಂಹ ಮೂರ್ತಿ, ಕರಣಂ ಪವನ್ ಪ್ರಸಾದ್ ಸೇರಿದಂತೆ ಹಲವು ಬರವಣಿಗೆಗಾರರ ಬರಹ ನಾಟಕಗಳಿಗಿದೆ.

ನಿರ್ದೇಶನ ವಿಭಾಗದಲ್ಲಿ ಕೃಷ್ಣ ಮೂರ್ತಿ ಕವತ್ತಾರ್, ನಂಜುಂಡೇಗೌಡ, ನಿರಂಜನ್ ಖಾಲಿಕೊಡ, ಡಾ. ಎಸ್. ವಿ. ಸುಷ್ಮಾ, ಭಾಸ್ಕರ್ ಗೌಡ, ದಿಲೀಪ್ ಬಿ.ಎಂ, ನಂದೀಶ್ ದೇವ್, ಶೈಲೇಶ್ ಕುಮಾರ್, ಭಾಸ್ಕರ್ ನೀನಾಸಂ, ರಾಮಕೃಷ್ಣ ಬೆಳ್ತೂರ್, ಗಗನ್ ಪ್ರಸಾದ್, ಹನು ರಾಮಸಂಜೀವ, ರಾಜಗುರು ಸೇರಿದ್ದಾರೆ.

ಇದನ್ನೂ ಓದಿ: ರೈತರ ಸಮಸ್ಯೆ ಬಗೆಹರಿಯುವವರೆಗೂ ಇಂಗ್ಲೆಂಡ್ ಪ್ರಧಾನಿ ಭಾರತಕ್ಕೆ ಬರುವುದು ಬೇಡ: ರೈತ ಮುಖಂಡರ ಪತ್ರ

ಈ  ಹದಿನೈದು ದಿನಗಳಲ್ಲಿ ನಾಟಕಗಳ ಜೊತೆಗೆ ಸಂವಾದ, ರಂಗಗೀತೆಗಳು, ಯುವರಂಗ 2021 ಪ್ರಶಸ್ತಿ ಪ್ರದಾನ ನಡೆಯಲಿದೆ. ಇದೆಲ್ಲದರ ಜೊತೆಗೆ ಜನವರಿ 11 ರಂದು ರಂಗನಿರಂತರ ತಂಡವು ಸಿಜಿಕೆ ಅವರ ಲಕೋಟೆಯನ್ನು ಬಿಡುಗಡೆ ಮಾಡಲಿದೆ ಎಂದು ರಂಗತಂಡಗಳು ಮಾಹಿತಿ ನೀಡಿದ್ದಾರೆ.

ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿರುವ ಸಂಸ ಬಯಲು ರಂಗಮಂದಿರದಲ್ಲಿ ನಾಟಕಗಳು ನಡೆಯಲಿವೆ. ಸರ್ಕಾರ ಬಿಡುಗಡೆ ಮಾಡಿರುವ ಎಲ್ಲಾ ಕೊರೊನಾ ನಿಯಮಗಳನ್ನು ಅನುಸರಿಸಲಾಗುವುದು, ಮಾಸ್ಕ್, ದೈಹಿಕ ಅಂತರ ಕಾಪಾಡುವುದು ಮುಖ್ಯ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರತಿ ನಾಟಕಕ್ಕೆ 100 ರೂಪಾಯಿ ಟಿಕೆಟ್ ದರ ಇರಲಿದೆ. ಹದಿನೈದು ದಿನಗಳ ಪಾಸ್ ಪಡೆದುಕೊಂಡವರಿಗೆ 1,000 ರೂಪಾಯಿಗೆ ಪಾಸ್ ದೊರೆಯಲಿದೆ.


ಇದನ್ನೂ ಓದಿ: ಪ.ಜಾತಿ, ಪ.ಪಂಗಡಗಳ ಬಡ್ತಿ ಸಮಸ್ಯೆ ನಿವಾರಿಸಿ, ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿಮಾಡಿ: ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...