Homeಕರ್ನಾಟಕಯುವರಂಗ ನಾಟಕೋತ್ಸವ 2021: 15 ದಿನ, 15 ನಾಟಕಗಳು, 15 ನಿರ್ದೇಶಕರು!

ಯುವರಂಗ ನಾಟಕೋತ್ಸವ 2021: 15 ದಿನ, 15 ನಾಟಕಗಳು, 15 ನಿರ್ದೇಶಕರು!

"ಮುಂದಿನ ಬದುಕಿನ ಯೋಚನೆಗೆ ಬಿದ್ದೋ, ಇಷ್ಟು ದಿನಗಳ ಖಾಲಿ ಕೈ ಬರ್ತಿ ಮಾಡಲಿಕ್ಕೋ,‌ ಹಸಿವನ್ನೋ, ದೇವರನ್ನು ಪ್ರಾರ್ಥಿಸಲೋ ಈ ಕಾಯಕಕ್ಕೆ ಇಳಿದಿದ್ದೇವೆ" ಎಂದು ರಂಗ ತಂಡಗಳು ಮನವಿ ಮಾಡಿವೆ.

- Advertisement -
- Advertisement -

ಬೆಂಗಳೂರಿನಲ್ಲಿ ಕೊರೊನಾ ಸಾಂಕ್ರಾಮಿಕದ ನಡುವೆಯೇ ಎಲ್ಲಾ ಮುನ್ನೆಚ್ಚರಿಕೆ ತೆಗೆದುಕೊಂಡು ಜನರಿಗೆ ರಂಗಭೂಮಿಯ ಸವಿಯೂಣಿಸಲು 15 ರಂಗತಂಡಗಳು ಸಜ್ಜಾಗಿವೆ. ಬರೋಬ್ಬರಿ 15 ದಿನಗಳು, 15 ನಾಟಕಗಳು, 15 ನಿರ್ದೇಶಕರು ಮತ್ತು ವಿಭಿನ್ನ ಬರಹಗಾರರು ಸೇರಿ ಜ. 3 ರಿಂದ ಜ. 18ರ ವರೆಗೆ ’ಯುವರಂಗ ನಾಟಕೋತ್ಸವ 2021’ ಕಾರ್ಯಕ್ರಮ ಆಯೋಜಿಸಿವೆ.

ಕೊರೊನಾ ಭಯವನ್ನು ಪಕ್ಕಕಿಟ್ಟು, ಜವಾಬ್ದಾರಿಯನ್ನು ಹೆಗಲಿಗೆ ಹೊತ್ತು ಸದ್ದು ಮಾಡಲು ರಂಗಭೂಮಿ ಮತ್ತೆ ಸಜ್ಜಾಗಿದೆ. ’ಯುವರಂಗ ನಾಟಕೋತ್ಸವ 2021’ ವೇದಿಕೆ ಮೂಲಕ ಕೊರೊನಾ ಸಾಂಕ್ರಾಮಿಕದಿಂದ ಹೊಡೆತ ತಿಂದಿರುವ ರಂಗಭೂಮಿಯ ಹಲವು ಬಳಗಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿವೆ.

“ಪ್ರೇಕ್ಷಕರ ಮೇಲೆ ನಂಬಿಕೆ ಇಟ್ಟು, 15 ದಿನಗಳ ಕಾಲ 15  ನಾಟಕಗಳು ಬರೀ ಜನರನ್ನ ಮಾತ್ರ ನಂಬಿ ನಾಟಕಗಳನ್ನು ಪ್ರಸ್ತುತ ಪಡಿಸಲು ನಿರ್ಧರಿಸಿದ್ದೆವೆ. ಮುಂದಿನ ಬದುಕಿನ ಯೋಚನೆಗೆ ಬಿದ್ದೋ, ಇಷ್ಟು ದಿನಗಳ ಖಾಲಿ ಕೈ ಬರ್ತಿ ಮಾಡಲಿಕ್ಕೋ,‌ ಅವಮಾನಿಸಿದವರಿಗೆ ಉತ್ತರಿಸಲೆಂದೋ‌, ಹಸಿವನ್ನೋ, ದೇವರನ್ನು ಪ್ರಾರ್ಥಿಸಲೋ ಈ ಕಾಯಕಕ್ಕೆ ಇಳಿದಿದ್ದೇವೆ” ಎಂದು ರಂಗ ತಂಡಗಳು ಮನವಿ ಮಾಡಿವೆ.

ಇದನ್ನೂ ಓದಿ: ಐತಿಹಾಸಿಕ ರೈತ ಹೋರಾಟದೊಂದಿಗೆ ಕೈಜೋಡಿಸಿದ ದೊಡ್ಡ ಸಂಖ್ಯೆಯ ಕೃಷಿ ಕಾರ್ಮಿಕರು!

“ನಮ್ಮ ಈ ಪ್ರಯೋಗ ಹುಚ್ಚು ಸಾಹಸ ಎಂದೆನ್ನಿಸಬಹುದು. ಆದರೆ ಬಣ್ಣವನ್ನೇ ಬದುಕಾಗಿಸಿಕೊಂಡವರಿಗೆ  ಸಾಹಸಗಳನ್ನು ಮಾಡಿ ಅಭ್ಯಾಸ ಇರುತ್ತದೆ. ರಂಗಭೂಮಿ ಕಲಿಸೋದು ಹೋರಾಡು ಅಂತ. ಸಮಾಜಕ್ಕೆ ಕನ್ನಡಿ ರಂಗಭೂಮಿ ಎನ್ನುತ್ತಾರೆ. ಅದರಂತೆಯೇ 15 ಬಗೆಯ ವಿಭಿನ್ನ ಪ್ರಯೋಗಗಳನ್ನ ನಿಮ್ಮ ಮುಂದೆ ಇಡೋಕೆ ಯುವರಂಗ ಅನ್ನೋ ವೇದಿಕೆ ಸಿದ್ಧವಾಗಿದೆ. ಹೊಸ ವರ್ಷಕ್ಕೆ ಹೊಸ ಹೊಸ ಕನಸುಗಳನ್ನು ಹೊತ್ತು ಜನವರಿ 03 ರಿಂದ 18 ನೇ ತಾರೀಖಿನ 15ನ ದಿನಗಳು, 15 ತಂಡಗಳು ನಿಮ್ಮ ಮುಂದೆ ಬರುತ್ತಿವೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಪ್ರಕರಣ: FIR ರದ್ದತಿ ಕೋರಿದ್ದ ಮನವಿ ತಿರಸ್ಕರಿಸಿದ ಹೈಕೋರ್ಟ್‌

ದೃಶ್ಯಕಾವ್ಯ, ಖಾಲಿರಂಗ, ಥೇಮಾ, ರಂಗಭಾಸ್ಕರ, ಸವಿರಂಗ, ರಂಗವಿಜಯ, ನೆನಪುತಂಡ, ಅಶ್ವಘೋಷ ಥಿಯೇಟರ್ ಟ್ರಸ್ಟ್, ರಂಗನಿರಂತರ, ಸೈಡ್ ವಿಂಗ್, ವಿಶ್ವಪಥ ಕಲಾ ಸಂಗಮ, ಥಿಯೇಟರ್ ಥೇರಪಿ, ಸ್ಪಷ್ಟ, ಪ್ರವರ ಥಿಯೇಟರ್ ಮತ್ತು ರಂಗಪಯಣ ತಂಡಗಳು ಯುವರಂಗ ನಾಟಕೋತ್ಸವದಲ್ಲಿ ಪಾಲ್ಗೊಳ್ಳಲಿವೆ.

ಕೆ. ವೈ ನಾರಾಯಣ ಸ್ವಾಮಿ, ಬೇಲೂರು ರಘುನಂದನ್, ರಾಮಕೃಷ್ಣಕಲ್ಚಾರ್, ಲಿಂಗ ದೇವರು ಹಳೆ ಮನೆ, ರಾಜಗುರು, ಶೈಲೇಶ್ ಕುಮಾರ್, ಹನುಮಂತ ಹಾಲಿಗೇರಿ, ಎಂ. ಎಸ್ ನರಸಿಂಹ ಮೂರ್ತಿ, ಕರಣಂ ಪವನ್ ಪ್ರಸಾದ್ ಸೇರಿದಂತೆ ಹಲವು ಬರವಣಿಗೆಗಾರರ ಬರಹ ನಾಟಕಗಳಿಗಿದೆ.

ನಿರ್ದೇಶನ ವಿಭಾಗದಲ್ಲಿ ಕೃಷ್ಣ ಮೂರ್ತಿ ಕವತ್ತಾರ್, ನಂಜುಂಡೇಗೌಡ, ನಿರಂಜನ್ ಖಾಲಿಕೊಡ, ಡಾ. ಎಸ್. ವಿ. ಸುಷ್ಮಾ, ಭಾಸ್ಕರ್ ಗೌಡ, ದಿಲೀಪ್ ಬಿ.ಎಂ, ನಂದೀಶ್ ದೇವ್, ಶೈಲೇಶ್ ಕುಮಾರ್, ಭಾಸ್ಕರ್ ನೀನಾಸಂ, ರಾಮಕೃಷ್ಣ ಬೆಳ್ತೂರ್, ಗಗನ್ ಪ್ರಸಾದ್, ಹನು ರಾಮಸಂಜೀವ, ರಾಜಗುರು ಸೇರಿದ್ದಾರೆ.

ಇದನ್ನೂ ಓದಿ: ರೈತರ ಸಮಸ್ಯೆ ಬಗೆಹರಿಯುವವರೆಗೂ ಇಂಗ್ಲೆಂಡ್ ಪ್ರಧಾನಿ ಭಾರತಕ್ಕೆ ಬರುವುದು ಬೇಡ: ರೈತ ಮುಖಂಡರ ಪತ್ರ

ಈ  ಹದಿನೈದು ದಿನಗಳಲ್ಲಿ ನಾಟಕಗಳ ಜೊತೆಗೆ ಸಂವಾದ, ರಂಗಗೀತೆಗಳು, ಯುವರಂಗ 2021 ಪ್ರಶಸ್ತಿ ಪ್ರದಾನ ನಡೆಯಲಿದೆ. ಇದೆಲ್ಲದರ ಜೊತೆಗೆ ಜನವರಿ 11 ರಂದು ರಂಗನಿರಂತರ ತಂಡವು ಸಿಜಿಕೆ ಅವರ ಲಕೋಟೆಯನ್ನು ಬಿಡುಗಡೆ ಮಾಡಲಿದೆ ಎಂದು ರಂಗತಂಡಗಳು ಮಾಹಿತಿ ನೀಡಿದ್ದಾರೆ.

ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿರುವ ಸಂಸ ಬಯಲು ರಂಗಮಂದಿರದಲ್ಲಿ ನಾಟಕಗಳು ನಡೆಯಲಿವೆ. ಸರ್ಕಾರ ಬಿಡುಗಡೆ ಮಾಡಿರುವ ಎಲ್ಲಾ ಕೊರೊನಾ ನಿಯಮಗಳನ್ನು ಅನುಸರಿಸಲಾಗುವುದು, ಮಾಸ್ಕ್, ದೈಹಿಕ ಅಂತರ ಕಾಪಾಡುವುದು ಮುಖ್ಯ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರತಿ ನಾಟಕಕ್ಕೆ 100 ರೂಪಾಯಿ ಟಿಕೆಟ್ ದರ ಇರಲಿದೆ. ಹದಿನೈದು ದಿನಗಳ ಪಾಸ್ ಪಡೆದುಕೊಂಡವರಿಗೆ 1,000 ರೂಪಾಯಿಗೆ ಪಾಸ್ ದೊರೆಯಲಿದೆ.


ಇದನ್ನೂ ಓದಿ: ಪ.ಜಾತಿ, ಪ.ಪಂಗಡಗಳ ಬಡ್ತಿ ಸಮಸ್ಯೆ ನಿವಾರಿಸಿ, ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿಮಾಡಿ: ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...